ಹೆಸರಿಗೆ ತಕ್ಕ ಕಾರ್ಯ- ಬಡವರಿಗೆ, ಕೊರೊನಾ ವಾರಿಯರ್ಸ್ ಗೆ ಆಹಾರದ ಕಿಟ್ ದಾನ ನೀಡಿದ ದಾನಶ್ರೀ ಸೌಹಾರ್ದ

ವಿಜಯಪುರ: ಕೊರೊನಾ ಎರಡನೇ ಅಲೆಯಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ರಸ್ತೆ ಬದಿ ವ್ಯಾಪಾರಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ. ಅದರಲ್ಲೂ ಲಾಕಡೌನ್ ಜಾರಿಯಿಂದಾಗಿ ಕೆಲಸವಿಲ್ಲದೆ ಹಲವಾರು ಜನ ಆರ್ಥಿಕವಾಗಿಯೂ ಮಗ್ಗಟ್ಟು ಎದುರಿಸುತ್ತಿದ್ದು, ಸರಕಾರ ಹಲವಾರು ವರ್ಗಗಳಿಗೆ ಪ್ಯಾಕೇಜ್ ನೀಡಿದರೂ ಅದು ಸಾಕಾಗುತ್ತಿಲ್ಲ ಎಂಬ ದೂರುಗಳೂ ಇವೆ. ಈ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರ ದಲ್ಲಿ ನಾನಾ ಸಂಘ-ಸಂಸ್ಥೆಗಳು ಸಹಾಯ ನಿರೀಕ್ಷಿಸುತ್ತಿರುವವ ನೆರವಿಗೆ ಧಾವಿಸಿವೆ. ಅದರಲ್ಲಿ ಹೆಸರಿಗೆ ತಕ್ಕಂತೆ ದಾನಶ್ರೀ ಸೌಹಾದ್ರದ ಕ್ರೆಡಿಟ್ ಸಹಕಾರಿ ಕೂಡ ಜನಮೆಚ್ಚುವ ಕಾರ್ಯ ಮಾಡಿದೆ. ಕೈಯಲ್ಲಿ […]

ಕೊರೊನಾ ಹಿನ್ನೆಲೆ ಜನದಟ್ಟಣೆ ಕಡಿಮೆ ಮಾಡಲು ಬಬಲೇಶ್ವರ ಮತಕ್ಷೇತ್ರದ ಐದು ಕಡೆ ಬೀಜ, ಗೊಬ್ಬರ ವಿತರಣೆಗೆ ಹೊಸ ಕೇಂದ್ರ ಆರಂಭ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆಗಳನ್ನು ನಡೆಸಿದ್ದು, ಅವರಿಗೆ ಬೀಜ ಹಾಗೂ ಗೊಬ್ಬರ ಸರಬರಾಜು ಮಾಡಲು ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಐದು ಕಡೆಗಳಲ್ಲಿ ಹೆಚ್ಚುವರಿ ವಿತರಣಾ ಕೇಂದ್ರಗಳು ಆರಂಭವಾಗಲಿವೆ ಎಂದು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಟಕ್ಕಳಕಿ, ಹೊನವಾಡ, ಕಾಖಂಡಕಿ, ನಿಡೋಣಿ ಮತ್ತು ಕೃಷ್ಣಾ ನಗರಗಳಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಶನಿವಾರದಿಂದ ಈ ಸ್ಥಳಗಳಲ್ಲಿ ವಿತರಣೆ ಆರಂಭವಾಗಲಿದೆ ಎಂದು […]

ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ-ಅಧಿಕಾರಿಗಳು ಬಿಜೆಪಿ ಎಜೆಂಟರಂತೆ ವರ್ತಿಸುತ್ತಿದ್ದಾರೆ- ಶಾಸಕ ದೇವಾನಂದ ಚವ್ಹಾಣ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯಪುರ ನಾಗಠಾಣ(ಮೀ) ಶಾಸಕ ಡಾ. ದೇವಾನಂದ ಚವ್ಹಾಣ ಮತ್ತೋಮ್ಮೆ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಾಗಠಾಣ ಮತಕ್ಷೇತ್ರದಲ್ಲಿ ಕೊವಿಡ್ ಕೇರ್ ಸೆಂಟರ್ ಗಳು ಖಾಲಿ ಖಾಲಿಯಾಗಿವೆ. ನನ್ನ ಮತಕ್ಷೇತ್ರದಲ್ಲಿ ಎಂಟು ಕೊವಿಡ್ ಕೇರ್ ಸೆಂಟರ್ ಗಳಿವೆ. ಇನ್ನೂ ಹೆಚ್ಚಿನ ಕೊವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಮನವಿ ಮಾಡಿದ್ದಿನಿ. ಆದರೆ, ಕೊವಿಡ್ ಕೇರ್ ಸೆಂಟರ್ ಗಳ ಪರಿಸ್ಥಿತಿ ಯಾವ ರೀತಿ ಆಗಿದೆ […]

ವಿಜಯಪುರ ನಗರವನ್ನು ಲಾಕಡೌನ್ ಮುಕ್ತ ಮಾಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರವನ್ನು ಲಾಕಡೌನ್ ಮುಕ್ತವಾಗಿ ಮಾಡಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಬೆ. 10 ರಿಂದ ಸಂ. 5 ಗಂಟೆಯವರೆಗೆ ವಿಜಯಪುರ ನಗರದಲ್ಲಿ ಲಾಕಡೌನ್ ತೆರವುಗೊಳಿಸಬೇಕು ಎಂದು ಯತ್ನಾಳ ಆಗ್ರಹಿಸಿದ್ದು, ಯತ್ನಾಳ ಬರೆದಿರುವ ಪತ್ರದ ಪ್ರತಿ ಬಸವ ನಾಡಿಗೆ ಲಭ್ಯವಾಗಿದೆ. ಈ ಪತ್ರದಲ್ಲಿ ವಿಜಯಪುರ ನಗರವನ್ನು ಯಾಕೆ ಲಾಕಡೌನ್ ಮುಕ್ತ ಮಾಡಬೇಕು ಎಂಬುದನ್ನು ಯತ್ನಾಳ ಜಿಲ್ಲಾಧಿಕಾಪಿ ಪಿ. ಸುನೀಲ ಕುಮಾರ ಅವರಿಗೆ ಮನವರಿಕೆ ಮಾಡಿ ಕೊಡುವ […]

ಜಿಲ್ಲಾಸ್ಪತ್ರೆಗೆ ತೆರಳಿ ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸಾಕಷ್ಟು ಯಶಸ್ಸು ಸಾಧಿಸಿರುವ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಈಗ ಮೂರನೇ ಅಲೆ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಗಮನ ಹರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿ. ಪ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಜೊತೆ ವಿಜಯಪುರ ಜಿಲ್ಲಾಸ್ಪತ್ರಗೆ ಭೇಟಿ ನೀಡಿದ ಅವರು, ಕೊರೊನಾ ಮೂರನೇ ಅಲೆಯನ್ನು ತಡೆಯಲು ಪೂರ್ವ ಸಿದ್ಧತೆಗಳ ಬಗ್ಗೆ ಸದೀರ್ಘ ಸಭೆ ನಡೆಸಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ […]

ಮಹಾರಾಷ್ಟ್ರ, ರಾಜ್ಯದ ಗಡಿ ಭಾಗದಲ್ಲಿ ಮಳೆ ಬಸವ ನಾಡಿನಲ್ಲಿ ತುಂಬಿ ಹರಿಯುತ್ತಿರುವ ಡೋಣಿ ನದಿ

ವಿಜಯಪುರ: ಮಹಾರಾಷ್ಟ್ರ ಮತ್ತು ವಿಜಯಪುರ ಜಿಲ್ಲೆಯಾದ್ಯಂತ ಅಲ್ಲಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಧ ಅಲ್ಲಲ್ಲಿ ಉತ್ತಮ ಮಳೆಯಿಂದಾಗಿ ಡೋಣಿ ನದಿ ತುಂಬಿ ಹರಿಯುತ್ತಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವ ಕಾರಣ ಹಲವಾರು ಕಡೆಗಳಲ್ಲಿ ರೈತರ ಹೊಲಗಳಿಗೆ ನೀರು ನುಗಿದೆ. ನಿನ್ನೆ ಸಂಜೆಯಿಂದ ಆರಂಭವಾದ ಮಳೆ ಬೆಳಿಗ್ಗೆವರೆಗೂ ಸುರಿದಿದೆ. ಈ ಮಳೆಯ ನೀರು ಡೋಣಿ ನದಿಯ ಮೂಲಕ ರೈತರ ಹೊಲಗಳಿಗೆ ನುಗ್ಗಿದೆ. ಈ ವರ್ಷದ ಮೊದಲ ಮುಂಗಾರು ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ಬಬಲೇಶ್ವರ ತಾಲೂಕಿನ ಸಾರವಾಡ […]

ವಿಜಯಪುರ ಬಿದರಿ ಆಸ್ಪತ್ರೆಗೆ ಡಿಸಿ ಭೇಟಿ- 3ನೇ ಅಲೆ ತಡೆಯಲು ಸಿದ್ಧತೆಗೆ ಸೂಚನೆ

ವಿಜಯಪುರ: ಕೊರೊನಾ ಮೂರನೇ ಅಲೆಯಲ್ಲಿ ಸೋಂಕಿತ ಮಕ್ಕಳಿಗೆ ತುರ್ತು ಚಿಕಿತ್ಸೆ ಒದಗಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ವೈದ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ. ವಿಜಯಪುರ ನಗರದ ಬಿದರಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿರುವ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮೂರನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಈ ಕುರಿತು ಈಗಿನಿಂದಲೇ ಅವಶ್ಯಕ […]

ಕೊರೊನಾ ವಾರಿಯರ್ಸ್, ಬಡವರು, ಅಸಹಾಯಕರಿಗೆ ರೋಗ ನೀರೋಧಕ ಔಷಧಿ ನೀಡುವ ಮೂಲಕ ಗಮನ ಸೆಳೆದ ಕನೇರಿ ಮಠ, ಸಂಘದ ಕಾರ್ಯಕರ್ತರು

ವಿಜಯಪುರ: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ತೊಂದರೆ ಉಂಟು ಮಾಡಿದೆ. ಈ ಎರಡನೇ ಅಲೆಯಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಸೋಂಕಿತರ ಸಂಖ್ಯೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ ಕೊರೊನಾ ಭಯ ಮಾತ್ರ ಮುಂದುವರೆದಿದೆ. ಅದರಲ್ಲೂ ಸರಕಾರ ಕೊರೊನಾ ತಡೆಗಟ್ಟಲು, ಸೋಂಕಿತರಿಗೆ ಚಿಕಿತ್ಸೆ ನೀಡಲು ಹಗಲಿರುಳು ಶ್ರಮಿಸುತ್ತಿದ್ದು, ಇತ್ತ ಮಠಗಳೂ ಕೂಡ ಜನರ ಸಹಾಯಕ್ಕೆ ಧಾವಿಸಿವೆ. ಉಳ್ಳವರು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನು ಹಣ ನೀಡಿ ಖರೀದಿಸಿದರೆ, ಬಡವರಿಗೆ ಆರೋಗ್ಯವರ್ಧಕ ಔಷಧಿಗಳು ಮರಿಚಿಕೆಯಾಗಿದ್ದವು. ಆದರೆ, ಇಂಥ ಬಡವರ ಪಾಲಿಗೆ […]

ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ, ಕೇಂದ್ರ ಸರಕಾರಗಳು ವಿಫಲ ಆರೋಪ- ಏಳು ಎಡಪಕ್ಷಗಳಿಂದ ಆನಲೈನ್ ಮೂಲಕ ಮನೆಮನೆಗಳಿಂದಲೇ ಪ್ರತಿಭಟನೆ

ವಿಜಯಪುರ: ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿ ಏಳು ಎಡ ಪಕ್ಷಗಳು ಆನಲೈನ್ ಮೂಲಕ ಮನೆಮನೆಗಳಿಂದಲೇ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಸಿಪಿಐ, ಸಿಪಿಐ(ಎಂ), ಎಸ್‌ ಯು ಸಿ ಐ(ಸಿ), ಸಿಪಿಐ(ಎಂಎಲ್) ಲಿಬರೇಶನ್, ಎ ಐ ಎಫ್ ಬಿ, ಆರ್ ಪಿ ಐ, ಸ್ವರಾಜ ಇಂಡಿಯಾ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಂಟಿಯಾಗಿ ಪಾಲ್ಗೋಂಡರು. ಕೊರೊನಾ ಲಾಕಡೌನ್ ಹಿನ್ನೆಲೆಯಲ್ಲಿ ತಂತಮ್ಮ ಮನೆಗಳ ಮುಂದೆ ಕೈಯಲ್ಲಿ ಭಿತ್ತಿ ಪತ್ರ ಹಿಡಿ ಕಾರ್ಯಕರ್ತರು ಜೀವ […]

ಸಿಂದಗಿ ತಾಲೂಕಾಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆಗಾಗಿ ರೂ. 55 ಲಕ್ಷ ಶಾಸಕರ ಅನುದಾನ ನೀಡಲು ಅರುಣ ಶಹಾಪುರ ನಿರ್ಧಾರ

ವಿಜಯಪುರ: ಕೊರೊನಾ ಎರಡನೇ ಅಲೆ ಈಗ ಸಾಕಷ್ಟು ಜನರಕನ್ನು ಹೈರಾಣಾಗಿಸಿದೆ. ಅಲ್ಲದೇ, ಸಂಕಷ್ಟಕ್ಕೂ ದೂಡಿದೆ. ಈ ಮಧ್ಯೆ, ಕೊರೊನಾ ಮೂರನೇ ಅಲೆಯ ಆತಂಕವೂ ಎದುರಾಗಿದ್ದು, ಈ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದೂ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ತಮ್ಮ ಸ್ವಂತ ಊರಾದ ಸಿಂದಗಿಗೆ ತಮ್ಮ ಅನುದಾನದಲ್ಲಿ ವಿಶೇಷ ಕೊಡುಗೆ ನೀಡಲು ನಿರ್ಧರಿಸಿದ್ದಾರೆ. 2021-22ನೇ ಆರ್ಥಿಕ ವರ್ಷದಲ್ಲಿ ತಮ್ಮ ಶಾಸಕರ ಅನುದಾನದಲ್ಲಿ ರೂ. 55 ಲಕ್ಷ […]