ಆಯುಷ್ ಪಂಚಕರ್ಮ ಆಸ್ಪತ್ರೆಗೆ ಭೇಟಿ ಜಿ. ಪಂ. ಸಿಇಓ ಭೇಟಿ: ಮಾದರಿ ಪಂಚಕರ್ಮ ಘಟಕವನ್ನಾಗಿಸಲು ಶ್ರಮ ವಹಿಸಿ ಕಾರ್ಯ ನಿರ್ವಹಲು ಕರೆ

ವಿಜಯಪುರ: ನಮ್ಮ ವಿಜಯಪುರದ ಆಯುಷ್ ಪಂಚಕರ್ಮ ಘಟಕವು ಇತರ ಘಟಕಗಳಿಗೆ ಮಾದರಿಯಾಗಬೇಕು ಆ ನಿಟ್ಟಿನಲ್ಲಿ ಎಲ್ಲರೂ ಹೆಚ್ಚಿನ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ವಿಜಯಪುರದ ಆಯುಷ್ ಹೈಟೆಕ್ ಪಂಚಕರ್ಮ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಆಯುಷ್ ಘಟಕ ಕಾರ್ಯನಿರ್ವಹಿಸುತ್ತಿರುವ ಕುರಿತು ಹಾಗೂ ಈ ಘಟಕದಲ್ಲಿ ದೊರೆಯು ಸೌಲಭ್ಯಗಳ ಕುರಿತು ವಿವಿಧ ಐಇಸಿ ಚಟುವಟಿಕೆಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಘಟಕದಲ್ಲಿ […]

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ: ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಸಶಸ್ತ್ರ ಪಡೆಗಳ ಧ್ವಜ ಸದಾವಕಾಶ- ಡಿಸಿ ಟಿ. ಭೂಬಾಲನ್

ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು,ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ದೇಶದ ಎಲ್ಲ ಭಾಗಗಳಲ್ಲಿ ಪ್ರತಿ ವರ್ಷ ಇದೇ ದಿನ ಡಿ.7ರಂದು […]

ಪಶು ಸಖಿಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಣೆ ಮಾಡಬೇಕು- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಡೇ-ಎನ್‌ಆರ್‌ಎಲ್‌ಎಂ) ಹಾಗೂ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವಿಜಯಪುರ ಇವರುಗಳ ಸಹಯೋಗದೊಂದಿಗೆ ರುಡಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಆರು ದಿನಗಳ ಮೊದಲನೇ ಮಾಡ್ಯೂಲ್ ಪಶು ಸಖಿಯರ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆರು ದಿನಗಳ ಈ ಪಶು ಸಖಿಯರ ತರಬೇತಿ ಕಾರ್ಯಾಗಾರವು ಬಹಳ ಉಪಯುಕ್ತವಾದ ತರಬೇತಿಯಾಗಿದೆ.  ಈಗಾಗಲೇ ಕಳೆದ ಒಂದು ವರ್ಷದಿಂದ ನಮ್ಮ ಜಿಲ್ಲೆಯ ಎಲ್ಲಾ […]

ಸಿದ್ಧೇಶ್ವರ ಶ್ರೀಗಳ ಹಾಗೆ ಮಾನವ ಕುಲಕ್ಕೆ ಸ್ವಾಮಿಗಳಾಗಬೇಕು: ಪ್ರಕಾಶ ಆರ್. ಕೆ

ವಿಜಯಪುರ: ಜಾತಿಗೊಬ್ಬ ಸ್ವಾಮಿಗಳು ಆಗುವ ಬದಲು ಸಿದ್ಧೇಶ್ವರ ಶ್ರೀಗಳ ಹಾಗೆ ಮಾನವ ಕುಲಕ್ಕೆ ಸ್ವಾಮಿಗಳಾಗಬೇಕು.  ಯಾವುದೇ ಫಲಾಪೇಕ್ಷೆ, ಆಸೆ ಆಮೀಷಗಳಿಗೆ ಒಳಗಾಗದೇ ಎಲ್ಲಾ ಸಮಾಜಕ್ಕಾಗಿ ಒಳಿತನ್ನು ಬಯಸಿದ್ದವರೆಂದರೆ ನಡೆದಾಡುವ ದೇವರಾದ ನಮ್ಮ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಎಂದು ಗಾನಯೋಗಿ ಸಂಘದ ಮುಖಂಡ ಪ್ರಕಾಶ ಆರ್. ಕೆ ಹೇಳಿದರು. ನಗರದ ಹೊರ ವಲಯದ ಸಿಂದಗಿ ರಸ್ತೆಗೆ ಅಂಟಿಕೊಂಡಿರುವ ಬೈಪಾಸ್ ಅಂಡರ್‌ಗ್ರೌಂಡ ಗೋಡೆಗೆ ನಡೆದಾಡುವ ಶ್ರೀಗಳಾದ ಸಿದ್ಧೇಶ್ವರ ಶ್ರೀಗಳ ಛಾಯಾಚಿತ್ರವನ್ನು ಬಿಡಿಸಿ ಅವರು ಮಾತನಾಡಿದರು. ಇಡೀ ಜಗತ್ತಿನಲ್ಲಿ ಪ್ರವಚನ ಸಾರುವ […]

ಗುಮ್ಮಟ ನಗರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಗೌರವ ಸಮರ್ಪಣೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಗರದ  ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ,ಸಮಾಜ ಕಲ್ಯಾಣ ಇಲಾಖೆಯ […]

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಶಾಲೆಯಲ್ಲಿ ಕರ್ನಾಟಕ ಸಂಭ್ರಮ ಅಂಗವಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ವಿಜಯಪುರ: ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸುವ ಅವಶ್ಯಕತೆ ಇದೆ ಎಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷ ಸುರೇಶ ದೇಸಾಯಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ವಿವೇಕನಗರದ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಆಯೋಜಿಸಿದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಕ್ರೀಡೆಯ ಜೊತೆಗೆ ಮಕ್ಕಳಿಗೆ ನಮ್ಮ ಕಲೆ ಸಂಸ್ಕೃತಿ ಸಾಹಿತ್ಯವನ್ನು ಪರಿಚಯಿಸುವುದರೊಂದಿಗೆ ಅವರಲ್ಲಿ ಅಡಗಿರುವ ಕಲಾ […]

ಮಾಜಿ ಸಚಿವ ಅಪ್ಪ ಪಟ್ಟಣಶೆಟ್ಟಿ ಅವರಿಂದ ಪ್ರತಿ ಸೋಮವಾರ ಅನ್ನದಾಸೋಹ- ಶಿವಾಜಿ ಚೌಕಿನಲ್ಲಿ ಬಸವಲಿಂಗ ಸ್ವಾಮೀಜಿ ಚಾಲನೆ

ವಿಜಯಪುರ: ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ನಗರದ ಶಿವಾಜಿ ಚೌಕಿನಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ಪ್ರತಿ ಸೋಮವಾರ ಅನ್ನದಾಸೋಹ ಸೇವೆ ಪ್ರಾರಂಭಿಸಿದ್ದಾರೆ. ಈ ಕಾರ್ಯಕ್ಕೆ ಜ್ಞಾನಯೋಗ್ರಾಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ಅನ್ನ ದಾಸೋಹ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.  ವಿಜಯಪುರದ ಶಿವಾಜಿ ಚೌಕಿನಲ್ಲಿ ಇನ್ನು ಮುಂದೆ ಪ್ರತಿ ಸೋಮವಾರ ಅನ್ನದಾಸೋಹ ವ್ಯವಸ್ಥೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ.  ಜ್ಞಾನಯೋಗಾಶ್ರಮದಲ್ಲಿ ನಿರಂತರ ಅನ್ನ‌ಪ್ರಸಾದ ಇರುತ್ತದೆ.  ಅದೇ ರೀತಿ […]

ಮೆಕ್ಕೆಜೋಳ ಹಾಪರ್ ದುರಂತ- 7 ಕಾರ್ಮಿಕರ ಅಂತಿಮ ದರ್ಶನ ಪಡೆದ ಸಚಿವ ಎಂಬಿಪಿ- ಕಾರ್ಮಿಕರ ಕುಟುಂಬಕ್ಕೆ ತಲಾ ರೂ. 7 ಲಕ್ಷ ಪರಿಹಾರ, ವಿಮಾನ ಮೂಲಕ ಪಾರ್ಥಿವ ಶರೀರ ರವಾನೆ

ವಿಜಯಪುರ: ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ಮೆಕ್ಕೆಜೋಳ ಸಂಗ್ರಹ ಹಾಪರ್(ತೊಟ್ಟಿ) ಕುಸಿದು ಸಾವಿಗೀಡಾದ ಏಳು ಜನರ ಪಾರ್ಥಿವ ಶರೀರಗಳನ್ನು ವಿಮಾನದ ಮೂಲಕ ಬಿಹಾರಕ್ಕೆ ಕಳುಹಿಸಿ ಕೊಡಲಾಗುವುದು.  ಅಲ್ಲದೇ, ಸಾವಿಗೀಡಾದವರ ಕುಟುಂಬಗಳಿಗೆ ತಲಾ ರೂ. 7 ಲಕ್ಷ ಪರಿಹಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಫುಡ್ ಇಂಡಸ್ರ್ರಿಯಲ್ಲಿ ಮೆಕ್ಕೆಜೋಳ ಸಂಗ್ರಹಿಸಲಾಗಿದ್ದ ಹಾಪರ್ಶ್ರ(ಬೃಹತ್ ಯಂತ್ರ) ಕುಸಿದ […]

ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಅವಘಡ ಪ್ರಕರಣ- ತಡರಾತ್ರಿ ಸಚಿವ ಎಂ. ಬಿ. ಪಾಟೀಲ ಭೇಟಿ, ಸಕಲ ಕ್ರಮದ ಭರವಸೆ

ವಿಜಯಪುರ: ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಇಂಡಸ್ಟ್ರೀಸ್ ನ ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವರು ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು.  ಅಲ್ಲದೇ, ಘಟನಾ […]

ಗುಮ್ಮಟ ನಗರಿಯಲ್ಲಿ ಮೆಕ್ಕೆಜೋಳದ ಚೀಲಗಳಡಿ ಸಿಲುಕಿದ ಸುಮಾರು ಹತ್ತಕ್ಕೂ ಹೆಚ್ಚು ಜನರು- ಮುಂದುವರೆದ ರಕ್ಷಣಾ ಕಾರ್ಯಾಚರಣೆ

ವಿಜಯಪುರ: ಮೆಕ್ಕೆಜೋಳಗಳನ್ನು ತುಂಬಿಡಲಾಗಿದ್ದ ಗೋಣಿ ಚೀಲಗಳು ಕುಸಿದ ಪರಿಣಾಮ ಸುಮಾರು ಹತ್ತಾರು ಜನರು ಸಿಲುಕಿಕೊಂಡಿರುವ ಘಟನೆ ಗುಮ್ಮಟ ನಗರಿ ವಿಜಯಪುರ ನಗರದ ಹೊರವಲಯದಲ್ಲಿರುವ ಕೆ ಐ ಡಿ ಬಿ ವಸಾಹತು ಪ್ರದೇಶದಲ್ಲಿ ನಡೆದಿದೆ. ಖ್ಯಾತ ರಾಜಗುರು ಇಂಡಸ್ಟ್ರೀಜ್ ಗೋದಾಮಿನಲ್ಲಿ ಈ ಘಟನೆ ನಡೆದಿದ್ದು, ಸುಮಾರು 10ಕ್ಕೂ ಹೆಚ್ಚು ಜನ ಸಿಲುಕ್ಕಿದ್ದಾರೆ ಎೞದು ಪ್ರಾಥಮಿಕ ವರದಿಗಳು ತಿಳಿಸಿವೆ.  ರಾಜಗುರು ಫುಡ್ ಪ್ರೊಸೆಸಿಂಗ್ ಯುನಿಟ್ ನಲ್ಲಿ ಈ ಘಟನೆ ನಡೆದಿದೆ.  ಇಲ್ಲಿ ಸಂಗ್ರಹಿಸಿ ಇಡಲಾಗಿದ್ದ ಮೆಕ್ಕೆಜೋಳದ ಚೀಲಗಳ ಮೇಲೆ ಬೃಹತ್ […]