ಸಿಎಂ ಜೊತೆ ವಿಡಿಯೋ ಸಂವಾದ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಜನಪ್ರತಿನಿಧಿ ಮಧ್ಯೆ ಮಾತಿನ ಸಮರ

ವಿಜಯಪುರ: ಕೊರೊನಾ ಎರಡನೇ ಅಲೆ ತಡೆಗಟ್ಟುವ ಕುರಿತು ಸಿಎಂ ಐದು ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಸಿಎಂ‌ ನಡೆಸಿದ ವಿಡಿಯೋ ಸಂವಾದ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಜನಪ್ರತಿನಿಧಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ವಿಡಿಯೋ ಸಂವಾದದಲ್ಲಿ ವಿಜಯಪುರದಲ್ಲಿ ಪಾಲ್ಗೊಂಡ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಸರಕಾರ ಅಗತ್ಯಕ್ಕೆ ತಕ್ಕಂತೆ ಔಷಧಿ, ಲಸಿಕೆ ಪೂರೈಸಬೇಕು ಎಂದು ಆಗ್ರಹಿಸಿ ಸರಕಾರದ ವೈಫಲ್ಯವನ್ನು ಎತ್ತಿ ತೋರಿಸಲು ಪ್ರಯತ್ನಿಸಿದರು. ಆಗ ಕಲಬುರಗಿಯಿಂದ ಪಾಲ್ಗೊಂಡಿದ್ದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ […]

ಹಾಪಕಾಮ್ಸ ವಾಹನಗಳ ಮೂಲಕ ಮನೆ ಮನೆಗೆ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ವಿಜಯಪುರ: ಮನೆ ಮನೆಗೆ ಹಣ್ಣು ಮತ್ತು ತರಕಾರಿ ಮಾರಾಟ ಮಾಡುವ ಹಾಪಕಾಮ್ಸ್ ವಾಹನಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಚಾಲನೆ ನೀಡಿದರು. ವಿಜಯಪುರ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ,(ಜಿಲ್ಲಾ ಪಂಚಾಯಿತಿ) ಮತ್ತು ಜಿಲ್ಲಾ ಹಾಪಕಾಮ್ಸ್ ಸಹಯೋಗದಲ್ಲಿ ಸಂಚಾರಿ ಸರಕು ವಾಹನದ ಮೂಲಕ ಹಣ್ಣು ಮತ್ತು ತರಕಾರಿಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಇದಾಗಿದೆ‌. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಡೆಗಟ್ಟಲು ಸರಕಾರ ಜನತಾ ಕರ್ಫ್ಯೂ, ಲಾಕಡೌನ್ ಜಾರಿ ಮಾಡಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲದ ಹಿತದೃಷ್ಟಿಯಿಂದ ಹಾಪಕಾಮ್ಸ್ […]

ಶಾಸಕ ದೇವಾನಂದ ಚವ್ಹಾಣ ಅವರಿಂದ ನಾಗಠಾಣ ಮತಕ್ಷೇತ್ರದಲ್ಲಿ ಕೊರೊನಾ ವಾರಿಯರ್ಸ್ ಗೆ ಕಿಟ್ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಎಫ್. ಚವ್ಹಾಣ ತಮ್ಮ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ ಗೆ ಪಡಿತರ ಕಿಟ್ ವಿತರಣೆ ಮುಂದುವರೆಸಿದ್ದಾರೆ. ಈಗಾಗಲೇ ವಿಜಯಪುರ ತಾಲೂಕು ವ್ಯಾಪ್ತಿಯಲ್ಲಿ ಆಹಾರದ ಧಾನ್ಯಗಳ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿರುವ ಅವರು ಈಗ ಚಡಚಣ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಚಡಚಣ ತಾಲೂಕಿನ ನಾನಾ ಗ್ರಾಮ ಪಂಚಾಯಿಗಳಿಗೆ ತೆರಳಿದ ಅವರು, ಕೊರೊನಾ ವಾರೊಯರ್ಸ್ ಗಳಾದ ಗ್ರಾಮ ಪಂಚಾಯಿತಿ, ಆರೋಗ್ಯ, ಪೊಲೀಸ್, ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಆಹಾರ […]

ವಿಜಯಪುರ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸುವ ರೂ. 2385.51 ಜಲಧಾರೆ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

ವಿಜಯಪುರ: :ವಿಜಯಪುರ ಜಿಲ್ಲೆಯ 12 ನಗರ ಪ್ರದೇಶಗಳು ಮತ್ತು ಗ್ರಾಮೀಣ ಭಾಗದ 1035 ಜನವಸತಿಗಳಿಗೆ ನೀರನ್ನು ಒದಗಿಸಲು ಅಂದಾಜು ರೂ. 2385.51 ಕೋ. ವೆಚ್ಚದ ಮಹತ್ವಾಕಾಂಕ್ಷಿ ಜಲಧಾರೆ ಯೋಜನೆ ಯನ್ನು ಜಲ್ ಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ. ಕುಡಿಯುವ ನೀರಿನ ಯೋಜನೆ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ […]

ಆಶಾ, ಅಂಗನವಾಡಿ ಕಾರ್ಯಕರ್ತರ ಸೇವೆಗೆ ಮೆಚ್ಚುಗೆ- ಜಿ. ಪಂ. ನಿಂದ ನಾಳೆಯಿಂದ ಆಹಾರದ ಕಿಟ್, ಸೀರೆ ನೀಡಲು ನಿರ್ಧಾರ- ಜಿ. ಪಂ. ಸಿಇಓ ಗೋವಿಂದರೆಡ್ಡಿ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಕಳೆದ ಸುಮಾರು ಒಂದು ವಾರಕ್ಕೂ ಹೆಚ್ಚು ಕಾಲ ಗ್ರಾಮೀಣ ಪ್ರದೇಶದಲ್ಲಿ ನಡೆಸಿದ ಕೊರೊನಾ ಸೋಂಕಿತರ ಮನೆ-ಮನೆ ಸಮೀಕ್ಷೆ ಈಗ ಮುಕ್ತಾಯವಾಗಿದೆ. ಈ ಕಾರ್ಯದಲ್ಲಿ ಗ್ರಾಮೀಣ ಭಾಗದ 1785 ಆಶಾ ಮತ್ತು 1733 ಅಂಗನವಾಡಿ ಕಾರ್ಯಕರ್ತರು ಕೆಲಸ ನಿರ್ವಹಿಸಿದ್ದಾರೆ. ಇವರ ಈ ಕಾರ್ಯವನ್ನು ವಿಜಯಪುರ ಜಿಲ್ಲಾಡಳಿತ ಮೆಚ್ಚಿಕೊಂಡಿದ್ದು, ಶಹಬ್ಬಾಶ್ ಎಂದಿದೆ. ಈ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಾರ್ಯಪಡೆಗಳ ಜೊತೆ ಸೇರಿ ವಿಜಯಪುರ ಜಿಲ್ಲೆಯ 629 ಗ್ರಾಮಗಳ […]

ವಿಜಯಪುರ ಜಿಲ್ಲಾಡಳಿತದ ಮನೆ-ಮನೆ ಸಮೀಕ್ಷೆಗೆ ಶಾಸಕ ಎಂ. ಬಿ. ಪಾಟೀಲ ಶ್ಲಾಘನೆ, ಕೊರೊನಾ ಮುಗಿಯುವವರೆಗೂ ಮುಂದುವರೆಸಲು ಸಲಹೆ

ವಿಜಯಪುರ: ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮನೆ-ಮನೆ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡಿ, ಕೊರೊನಾ ಸೋಂಕಿತರ ಪತ್ತೆಗೆ ಕೈಗೊಂಡ ಕ್ರಮವನ್ನು ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಶ್ಲಾಘಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅವರು ಮನೆ-ಮನೆ ಸಮೀಕ್ಷೆ ಮಾಡಿ, ಅಗತ್ಯವಿದ್ದರಿಗೆ ಹೆಲ್ತ್ ಕಿಟ್ ನೀಡಿ, ಹೋಬಳಿವಾರು ಕೊವಿಡ್ ಕೇರ್ ಕೇಂದ್ರಗಳನ್ನು ಆರಂಭಿಸಿ ಮತ್ತು ನಿರಂತರ ಜಾಗೃತಿ ಮೂಡಿಸಲು ಕರಪತ್ರಗಳನ್ನು ನೀಡಿರುವ ವಿಜಯಪುರ ಜಿಲ್ಲಾಡಳಿತದ ಕ್ರಮ ಶ್ಲಾಘಿಸುತ್ತೇನೆ. ಇದಕ್ಕಾಗಿ ಮುತುವರ್ಜಿ ವಹಿಸಿದ ಜಿಲ್ಲಾಧಿಕಾರಿ […]

ಕೊರೊನಾ ನಿಯಂತ್ರಣಕ್ಕೆ ಸಿಂದಗಿ, ಆಲಮೇಲ ತಾಲೂಕುಗಳಿಗೆ ತಲಾ ರೂ. 1 ಕೋ. ಅನುದಾನ ನೀಡಿ- ಅರುಣ ಶಹಾಪುರ ಪತ್ರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರಕ್ಕೆ ಸಧ್ಯಕ್ಕೆ ಶಾಸಕರಿಲ್ಲ. ಹೀಗಾಗಿ ಸಿಂದಗಿ ಮತ್ತು ಆಲಮೇಲ ತಾಲೂಕಿನಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಸರಕಾರ ಕೂಡಲೇ ರೂ. 1 ಕೋ. ಅನುದಾನ ಬಿಡುಗಡೆ ಮಾಡುವಂತೆ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಸಿಎಂ ಮತ್ತು ಆರೋಗ್ಯ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ದಿ. ಎಂ. ಸಿ. ಮನಗೂಳಿ ಅವರ ನಿಧನದಿಂದ ಸಿಂದಗಿ ಮತಕ್ಷೇತ್ರದಲ್ಲಿ ಶಾಸಕ ಸ್ಥಾನ ತೆರವಾಗಿದೆ. ರಾಜ್ಯ ಸರಕಾರ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಶಾಸಕರ ಅನುದಾನವನ್ನು ಕೋವಿಡ್-19 […]

ಮೋರಟಗಿ, ದೇವಣಗಾಂವ ಚೆಕ್ ಪೋಸ್ಟ್ ಗಳಿಗೆ ವಿಜಯಪುರ ಡಿಸಿ, ಇಂಡಿ ಎಸಿ ದಿಢೀರ, ಭೇಟಿ, ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೋರಟಗಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಇಂಡಿ ಉಪವಿಭಾಗಾಧಿಕಾರಿ ರಾಹುಲ ಸಿಂಧೆ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚೆಕ್ ಪೋಸ್ಟ್ ದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ಅವರು, ಅಕ್ರಮವಾಗಿ ಮರಳು ತುಂಬಿದ ವಾಹನಗಳು ಚೆಕ್ ಪೋಸ್ಟ್ ಮೂಲಕ ದಾಟಿ ಹೋಗದಂತೆ ತಡೆಯಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿ‌ನೆ ನೀಡಿದರು. ನಂತರ ಬಗಲೂರ-ಘತ್ತರಗಿ ಸೇತುವೆಯನ್ನು ವೀಕ್ಷಿಸಿದ ಅವರು, ಅಲ್ಲಿಂದ ದೇವಣಗಾಂವ […]

ಬೇರೆ ರಾಜ್ಯಗಳಿಗೆ ಹಣ್ಣು-ತರಕಾರಿ ಸಾಗಾಣಿಕೆಗೆ ಹಸಿರು ಪಾಸ್ ವ್ಯವಸ್ಥೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಬೇರೆ ರಾಜ್ಯಗಳ ಮಾರುಕಟ್ಟೆಗಳಿಗೆ ರೈತರು ಬೆಳೆದ ಹಣ್ಣು ಮತ್ತು ತರಕಾರಿಗಳನ್ನು ತಲುಪಿಸಲು ಈಗಾಗಲೇ ತೋಟಗಾರಿಕೆ ಇಲಾಖೆಯಿಂದ ಹಸಿರು ಪಾಸ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಹಂತದಲ್ಲಿ ರೈತರು ಸರಕು ಸಾಗಾಟ ಮಾಡಲು ತೊಂದರೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಅವರು ತಿಳಿಸಿದ್ದಾರೆ. ಯಾವುದೇ ಸಮಯದಲ್ಲಿ ಹೊರ ಜಿಲ್ಲೆ ಅಥವಾ ರಾಜ್ಯದಲ್ಲಿ ತಾವು ಕಳುಹಿಸುವ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಸಂಬಂಧಿಸಿದಂತೆ ತೊಂದರೆಯಾದಲ್ಲಿ, ರೈತರು ಅಪರ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಅಗತ್ಯ ಸಹಾಯ ದೊರೆಯಲಿದೆ. ಲಾಕಡೌನ್, […]

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಕೂಡಲೇ ಅಂಪೊಟೆರಿಸಿನ್ ಎಂಜೆಕ್ಷನ್ ಪೂರೈಸಿ- ಸರಕಾರಕ್ಕೆ ಮಾಜಿ ಸಚಿವ ಎಂ. ಬಿ. ಪಾಟೀಲ ಮನವಿ

ವಿಜಯಪುರ: ಕಳೆದ ಎರಡು ತಿಂಗಳಿಂದ ಹೆಚ್ಚಳವಾಗಿದ್ದ ಕೊರೊನಾ ರೋಗಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಪ್ಯಾಕ್ ಫಂಗಸ್ ಕಾಯಿಲೆಯಿಂದ ಬಳಲುತ್ತಿರುವವ ಸಂಖ್ಯೆ ಹೆಚ್ಚುತ್ತಿದೆ. ಇದು ಆತಂಕಕಾರಿ ವಿಷಯವಾಗಿದ್ದು, ಈ ರೋಗದ ಚಿಕಿತ್ಸೆಗೆ ಅಗತ್ಯವಿರುವ ಆಂಪೊಟೆರಿಸಿನ್ ಎಂಜೆಕ್ಷನ್ ನ್ನು ಸರಕಾರ ಕೂಡಲೇ ಪೂರೈಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ ಮತ್ತು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಮತ್ತು ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಿ […]