ಬೆಂಗಳೂರಿನ ಎಎಸ್‌ಸಿ ಕೇಂದ್ರದಲ್ಲಿ ಕೋವಿಡ್‌ ಕೇರ್ ಸೆಂಟರ್ ಸ್ಥಾಪನೆ ಕುರಿತು ಸೇನಾಧಿಕಾರಿಗಳ ಜೊತೆ ಡಿಸಿಎಂ ಅಶ್ವತ್ಥನಾರಾಯಣ ಚರ್ಚೆ

ಬೆಂಗಳೂರು: ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡ್‌ ಆಸ್ಪತ್ರೆ ಬಳಿ ಇರುವ ಆರ್ಮಿಗೆ ಸೇರಿರುವ ಎಎಸ್‌ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ಕುರಿತು ಸೇನೆ ಅಧಿಕಾರಿಗಳ ಜೊತೆ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಮತ್ತು ಡಿಸಿಎಂ ಡಾ. ಸಿ. ಎನ್. ‌ಅಶ್ವತ್ಥನಾರಾಯಣ ಮಾತುಕತೆ ನಡೆಸಿದ್ದಾರೆ. ಎಎಸ್‌ಸಿ ಕಮಾಂಡರ್‌ ಲೆಫ್ಟಿನೆಂಟ್‌ ಬಿ. ಕೆ. ರೆಸಪಾಸ್‌ ವಾಲ್‌ ಅವರೊಂದಿಗೆ ಮಾತುಕತೆ ನಡೆಸಿದ ಅವರು, ಎಎಸ್‌ಸಿ ಸೆಂಟರ್‌ನಲ್ಲಿ ಕನಿಷ್ಠ 500 ಬೆಡ್‌ಗಳ ಕೋವಿಡ್‌ ಕೇರ್ ಕೇಂದ್ರ […]

ವಿಜಯಪುರ ಜಿಲ್ಲೆಯ ಎಲ್ಲ ಸರಕಾರಿ ಅನುದಾನಿತ ಶಾಲೆಗಳಿಗೆ 132 ದಿನದವರೆಗೆ ಬೇಕಾಗುವ ಆಹಾರ ಧಾನ್ಯಗಳ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಎಲ್ಲ ಸರಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಬೇಕಾದ 132 ದಿನದ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಉಪ್ಪು ಮತ್ತು 55 ದಿನಗಳಿಗೆ ಪ್ರತಿ ಮಗುವಿಗೆ 1 ಪಾಕೇಟ್ ಎಣ್ಣೆ (ಸೂರ್ಯಕಾಂತಿ ಎಣ್ಣೆ) ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಶಿಕ್ಷಣಾಧಿಕಾರಿ ಎಸ್. ಎಸ್. ಮುಜಾವರ(ಅದಾಯೋ) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಎಲ್ಲಾ ಮುಖ್ಯ ಶಿಕ್ಷಕರು ನಿಯಮಾನುಸಾರವಾಗಿ ಪಾಲಕ-ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಈ ಆಹಾರ ಧಾನ್ಯ […]

ಇಂಡಿ ಉಪವಿಭಾಗಾಧಿಕಾರಿ, ಸಿಂದಗಿ ತಹಸೀಲ್ದಾರ ಧಾಳಿ- ಭೀಮಾ ತೀರದಲ್ಲಿ ಸುಮಾರು ರೂ. 5.31 ಲಕ್ಷ ಮೌಲ್ಯದ ಅಕ್ರಮ ಮರಳು ವಶ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿ ರಾಹುಲ್ ಸಿಂಧೆ ಅವರ ನೇತೃತ್ವದಲ್ಲಿ ಸಿಂದಗಿ ತಹಸೀಲ್ದಾರ ಮತ್ತು ಪೋಲಿಸ್ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಭೀಮಾ ತೀರದಲ್ಲಿ ಧಾಳಿ ನಡೆಸಿ ಅಕ್ರಮ ಮರಳನ್ನು ವಶಪಡಿಸಿಕೊಂಡಿದೆ. ಸಿಂದಗಿ ತಾಲೂಕಿನ ದೇವಣಗಾಂವ ಮತ್ತು ಶಂಬೆವಾಡ ಗ್ರಾಮ ವ್ಯಾಪ್ತಿಯಲ್ಲಿ ಭೀಮಾ ನದಿ ಪಾತ್ರದಲ್ಲಿ ಈ ಧಾಳಿ ನಡೆಸಿದ ಅಧಿಕಾರಿಗಳು 629 ಕ್ಯೂಬಿಕ್ ಮೀಟರ್ ಅನಧಿಕೃತ ಮರಳನ್ನು ವಶಕ್ಕೆ ಪಡೆದಿದೆ. ಎರಡು ಪ್ರತ್ಯೇಕ ಕಡೆ ನಡೆದ ಈ ಧಾಳಿಯಲ್ಲಿ […]

ಸದ್ದುಗದ್ದಲವಿಲ್ಲದೆ ಕೊರೊನಾ ಸಂತ್ರಸ್ತರ ಸೇವೆಯಲ್ಲಿ ಅಮ್ಮನ ಮಡಿಲು, ಎಂ. ಬಿ. ಪಾಟೀಲ ಫೌಂಡೇಶನ್- ಪ್ರತಿದಿನ ಬರುತ್ತಿವೆ ಹಲವಾರು ಕರೆಗಳು

ವಿಜಯಪುರ: ಕೊರೊನಾ ಎರಡನೇ ಅಲೆ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಜನರನ್ನು ಹೈರಾಣಾಗಿಸಿದೆ. ಕೊರೊನಾ ಸೋಂಕಿತರು ಬೆಡ್ ಗಳು ಸಮಸ್ಯೆ, ಔಷಧಿಗಳ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಆರಂಭವಾಗುತ್ತಿದ್ದಂತೆ ಸೋಂಕಿತರಿಗೆ ಸ್ಪಂದಿಸಲು ಏ. 20 ರಂದು ವಿಜಯಪುರದ ಅಮ್ಮನ ಚಾರಿಟೆಬಲ್ ಟ್ರಸ್ಟ್ ಮತ್ತು ಎಂ. ಬಿ. ಪಾಟೀಲ ಫೌಂಡೇಶನ್ ಸಹಾಯವಾಣಿ ಆರಂಭಿಸಿದ್ದವು. ಈಗ ಈ ಸಹಾಯವಾಣಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ ಈ ಸಹಾಯವಾಣಿಗೆ 1200ಕ್ಕೂ ಹೆಚ್ಚು ಕರೆಗಳು ಬಂದಿದ್ದು, […]

ವಿಜಯಪುರ ಜಿಲ್ಲೆಯ ಕಾರಜೋಳ, ತಿಕೋಟಾಗಳಲ್ಲಿ ಕೊವಿಡ್ ಕೇರ್ ಸೆಂಟರ್ ಆರಂಭ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರ್ರದ ಕಾರಜೋಳ ಮತ್ತು ತಿಕೋಟಾಗಳಲ್ಲಿ ಮೊದಲ ಹಂತದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ ಎಂದು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ತಹಶೀಲ್ದಾರ ಮಲ್ಲಿಕಾರ್ಜುನ ಅರಕೇರಿ ಮತ್ತು ತಿಕೋಟಾ ತಹಸೀಲ್ದಾರ ಸಂತೋಷ ಮ್ಯಾಗೇರಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ. ಕವಿತಾ ದೊಡಮನಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಪ್ರಥಮ ಹಂತದಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ […]

ಕೊರೊನಾ ಸೋಂಕಿತರಿಗೆ ನೆರವಿಗೆ ಧಾವಿಸಿರುವ ವಿಜಯಪುರ ಜೈನ ಸಮುದಾಯ ಮಾಡುತ್ತಿರುವ ಸಹಾಯವೇನು ಗೊತ್ತಾ?

ವಿಜಯಪುರ- ಕೊರೊನಾ ಎರಡನೇ ಅಲೆಯಿಂದಾಗಿ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಬೆಡ್, ರೆಮಿಡಿಸಿವಿರ್ ಎಂಜೆಕ್ಷನ್ ಸೇರಿದಂತೆ ಆಕ್ಸಿಜನ್ ಕೊರತೆಯೂ ದಿನೇ ದಿನೇ ಹೆಚ್ಚುತ್ತಿದೆ. ಕೊರೊನಾ ಸೋಂಕಿತರ ಸಂಕಷ್ಯವನ್ನು ನೋಡಲಾಗಿದೆ ಬಸವ ನಾಡಿನ ಜೈನ ಸಮುದಾಯ ಸಹಾಯಕ್ಕೆ ನಿಂತಿದೆ. ಒಂದೆಡೆ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದರೆ ಮತ್ತೋಂದೆಡೆ ನಾನಾ ಆಸ್ಪತ್ರೆಗಳಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ಕೊರತೆಯಿಂದಾಗಿ ನಿತ್ಯ ರೋಗಿಗಳು ತೊಂದರೆ ಎದುರಿಸುತ್ತಿದ್ದಾರೆ. ಹೀಗಾಗಿ ರೋಗಿಗಳಿಗೆ ಸಕಾಲಕ್ಕೆ ಆಕ್ಸಿಜನ್ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿಜಯಪುರದ ನಾನಾ ಜೈನ್ ಸಂಘಟನೆಗಳು […]

ವಿಜಯಪುರ ಜಿಲ್ಲೆಗೂ ಬಂತು ಬ್ಲ್ಯಾಕ್ ಫಂಗಸ್- 26 ಕೇಸ್ ಪತ್ತೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಗೂ ಬ್ಲ್ಯಾಕ್ ಫಂಗಸ್ ಕಾಲಿಟ್ಟಿದೆ. ವಿಜಯಪುರದಲ್ಲಿ ಈ ಕುರಿತು ಮಾಹಿತಿ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಈಗಾಗಲೇ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ನ 26 ಪ್ರಕರಣಗಳು ಪತ್ತೆಯಾಗಿವೆ. ಸಂಜೆಯ ವೇಳೆಗೆ ಎಲ್ಲೆಲ್ಲಿ ಪ್ರಕರಣಗಳು ದಾಖಲಾಗಿವೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ತಿಳಿಸಿದ್ದಾರೆ. ಬ್ಲ್ಯಾಕ್ ಫಂಗಸ್ ರೋಗಿಗಳಿಗಾಗಿ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚು […]

ಶಾಸಕ ಎಂ. ಬಿ. ಪಾಟೀಲ ಸಲಹೆಗೆ ಸ್ಪಂದನೆ- ವಿಜಯಪುರ ಜಿಲ್ಲೆಯ ಗ್ರಾಮೀಣ, ಕೊಳಚೆ ಪ್ರದೇಶಗಳಲ್ಲಿ ಕೊರೊನಾ ಮನೆ ಮನೆ ಸಮೀಕ್ಷೆ ಆರಂಭ

ವಿಜಯಪುರ- ವಿಜಯಪುರ ಜಿಲ್ಲೆಯ ಗ್ರಾಮೀಣ, ಕೊಳಚೆ ಪ್ರದೇಶದಲ್ಲಿ ಮನೆ ಮನೆ ಕೊರೊನಾ ಸಮೀಕ್ಷೆ ಆರಂಭವಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿಜಯಪುರ ಜಿ. ಪಂ. ಸಿಇಓ ಗೋವಿಂದ ರೆಡ್ಡಿ ನಿನ್ನೆ ದಿನ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹಾಗೂ ತಾವು ವಿಡಿಯೋ ಕಾನ್ಫರೆನ್ಸ್ ಮಾಡಿದ್ದಾಗಿ ತಿಳಿಸಿದ್ದಾರೆ. ಈ ಸಂವಾದದಲ್ಲಿ ಸೂಚಿಸಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮತ್ತು ಕೊಳಚೆ ಪ್ರದೇಶಗಲಲ್ಲಿ ಮನೆ ಮನೆಗೆ ತೆರಳಿ ಕೊರೊನಾ ಸೋಂಕಿತರ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು […]

ದೌರ್ಜನ್ಯ ಪೀಡಿತ ಯುವತಿಯರ ಕುಟುಂಬಗಳಿಗೆ ವಿಜಯಪುರ ಜಿಲ್ಲಾಡಳಿತದಿಂದ ಪರಿಹಾರ ಧನ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಯುವತಿಯರ ಕುಟುಂಬವನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಎಸ್ಪಿ ಅನುಪಮ ಅಗ್ರವಾಲ್ ಭೇಟಿ ಮಾಡಿ ಸಾಂತ್ವನ ಹೇಳಿದರು.ಅಲ್ಲದೇ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿ, ಪರಿಹಾರ ಧನ ಚೆಕ್ ವಿತರಿಸಿದರು. ಸರಕಾರದ ವತಿಯಿಂದ ರೂ. 8.25 ಲಕ್ಷ ಮಂಜೂರಾಗಿದ್ದು, ದೌರ್ಜನ್ಯಕ್ಕೆ ಒಳಗಾಗಿದ್ದ ಎರಡು ಕುಟುಂಬಗಳಿಗೆ ಪರಿಹಾರಧನ ಚೆಕ್ ವಿತರಿಸಿದರು. […]

ರವಿವಾರವೂ ಜಿಲ್ಲೆಯಲ್ಲಿ ಸಂಚರಿಸಿ ಕೊರೊನಾ ನಿಯಂತ್ರಣ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ- ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಿದ್ದರೂ, ಪ್ರತಿದಿನ ಸರಾಸರಿ 300 ರಿಂದ 400ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ವಿಜಯಪುರ ಜಿಲ್ಲಾಡಳಿತ ಸರಣಿ ಸಭೆಗಳು, ತಪಾಸಣೆಗಳ ಮೂಲಕ ಸಾಕಷ್ಟು ಶ್ರಮ ವಹಿಸುತ್ತಿದೆ. ರವಿವಾರ ವಾರದ ರಜೆ ಇದ್ದರೂ ಕೂಡ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಎಸ್ಪಿ ಅನುಪಮ ಅಗ್ರವಾಲ ನಾನಾ ಕಡೆ ತಿರುಗಾಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ರವಿವಾರ […]