ಜಿಲ್ಲೆಯಲ್ಲಿ ಬ್ಯಾಕ್ ಫಂಗಸ್ ಸಂಖ್ಯೆ 50ಕ್ಕೇರಿಕೆ- ಆರ್ ಎಂ ಪಿ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡಿದರೆ ಕ್ರಮ- ಪಿ. ಸುನೀಲ ಕುಮಾರ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಗಂಭೀರ ಸ್ವರೂಪದ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಇಳಿಮುಖ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ನಿರಂತರ ಮತ್ತು ಗುಣಮಟ್ಟದ ಕೊರೊನಾ ರೋಗ ಲಕ್ಷಣ ಪರೀಕ್ಷೆ, ಆ್ಯಪ್ ಮೂಲಕ ಪ್ರತಿದಿನ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರೊಂದಿಗೆ ಬೆಡ್ ನಿರ್ವಹಣೆ, ನಿಗದಿತ ತಂತ್ರಾಂಶದಲ್ಲಿ ಕೊರೊನಾ ರೋಗಿಗಳ ದಾಖಲು, ಬಿಡುಗಡೆ, ಸಾವು, […]

ಆರೋಗ್ಯ ಕವಚ ಆ್ಯಂಬೂಲನ್ಸ್ ನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಸಿಬ್ಬಂದಿ

ವಿಜಯಪುರ- ತುಂಬು ಗರ್ಭಿಣಿ ಮಹಿಳೆಯೊಬ್ಬಳು ಆರೋಗ್ಯ ಕವಚ ವಾಹನದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪ ಈ ಹೆರಿಗೆಯಾಗಿದೆ. ಆಲಕೊಪ್ಪ ನಿವಾಸಿ ಲಕ್ಷ್ಮೀ ಬಿರಾದಾರ 108 ಆರೋಗ್ಯ ಕವಚ ಆ್ಯಂಬೂಲನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆಂದು ಆಸ್ಪತ್ರೆಗೆ ತರುವ ವೇಳೆ ಮಾರ್ಗ ಮದ್ಯದಲ್ಲಿ ವಾಹನದಲ್ಲಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾಹನದಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ 108 ಆ್ಯಂಬೂಲನ್ಸ್ ಸಿಬ್ಬಂದಿ ಅನೀಲಕುಮಾರ ಗುಪ್ತಾ […]

ವಿಜಯಪುರದಲ್ಲಿ ಯತ್ನಾಳ ಅಧ್ಯಕ್ಷತೆಯ ಸಂಸ್ಥೆಯಿಂದ ಆಕ್ಸಿಜನ್ ಆನ್ ವ್ಹೀಲ್ ಉಚಿತ ಸೇವೆ ಆರಂಭ

ವಿಜಯಪುರ: ವಿಜಯಪುರ ಜಿಲ್ಲೆ ಕೊರೊನಾ ಎರಡನೇ ಅಲೆ ಮುಂದುವರೆದಿದ್ದು, ಕೊರೊನಾ ಸೋಂಕಿತರು ಸೂಕ್ತ ವೈದ್ಯಕೀಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ. ಇದನ್ನು ಮನಗಂಡ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷರಾಗಿರುವ ಶ್ರೀ ಸಿದ್ದೇಶ್ವರ ಸಂಸ್ಥೆ ಮತ್ತು ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ರಾಜ್ಯದಲ್ಲಿಯೇ ಪ್ರಥಮವಾಗಿ ಖಾಸಗಿ ಸಂಸ್ಥೆಯಿಂದ ಆಕ್ಸಿಜನ್ ಆನ್ ವ್ಹೀಲ್ ಸೇವೆ ಆರಂಭವಾಗಿದೆ. ಶ್ರೀ ಸಿದ್ಧೇಶ್ವರ ಸಂಸ್ಥೆಗೆ ಸೇರಿರುವ ಶಾಲಾ ಬಸ್ಸುಗಳಲ್ಲಿ ಆಕ್ಸಿಜನ್ ಮಷೀನ್ ಒಳಗೊಂಡ ಸೇವೆ ಆರಂಭವಾಗಿದೆ. ಈ ವಾಹನಗಳಿಗೆ […]

ಬಿ ಎಲ್ ಡಿ ಆಸ್ಪತ್ರೆಯಲ್ಲಿ ಮೂರು ಜನ ಬ್ಲ್ಯಾಕ್ ಫಂಗಸ್ ರೋಗಿಗಳು ಗುಣಮುಖ- ಆರು ಜನರಿಗೆ ಶಸ್ತ್ರಚಿಕಿತ್ಸೆ- ಉಪಕುಲಪತಿ ಡಾ. ಮುಧೋಳ

ವಿಜಯಪುರ: ಕೊರೊನಾದಿಂದ ಗುಣಮುಖರಾಗಿದ್ದ ವ್ಯಕ್ತಿಗಳಲ್ಲಿ ಕಾಣಿಸಿಕೊಳ್ಳುವ ಕಪ್ಪು ಶಿಲೀಂದ್ರ(ಬ್ಲಾಕ್ ಫಂಗಸ್) ರೋಗಿಗಳ ಚಿಕಿತ್ಸೆಗೆ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಆರಂಭಿಸಲಾಗಿದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿವಿ ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ನೆರೆಯ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ, ವಿಜಯಪುರದ ಪಕ್ಕದ ಕಲಬುರಗಿ, ಬಾಗಲಕೋಟೆ, ಸೇರಿದಂತೆ ನಾನಾ ಜಿಲ್ಲೆಗಳ ಒಟ್ಟು 25 ರೋಗಿಗಳು ಇಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ನಿನ್ನೆ ಮೂರು ಗುಣಮುಖರಾಗಿ […]

ಕೊರೊನಾ ನಿಯಂತ್ರಣ- ಗ್ರಾ. ಪಂ.‌ ಕಾರ್ಯ ಪಡೆಗಳ ಕೆಲಸಕ್ಕೆ ವಿಜಯಪುರ ಜಿಲ್ಲಾಧಿಕಾರಿ ಶ್ಲಾಘನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 212 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ಪಡೆಗಳು ಈಗಾಗಲೇ ಸಭೆ ನಡೆಸಿ, ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ‌. ವಿಜಯಪುರ ಜಿಲ್ಲೆಯ ಚಢಚಣದಲ್ಲಿ ಕಾರ್ಯಪಡೆ ಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ತಾವು ಈಗಾಗಲೇ ಗುಣಕಿ, ಝಳಕಿ, ಹೋರ್ತಿ ಈ ಮೂರು ಹಳ್ಳಿಗಳಲ್ಲಿ ಭೇಟಿ ನೀಡಿದ್ದು, ಗ್ರಾಮ ಪಂಚಾಯಿತಿ ಕಾರ್ಯ ಪಡೆಗಳು ಯಾವ ರೀತಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲನೆ ನಡೆಸಿರುವುದಾಗಿ […]

ಕೊರೊನಾ ಗೆದ್ದವರ ಕಥೆ- ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ತಾನು ಗುಣವಾಗಿದ್ದಷ್ಟೇ ಅಲ್ಲ, ತಾಯಿಯನ್ನು ಬದುಕಿಸಿದ ಮಗನ ಸ್ಟೋರಿ ಇದು

ವಿಜಯಪುರ: ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗಿದ್ದರೆ, ಮತ್ತೋಂದೆಡೆ ಕೊರೊನಾದಿಂದ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಬಸವ ನಾಡಿನ ಜನರ ಪಾಲಿಗೆ ಸ್ವಲ್ಪ ನೆಮ್ಮದಿಯನ್ನು ಮೂಡಿಸಿದೆ. ಇದೇ ರೀತಿ ಕೊರೊನಾ ಸೋಂಕಿತನಾಗಿ ಆಸ್ಪತ್ರೆ ಸೇರಿದ್ದ ವಿಜಯಪುರ ನಗರದ ಜಲನಗರದ ಯುವಕ ಮತ್ತು ವ್ಯಾಪಾರಿ ಸಂಜೀವ ಗುನ್ನಾಪುರ ಸಾಕಷ್ಟು ಸಂಕಷ್ಟಗಳ ನಡುವೆಯೂ ತಾವೇ ನೈತಿಕ ಸ್ಥೈರ್ಯ ಹೆಚ್ಚಿಸಿಕೊಂಡು ಗುಣಮುಖರಾಗಿದ್ದಾರೆ. ಅಂಥವರ ಬಗ್ಗೆ ಬೆಳಕು ಚೆಲ್ಲಲು ಬಸವ ನಾಡು ನಿರ್ಧರಿಸಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ಅನುಭವ ಹಂಚಿಕೊಂಡು […]

ನಾನಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಕೊಡುಗೆಯಾಗಿ ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಜಿಲ್ಲೆಯ ನಾನಾ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ತಿಳಿಸಿದ್ದಾರೆ. ಮೇ 19ರ ವರೆಗೆ ನಾನಾ ದಾನಿಗಳಿಂದ, ಸಂಘ-ಸಂಸ್ಥೆಗಳಿಂದ ಸ್ವೀಕರಿಸಲಾದ ಹಾಗೂ ಕಚೇರಿಯಿಂದ ಖರೀದಿಸಲಾದ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು ವೆಂಟಿಲೇಟರ್ಸ ಗಳನ್ನು […]

ರೆಡ್ ಕ್ರಾಸ್ ಸೊಸಾಯಿಟಿಯಿಂದ ವಿಜಯಪುರ ಜಿಲ್ಲಾಡಳಿತಕ್ಕೆ ವೆಂಟಿಲೇಟರ್, ಆಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರ

ವಿಜಯಪುರ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕರ್ನಾಟಕ ರಾಜ್ಯ ಶಾಖೆಯಿಂದ ಒಂದು ವೆಂಟಿಲೇಟರ್ ಮತ್ತು 2 ಆಕ್ಸಿಜನ್ ಕಾನ್ಸಂಟ್ರೆಟರ್ ಗಳನ್ನು ನೀಡಲಾಯಿತು. ರಾಜ್ಯ ಘಟಕದಿಂದ ಬಂದ ಈ ಸಲಕರಣೆಗಳನ್ನು ವಿಜಯಪುರ ರೆಡ್ ಕ್ರಾಸ್ ಸೊಸಾಯಿಟಿ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಕೊರೊನಾ ಪೀಡಿತ ರೋಗಿಗಳ ಚಿಕಿತ್ಸೆಗಾಗಿ ವೆಂಟಿಲೇಟರ್ ಮತ್ತು ಆಕ್ಸಿಜನ ಕಾನ್ಸಂಟ್ರೆಟರ್ ಗಳು ಪ್ರಮುಖ ಪಾತ್ರ ವಹಿಸುವುದರಿಂದ ಭಾರತೀಯ ರೆಡ್ ಕ್ರಾಸ್ ಸೊಸಾಯಿಟಿ ಈ ಸಲಕರಣೆಗಳನ್ನು ವಿಜಯಪುರ ಜಿಲ್ಲಾಡಳಿತಕ್ಕೆ ಕೊರೊನಾ ಸೋಂಕಿತರ ಉಪಚಾರಕ್ಕೆ ನೀಡಿದೆ. ಸಲಕರಣೆಗಳನ್ನು […]

ಕೊರೊನಾ ಸಂದರ್ಭದಲ್ಲಿ ಟೀಕೆ ಮಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಕೊಡುಗೆ ಏನು? ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನೆ

ವಿಜಯಪುರ: ಕೊರೊನಾ ಎರಡನೇಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮರ್ಥವಾಗಿ ಎದುರಿಸುತ್ತಿವೆ. ಈ ಕಾರ್ಯದಲ್ಲಿ ಕಾಂಗ್ರೆಸ್ ಕೊಡುಗೆ ಏನು? ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯನ್ನು ಸಮರ್ಪಕವಾಗಿ ನಿಭಾಯಿಸಲು ದೇಶದಲ್ಲಿ ಈ ಮುಂಚೆ ಇದ್ದ 26 ಸಾವಿರ ವೆಂಟಿಲೇಟರ್ ಬೆಡ್ ಗಳನ್ನು 80 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಕೊರೊನಾ ನಿಯಂತ್ರಣಕ್ಕೆ […]

ಮನೆಯಲ್ಲಿ ಕೂಡುವ ಬದಲು ಕ್ರಿಯಾಶೀಲರಾಗಿ ಕೆಲಸ ಮಾಡಿ ಇಲ್ಲವೆ ಕುರ್ಚಿ ಖಾಲಿ ಮಾಡಿ- ಸಿಎಂ ವಿರುದ್ಧ ಮತ್ತೆ ಯತ್ನಾಳ ಗುಡುಗು

ವಿಜಯಪುರ: ಮನೆಯಲ್ಲಿ ಸುಮ್ಮನೆ ಕೂಡುವ ಬದಲು ಕ್ರಿಯಾಶೀಲರಾಗಿ ಕೆಲಸ ಮಾಡಿ. ಇಲ್ಲವೇ, ಕುರ್ಚಿ ಖಾಲಿ ಮಾಡಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ವಿರುದ್ಧ ಮತ್ತೆ ಗುಡುಗಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಸಿಎಂ ಕೇವಲ ಜಿಂದಾಲ್ ಗೆ ಜಮೀನು ನೀಡಲು ಕುರ್ಚಿಯ ಮೇಲೆ ಕುಳಿತಕೊಳ್ಳಬೇಡಿ. ಕೆಲಸವಾಗದಿದ್ದರೆ ನಿವೃತ್ತಿಯಾಗಿ. ಮೂರನೇ ಅಲೆಯ ಬಗ್ಗೆ ಏನೂ ತಯಾರಿ ಮಾಡಿಲ್ಲ. ಎರಡನೇ ಅಲೆಯೇ ಈಗ ಹೈರಾಣಾಗಿಸಿದೆ […]