ಬಸವನ ಬಾಗೇವಾಡಿ ಪಟ್ಟಣದ ಜನತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ನೀಡಲು ರಾಷ್ಟ್ರೀಯ ಬಸವ ಸೈನ್ಯ ಆಗ್ರಹ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಜನತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು. ಬಸವನ ಬಾಗೇವಾಡಿಯಲ್ಲಿರುವ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ತೆರಳಿದ ಪದಾಧಿಕಾರಿಗಳು ತಾಲೂಕು ಆರೋಗ್ಯಾಧಿಕಾರಿ ಓತಗೇರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಬಸವನ ಬಾಗೇವಾಡಿ ಪಟ್ಟಣದಲ್ಲಿ ಕಳೆದ 15 ದಿನಗಳಿಂದ ಸಾರ್ವಜನಿಕರಿಗೆ ಕೊರೊನಾ ಲಸಿಕೆಯನ್ನು ನೀಡುವುದನ್ನು […]

ದೇಶ ರಕ್ಷಕರ ಪಡೆ. ಸ್ವದೇಶಿ ಜಾಗರಣಾ ಮಂಚನಿಂದ ಬಸವ ನಾಡಿನಲ್ಲಿ ನಡೆದಿರುವ ನಿಸ್ವಾರ್ಥ ಸೇವೆಗೊಂದು ಸಲಾಂ

ವಿಜಯಪುರ: ಇದ್ದರೆ ಇರಬೇಕು ಇಂಥ ಯುವಕರ ಸಂಘಟನೆಗಳು ಎಂಬ ಮಾತಿಗೆ ಹೇಳಿ ಮಾಡಿಸಿದಂತಿವೆ ಈ ಯುವಕರ ಪಡೆಗಳು. ಬಸವ ನಾಡಿನಲ್ಲಿ ಸದ್ದಿಲ್ಲದೇ ಈ ಸಂಘಟನೆಗಳು ಕೊರೊನಾ ಸೋಂಕಿತರ, ಅವರ ಸಂಬಂಧಿಕರ ಮತ್ತು ಅಸಹಾಯಕರ ಸೇವೆ ಮಾಡುವ ಮೂಲಕ ಮನೆ ಮಾತಾಗಿವೆ. ಕೊರೊನಾ ಎರಡನೇ ಅಲೆಗೆ ಉಳ್ಳವರೂ ನಲುಗಿ ಹೋಗಿದ್ದಾರೆ. ಇನ್ನು ಬಡವರ ಪಾಡಂತೂ ದೇವರಿಗೆ ಪ್ರೀತಿ ಎಂಬ ಪರಿಸ್ಥಿತಿ ಇದೆ. ಇಂಥ ಬಡವರು ಮತ್ತು ಅಸಹಾಯಕರಿಗೆ ವಿಜಯಪುರ ನಗರದ ದೇಶ ರಕ್ಷಕರ ಪಡೆ ತ್ತು ಸ್ವದೇಶಿ ಜಾಗರಣಾ […]

ಕೂಡಗಿ ಎನ್ ಟಿ ಪಿ ಸಿ, ಪವನ ವಿದ್ಯುತ್ ಕಂಪನಿಗಳ ವಿರುದ್ಧ ಬಸವ ಸೈನ್ಯ ಸಂಸ್ಥಾಪಕ ಶಂಕರಗೌಡ ಬಿರಾದಾರ ಅಸಮಾಧಾನ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿರುವ ಕೂಡಗಿಯ ಎನ್ ಟಿ ಪಿ ಸಿ ಮತ್ತು ಬಸವನ ಬಾಗೇವಾಡಿ ಸುತ್ತಮುತ್ತಲಿರುವ ಪವನ ವಿದ್ಯುತ್ ಕಂಪೆನಿಗಳು ಜನರಿಗೆ ಮೋಸ ಮಾಡುತ್ತಿವೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆರೋಪಿಸಿದ್ದಾರೆ ಕರೊನಾ ರೋಗದಿಂದ ಇಡೀ ಮನುಕುಲವೇ ತತ್ತರಿಸಿ ಹೋಗಿದೆ. ಸಾಕಷ್ಟು ಜನರು ಜೀವ ಕಳೆದುಕೊಂಡಿದ್ದಾರೆ. ಅಲ್ಲದೇ, ಬಸವನ ಬಾಗೇವಾಡಿ ತಾಲೂಕಿನಲ್ಲಿ ಸಾವಿರಾರು ಜನ ನಿರ್ಗತಿಕರಾಗಿದ್ದಾರೆ. ಆದರೆ, ಎನ್ ಟಿ ಪಿ ಸಿ ಮತ್ತು ಪವನ ವಿದ್ಯುತ್ […]

ವಿಶ್ವ ತಂಬಾಕು ರಹಿತ ದಿನಾಚರಣೆ ಬಗ್ಗೆ ಹೋಮಿಯೋಪಥಿ ವೈದ್ಯರ ಸಲಹೆಗಳು

ಡಾ. ರವಿ. ಎಸ್. ಕೋಟೆಣ್ಣವರ,ಹೋಮಿಯೋಪಥಿ ವೈದ್ಯರು ವಿಜಯಪುರ: ವಿಶ್ವ ಆರೋಗ್ಯ ಸಂಸ್ಥೆಯು ಪ್ರತೀ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನಾಚಾರಣೆ ಘೋಷಣೆ ಮಾಡಿದ್ದು, ಇದನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಈ ದಿನದಂದು ಒಂದು ಘೋಷ ವಾಖ್ಯವನ್ನು ನೀಡಿ ಈ ನಿಟ್ಟಿನಲ್ಲಿ ವರ್ಷವಿಡಿ ಸರಕಾರ ಮತ್ತು ಸರಕಾರ ಹೊರತಾದ ಸಂಘ-ಸಂಸ್ಥೆಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ವರ್ಷದ ಘೋಷ ವಾಖ್ಯ ತ್ಯಜಿಸಲು ಬದ್ಧರಾಗಿ ಎಂಬುದಾಗಿದೆ. ಈಗಾಗಲೇ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಇದರ […]

ಸಿಎಂ ಸ್ಥಾನ ಪತನ ಮುನ್ಸೂಚನೆ ಹಿನ್ನೆಲೆ- ವಿಜಯೇಂದ್ರರಿಂದ ವೀರಶೈವ, ಲಿಂಗಾಯಿತ ಸ್ವಾಮೀಜಿಗಳ ಮೂಲಕ ಒತ್ತಡ ತಂತ್ರ- ಯತ್ನಾಳ ಗಂಭೀರ ಆರೋಪ

ವಿಜಯಪುರ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪದಚ್ಯುತಿ ಮುನ್ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ವೀರಶೈವ- ಲಿಂಗಾಯಿತ ಮಠಾಧೀಶರು ಮತ್ತು ಸ್ವಾಮೀಜಿಗಳ ಮೂಲಕ ಸಿಎಂ ಪರ ಹೇಳಿಕೆ ನೀಡಲು ಒತ್ತಡ ಹೇರುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಯತ್ನಾಳ ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಜಯೇಂದ್ರ ವಿರುಸ್ಧ ವಾಗ್ದಾಳಿ ನಡೆಸಿದ್ದು, ಮಠಾಧೀಶರು ಮತ್ತು ಸ್ವಾಮೀಜಿಗಳು ಯಾವುದೇ ಒತ್ತಡಕ್ಕೆ ಮಣಿಯಬಾರದು ಎಂದು ಹೇಳಿದ್ದಾರೆ. ಯತ್ನಾಳ […]

ಲಾಕಡೌನ್ ಮಧ್ಯೆಯೂ ಸಮರೋಪಾದಿಯಲ್ಲಿ ಸಾಗಿದ ಏರಪೋರ್ಟ್ ಕೆಲಸ- ಡಿಸಿಎಂ ಗೋವಿಂದ ಕಾರಜೋಳ ಮುತುವರ್ಜಿಗೆ ಜನರ ಮೆಚ್ಚುಗೆ

ಎಸ್. ಡಿ. ಕುಮಾನಿ ವಿಜಯಪುರ: ಬಸವ ನಾಡಿನ ಜನರ ಗಗನಯಾನ ಕನಸು ನನಸಾಗುವ ಸಮಯ ಹತ್ತಿರವಾಗುತ್ತಿದೆ. ಎಲ್ಲೆಡೆ ಕೊರೊನಾ ಎರಡನೇ ಅಲೆಯಿಂದಾಗಿ ಲಾಕಡೌನ್ ಜಾರಿಯಲ್ಲಿದ್ದರೂ ನಿರ್ಮಾಣ ಕಾಮಗಾರಿಳಿಗೆ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಿಗದಿತ ಸ್ಥಳದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಸಮರೋಪಾದಿಯಲ್ಲಿ ಸಾಗಿದೆ. ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಡಿಸಿಎಂ ಗೋವಿಂದ ಕಾರಜೋಳ ಮತ್ತು ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳ ಸಮಗ್ರ ಪ್ರಯತ್ನದಿಂದಾಗಿ ಕಳೆದ ಸುಮಾರು ಒಂದು ದಶಕದಿಂದ ನನೆಗುದಿಗೆ ಬಿದ್ದಿದ್ದ ಈ […]

ಬಬಲೇಶ್ವರ, ತಿಕೋಟಾ ನೂತನ ತಾಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಟರ್ ಕರೆಯಲಾಗಿದೆ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ನೂತನ ತಾಲೂಕು ಕೇಂದ್ರಗಳಾದ ಬಬಲೇಶ್ವರ ಮತ್ತು ತಿಕೋಟಾದಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನೂತನ ತಾಲೂಕು ಕೇಂದ್ರಗಳಲ್ಲಿ ಎಲ್ಲ ತಾಲೂಕು ಮಟ್ಟದ ನಾನಾ ಇಲಾಖೆಗಳ ಕಛೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ತಲಾ ರೂ. 10 ಕೋ. ವೆಚ್ಚದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ಎರಡು ಕಡೆ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ ಎಂದು […]

ರಾಜ್ಯ, ಕೇಂದ್ರ ಸರಕಾರಗಳ ವಿರುದ್ಧ ಎಂ. ಬಿ. ಪಾಟೀಲ ಆಕ್ರೋಶ- ಯಾಕೆ ಗೊತ್ತಾ?

ವಿಜಯಪುರ: ಕೊರೊನಾ ನಿಯಂತ್ರಣ ವಿಚಾರದಲ್ಲಿ ಲಸಿಕೆ ಪೂರೈಕೆ ಮತ್ತು ಔಷಧಿ ಸರಬರಾಜು ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣವಾಗಿ ಎಡವಿವೆ ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಜೀವನವನ್ನು ಕಳೆದುಕೊಂಡಿದ್ದಾರೆ. ಲಕ್ಷಾಂತರ ಮನೆಗಳು ಮುರಿದಿವೆ. ಲಕ್ಷಾಂತರ ಜನ ಅನಾಥರಾಗಿದ್ದಾರೆ. ಆದರೂ ನಾವು ವಿರೋಧ ಪಕ್ಷದವರಾಗಿ, ಖಾಸಗಿಯವರಾಗಿ ಸಹಕಾರ ಮಾಡಬೇಕಿದೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು. […]

ಕೊರೊನಾ ಸಂಕಷ್ಚ ಕಾಲದಲ್ಲಿ ಸಿಎಂ ಬದಲಾವಣೆ ವಿಚಾರ ಸರಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ

ವಿಜಯಪುರ: ಕೊರೊನಾ ಸಂಕಷ್ಟ ಕಾಲದಲ್ಲಿ ಸಿಎಂ ಬದಲಾವಣೆ ವಿಚಾರ ಸರಿಯಲ್ಲ. ಈ ವಿಷಯದಲ್ಲಿ ತಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಿರುರುವುದಾಗಿ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸಿಎಂ ಜೊತೆ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಅವರು, ನಾನು ಪಕ್ಷದ ಹೈ ಕಮಾಂಡ ನಿರ್ಣಯಕ್ಕೆ ನಾನು ಬದ್ದನಾಗಿದ್ದೇನೆ. ನಾನು ಯಾವುದೇ ವ್ಯಕ್ತಿಯ ನಿಲುವಿಗಿಂತ ಪಕ್ಷದ ನಿರ್ಣಯಕ್ಕೆ ನಾನು ಬದ್ದನಾಗಿದ್ದೇನೆ. ಕೊರೊನಾ ಸಂದರ್ಭದಲ್ಲಿ ಸರಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇಂಥ ಇಂತಹ ಸಂದರ್ಭದಲ್ಲಿ […]

ಬಂಜಾರಾ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ನೀಡಿ, ವಿಜಯಪುರ ಜಿಲ್ಲೆಗೆ ಸೂಕ್ತ ಔಷಧಿ ಒದಗಿಸಲು ಎಂ ಎಲ್ ಸಿ ಪ್ರಕಾಶ ರಾಠೋಡ ಆಗ್ರಹ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ವಿನ ಪ್ರಮಾಣದಲ್ಲಿ ಹರಡಿದ್ದು,‌ ಲಂಬಾಣಿ ತಾಂಡಾದ ಜನರು ಬೇರೆ ಬೇರೆ ಕಡೆ ದುಡಿಯಲು ಹೊಗಿದ್ದವರು ಲಾಕಡೌನ್ ಹಿನ್ನೆಲೆಯಲ್ಲಿ ಮನೆಯಲ್ಲಿ ಇದ್ದಾರೆ. ಇವರುಗೆ ಮತ್ತು ಲಂಬಾಣಿಗಳಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ವಿಧಾನ ಪರಿಷತ ಸದಸ್ಯ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೂ ಹೆಚ್ಷಿನ ಪ್ರಮಾಣದಲ್ಲಿ ಸೋಂಕು ಕಂಡು ಬರುತ್ತಿದೆ. ಅದನ್ನು […]