ಸುಕ್ಷೇತ್ರ ಗುಡ್ಡಾಪುರ ದಾನಮ್ಮದೇವಿ ಜಾತ್ರೆ- ಗಮನ ಸೆಳೆದ ಚಟ್ಟಿ ಅಮವಾಸ್ಯೆ ಕಾರ್ತಿಕ ದೀಪೋತ್ಸವ

ವಿಜಯಪುರ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಸುಕ್ಷೇತ್ರ ಗುಡ್ಡಾಪುರದಲ್ಲಿ ದಾನಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಕರ್ನಾಟಕ ಮಾತ್ರವಲ್ಲ ನೆರೆಯ ಮಹಾರಾಷ್ಟ್ರ ಮತ್ತೀತರ ರಾಜ್ಯಗಳಿಂದ ಆಗಮಿಸಿದ್ದ ಭಕ್ತರು ಜಾತ್ರೆಯಲ್ಲಿ ಪಾಲ್ಗೋಂಡು ದೇವಿಯ ದರ್ಶನ ಪಡೆದರು.  ಪಾದಯಾತ್ರೆಯಲ್ಲಿ ತೆರಳಿದ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ತಮ್ಮೂರಿಗೆ ಮರಳಿದರು. ಈ ಮಧ್ಯೆ ಚಟ್ಟಿ ಅಮಾವಾಸ್ಯೆ ಅಂಗವಾಗಿ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮ ನೆರವೇರಿತು.  ಅರ್ಚಕರು, ದೇವಾಲಯ ಸುಧಾರಣೆ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು ಸೇರಿದಂತೆ ಲಕ್ಷಾಂತರ ಭಕ್ತಾದಿಗಳು […]

ಬಾಲ್ಯವಿವಾಹ ತಡೆಗೆ ವ್ಯಾಪಕ ಜಾಗೃತಿ, ವಿವಾಹ ಪೂರ್ವ ಪತ್ತೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಸೇರಿದಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಮತ್ತು ಪುನರ್ವಸತಿ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ 2023-24ನೇ ವರ್ಷದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯವಿವಾಹವನ್ನು ತಡೆಗಟ್ಟುವ […]

ಡಿ. 16ರ ವರೆಗೆ ಡಿಇಎಲ್ ಇಡಿ, ಡಿಪಿಎಸ್ಇ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ. ಭೂಬಾಲನ ಆದೇಶ

ವಿಜಯಪುರ: ವಿಜಯಪುರ ನಗರದ ಮನಗೂಳಿ ರಸ್ತೆಯಲ್ಲಿರುವ ಸರಕಾರಿ ಉರ್ದು ಟಿಟಿಐ ಕಾಲೇಜ್‍ನಲ್ಲಿ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಮತ್ತು ಡಿ.ಪಿ.ಎಸ್.ಇ ಪೂರಕ ಪರೀಕ್ಷೆ ಪ್ರಾರಂಭವಾಗಿದ್ದು, ಡಿಸೆಂಬರ್ 16ರವರೆಗೆ  ನಡೆಯಲಿವೆ. ಪಾರರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು […]

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

ವಿಜಯಪುರ: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿ.7ರಂದು ನಡೆದ ಸಮಾರಂಭದಲ್ಲಿ 2022ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ನೀಡಲಾಗಿದೆ. ಸಮಾರಂಭದಲ್ಲಿ ವಿಜಯಪುರ ಜಿಲ್ಲೆ ಅತಿ ಹೆಚ್ಚು ನಿಧಿ ಸಂಗ್ರಹ ಮಾಡಿದ್ದರಿಂದ ಲೆಫ್ಟಿನೆಂಟ್ ಜನರಲ್ ಬಿ.ಕೆ.ರೆಪ್ಸವಾಲ್, ಎ.  ವಿ. ಎಸ್. ಎಂ, ವಿ. ಎಸ್. ಎಂ. ಕಮಾಂಡೆಂಟ್ ಎ.ಎಸ್.ಸಿ. ಸೆಂಟರ್ ಮತ್ತು ಕಾಲೇಜ್ ಬೆಂಗಳೂರು ಇವರಿಂದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪ್ರಶಸ್ತಿ […]

ಬಹುಹಳ್ಳಿ ಯೋಜನೆಗಾಗಿ ಕಾಲುವೆಗಳ ಮೂಲಕ ಕುಡಿಯಲು ನೀರು ಬಿಡುಗಡೆ: ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಟಿ. ಭೂಬಾಲನ ಆದೇಶ

ವಿಜಯಪುರ: ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಬಿಜೆಎನ್‍ಎಲ್ ವತಿಯಿಂದ ಕಾಲುವೆಗಳ ಮೂಲಕ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ಜನವಸತಿಗಳಿಗೆ ಕಾಲುವೆಗಳ ಮೂಲಕ ನೀರು ಪೂರೈಸಲಾಗುತ್ತಿದೆ.  ಜಲಸಂಗ್ರಹಾಗಾರ- ಕೆರೆಗಳಲ್ಲಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಉಪಯೋಗಿಸುಲು ಅನುಕೂಲವಾಗಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಜಲಸಂಗ್ರಹಗಾರಗಳು ಮತ್ತು ಕೆರೆಗಳ ವ್ಯಾಪ್ತಿಯ 100 ಅಡಿ ಪ್ರದೇಶದಲ್ಲಿ ಡಿ. 7 ರಿಂದ ನೇವರಿ ಜನವರಿ 1ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ  ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ. ಈ […]

ಎಸ್.ಡಿ.ಪಿ.ಐ ವತಿಯಿಂದ ಬೆಳಗಾವಿ ಚಲೋ, ಅಂಬೇಡ್ಕರ್ ಜಾಥಾ- ಗುಮ್ಮಟನಗರಿಯಲ್ಲಿ ಬೃಹತ್ ಜಾಥಾ, ಸಾರ್ವಜನಿಕ ಸಭೆ

ವಿಜಯಪುರ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್.ಡಿ.ಪಿ.ಐ) ವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ- ಅಂಬೇಡ್ಕರ್ ಜಾಥಾ ಡಿಸೆಂಬರ್ 6 ರಂದು ಬೆಂಗಳೂರಿನ ವಿಧಾನ ಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11 ರಂದು ಬೆಳಗಾವಿಯ ಸುವರ್ಣ ಸೌಧದವರೆಗೆ ನಡೆದು ಸಮಾರೋಪವಾಗಲಿದೆ.  ಇದರ ಭಾಗವಾಗಿ ನಗರದಲ್ಲಿ ರಾಜ್ಯ ನಾಯಕರ ಜೊತೆ ಸೇರಿ ನೂರಾರು ಕಾರ್ಯಕರ್ತರು ಜಾಥಾ ಮತ್ತು ಸಾರ್ವಜನಿಕರ ಸಭೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಾಥಾದ ಸಂಚಾಲಕ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರಪ್ರಸಾದ, […]

ವಿಜ್ಞಾನ ವಿಷಯದ ಫೋನ್ ಇನ್ ಕಾರ್ಯಕ್ರಮ ಯಶಸ್ವಿ- ವಿಷಯ ತಜ್ಞರಿಂದ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು

ವಿಜಯಪುರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ವಿಷಯದ ಪೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.  ಈ ಕಾರ್ಯಕ್ರಮದಲ್ಲಿ ವಿಷಯ ತಜ್ಞರಿಂದ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕುರಿತ ಕಲಿಕಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್. ಎಚ್. ನಾಗೂರ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಿಷಯದ ವಿಜಯಪುರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ 6 ರಿಂದ […]

ಮಾನವ ಹಕ್ಕುಗಳ ಪಾಲನೆ ನಾಗರಿಕರ ಹೊಣೆ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

ವಿಜಯಪುರ: ಮಾನವ ಹಕ್ಕುಗಳ ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ಚಾಲನೆ ನೀಡಿದ ಅವರು ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ಪಾಲನೆ ಮಾಡಬೇಕು.ಮಾನವ ಹಕ್ಕುಗಳ ಪಾಲನೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು.  ಮಾನವ ಹಕ್ಕುಗಳು ಸ್ವಾಭಾವಿಕವಾಗಿ ಪ್ರದತ್ತವಾದ […]

ಖೊಟ್ಟಿ ದಾಖಲೆ ಸೃಷ್ಠಿಸಿ ನೋಂದಣಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ. ಪಾಟೀಲ ಖಡಕ್ ಸೂಚನೆ

ವಿಜಯಪುರ: ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಠಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಖಡಕ್ಕ್ಕಾಗಿ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ […]

ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತಿಮುಖ್ಯವಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವ   ಗ್ರಾಮ ಪಂಚಾಯತಿ ಅಭಿವೃದ್ಧಿ ಕೈ ಜೋಡಿಸುವಂತೆ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಮನವಿ ಮಾಡಿದ್ದಾರೆ.  ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಮತ್ತು ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿ ನಾನಾ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಕಣಕಾಲ ಗ್ರಾಮದಲ್ಲಿ ಸರಕಾರಿ ಜಾಗ ಅತಿಕ್ರಮಣವಾಗಿರುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.  ಅತೀಕ್ರಮಣವಾಗಿದೆ ಎನ್ನಲಾದ ಸ್ಥಳದಲ್ಲಿ ಹಲವಾರು ವರ್ಷಗಳಿಂದ […]