ಸಕ್ಕರೆ ಕರ್ಖಾನೆ ಮಾಲೀಕರೊಂದಿಗೆ ಡಿಸಿ ಟಿ. ಭೂಬಾಲನ್ ಸಭೆ- ಸಕಾಲದಲ್ಲಿ ಕಬ್ಬಿನ ಬಿಲ್ ಪಾವತಿಸಲು ಸೂಚನೆ

ವಿಜಯಪುರ: ಕಬ್ಬು ನುರಿಸಿದ 14 ದಿನಗಳಲ್ಲಿ ಸಕ್ಕರೆ ಕರ್ಖಾನೆಗಳು ನೇರವಾಗಿ ರೈತರ ಖಾತೆಗಳಿಗೆ ಎಫ್ಆರ್ಪಿ ದರದಂತೆ ಕಬ್ಬಿನ ಬಿಲ್ಲನ್ನು ಜಮೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಸಕ್ಕರೆ ಕರ್ಖಾನೆಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಕಾನೆಗಳ ಮಾಲೀಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಬ್ಬಿನ ಬಿಲ್ ಪಾವತಿಸುವಲ್ಲಿ ಯಾವುದೇ ವಿಳಂಬ ಧೋರಣೆ ಅನುಸರಿಸದೇ ಸಕಾಲದಲ್ಲಿ ಮತ್ತು ನಿಗದಿತ ದರದನ್ವಯ ಬಿಲ್ ಪಾವತಿ ಮಾಡಬೇಕು. ಸಕ್ಕರೆ ಕರ್ಖಾನೆ ಮಾಲಿಕರು […]
ಸಂವಿಧಾನ ಸಮಾನತೆ ನೀಡಿದ್ದರೂ ಮಹಿಳೆಯರು ಇನ್ನೂ ವಂಚಿತರಾಗುತ್ತಿರುವುದು ವಿಷಾಧನೀಯ- ಪ್ರೊ. ಚಂದ್ರಮ್ಮ

ವಿಜಯಪುರ: ನಮ್ಮ ಸಂವಿಧಾನವು ಮಹಿಳೆಯರಿಗಾಗಿ ಸಮಾನ ವೇತನ ಕಾಯಿದೆ, ಮಾತೃತ್ವ ಸವಲತ್ತು ಕಾಯಿದೆ, ಬಹು ಪತ್ನಿತ್ವ ನಿಷೇಧ ಕಾಯಿದೆ, ಅಂತರ್ಜಾತಿ ವಿವಾಹ ಕಾಯಿದೆ ಸೇರಿದಂತೆ ಹಲವಾರು ವಿಧಿಗಳನ್ನು ನೀಡಿದ್ದರು ಇಂದಿಗೂ ಹಲವು ಕಡೆಗಳಲ್ಲಿ ಮಹಿಳೆಯರು ಇದರಿಂದ ವಂಚಿತರಾಗುತ್ತಿರುವುದು ವಿಷಾದನೀಯ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವೆ ಪ್ರೊ. ಚಂದ್ರಮ್ಮ ಎಂ. ಅಭಿಪ್ರಾಯಪಟ್ಟಿದ್ದಾರೆ. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾ. ಬಿ. ಆರ್. […]
ಬಸವ ನಾಡಿನಲ್ಲಿ ಗಮನ ಸೆಳೆದ ಗಣವೇಷಧಾರಿಗಳ ಪಥ ಸಂಚಲನ- ಜಾತಿ, ಸಮಾಜ ವಿಂಗಡಣೆ ಬಗ್ಗೆ ಎಚ್ಚರಿಕೆ ಅಗತ್ಯ- ನರೇಂದ್ರ

ವಿಜಯಪುರ: ಕೊರೊನಾದಂಥ ಅನೇಕ ವೈರಸ್ ನಮ್ಮ ಜೊತೆಗಿದ್ದು ಜಾತಿಗಳ ನಡುವೆ ವಿಘಟನೆ ಮತ್ತು ಹಿಂದೂ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತವೆ ಎಂದು ಆರ್ ಎಸ್ ಎಸ್ ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ನರೇಂದ್ರ ಹೇಳಿದ್ದಾರೆ. ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಆರ್ ಎಸ್ ಎಸ್ ನಗರ ವಾರ್ಷಿಕೋತ್ಸವದತ ಅಂಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೂ ಎಂಬುದು ಕೇವಲ ಮೆರವಣಿಗೆಯ ಘೋಷಣೆಗೆ ಸೀಮಿತವಾಗಬಾರದು. ಪ್ರತಿದಿನ ಹಿಂದೂ ಆಗಬೇಕು. ಹಿಂದೂ ಸಮಾಜ ಎಷ್ಟು ಬೇಗ ಸಂಘಟಿತವಾಗುತ್ತದೆಯೋ […]
ಡಿಸಿಎಂ ಕೇಸ್ ನಲ್ಲಿ ಸರಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ- ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ- ಎಂ. ಬಿ. ಪಾಟೀಲ

ವಿಜಯಪುರ: ರಾಜ್ಯ ಸಚಿವ ಸಂಪುಟ ಕಾನೂನು ಪ್ರಕಾರವೇ ಡಿಸಿಎಂ ಡಿ. ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಆದೇಶ ರದ್ದು ಪಡಿಸುವಂತೆ ಶಿಫಾರಸು ಮಾಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಈ ನಿರ್ಧಾರದಿಂದ ಕಾನೂನು ಸಮರಕ್ಕೆ ಕಾರಣವಾಗಬಹುದಾ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ತೀಕ್ಷ್ಣವಾಗಿ ಉತ್ತರಿಸಿದರು. ಸಿಬಿಐ ಈ ವಿಚಾರದಲ್ಲಿ […]
ತಿಕೋಟಾ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜೀವ ಗಾಂಧಿ ವಿವಿ ಕಬಡ್ಡಿ ತಂಡಕ್ಕೆ ಆಯ್ಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ನರ್ಸಿಂಗ್ ಕಾಲೇಜಿನ ಬಿ.ಎಸ್ಸಿ ನರ್ಸಂಗ್ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಕುಮಾರ ಸಾನ್ವಿ ಮತ್ತು ಐಶ್ವರ್ಯ ಪಾರೆ ಅವರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ, ಇದೇ ಕಾಲೇಜಿನ ದೈಹಿಕ ನಿರ್ದೇಶಕ ಭೀಮರಾವ ದೇಸಾಯಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮತ್ತು ತರಬೇತುದಾರರು ಇನ್ನು ಮುಂದೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಕಬಡ್ಡಿಯಲ್ಲಿ ಪ್ರತಿನಿಧಿಸಲಿದ್ದಾರೆ. ಯುನಿವರ್ಸಿಟಿ ಬ್ಲ್ಯೂ ಆಗಿ ಆಯ್ಗೆಯಾದ […]
ಬಸವ ನಾಡಿನಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಓಡಿಸಲು ಕ್ರಮ ಕೈಗೊಳ್ಳಿ- ಸಂಸದರಾದ ಜಿಗಜಿಣಗಿ

ವಿಜಯಪುರ: ವಿಜಯಪುರ ಮತ್ತು ಬೆಂಗಳೂರು ಮಧ್ಯೆ ವಂದೆ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಉಭಯ ಸಂಸದರಿಗೆ ಪತ್ರ ಬರೆದಿರುವ ಸುನಿಲಗೌಡ ಪಾಟೀಲ ಅವರು, ವಿಜಯಪುರದಿಂದ ಬೆಂಗಳೂರಿಗೆ ಹೋಗಲು ರೈಲು ಸೇವೆ ಇದ್ದರೂ ಈ ರೈಲುಗಳು ಸಂಚಾರ ಸಮಯ ಅನಕೂಲಕರವಾಗಿಲ್ಲ. ಅಲ್ಲದೇ, ಈ ರೈಲುಗಳು ಸರಿಯಾದ ಸಮಯಕ್ಕೆ ನಿಗದಿತ […]
ತಾಯಿ, ದೇವರ ಸಾಕ್ಷಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತೇವೆ- ಡಿಕೆಶಿ ಸಿಬಿಐ ಪ್ರಕರಣದ ವಿರುದ್ಧ ನ್ಯಾಯಲಯಕ್ಕೆ ಮೊರೆ- ಯತ್ನಾಳ

ವಿಜಯಪುರ: ತಾಯಿ ಸಾಕ್ಷಿಯಾಗಿ, ದೇವರ ಸಾಕ್ಷಿಯಾಗಿ ಹೇಳುತ್ತಿದ್ದೇವೆ. ಮುಂಬರುವ ಲೋಕಸಭೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನಿರ್ಧಾರವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಭಾರತ ಮತ್ತೋಂದು ಇಸ್ರೆಲ್ ಆಗಬಾರದು ನಾನು, ಶಾಸಕರಾದ ಸುನೀಲಕುಮಾರ, ರಮೇಶ ಜಾರಕಿಹೊಳಿ, ಅರವಿಂದ […]
ಅನಿಮಿಯಾ ಮುಕ್ತ, ಪೌಷ್ಟಿಕ ಕರ್ನಾಟಕ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ- ಡಿಎಚ್ಓ ಬಸವರಾಜ ಹುಬ್ಬಳ್ಳಿ

ವಿಜಯಪುರ: ಅನಿಮಿಯಾ, ಅಪೌಷ್ಠಿಕತೆ ಹಾಗೂ ಮಕ್ಕಳ ದೈಹಿಕ ಬೆಳವಣಿಗೆ ಕುರಿತು ತಾಯಂದಿರು ಮತ್ತು ಪೋಷಕರು ಹೆಚ್ಚು ಜಾಗೃತರಾಗಿರಬೇಕು. ಅನಿಮಿಯಾ ಮುಕ್ತ, ಪೌಷ್ಟಿಕ ಕರ್ನಾಟಕ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಬಾಲಕರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ […]
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೆ ಯಾವುದೇ ತ್ಯಾಗಕ್ಕೂ ಸಿದ್ದ- ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಅನೇಕ ರೀತಿ ಹೋರಾಟ ಮಾಡಿದರೂ, ಯಾವುದೇ ಸರಕಾರ ಸರಿಯಾಗಿ ಸ್ಪಂಧಿಸಿಲ್ಲ. ಬೇಡಿಕೆ ಈಡೇರುವವರೆಗೂ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ತಿಕೋಟಾ ತಾಲೂಕಿನ ಕನಮಡಿ ಬಳಿಯ ಸುಕ್ಷೇತ್ರ ಗಡಿಭಾಗದಲ್ಲಿರುವ ಶ್ರೀ ಧರಿದೇವರ ದೇವಸ್ಥಾನದ ಬಳಿಯ ಪ್ರೌಢಶಾಲೆಯ ಆವರಣದಲ್ಲಿ ಇಷ್ಟಲಿಂಗ ಪೂಜೆಯೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆ, ಚನ್ನಮ್ಮ ಜಯಂತಿ ವಿಜಯೋತ್ಸವ ಹಾಗೂ ಪಂಚಮಸಾಲಿ ಸಮಾಜದ ಬೃಹತ್ ಸಮಾವೇಶ ಉದ್ಘಾಟಿಸಿ ಅವರು […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಂ. ಬಿ. ಪಾಟೀಲರ ಪುತ್ರ ಬಸನಗೌಡ- ಶ್ಯಾಮನೂರು ಶಿವಶಂಕರಪ್ಪ ಮೊಮ್ಮಗಳು ಅಖಿಲಾ ಜೋಡಿ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ಅವರ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಅವರ ವಿವಾಹ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರೊಂದಿಗೆ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯಿತು. ಸಿದ್ದಗಂಗಾ ಸ್ವಾಮೀಜಿ, ಸುತ್ತೂರ ಸ್ವಾಮೀಜಿ, ಆದಿಚುಂಚನಗಿರಿ ಸ್ವಾಮೀಜಿ, ಬೇಲಿಮಠ ಸ್ವಾಮೀಜಿ, ಸೇರಿದಂತೆ ಪ್ರಮುಖ ಸ್ವಾಮೀಜಿಗಳ ಸಾನಿದ್ಯದಲ್ಲಿ ನಡೆದ […]