ಎರಡನೆ ಡೋಸ್ ಪಡೆಯುವ ಬಾಕಿ ಫಲಾನುಭವಿಗಳಿಗೆ ಕೊರೊನಾ ಲಸಿಕೆ ನೀಡಲು ಆದ್ಯತೆ- ಡಿಸಿ ಪಿ. ಸುನೀಲ‌‌ ಕುಮಾರ

ಬಸವ ನಾಡು ವಿಜಯಪುರ: ಮೇ 07 ರಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳು‌ 45 ವರ್ಷ ಮೇಲ್ಪಟ್ಟವರಿಗೆ ಹಂಚಿಕೆಯಾದ ಕೊರೊನಾ ಲಸಿಕೆಗಳನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ 18 ರಿಂದ 44 ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಮೊದಲನೇ ಡೋಸ್ ಪಡೆದ ಅನೇಕ ಫಲಾನುಭವಿಗಳು ಎರಡನೇ ಡೋಸ್ ಲಸಿಕೆ ಪಡೆಯಬೇಕಾಗಿದೆ. […]

ಲಾಕಡೌನ್ ಹಿನ್ನೆಲೆ ವಿಜಯಪುರದಲ್ಲಿ ಸದ್ದುಗದ್ದಲವಿಲ್ಲದೇ ನಡೆದಿದೆ ಅನ್ನದಾಸೋಹ ಕಾರ್ಯ

ಬಸವ ನಾಡು ವಿಜಯಪುರ- ಒಂದೆಡೆ ಕೊರೊನಾ ಸಂಕಷ್ಟ ಮತ್ತೋಂದೆಡೆ ಲಾಕಡೌನ್ ಮಧ್ಯೆ ಕೊರೊನಾ ರೋಗಿಗಳ ಜೊತೆ ಅವರ ಸಂಬಂಧಿಕರೂ ಸಂಕಷ್ಟ ಎದುರಿಸುತ್ತಿದ್ದಾರೆ. ವಿಜಯಪುರ ನಗರದ ನಾನಾ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರು ದಾಖಲಾಗಿದ್ದರೆ ರೋಗಿಗಳ ಜೊತೆ ಬಂದಿರುವ ಸಂಬಂಧಿಕರಿಗೂ ಲಾಕಡೌನ್ ಬಿಸಿ ಬಲವಾಗಿಯೇ ತಟ್ಟಿದೆ. ಇದನ್ನು ಅರಿತ ವಿಜಯಪುರದ ಗಜಾನನ ಮಹಾಮಂಡಳ ನಾನಾ ಆಸ್ಪತ್ರೆಗಳಿಗೆ ತೆರಳಿ ಕೊರೊನಾ ಸೋಂಕಿತರ ಸಂಬಂಧಿಕರಿಗೆ ಒಂದಲ್ಲ, ಎರಡು ಹೊತ್ತು ಉತ್ತಮ ಗುಣಮಟ್ಟದ ಊಟದ ಪಾಕೀಟ್ ನೀಡಿವ ಮೂಲಕ ಮೌನವಾಗಿಯೇ ಅನ್ನ ದಾಸೋಹ ಕಾರ್ಯದಲ್ಲಿ […]

ಪತ್ರಕರ್ತರಿಗೆ ಕೊರೊನಾ ಲಸಿಕೆ ಕಾರ್ಯಕ್ರಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

ಬಸವ ನಾಡು ವಿಜಯಪುರ: ಕೊರೊನಾ ನಿಯಂತ್ರಣದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಕಾರ್ಯ ಅನನ್ಯ ಮತ್ತು ಪ್ರಶಂಸಾರ್ಹವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ವಿಜಯಪುರ ನಗರದಲ್ಲಿ ಜಿಲ್ಲಾ ಕೇಂದ್ರದ ಮಾಧ್ಯಮ ಪ್ರತಿನಿಧಿಗಳಿಗಾಗಿ ಜಿಲ್ಲಾಡಳಿತ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕೊರನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ […]

ಕೊರೊನಾ ರೋಗಿಗಳ ಪ್ರಮಾಣಕ್ಕೆ ಅನುಗುಣವಾಗಿ ಖಾಸಗಿ ಆಸ್ಪತ್ರೆಗಳಿಗೆ ರೆಮಡಿಸಿವಿರ್ ಎಂಜೆಕ್ಷನ್ ಹಂಚಿಕೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ಬಸವ ನಾಡು ವಿಜಯಪುರ- ಸರಕಾರದಿಂದ ವಿಜಯಪುರ ಜಿಲ್ಲೆಗೆ ಹಂಚಿಕೆಯಾದ ರೆಮಿಡಿಸಿವಿರ್ ಎಂಜೆಕ್ಷನ್ ನ್ನು ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಅಲ್ಲಿನ ರೋಗಿಗಳ ಪ್ರಮಾಣಕ್ಕನುಗುಣವಾಗಿ ಹಂಚಿಕೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.ಮೇ 11 ರಂದು ನಾನಾ ಖಾಸಗಿ ಆಸ್ಪತ್ರೆಗಳಿಗೆ 2054 ರೆಮಿಡಿಸಿವಿರ್ ಎಂಜೆಕ್ಷನ್ ಹಂಚಿಕೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ, ಖಾಸಗಿ ಆಸ್ಪತ್ರೆಗಳಲ್ಲಿನ ಕೊರೊನಾ ರೋಗಿಗಳ ಸಂಖ್ಯೆಗೆ ಪ್ರಮಾಣಕ್ಕೆ ಅನುಗುಣವಾಗಿ ಈ ಔಷಧಿಯನ್ನು ನೇರವಾಗಿ ಆಯಾ ಖಾಸಗಿ […]

ನಿನ್ನೆ ಪೊಲೀಸರಿಂದ ಬೆತ್ತ ಏಟು ತಿಂದ ಯುವಕ- ಇಂದು ಕೋರ್ಟಿನಲ್ಲಿ ದಂಡ ಕಟ್ಟಿ ಬಂದು ಪೊಲೀಸರ ಕ್ಷಮೆಯಾಚನೆ- ಯಾಕೆ ಗೊತ್ತಾ?

ಬಸವ ನಾಡು ವಿಜಯಪುರ- ನಿನ್ನೆ ಸೋಮವಾರ ಪೊಲೀಸರ ಮೇಲೆ ಕಾರು ಹತ್ತಿಸಲು ಹೋಗಿ ಬೆತ್ತದ ರುಚಿ ಉಂಡಿದ್ದ ಯುವಕನ ವಿಡಿಯೋ ವೈರಲ್ ಆಗಿತ್ತು. ಇಂದು ಅದೇ ಯುವಕ ಪೊಲೀಸರಿಗೆ ಕ್ಷಮೆಯಾಚಿಸಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾನೆ.ಅಷ್ಟಕ್ಕೂ ಆಗಿದ್ದೇನೆಂದರೆ ನಿನ್ನೆ ಬಸವೇಶ್ವರ ಸರ್ಕಲ್ ನಲ್ಲಿ ಪೊಲೀಸರು ಕಾರಿನಿಂದ ಇಳಿಸಿ ಯುವಕನೊಬ್ಬನಿಗೆ ಬೆತ್ತದ ರುಚಿ ತೋರಿಸಿದ್ದರು. ಈ ಕುರಿತಾದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ, ಅದರ ಹಿಂದಿನ ಅಸಲಿಯತ್ತು ಇಂದು ಬಯಲಾಗಿದೆ.ಬಸವರಾಜ ಶಾಂತಯ್ಯ ಕರಜಗಿ ನಿನ್ನೆ ತನ್ನ ಕಾರು ಸಂಖ್ಯೆ KA-22.P-0202 […]

ನ್ಯೂ ವಿಸ್ತಾ ಯೋಜನೆ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಬಳಸಿ- ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ, ಕೇಂದ್ರ ಸರಕಾರಗಳು ವಿಫಲ- ಎಂ. ಬಿ. ಪಾಟೀಲ

ಬಸವ ನಾಡು ವಿಜಯಪುರ- ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೊರೊನಾ ಎರನಡೇ ಅಲೆಯನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.ವಿಜಯಪುರದಲ್ಲಿ ಬಿ ಎಲ್ ಡಿ ಇ ವಿವಿಯಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ಪಾಲಿನ ರೆಮಿಡಿಸಿವರ್ ಔಷಧಿ ನಮಗೆ ಹಂಚಿಕೆಯಾಗಿಲ್ಲ. ಆಕ್ಸಿಜನ್ ವಿಷಯದಲ್ಲಿಯೂ ಹಾಗೇ ಆಗಿದೆ. ಆದರೆ, ಸುಪ್ರೀಂ ಕೋರ್ಟ್ ಉಪಕಾರದಿಂದ ನಮಗೆ ಆಕ್ಸಿಜನ್ ಸಿಗುತ್ತಿದೆ ಎಂದು […]

ವಿಜಯಪುರ ಎಂಸಿಎಚ್ ಆಸ್ಪತ್ರೆ ವೈದ್ಯರ ಅಧ್ವಾನ- ಬಿ ಎಲ್ ಡಿ ಇ ಆಸ್ಪತ್ರೆ ವೈದ್ಯರಿಂದ ಗರ್ಭಿಣಿ, ಮಗುವಿಗೆ ಜೀವದಾನ- ತಡವಾಗಿ ಬೆಳಕಿಗೆ ಬಂದ ಘಟನೆ

ಬಸವ ನಾಡು ವಿಜಯಪುರ- ಬಸವನಾಡು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ(ಎಂಸಿಎಚ್) ಅಧ್ವಾನದ ಕೇಂದ್ರವಾಗುತ್ತಿದೆ. ಇಲ್ಲಿಗೆ ಬರುವ ಗರ್ಭಿಣಿ ಮಹಿಳೆಯರಿಗೆ ಸೂಕ್ತ ಚಿಕಿತ್ಸೆ ನೀಡದೇ ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.ಪೂಜಾ ಬಿಜ್ಜರಗಿ ಎಂಬ ಗರ್ಭಿಣಿ ಮಹಿಳೆ ಏ. 19 ರಂದು ಬೆಳಿಗ್ಗೆ 6 ಗಂಟೆಗೆ ಹೆರಿಗೆಗಾಗಿ ಜಿಲ್ಲಾಸ್ಪತ್ರೆಯ ಎಂಸಿಎಚ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಯುವತಿಗೆ ಇದು ಎರಡನೇ ಹೆರಿಗಯಾಗಿತ್ತು. ಅದೇ ದಿನ ಬೆ. 11.30ರ ಸುಮಾರಿಗೆ ಹೆರಿಗೆ ನೋವಿದ್ದರೂ ನೆಲಮಹಡಿಯಿಂದ […]

ಸರಕಾರದಿಂದ ಬಿ ಎಲ್ ಡಿ ಇ ಆಸ್ಪತ್ರೆ ಕೊರೊನಾ ರೋಗಿಗಳಿಗೆ ಸಂಕಷ್ಟ- ಸೂಕ್ತ ಪ್ರಮಾಣದಲ್ಲಿ ರೆಮಿಡಿಸಿವಿರ್ ಎಂಜೆಕ್ಷನ್ ನೀಡದೇ ರಾಜಕೀಯ?

ಬಸವ ನಾಡು ವಿಜಯಪುರ- ವಿಜಯಪುರದಲ್ಲಿ ಕೊರೊನಾ ರೋಗಿಗಳು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಈಗಾಗಲೇ ಸರಕಾರಕ್ಕಿಂತ ಕಡಿಮೆ ದರದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಮತ್ತು ಜಿಲ್ಲಾಸ್ಪತ್ರೆಗಿಂತಲೂ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಗೆ ಸರಕಾರದ ಅಸಹಕಾರ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಸಮಯಕ್ಕೆ ಔಷಧಿ ಸಿಗದೆ ರೋಗಿಗಳು ಇದೀಗ ಸಂದಿಗ್ಧ ಪರಿಸ್ಥಿತಿಯಲ್ಲಿರುವಂತಾಗಿದೆ. […]

ಕೊರೊನಾ ನಿಯಂತ್ರಣ ಕುರಿತು ಸಚಿವ ಮುರುಗೇಶ ನಿರಾಣಿ ಅವರಿಂದ ವಿಜಯಪುರದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಬಸವ ನಾಡು ವಿಜಯಪುರ- ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಕೊರೊನಾವನ್ನು ನಿಯಂತ್ರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.ವಿಜಯಪುರದಲ್ಲಿ ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಸಿದ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಬಳ್ಳಾರಿ, ಚಾಮರಾಜನಗರ, ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಗೆ ಹೋಲಿಸಿದಾಗ, ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಮುತು ವರ್ಜಿಯಿಂದ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. […]

ಸರಕಾರ ಆಕ್ಸಿಜನ್, ರೆಮಿಡಿಸಿವಿರ್ ಪೂರೈಕೆ ಜೊತೆಗೆ ಕೊರೊನಾ ತಡೆಗಟ್ಟಲು ಸೂಕ್ತವಾಗಿ ಕೆಲಸ ಮಾಡಲಿ ಶಾಸಕ ಎಂ. ಬಿ. ಪಾಟೀಲ

ಬಸವ ನಾಡು ವಿಜಯಪುರ- ರಾಜ್ಯಾದ್ಯಂತ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳಬೇಕಿದೆ ಎಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ಆಗ್ರಹಿಸಿದ್ದಾರೆ.ವಿಜಯಪುರದಲ್ಲಿ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಮತ್ತು ರಾಜ್ಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸರಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.ಸಚಿವುರ ಕೇವಲ ಟಿವಿಯಲ್ಲಿ ಹೇಳಿಕೆಯನ್ನು ನೀಡುವ […]