ಮಿಲಾಪ್ ನಿಂದ ಬೆಂಗಳೂರಿನಲ್ಲಿ ಕೂದಲು ದೇಣಿಗೆ ಉಪಕ್ರಮ, ಕ್ಯಾನ್ಸರ್ ಗೆದ್ದವರ ಭೇಟಿಯ ಮೂಲಕ ಕ್ಯಾನ್ಸರ್ ಗೆದ್ದವರ ದಿನ ಆಚರಣೆ

ಬೆಂಗಳೂರು: ರಾಷ್ಟ್ರೀಯ ಕ್ಯಾನ್ಸರ್ ಗೆದ್ದವರ ದಿನಾಚರಣೆ ಅಂಗವಾಗಿ ಭಾರತದ ಅತ್ಯಂತ ದೊಡ್ಡ ಕ್ರೌಡ್ ಫಂಡಿಂಗ್ ಪ್ಲಾಟ್‍ಫಾರಂ ಮಿಲಾಪ್ ನಗರದ ಕ್ಯಾನ್ಸರ್ ಗೆದ್ದವರಿಗೆ ಬೆಂಬಲಿಸಲು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಬೆಂಗಳೂರು ಮತ್ತು ಬೆಂಗಳೂರು ಹೇರ್ ಡೊನೇಷನ್ ಸಹಯೋಗದಲ್ಲಿ ಒಂದು ದಿನವಿಡೀ ಕಾರ್ಯಕ್ರಮ ನಡೆಯಿತು.  ನಗರದ ಸಲೂನ್‍ಗೆ ಕೂದಲು ದಾನ ನೀಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.  ನಂತರ ಕ್ಯಾನ್ಸರ್ ಗೆದ್ದವರು, ಅವರ ಕುಟುಂಬಗಳ ಭೇಟಿ ಮತ್ತು ದಾನಿಗಳಿಗೆ ಈ ಸ್ಥಿತಿಯ ಕುರಿತು ಅರಿವನ್ನು ಮೂಡಿಸುವುದು ಮತ್ತು ರೋಗದ ವಿರುದ್ಧ ಹೋರಾಡುವಲ್ಲಿ […]

ಬಸವ ನಾಡಿನ ನಾನಾ ನರೇಗಾ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿಜಯಪುರ:  ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕೆ. ಎಚ್. ಪಿ. ಟಿ ಸಹಯೋಗದಲ್ಲಿ ಗ್ರಾಮ ಆರೋಗ್ಯ ಅಭಿಯಾನದ ಅಂಗವಾಗಿ ಜಿಲ್ಲೆಯ ನಾನಾ ನರೇಗಾ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ, ನಿಡಗುಂದಿ ತಾಲೂಕಿನ ಯಲಗೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ  ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಯಿತು. ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದಲ್ಲಿ ಶಿಬಿರಕ್ಕೆ ದೇವರ […]

ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ

ವಿಜಯಪುರ: ಯೋಗೋತ್ಸವದ ಅಂಗವಾಗಿ ಮಾನವೀಯತೆಗಾಗಿ ಯೋಗ ಕಾರ್ಯಕ್ರಮ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ನಡೆಯಿತು. ಕಾತ್ರಾಳ ಗುರುದೇವ ಆಶ್ರಮದ ಡಾ. ಅಮೃತಾನಂದ ಸ್ವಾಮೀಜಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರ, ಶರೀರಶಾಸ್ತ್ರ ವಿಭಾಗ ಮತ್ತು ನವದೆಹಲಿಯ ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ, ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯ […]

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವೈದ್ಯರಿಂದ ಇಬ್ಬರು ಮಕ್ಕಳಿಗೆ ಎ ಬಿ ಆರ್ ಕೆ ಯೋಜನೆಯಡಿ ಉಚಿತವಾಗಿ ಹೃದಯ ಶಸ್ತ್ರಚಿಕಿತ್ಸೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇμÁಲಿಟಿ ಆಸ್ಪತ್ರೆ ವೈದ್ಯರು ಜನ್ಮದಿನಂದಲೇ ಹೃದ್ರೋಗ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಮಕ್ಕಳಿಗೆ ಆಯುμÁ್ಮನ್ ಭಾರತ- ಆರೋಗ್ಯ ಕರ್ನಾಟಕ ಸ್ಕೀಂ(ಎ ಬಿ ಆರ್ ಕೆ) ನಡಿ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.   ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಭೇಟಿ ನೀಡುವ ಮುಂಬೈನ ಜುಪಿಟರ್ ಆಸ್ಪತ್ರೆಯ ಕನ್ಸಲ್ಟೆಂಟ್ ಪಿಡಿಯಾಟ್ರಿಕ್ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ. ಶ್ರೀನಿವಾಸ್ […]

ಪರೀಕ್ಷೆಯ ಜೊತೆ ರೋಗಿಗಳೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ವೃತ್ತಿ ನೈಪುಣ್ಯತೆ ಹೆಚ್ಚಿಸಲು ಸಾಧ್ಯ- ಡಾ. ಎನ್. ಎಸ್. ಮಹಾಂತಶೆಟ್ಟಿ

ವಿಜಯಪುರ: ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳತ್ತ ಗಮನ ಹರಿಸದೇ ರೋಗಿಗಳೊಂದಿಗೆ ಹೆಚ್ಚಿನ ಸಮಯ ಕಳೆದರೆ ಅದರ ಅನುಭವದ ಮೇಲೆ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯ ಎಂದು ಬೆಳಗಾವಿಯ ಕಾಹೆರ್ ನ ಜೆ ಎನ್. ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಎನ್. ಎಸ್. ಮಹಾಂತಶೆಟ್ಟಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಚಿಕ್ಕ ಮಕ್ಕಳ ವಿಭಾಗ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎರಡು ದಿನಗಳ […]

ಬಿ.ಎಲ್.ಡಿ.ಇ ಡೀಮ್ಡ್ ವಿವಿ- ಇಸ್ರೇಲ್ ಸೌರಾಸ್ಕಿ ಆಸ್ಪತ್ರೆಯೊಂದಿಗೆ ಒಡಂಬಡಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಚರ್ಮರೋಗ ವಿಭಾಗ ಇಸ್ರೇಲ್ ದೇಶದ ಟೆಲ್ ಅವಿವ್ ಸೌರಾಸ್ಕಿ ಆಸ್ಪತ್ರೆಯೊಂದಿಗೆ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ.ಎಂ.ಜಯರಾಜ, ಉಪಕುಲಪತಿ ಡಾ. ಆರ್.ಎಸ್.ಮುಧೋಳ, ಡಿನ್ ಡಾ. ಅರವೀಂದ ಪಾಟೀಲ ಮತ್ತು ರಜಿಸ್ಟ್ರಾರ್ ಆರ್.ವಿ.ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ಅಮೇರಿಕಾದ ನ್ಯೂ ಅರ್ಲೇಯಾನ್‍ದಲ್ಲಿ ಸಮ್ಮೇಳನದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಡಾ.ಅರುಣ ಇನಾಮದಾರ ಮತ್ತು ಇಸ್ರೇಲ್‍ನ ಡಾ. ಎಲಿ ಸ್ಪೀಚರ ಜೊತೆ ಶೈಕ್ಷಣಿಕ ಒಪ್ಪಂದ […]

ಅಗಸನಾಳ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಜಾತ್ರೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಅಗಸನಾಳ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಜಾತ್ರೆಯ ಅಂಗವಾಗಿ ಯಶೋದಾ ಟ್ರಸ್ಟ ವತಿಯಿಂದ ಯಶೋಧಾ  ಆಸ್ಪತ್ರೆ ಮತ್ತು ಮಲ್ಲಿಕಾರ್ಜುನ ದೇವಸ್ಥಾನ ಸಮಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಯಶೋದಾ ಟ್ರಸ್ಟ್ ಚೇರಮನ್ ಮತ್ತು ಮುಖ್ಯ ನೆಫ್ರಾಲಾಜಿಸ್ಟ ಡಾ. ರವೀಂದ್ರ. ಎಂ. ಮದ್ದರಕಿ, ಯುರೊಲಾಜಿಸ್ಟ್ ಡಾ. ಸುನೀಲ ಸಜ್ಜನ, ಹೃದ್ರೋಗ ಮತ್ತು ಮಧುಮೇಹ ತಜ್ಞ, ಡಾ. ಶ್ರೀನಿವಾಸ ಮುಂತಾದ ವೈದ್ಯರು ಹೃದ್ರೋಗ, ಮಧುಮೇಹ, ಕಿಡ್ನಿ ಸಮಸ್ಯೆಗಳ ಕುರಿತು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಒಟ್ಟು 95 […]

ಆಯುಷ್ಮಾನ ಭಾರತ ಆರೋಗ್ಯ ಕಾರ್ಡ ವಿತರಿಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ರಾಷ್ಟ್ರೀಯ ಆಯುಷ್ಮಾನ ಭಾರತ ಆರೋಗ್ಯ ಕಾರ್ಯಕ್ರಮದ ಜನ ಆರೋಗ್ಯ ಯೋಜನೆಯಡಿಯಲ್ಲಿ  ರಾಜ್ಯ ಸರ್ಕಾರದ ಇಡಿಸಿಎಸ್ ನಿರ್ದೇಶಕರಿಂದ ಪಡೆದ ಕಾರ್ಡಗಳನ್ನು  ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಸೋಮವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು 5 ಜನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಾರ್ಡ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಡ ವಿತರಿಸಿದ ಅವರು, ಎಲ್ಲಾ ಗ್ರಾಮ ಒನ್ ಕೇಂದ್ರದ ಪ್ರಬಂಧಕರು ತಮ್ಮ ಗ್ರಾಮಗಳಲ್ಲಿ ಬರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಆರೋಗ್ಯ ಇಲಾಖೆಯವರ ಸಿಬ್ಬಂದಿಯವರ ಸಹಾಯ ಪಡೆದು ಅರ್ಹ ಫಲಾನುಭವಿಗಳಿಗೆ ಕಾರ್ಡ ವಿತರಿಸುವಚಿತೆ ತಿಳಿಸಿದ್ದಾರೆ. […]

90 ವರ್ಷದ ವೃದ್ಧನ ಎಡಚಪ್ಪೆ ಮರುಜೋಡಣೆ ಮಾಡಿ ಗಮನ ಸೆಳೆದ ವೈದ್ಯರು

ವಿಜಯಪುರ: ಎಡ ಚಪ್ಪೆ ಎಲುಬು ಮುರಿದುಕೊಂಡಿದ್ದ 90 ವರ್ಷದ ವೃದ್ಧನಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆಯ ವೈದ್ಯರು ಎಲುಬು ಮರುಜೋಡಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗುಂದವಾನ ಗ್ರಾಮದ ಮಾರುತಿ ವಾಗಮೋರೆ ಮನೆಯಲ್ಲಿ ಬಿದ್ದು ಎಡ ಚಪ್ಪೆಯ ಎಲುಬು ಮುರಿದುಕೊಂಡಿದ್ದರು.  ನಡೆಯಲು ಬಾರದೇ ಪರದಾಡುತ್ತಿದ್ದ ಇವರಿಗೆ ಹೃದಯ ಸಂಬಂಧಿ ಕಾಯಿಲೆ ಕೂಡ ಇತ್ತು.  ಈ ಹಿನ್ನೆಲೆಯಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯಗೆ ದಾಖಲಾದ ಇವರನ್ನು ಎಲುಬು, ಕೀಲು […]

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಏಪ್ರೀಲ್ ಮೊದಲ ವಾರದಲ್ಲಿ ಕಿಡ್ನಿ ಕಸಿ ಚಿಕಿತ್ಸೆ ಆರಂಭ- ಡಾ. ಆರ್. ಎಸ್‌. ಮುಧೋಳ

ವಿಜಯಪುರ: ಏಪ್ರಿಲ್ ಮೊದಲ ವಾರದಲ್ಲಿ ಬಿ. ಎಲ್. ಡಿ. ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಚಿಕಿತ್ಸೆಗೆ ಚಾಲನೆ ನೀಡಲಾಗುವುದು ಎಂದು ಬಿ.ಎಲ್.ಡಿ.ಇ ಡೀನ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ನಗರದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಡೆದ ವಿಶ್ವ ಕಿಡ್ನಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನುರಿತ ತಜ್ಞವೈದ್ಯರ ತಂಡ ಆಸ್ಪತ್ರೆಯಲ್ಲಿದ್ದು, ಮೊದಲ ಐದು ರೋಗಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ಅವರು ತಿಳಿಸಿದರು‌. […]