Diabetic Day Celebration: ವಿಜಯಪುರದಲ್ಲಿ ವಿಶ್ವ ಮಧುಮೇಹ ದಿನ ಆಚರಣೆ

ವಿಜಯಪುರ: ದರ್ಗಾ ನಗರ ಆರೋಗ್ಯ ಕೇಂದ್ರ, ಬಿ. ಎಲ್. ಡಿ. ಇ. ಸಂಸ್ಥೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ವಿಜಯಪುರದಲ್ಲಿ ವಿಶ್ವ ಮಧುಮೇಹ ದಿನ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ಪಿ. ಎ. ಹಿಟ್ನಳ್ಳಿ, ಮತ್ತು ದರ್ಗಾ ನಗರ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಐ. ಎಸ್. ಧಾರವಾಡಕರ ಸಸಿಗೆ ನೀರು ಹಾಕುವದರ ಮೂಲಕ ಜಂಟಿಯಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪಿ. ಎ. ಹಿಟ್ನಳ್ಳಿ, ಘೋಷವಾಕ್ಯ […]
World Diabetic Day: ವಿನೂತನವಾಗಿ ವಿಶ್ವ ಮಧುಮೇಹ ದಿನಾಚರಣೆ- ಶೇ. 15 ರಷ್ಟು ಹೊಸ ಪ್ರಕರಣ ಪತ್ತೆ

ವಿಜಯಪುರ: ಜನಸಾಮಾನ್ಯರಿಗೆ ಅರಿವಿಗೆ ಬಾರದೇ ಮಧುಮೇಹ ತನ್ನ ಪ್ರಭಾವವನ್ನು ವಿಸ್ತರಿಸುತ್ತಿರುವ ಅಂಶ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಬಿ ಎಲ್ ಡಿ ಇ ಡೀಮ್ಟ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಿಂದ ವಿನೂನತವಾಗಿ ವಿಶ್ವ ಮುಧಮೇಹ ದಿನ ಆಚರಿಸಲಾಯಿತು. ಬಿ ಎಲ್ ಡಿ ಇ ಆಸ್ಪತ್ರೆಯ ವೈದ್ಯರ ತಂಡ ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ತೆರಳಿ ಬಸ್ಸಿನಲ್ಲಿ ಸಂಚರಿಸುವ ಪ್ರಯಾಣಿಕರ ಉಚಿತ […]
Radiologists Conference: ಮುಂದಿನ ಬಾರಿ ವಿಜಯಪುರದಲ್ಲಿ ರೇಡಿಯಾಕಾಜಿಸ್ಟ್ಸ್ ರಾಜ್ಯ ಸಮ್ಮೆಳನಕ್ಕೆ ಸಹಕಾರ- ಡಾ. ಆನಂದ ಎಚ್. ಕೆ.

ವಿಜಯಪುರ: ಮುಂದಿನ ಬಾರಿ ವಿಜಯಪುರದಲ್ಲಿ ರಾಜ್ಯಮಟ್ಟದ ರೇಡಿಯಾಲಾಜಿಸ್ಟ್ ಕಾನ್ಪರನ್ಸ್ ನಡೆಸಲು ಸಂಪೂರ್ಣ ಸಹಕಾರ ನೀಡುವದಾಗಿ ಕರ್ನಾಟಕ ರೇಡಿಯಾಲಜಿ ಸಂಘದ ಅಧ್ಯಕ್ಷ ಡಾ. ಆನಂದ ಎಚ್.ಕೆ. ಭರವಸೆ ನೀಡಿದ್ದಾರೆ. ನಗರದ ಬಿ.ಎಲ್.ಡಿ.ಇ. ಡೀಮ್ಡ ವಿವಿಯಲ್ಲಿ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ರೇಡಿಯಾಲಜಿ ವಿಭಾಗ ಮತ್ತು ಕರ್ನಾಟಕ ರೇಡಿಯಾಲಜಿ ಸಂಘ ಸಂಯುಕ್ತವಾಗಿ ಆಯೋಜಿಸಿದ್ದ ಅಂತರಾಷ್ಟ್ರೀಯ ರಾಂಟಜನ ದಿನ ಮತ್ತು ಬೆಸಿಕ್ಸ್ ಟು ಇಂಟರವೆನ್ಶನಲ್ ರೇಡಿಯಾಲಜಿ ಕುರಿತು ವೈದ್ಯಕೀಯ ನಿರಂತರ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. […]
Health Checkup Camps: ಮಮದಾಪುರ, ಹೊರ್ತಿ, ಮನಗೂಳಿಯಲ್ಲಿ ಆರೋಗ್ಯ ತಪಾಸಣೆ ಬೃಹತ್ ಶಿಬಿರ- ನೂರಾರು ಜನರಿಗೆ ಚಿಕಿತ್ಸೆ

ವಿಜಯಪುರ: ಎಂ. ಬಿ. ಪಾಟೀಲ ಅವರು ಬರಪೀಡಿತ ಪ್ರದೇಶಕ್ಕೆ ನೀರು ಒದಗಿಸಿದ್ದಲ್ಲದೇ, ಬಿ. ಎಲ್. ಡಿ. ಇ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಿ ಜನರಿಗೆ ಆರೋಗ್ಯ ಭಾಗ್ಯವನ್ನು ಕಲ್ಪಿಸುತ್ತಿದ್ದಾರೆ ಎಂದು ಮಮದಾಪುರ ವಿರಕ್ತಮಠದ ಪೂಜ್ಯ ಅಭಿನವ ಮುರುಘೇಂದ್ರ ಸ್ವಾಮೀಜಿ ಹೇಳಿದರು. ಬಬಲೇಶ್ವರ ತಾಲೂಕಿನ ಮಮದಾಪುರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಎಂ. ಬಿ. ಪಾಟೀಲರು ಸಪ್ತ ಕೆರೆಗಳನ್ನು ತುಂಬಿಸಿದ್ದರಿಂದ ರೈತರಿಗೆ ಅನುಕೂಲ ಕಲ್ಪಿಸಿದ್ದಾರೆ. ಅಲ್ಲದೇ, ಗುಳೆ ಹೋಗುವದನ್ನು […]
Health Camp: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಲಿ- ಡಾ. ಲಕ್ಷ್ಮಿ ಸಂಗೊಳ್ಳಿ

ವಿಜಯಪುರ: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕು ಎಂದು ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಕೇಂದ್ರದ ಸ್ತ್ರಿರೋಗ ತಜ್ಞೆ ಡಾ. ಲಕ್ಷ್ಮಿ ಸಂಗೊಳ್ಳಿ ಹೇಳಿದರು. ವಿಜಯಪುರ ನಗರದ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆ ಹಾಗೂ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣೆ ಶಿಬಿರ ಉದ್ದೇಶಿಸಿ ಅವರು […]
Anaesthesia Rally: ಬಸವ ನಾಡಿನಲ್ಲಿ ಅ. 16 ರಂದು ಅರವಳಿಕೆ ಜಾಗೃತಿ ಜಾಥಾ

ವಿಜಯಪುರ: ವಿಶ್ವ ಅರಿವಳಿಕೆ ದಿನಾಚರಣೆಯ ಅಂಗವಾಗಿ ಬಿ. ಎಲ್. ಡಿ. ಇ. ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಅರಿವಳಿಕೆ ವಿಭಾಗವು ಸೈಕಲ್ ಜಾಥಾವನ್ನು ಆಯೋಜಿದೆ ಎಂದು ಕಾಲೇಜಿನ ಅರವಳಿಕೆ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅರಿವಳಿಕೆಯ ಬಗ್ಗೆ ಜನ ಸಾಮಾನ್ಯರಲ್ಲಿ ತಿಳವಳಿಕೆ ಮೂಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜನಸಾಮಾನ್ಯರೂ ಕೂಡ ತುರ್ತು ಪರಿಸ್ಥಿತಿಯಲ್ಲಿ ಹೇಗೆ ಜೀವ ಉಳಿಸುವ ಆಪತ್ಭಾಂಧವರಾಗಬಹುದು ಎಂಬುದರ ಕುರಿತು […]
Health Camps: ಎಂ. ಬಿ. ಪಾಟೀಲರ ಜನ್ಮದಿನ ಅಂಗವಾಗಿ ನಾಲ್ಕು ಕಡೆ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರ

ವಿಜಯಪುರ. ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಏಕಕಾಲದಲ್ಲಿ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರ ನಡೆಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ವಿಜಯಪುರ ತಾಲೂಕಿನ ಕನ್ನೂರ, ತಿಕೋಟಾ, ಬಬಲೇಶ್ವರ ಮತ್ತು ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಬೃಹತ್ ಶಿಬಿರಗಳು ನಡೆದವು. ಗಮನ ಸೆಳೆದ ಕನ್ನೂರಿನ ಶಿಬಿರ ಕನ್ನೂರ ಗ್ರಾಮದ ಗುರುಮಠದಲ್ಲಿ ನಡೆದ ಶಿಬಿರ ಗಮನ ಸೆಳೆಯಿತು. […]
Health Camp: ಅ. 7 ರಂದು ಬಿ ಎಲ್ ಡಿ ಇ ಆಸ್ಪತ್ರೆ ವತಿಯಿಂದ ನಾಲ್ಕು ಕಡೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ- ಡಾ. ಅರವಿಂದ ಪಾಟೀಲ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ವಿಜಯಪುರ ಜಿಲ್ಲೆಯಾದ್ಯಂತ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ ತಿಳಿಸಿದ್ದಾರೆ. ಬಿ.ಎಲ್.ಡಿ.ಇ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನವಾದ ಅ. 7 ರಂದು ಶುಕ್ರವಾರ ಈ ಬೃಹತ್ ಆರೋಗ್ಯ ಶಿಬಿರಗಳಿಗೆ ಚಾಲನೆ ನೀಡಲಾಗುವುದು. ನಂತರ ಪ್ರತಿ ತಿಂಗಳು ಎರಡನೇ ಹಾಗೂ ನಾಲ್ಕನೇ ಶನಿವಾರರಂದು ಜಿಲ್ಲೆಯ ನಾನಾ ಕಡೆ […]
Heart Day: ಆರೋಗ್ಯ ಇಲಾಖೆಯಿಂದ ವಿಶ್ವ ಹೃದಯ ದಿನ ಆಚರಣೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಡಾ.ಬಿದರಿ ಹಾರ್ಟ್ ಸೆಂಟರ್ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವಿಜಯಪುರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾನಾ ನರ್ಸಿಂಗ್ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುರೇಶ ನಾಯಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ವಿಶ್ವಾದ್ಯಂತ ಪ್ರತಿ ವರ್ಷ 17.3 ಮಿಲಿಯನ್ ಜನರು […]
Deafness Awareness Week: ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಕಿವುಡುತನ ಕಾಯಿಲೆಗಳಿಗೆ ದಿನದ 24 ಗಂಟೆ ಉತ್ತಮ ಚಿಕಿತ್ಸೆ ಲಭ್ಯವಿದೆ- ಡಾ. ಆರ್. ಎಸ್. ಮುಧೋಳ

ವಿಜಯಪುರ: ಜನ್ಮದಿಂದಲೇ ಕಿವುಡುತನ ಮತ್ತು ಹಿರಿಯ ನಾಗರಿಕರಲ್ಲಿ ಉಂಟಾಗುವ ಕಿವುಡುತನ ಕಾಯಿಲೆಗಳಿಗೆ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ದಿನದ 24 ಗಂಟೆ ಉತ್ತಮ ಚಿಕಿತ್ಸೆ ಲಭ್ಯವಿದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು. ಬಿ ಎಲ್ ಡಿ ಇ ಆಸ್ಪತ್ರೆಯ ಕಿವಿ, ಮೂಗು, ಗಂಟಲು ಹಾಗೂ ಡಿ. ಡಿ. ಆರ್. ಸಿ(ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ) ವತಿಯಿಂದ ಆಯೋಜಿಸಲಾಗಿದ್ದ ಕಿವುಡುತನ ಕುರಿತ ಜಾಗೃತಿ […]