ಕಾವೇರಿ ನೀರು ಬಿಡುಗಡೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ- ಕರ್ನಾಟಕದಿಂದಲೇ ಬಿಜೆಪಿ ಹಿನ್ನೆಡೆ ಪ್ರಾರಂಭವಾಗಿದೆ- ಎಚ್. ಕೆ. ಪಾಟೀಲ

ವಿಜಯಪುರ: ಕಾವೇರಿ ಜಲವಿವಾದ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರಕ್ಕೆ ಕಾಜಳಿ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಅತ್ಯಂತ ನಿರ್ಲಕ್ಷ್ಯ ನೀತಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ಯಾವುದೇ ರೀತಿಯ ಕಳಕಳಿ, ಕಾಳಜಿ, ಆತುರ ಎಲ್ಲಿಯೂ ಕಾಣುತ್ತಿಲ್ಲ ಎಂದು ಆರೋಪಿಸಿದರು. ಕರ್ನಾಟಕದಲ್ಲಿ 215ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿವೆ ಎಂದು ರಾಜ್ಯ ಸರಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸರಕಾರದ […]
ಪತ್ರಕರ್ತರಾದ ರಮೇಶ, ಮಲ್ಲಿಕಾರ್ಜುನಮಠ, ಸೀತಾರಾಮ, ಕಂಪೂನವರ, ಸಾಧಕರಾದ ಎಸ್. ಡಿ. ಕುಮಾನಿ, ಎ. ಜೆ ಕುಲಕರ್ಣಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ವಿಜಯಪುರ: ಪತ್ರಕರ್ತರಾದ ಕೆ. ವಿ. ರಮೇಶ(ವಿಜಯವಾಣಿ ಸ್ಥಾನಿಕ ಸಂಪಾದಕ), ಅಲ್ಲಮಪ್ರಭು ಮಲ್ಲಿಕಾರ್ಜುನಮಠ(ತೆಂಕಣಗಾಳಿ ಸಂಪಾದಕ), ಸೀತಾರಾಮ ಕುಲಕರ್ಣಿ(ನವನಾಡ ಕರ್ನಾಟಕ ಸಂಪಾದಕ), ಷಡಾಕ್ಷರಿ ಕಂಪೂನವವರ(ಸುವರ್ಣ ನ್ಯೂಸ್), ಸಮಾಜ ಸೇವಕ ಎಸ್. ಡಿ. ಕುಮಾನಿ, ಇತಿಹಾಸ ತಜ್ಞ ಮತ್ತು ಸಂಶೋಧಕ ಎ. ಜೆ. ಕುಲಕರ್ಣಿ ಸೇರಿದಂತೆ 20 ಜನರನ್ನು ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಸಂಗಮೇಶ ಭೀಮಣ್ಣ ಕೆರೆಪ್ಪಗೋಳ, ಸಮಾಜ ಸೇವೆ-ಕನ್ನಡ ಸೇವೆ ಕ್ಷೇತ್ರದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಬಾಳಿ ಹಾಗೂ ಸಿದ್ರಾಮಪ್ಪಾ ದುಂಡಪ್ಪಾ ಕುಮಾನಿ, […]
ಫ. ಗು. ಸಿದ್ದಾಪುರ, ಎ. ಎಂ. ಮದರಿ, ರಫೀ ಭಂಡಾರಿ ಸೇರಿ 68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿಜಯಪುರ: ಮಕ್ಕಳ ಖ್ಯಾತ ಸಾಹಿತಿ ಪರಪ್ಪ ಗುರುಪಾದಪ್ಪ ಸಿದ್ದಾಪುರ, ನಾನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅಪ್ಪಣ್ಣ ಮಾರುತಿ ಮದರಿ, ಹಾಗೂ ಉರ್ದು ಪತ್ರಕರ್ತ ರಫೀ ಭಂಡಾರಿ ಸೇರಿದಂತೆ ಒಟ್ಟು 68 ಜನರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ನಾನಾ ಕ್ಷೇತ್ರಗಳ ಸಾಧಕರಿಗೆ 2023ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ. ಡಾ. ಫ. ಗು. ಸಿದ್ದಾಪುರ(ಸಾಹಿತ್ಯ ಕ್ಷೇತ್ರ) ಡಾ. ಫ. ಗು. ಸಿದ್ದಾಪುರ ಅವರು ವಿಜಯಪುರ ಜಿಲ್ಲೆಯ […]
ವೃಕ್ಷೋಥಾನ ಹೆರಿಟೇಜ್ ರನ್- ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿ ಯಶಸ್ವಿಗೆ ಕೈ ಜೋಡಿಸಿ- ಡಿಸಿ ಟಿ. ಭೂಬಾಲನ್ ಕರೆ

ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಡಿ.24ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ್ ಹೆರಿಟೇಜ್ ರನ್-2023 ಆಯೋಜಿಸಲಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್- 2023ರ ಅಂಗವಾಗಿ ಜಿಲ್ಲೆಯ ನಾನಾ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]
ಕಾವೇರಿ ವಿಚಾರದಲ್ಲಿ ಕಾನೂನು ಹೋರಾಟ ಮಾಡಬೇಕು- ಕಾಂಗ್ರೆಸ್ಸಿನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ- ಸಚಿವ ಸತೀಶ ಜಾರಕಿಹೊಳಿ

ವಿಜಯಪುರ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾನೂನು ಹೋರಾಟ ಮಾಡಬೇಕು. ಕಾಂಗ್ರೆಸ್ಸಿಗರು ಒಗ್ಗಟ್ಟಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬರ ಎದುರಾಗಿದೆ. ಈಗಾಗಲೇ ನಮ್ಮ ರಾಜ್ಯ ಬಹಳ ಸಂಕಷ್ಟದಲ್ಲಿದೆ. ಕಾವೇರಿ ಭಾಗದ ರೈತರೂ ಕಷ್ಟದಲ್ಲಿದ್ದಾರೆ. ಹೀಗಾಗಿ ಕಾವೇರಿ ನೀರು ಬಿಡುಗಡೆ ಮಾಡಬೇಕಾದ ಸನ್ನಿವೇಶ ಎದುರಾಗಿದೆ. ನಮ್ಮ ಸರಕಾರ ಇದನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದರು. ಒಂದು […]
ಡಾ. ಬಿದರಿ ಚೈಲ್ಡ್ ಅಕಾಡೆಮಿ ಆಶ್ರಯದಲ್ಲಿ 8 ರಿಂದ 16 ವರ್ಷದ ಮಕ್ಕಳಿಗಾಗಿ ಲಿಟಲ್ ಸಿಂಗಿಂಗ್ ಸ್ಟಾರ್ಸ್ ಗಾಯನ, ಚಿತ್ರಕಲೆ, ಆಶುಭಾಷಣ, ಆರೋಗ್ಯವಂತ ಮಗು ಸ್ಪರ್ಧೆ

ವಿಜಯಪುರ: ನಗರದ ಚಿಕ್ಕಮಕ್ಕಳ ಖ್ಯಾತ ತಜ್ಞ ಡಾ. ಎಲ್. ಎಚ್. ಬಿದರಿ ಅವರ ಮಹತ್ವಾಂಕ್ಷೆಯ ಡಾ. ಬಿದರಿ ಚೈಲ್ಡ್ ಅಕಾಡೆಮಿ ನವೆಂಬರ್ 19 ರಂದು ಲೋಕಾರ್ಪಣೆಯಾಗಲಿದ್ದು, ಇದರ ಅಂಗವಾಗಿ ನಾನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತುವ ಹಾಗೂ ಅವರ ಸರ್ವಾಂಗೀಣ ಅಭಿವೃದ್ಧಿಯ ಗುರಿಯೊಂದಿಗೆ ಈ ಸಂಸ್ಥೆ ತನ್ನ ಸೇವೆ ಪ್ರಾರಂಭಿಸಲಿದೆ. ಇದರ ಮೊದಲ ಹಂತದ ಯೋಜನೆಯಲ್ಲಿ ಜಿಲ್ಲೆಯ ಮಕ್ಕಳಲ್ಲಿರುವ ಗಾಯನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 8 ರಿಂದ 16 ವರ್ಷದೊಳಗಿನ […]
ನವೆಂಬರ್ 1 ಕನ್ನಡಿಗರಾಗುವ ಬದಲು ನಂ.1 ಕನ್ನಡಿಗರಾಗಿ: ಪ್ರಕಾಶ ಆರ್. ಕೆ.

ವಿಜಯಪುರ: ನವೆಂಬರ್ 1 ಕನ್ನಡಿಗರಾಗುವ ಬದಲು ನಂ.1 ಕನ್ನಡಿಗರಾಗಬೇಕು ಎಂದು ಗಾನಯೋಗಿ ಸಂಘದ ಪ್ರಕಾಶ ಆರ್. ಕೆ. ಹೇಳಿದ್ದಾರೆ. ಕರ್ನಾಟಕ ರಾಜ್ಯೋತ್ಸವದ 50ರ ಸಂಭ್ರಮದ ಅಂಗವಾಗಿ ಗಾನಯೋಗಿ ಸಂಘ ವತಿಯಿಂದ ಅಂಗವಾಗಿ ವಿಜಯಪುರ ನಗರದ ಸಿಂದಗಿ ಬೈಪಾಸ್ ಫ್ಲೈಓವರ್ ಗೋಡೆಗೆ ಕರ್ನಾಟಕ ಪ್ರಥಮ ಪ್ರೌಢ ಸಾಮ್ರಾಟ ಇಮ್ಮಡಿ ಪುಲಿಕೇಶಿಯ ಚಿತ್ರವನ್ನು ಬಿಡಿಸುವ ಮೂಲಕ ರಾಜ್ಯೋತ್ಸವ ಗಮನ ಸೆಳೆದಿದೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾತನಾಡಿದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಾನಯೋಗಿ ಸಂಘದ ಪ್ರಕಾಶ ಆರ್. ಕೆ. ಕನ್ನಡಕ್ಕಾಗಿ […]
ಡಾ. ಬಿ. ಆರ್. ಅಂಬೇಡ್ಕರ್ ಇಡೀ ಮಾನವ ಕುಲಕ್ಕೆ ಆದರ್ಶ- ಸಚಿವ ಸತೀಶ ಜಾರಕಿಹೊಳಿ

ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಿಲ್ಲ ಇಡೀ ಮಾನವ ಕುಲಕ್ಕೆ ಸೀಮಿತವಾದ ಸಂವಿಧಾನ ಸಾಮಾಜಿಕ, ರಾಜಕೀಯ ಆರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ಅವರೊಂದಿಗೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿ […]
ಪರಿಸರ, ಸ್ಮಾರಕಗಳ ಸಂರಕ್ಷಣೆಗಾಗಿ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವಸಿದ್ಧತೆ ಕುರಿತು ಕೋರ್ ಕಮಿಟಿ ಸಭೆ

ವಿಜಯಪುರ: ಪರಿಸರ ಸಂರಕ್ಷಣೆ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಉದ್ದೇಶದಿಂದ ಡಿಸೆಂಬರ್ 24 ರಂದು ನಗರದಲ್ಲಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವ ಸಿದ್ಧತೆಗಳ ಕುರಿತು ಕೋರ್ ಕಮಿಟಿ ಸಭೆ ಶನಿವಾರ ನಡೆಯಿತು. ಡಾ. ಮಹಾಂತೇಶ ಬಿರಾದಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡ ಕೋರ್ ಕಮಿಟಿಯ ನಾನಾ ಉಪಸಮಿತಿಗಳ ಪ್ರಮುಖರು, ಈವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ರೂಟ್ ಕಮಿಟಿ ಉಸ್ತುವಾರಿ ಸೋಮಶೇಖರ ಸ್ವಾಮಿ ಮತ್ತು ಸಂತೋಷ ಅವರಸಂಗ ಮಾತನಾಡಿ, ಈ ಸ್ಪರ್ಧೆಯಲ್ಲಿ ಪಾಲ್ಗೋಳ್ಳಲಿರುವ […]
ಸೈನಿಕ ಶಾಲೆಯ ನಾನಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರೋಪ

ವಿಜಯಪುರ: ದೇಶದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ವಿಜಯಪುರ ಸೈನಿಕ ಶಾಲೆ ಒಳಾಂಗಣದಲ್ಲಿ ಶನಿವಾರ ನಡೆದ ಅಖಿಲ ಭಾರತ ಐ ಪಿ ಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರಂಭ ನಡೆಯಿತು. ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಭಿಷ್ಟ ಮಾತನಾಡಿ, ನಮ್ಮ ಶಾಲೆ ವತಿಯಿಂದ ಅಖಿಲ ಭಾರತ ಐಪಿಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಗಳನ್ನು ಆಯೋಜಿಸಿದ್ದು […]