ವಿಜಯಪುರ ಜಿಲ್ಲೆಯ ಗಬಸಾವಳಗಿ ಬಳಿ ಹೊತ್ತಿ ಬೈಕಿಗೆ ಢಿಕ್ಕಿ ಹೊಡೆದು ಹೊತ್ತು ಉರಿದ ಸರಕಾರಿ ಬಸ್ಸು

ವಿಜಯಪುರ: ಬೈಕಿಗೆ ಢಿಕ್ಕಿ ಹೊಡೆದ ಸರಕಾರಿ ಬಸ್ಸೊಂದು ಹೊತ್ತು ಉರಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 52ರಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಮೊರಟಗಿಯಿಂದ ಸಿಂದಗಿಗೆ ಬರುತ್ತಿದ್ದ ಬಸ್ಸಿಗೆ ಸಿಂದಗಿಯಿಂದ ಮೊರಟಗಿಯತ್ತ ಹೊರಟಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತದ ಸಂಭವಿಸಿದೆ.  ಢಿಕ್ಕಿಯ ಬಳಿಕ ಬೈಕ್ ಬಸ್ಸಿನಡಿ ಸಿಲುಕಿದೆ.  ಆಗ ಹೊತ್ತಿದ ಬೆಂಕಿಯಿಂದಾಗಿ ಬಸ್ಸು ಸುಟ್ಟು ಭಸ್ಮವಾಗಿದೆ.  ಆದರೆ, ಅದೃಷ್ಟವಶಾತ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. KA- 28/F- 2469 ನಂಬರಿನ […]

ಗುಮ್ಮಟ ನಗರಿಯಲ್ಲಿ ವಿದ್ಯುತ್ ಚಿತಾಗಾರ ಸ್ಥಾಪನೆಗೆ ಕ್ರಮ ಕೈಗೊಳ್ಳಿ- ಡಿಸಿ, ಪೌರಾಯುಕ್ತರಿಗೆ ಶಾಸಕ ಸುನೀಲಗೌಡ ಪಾಟೀಲ ಪತ್ರ

ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ವಿಜಯಪುರ ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ವಿಜಯಪುರ ನಗರವು ಈಗ ಮಹಾನಗರ ಪಾಲಿಕೆಯಾಗಿ  ಮೇಲ್ದರ್ಜೆಗೇರಿದೆ. ಅಲ್ಲದೇ, ಮಹಾನಗರಪಾಲಿಕೆ ಸುಮಾರು 10ಕಿ.ಮೀ ವ್ಯಾಪ್ತಿ ಒಳಗೊಂಡಿದೆ. ವಿಜಯಪುರ ನಗರದ ಜನಸಂಖ್ಯೆ ಸುಮಾರು 5 ಲಕ್ಷ ತಲುಪಿದೆ. ನಗರದಲ್ಲಿ ನಾನಾ ಸಮುದಾಯದ ಜನರು ಶವಗಳನ್ನು ಹೂಳುವ ಬದಲಾಗಿ ದಹನ ಮಾಡುವ ಸಂಪ್ರದಾಯವಿದೆ.  ಈ ಸಮುದಾಯಗಳ ಜನ ನಿಧನರಾದವರ ಅಂತ್ಯಕ್ರಿಯೆ ಸಮಯದಲ್ಲಿ […]

ವಿಜಯಪುರದಲ್ಲಿ ವಾರಿ ಸೌರಶಕ್ತಿ ಸಾಯಿ ಎಂಟರಪ್ರೈಸಿಸ್ ಪ್ರಾಂಚೈಸಿ ಲೋಕಾರ್ಪಣೆ ಮಾಡಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ನಗರದಲ್ಲಿ ವಾರಿಸೌರ ಶಕ್ತಿ ಕೇಂದ್ರದ ಸಾಯಿ ಎಂಟರ್ ಪ್ರೈಸಸ್ ಪ್ರಾಂಚೈಸಿ ಲೋಕಾರ್ಪಣೆ ಸಮಾರಂಭ ನಡೆಯಿತು. ಪುಲಕೇಶಿ ನಗರದಲ್ಲಿ ಬಿಜೆಪಿ ಮುಖಂಡ ಸಿದ್ದು ಬುಳ್ಳಾ ಅವರಿಗೆ ಸೇರಿದ ಈ ನೂತನ ಕೇಂದ್ರವನ್ನು ಸಂಸದ ರಮೇಶ ಜಿಗಜಿಣಗಿ ಉದ್ಘಾಟಿಸಿದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ಮುಖಂಡ ಸಂತೋಷ ಪಾಟೀಲ ಡಂಬಳ  ಮುಂತಾದವರು […]

ಹುಣಶ್ಯಾಳ ಪಿ. ಬಿ ಗ್ರಾಮದಲ್ಲಿ ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯುಕ್ತರ ಬಲೆಗೆ

ವಿಜಯಪುರ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯುಕ್ತರ ಬಲೆಗೆ ಸಿಲುಕಿದ ಘಟನೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ. ಬಿ. ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿವಿ ಗ್ರಾಮದ ಗ್ರಾಮ ಪಂಚಾಯಿತಿಯ ಪಿಡಿಓ ಸಂಗಮೇಶ ಕುಂಬಾರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಗ್ರಾಮದ ಖುಲ್ಲಾ ಜಾಗದ ವಾರಸಾ ಮಾಡಿಕೊಡಲು ರೂ. 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಂಗಮೇಶ ಕುಂಬಾರ ರೂ. 15 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. […]

ಗುಮ್ಮಟ ನಗರಿ ಮಹಾನಗರ ಪಾಲಿಕೆ ಕೈವಶ- ಅತೀ ಹೆಚ್ಚು ಸದಸ್ಯರಿದ್ದರೂ ಅರಳದ ತಾವರೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಮಹಾನಗರ ಪಾಲಿಕೆ ಕೈವಶವಾಗಿದೆ.  ಸಚಿವ ಎಂ. ಬಿ. ಪಾಟೀಲ ಅವರ ಕೈಚಳಕದಿಂದಾಗಿ ಮೇಯರ್ ಮತ್ತು ಉಪಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿದ್ದು, ಚುನಾವಣೆ ಮತದಾನ ಬಹಿಷ್ಕರಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ ಕಾರ್ಪೊರೇಟರ್ ಗಳು ಚುನಾವಣಾಧಿಕಾರಿಗಳ ವಿರುದ್ಧ ಘೋಷಣೆ ಹಾಕುತ್ತ ಪಾಲಿಕೆಯಿಂದ ಹೊರ ನಡೆದರು. ಬೆಳಿಗ್ಗೆಯಿಂದ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ಸಿನಿಂದ ಮೆಹಜಬೀನ್ ಅಬ್ದುಲ್ ರಜಾಕ್ ಹೊರ್ತಿ ಮೇಯರ್ ಸ್ಥಾನಕ್ಕೆ ಮತ್ತು ದಿನೇಶ ಹಳ್ಳಿ ಉಪಮೇಯರ್ ಸ್ಥಾನಕ್ಕೆ ನಾಮಪತ್ರ […]

ಜೆಜೆಎಂ ಯೋಜನೆಗೆ ಗ್ರಾ. ಪಂ. ಸಮುದಾಯ ವಂತಿಗೆ ಪಡೆಯದಂತೆ ಮಾಡಿದ ಹೋರಾಟ ಫಲ ನೀಡಿದೆ- ವಿಪ ಶಾಸಕ ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯಿತಿ ಪರವಾಗಿ ನಾನು ಹೋರಾಟ ಮಾಡಿದರ ಫಲವಾಗಿ ಜಲಜೀವನ ಮಿಷನ್(ಜೆಜೆಎಂ) ಯೋಜನೆಗೆ ಗ್ರಾ. ಪಂ. ಗಳ ವತಿಯಿಂದ ನೀಡಬೇಕಿದ್ದ ಸಮುದಾಯ ವಂತಿಗೆಯನ್ನು ರದ್ದು ಪಡಿಸಲಾಗಿದೆ.  ಈಗ ಸರಕಾರವೇ ಈ ಹಣವನ್ನು ಭರಿಸುತ್ತಿದ್ದು, ಈ ದುಡ್ಡಿನಲ್ಲಿ ಗ್ರಾ. ಪಂ. ಗಳು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಬಬಲೇಶ್ವರ ತಾಲೂಕಿನ ಕಾರಜೊಳ ಗ್ರಾಮದಲ್ಲಿ ತೊನಶ್ಯಾಳ ಗ್ರಾಮದಲ್ಲಿ ರೂ. 1.47 ಕೋ. ಮತ್ತು ಕಾರಜೋಳ ಗ್ರಾಮದಲ್ಲಿ […]

ಶ್ರೀ ಸಿದ್ದೇಶ್ವರ ದನಗಳ ಜಾತ್ರೆಯನ್ನು ವ್ಯವಸ್ಥಿತವಾಗಿ ಆಯೋಜಿಸಿ- ಸಚಿವ ಶಿವಾನಂದ ಎಸ್. ಪಾಟೀಲ ಸೂಚನೆ

ವಿಜಯಪುರ: ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.10ರಿಂದ 18ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟç ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು […]

ಹೈಕಮಾಂಡಿಗೆ ಎಲ್ಲ ವಿವರಿಸಿದ್ದೇನೆ- ನನ್ನನ್ನು ಯಡಿಯೂರಪ್ಪ ಬಿಜೆಪಿಗೆ ಕರೆತಂದಿಲ್ಲ- ರಾಮಲಿಂಗಾರೆಡ್ಡಿ ನಿರ್ಧಾರ ಸ್ವಾಗತಾರ್ಹ- ಯತ್ನಾಳ

ವಿಜಯಪುರ: ರಾಜ್ಯದ ವಿದ್ಯಮಾನಗಳ ಕುರಿತು ಹೈಕಮಾಂಡಿಗೆ ಎಲ್ಲ ವಿವರಿಸಿದ್ದೇನೆ.  ಯಡಿಯೂರಪ್ಪ ನನ್ನನ್ನು ಬಿಜೆಪಿಗೆ ಕರೆತಂದಿಲ್ಲ.  ಸಚಿವ ರಾಮಲಿಂಗಾರೆಡ್ಡಿ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ತಾವು ಮಾಡಿರುವ ಆರೋಪಗಳ ಕುರಿತು ಹೈಕಮಾಂಡಿಗೆ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ದೆಹಲಿಯ ಭೇಟಿ ಫಲಪ್ರದವಾಗಿದೆ.  ದೆಹಲಿಗೆ ಬರಲು ರಾಷ್ಟ್ರೀಯ […]

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ, ರಾಯಭಾರಿಯಾಗಿ ಘೋಷಿಸಲು ಸ್ವಾಮೀಜಿ, ಚಿಂತಕರ ಮನವಿ- ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನ- ಸಿದ್ದರಾಮಯ್ಯ

ಬೆಂಗಳೂರು:  ಅಣ್ಣ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿ ಘೋಷಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ.  ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ.  ಆದರೆ, ಈ ಕುರಿತು ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, […]

ವೃಕ್ಷೊಥಾನ್ ಹೆರಿಟೇಜ್ ರನ್- 2023: ಅತ್ಯಧಿಕ ಓಟಗಾರರು ಪಾಲ್ಗೊಂಡ 3.50 ಕಿ. ಮೀ. ಫಲಿತಾಂಶ ಪ್ರಕಟ

ವಿಜಯಪುರ: ಡಿಸೆಂಬರ್ 24 ರಂದು ಆಯೋಜಿಸಲಾಗಿದ್ದ ವೃಕ್ಷೊಥಾನ್ ಹೆರಿಟೇಜ್ ರನ್-2023ರ 3.50 ಕಿ. ಮೀ. ಓಟದ ವಿಜೇತರ ಹೆಸರುಗಳನ್ನು ಪ್ರಕಟಿಸಲಾಗಿದೆ. ಸುಮಾರು 6000 ಕ್ರೀಡಾಪಟುಗಳು 3.50 ಕಿ. ಮೀ. ಓಟದಲ್ಲಿ ಪಾಲ್ಗೊಂಡಿದ್ದರು.  ಈ ಓಟಕ್ಕೆ ಯಾವುದೇ ಸಮಯ ನಿಗದಿ ಪಡಿಸಿರಲಿಲ್ಲ.  ಅಲ್ಲದೇ, ಸಾವಿರಾರು ಜನ ಇದರಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಪ್ರತಿಯೊಂದು ವಿಧಾನಗಳಲ್ಲಿ ಪರಿಶೀಲನೆ ನಡೆಸಿ, ದತ್ತಾಂಶಗಳನ್ನು ಸಂಗ್ರಹಿಸಿ ಈಗ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್ ರೂಟ್ ಸಮಿತಿ ಉಸ್ತುವಾರಿ ಸಂಕೇತ ಬಗಲಿ ತಿಳಿಸಿದ್ದಾರೆ. 3.50 […]