ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಬೃಹತ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಸಚೀನ ಕುಳಗೇರಿ, ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ. […]
ದಿಂಡವಾರ ಗ್ರಾಮದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮ

ವಿಜಯಪುರ: ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮದಡಿ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ಅಂಗಡಿಗಳಿಗೆ ತೆರಳಿ ಜನಜಾಗೃತಿ ಮೂಡಿಸಲಾಯಿತು. ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ನೇತೃತ್ವದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರು, ಶಾಲೆಯ ಮುಖ್ಯ ಶಿಕ್ಷಕರು ದಸ್ತಗೀರಸಾಬ ವಾಲಿಕಾರ ಮತ್ತೀತತರು ಈ ಜಾಗೃತಿ ಮೂಡಿಸಿದರು. ತಂಬಾಕು ಉತ್ಪನ್ನಗಳ ಬಳಕೆಯಿಂದ ಜನಸಾಮಾನ್ಯರಿಗೆ ಹಲವಾರು ರೀತಿಯ ಗಂಭೀರ ಸ್ವರೂಪದ ಕಾಯಿಲೆಗಳು ಬರುತ್ತbz. ಯುವಜನತೆ ಹೆಚ್ಚಾಗಿ ತಂಬಾಕು ವ್ಯಸನಕ್ಕೆ ದಾಸರಾಗುತ್ತಿರುವುದರಿಂದ ತಂಬಾಕು […]
ಶಾಸಕ ಯತ್ನಾಳ ಜನ್ಮ ದಿನದ ಅಂಗವಾಗಿ ಅನಾಥ ಆಶ್ರಮ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ

ವಿಜಯಪುರ: ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅವರ 61ನೇ ಜನ್ಮ ದಿನದ ಅಂಗವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ವಿಕ್ರಮ ಗಾಯಕವಾಡ ಅವರು ಬಸವನಗರದಲ್ಲಿರುವ ಅನಾಥಾಶ್ರಮದ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡಿದರು. ನಂತರ ಮಾತನಾಡಿದ ಅವರು, ಅಭಿವೃದ್ಧಿ ಹರಿಕಾರರಾದ ಹೆಮ್ಮೆಯ ಶಾಸಕರ ಜನ್ಮದಿವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅನಾಥಾಶ್ರಮದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ನಮ್ಮ ನಾಯಕರಿಗೆ ಉನ್ನತ ಹುದ್ದೆ ದೊರಕಿ, ನಾಡಿನ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಸಿಗಲಿ ಎಂದು […]
ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ- ಸಚಿವ ಕೆ. ಎಚ್. ಮುನಿಯಪ್ಪ

ಬೆಳಗಾವಿ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ಕೈಗೊಳ್ಳಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಚ್. ಮುನಿಯಪ್ಪ ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ […]
ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮ ಯಶಸ್ವಿ ಅನುಷ್ಟಾನ- ಜಿಲ್ಲೆಯ ಆರ್.ಬಿ.ಎಸ್.ಕೆ ಪ್ರಗತಿ ಇತತರಿಗೆ ಮಾದರಿ- ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯ ಆರ್. ಬಿ. ಎಸ್. ಕೆ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ ಇತರರಿಗೆ ಮಾದರಿಯಾಗಿದೆ. ಹೆಮ್ಮೆ ಪಡುವಂಥ ಸಾಧನೆಯಲ್ಲಿ ಭಾಗಿಯಾದ ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಯಶಸ್ವಿ ಅನುಷ್ಟಾನಗೊಂಡಿದೆ. ಮುಂಬರುವ ದಿನಗಳಲ್ಲಿ ತಾವೆಲ್ಲರೂ ಇನ್ನಷ್ಟು ಅನುಕೂಲ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದ್ದಾರೆ. ಡಿ. 12ರಂದು ಜಿ. ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ […]
ವಿಜಯಪುರದಿಂದ ಕ್ಷೇತ್ರ ಮುರುಗೋಡಕ್ಕೆ ಪಾದಯಾತ್ರೆ ಹೊರಟ ಭಕ್ತರು

ವಿಜಯಪುರ: ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡದಲ್ಲಿ ಡಿಸೆಂಬರ್ 18 ರಂದು ಶ್ರೀ ಚಿದಂಬರೇಶ್ವರ ಮಹಾಸ್ವಾಮಿಗಳ 264 ನೇ ಅವತಾರ ಜಯಂತೋತ್ಸವ ಅಂಗವಾಗಿ ಶ್ರೀ ಚಿದಂಬರೇಶ್ವರ ಕಲ್ಯಾಣ ರಥೋತ್ಸವ ವೈಭವದಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಕ್ಷೇತ್ರ ಮುರಗೋಡಕ್ಕೆ ವಿಜಯಪುರದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಚಿದಂಬರೇಶ್ವರ ಪಾದಯಾತ್ರೆ ಮಂಡಳಿಯಿಂದ ವಿಜಯಪುರ ನಗರದ ಚಿದಂಬರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ಜೋಶಿ ಸಂಕನಾಳ, ಸೇವೆಯಲ್ಲಿ ಪಾದಯಾತ್ರೆ ಸೇವೆ ದೊಡ್ಡದು. […]
ಓಡಿಶಾ ಕಾಂಗ್ರೆಸ್ ಸಂಸದರ ಧೀರಜ ಸಾಹು ಬಂಧಿಸಲು ಆಗ್ರಹ- ವಿಜಯಪುರದಲ್ಲಿ ಬಿಜೆಪಿ ಪ್ರತಿಭಟನೆ

ವಿಜಯಪುರ: ಒಡಿಶಾದ ಕಾಂಗ್ರೆಸ್ ಸಂಸದ ಧೀರಜ ಸಾಹು ಅವರ ಮನೆಯಲ್ಲಿ ರೂ. 300 ಕೋ. ಗೂ ಹೆಚ್ಚು ನಗದು ಹಣ ಪತ್ತೆಯಾಗಿದ್ದು, ಕೂಡಲೇ ಭ್ರಷ್ಟ ಸಂಸದರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಸಿದ್ದೇಶ್ಶ್ವರ ದೇವಾಸ್ಥಾನದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಕಾಂಗ್ರೆಸ್ನ ರಾಜ್ಯಸಭೆ ಸದಸ್ಯ ಧೀರಜ ಸಾಹು ಅವರ ಮನೆಯಲ್ಲಿ ಕೋಟ್ಯಂತರ ನಗದು ಪತ್ತೆಯಾಗಿದೆ. ಇದರಿಂದಾಗಿ ಕಾಂಗ್ರೆಸ್ ಪ್ರಜಾಪ್ರಭುತ್ವ ವಿರೋಧಿ, […]
ಅಂತಃಶಕ್ತಿ ಜಾಗೃತಗೊಳಿಸಿ ಜ್ಞಾನ ಸಂಪಾದಿಸಿ- ಎಸ್. ಎಸ್. ಬೀಳಗಿಪೀರ

ವಿಜಯಪುರ: ಪ್ರತಿಯೊಬ್ಬರೂ ತಮ್ಮಲ್ಲಿರುವ ಅಂತ:ಶಕ್ತಿಯನ್ನು ಜಾಗ್ರತಗೊಳಿಸಿ, ಜ್ಞಾನ ಸಂಪಾದಿಸಿ ಸಾರ್ಥಕ ಬದುಕು ಸಾಗಿಸಬೇಕು ಎಂದು ಕವಿ, ವಿಚಾರವಾದಿ ಡಾ. ಅಲ್ಲಮಾ ಇಕ್ಬಾಲ್ ಅವರ ಸಾಹಿತ್ಯದ ಸಾರವಾಗಿದೆ ಎಂದು ರಾಜ್ಯ ಸಹಕಾರ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಸ್. ಎಸ್. ಬೀಳಗಿಪೀರ ಹೇಳಿದ್ದಾರೆ. ನಗರದ ಸಿಕ್ಯಾಬ್ ಸಂಸ್ಥೆಯ ಎ. ಆರ್. ಎಸ್ ಇನಾಮದಾರ ಮಹಿಳಾ ಮಹಾವಿದ್ಯಾಲಯದಲ್ಲಿ ಬಸವೇಶ್ವರ, ವಿವೇಕಾನಂದ, ಇಕ್ಬಾಲ್ ಹಾಗೂ ಅಂಬೇಡ್ಕರ ಪೀಠಗಳು ಹಾಗೂ ಕಾಲೇಜಿನ ಉರ್ದು ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ […]
ಡಿಸೆಂಬರ್ 14 ರಂದು ಭಗೀರಥ ಭಾರತ ಜನ ಕಲ್ಯಾಣ ಯಾತ್ರೆ ಆಗಮನ- ಜಕ್ಕಪ್ಪ ಯಡವೆ

ವಿಜಯಪುರ: ಡಿಸೆಂಬರ್ 9 ರಿಂದ ಭಾರತಾದ್ಯಂತ ಭಗೀರಥ ಭಾರತ ಜನ ಕಲ್ಯಾಣ ಯಾತ್ರೆ ಪ್ರಾರಂಭಗೊAಡಿದ್ದು, ಯಾತ್ರೆಯು ಡಿ. 14 ರಂದು ಬೆ. 10 ಗಂಟೆಗೆ ವಿಜಯಪುರ ನಗರಕ್ಕೆ ಆಗಮಿಸಲಿದೆ. ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಭಗೀರಥ ವೃತ್ತದಿಂದ ಶಿಕಾರಖಾನೆಯ ವೆಂಕಟೇಶ್ವರ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಪ್ಪಾರ ಸೇವಾ ಸಂಘದ ಅಧ್ಯಕ್ಷ ಜಕ್ಕಪ್ಪ ಯಡವೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ನೇತೃತ್ವದಲ್ಲಿ […]
ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ ನಿಷೇಧ ಅರಿವು ನೆರವು ಕಾರ್ಯಕ್ರಮ

ವಿಜಯಪುರ: ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ದೊರೆಯುವ ಇ-ಶ್ರಮ ಕಾರ್ಡ, ಪಿಎಂಎಸ್ವೈಎ ಕಾರ್ಡ ಸೇರಿದಂತೆ ನಾನಾ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿ ಎಸ್. ಜಿ. ಖೈನೂರ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ವಿಜಯಪುರ ಹಾಗೂ ನಾನಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಲೋಯೋಲ ಪ್ರೌಢಶಾಲೆಯಲ್ಲಿ […]