ಶ್ರೀ ಸಿದ್ಧೇಶ್ವರ ಸಂಸ್ಥೆಯ ನೂತನ ಏಳು ಜನ ನಿರ್ದೇಶಕರಿಂದ ಅಧಿಕಾರ ಸ್ವೀಕಾರ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಂಸ್ಥೆಯ ನೂತನ ನಿರ್ದೇಶಕರಾಗಿ ಏಳು ಜನ ಅಧಿಕಾರ ಸ್ವೀಕರಿಸಿದ್ದಾರೆ. ದೇವಸ್ಥಾನ ಆವರಣದಲ್ಲಿರುವ ಡಾ. ಫ. ಗು. ಹಳಕಟ್ಟಿ ಸಭಾ ಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ವಿಶೇಷ ಸಭೆಯಲ್ಲಿ ಏಳು ಜನ ನೂತನ ನಿರ್ದೇಶಕರು ಅಧಿಕಾರ ಸ್ವೀಕರಿಸಿದರು. ಚಂದಪ್ಪ ಹುಂಡೇಕಾರ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ಯತ್ನಾಳ ಅವರ ಪುತ್ರ ರಾಮನಗೌಡ […]

ಬ್ಯಾನರ್ ಹರಿದ ಕಿಡಿಗೇಡಿಗಳನ್ನು ಗಡಿಪಾರು ಮಾಡಲು ಆಗ್ರಹ- ಬಿಜೆಪಿ ಮುಖಂಡರಿಂದ ಡಿಸಿ, ಎಸ್ಪಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಗಣೇಶೋತ್ಸವದ ಅಂಗವಾಗಿ ನಗರದಲ್ಲಿ ಅಳವಡಿಸಲಾಗಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬೃಹತ್ ಫ್ಲೆಕ್ಸ್ ಹರಿದಿರುವ ಆರೋಪಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರು ಮತ್ತು ಬಿಜೆಪಿ ಮುಖಂಡರು ಗುಮ್ಟ ನಗರಿಯಲ್ಲಿ ಡಿಸಿ ಮತ್ತು ಎಸ್ಪಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.  ಗುರುವಾರ ನಗರದ ಶಿವಾಜಿ ವೃತ್ತದಲ್ಲಿ ಹಾಕಲಾಗಿದ್ದ ಶಾಸಕ ಬಸನಗೌಡ ಪಾಟೀ ಯತ್ನಾಳ ಅವರ ಬೃಹತ್ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು.  ಈ ವಿಷಯ ತಿಳಿಯುತ್ತಿದ್ದಂತೆ ಯತ್ನಾಳ ಬೆಂಬಲಿಗರು ಶಿವಾಜಿ ಚೌಕಿಗೆ […]

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಗುಮ್ಮಟ ನಗರಿಯಲ್ಲಿ ಪ್ರತಿಭಟನೆ

ವಿಜಯಪುರ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವದನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಜಯಪುರದಲ್ಲಿ ಪ್ರತಿಭಟನೆ ನಡೆಸಾಯಿತು.  ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಪ್ರತಿನಿತ್ಯ ತಮಿಳುನಾಡಿಗೆ 5000 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದ್ದು, ಕೂಡಲೇ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು.  ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದವರು ಕಾವೇರಿ ಜಲಾಶಯದ ಈ ಸದ್ಯ ಇರುವ ನೀರಿನ ಮಟ್ಟವನ್ನು ಪಲಶೀಲನೆ ಮಾಡದೆ ತಮಿಳುನಾಡಿಗೆ 5000 ಕ್ಯೂಸೆಕ್ ನೀರು […]

ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ನಾನಾ ಗ್ರಾಮಗಳಿಗೆ ಗಾಂಧಿ ಗ್ರಾಮ ಪುರಸ್ಕಾರ- ಸುನೀಲಗೌಡ ಪಾಟೀಲ ಸಂತಸ- ಸಕಲ ನೆರವಿನ ಭರವಸೆ

ವಿಜಯಪುರ: ಜನಪರ ಕಾರ್ಯಗಳ ಮೂಲಕ ಈ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಎಲ್ಲ ಗ್ರಾಮ ಪಂಚಾಯಿತಿಗಳ ಸಾಧನೆಗಳು ಹೆಮ್ಮೆ ತರಿಸಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಆಹೇರಿ, ಮುತ್ತಗಿ, ನಾಗರಬೆಟ್ಟ, ಯಂಕಂಚಿ, ಚವಡಿಹಾಳ, ಬಿಜ್ಜರಗಿ, ಹೊನಗನಹಳ್ಳಿ, ಕೂಡಗಿ, ಆಲಮಟ್ಟಿ, ಮಿಣಜಗಿ, ರಾಮನಹಳ್ಳಿ, ಚಿಕ್ಕರೂಗಿ ಮತ್ತು ನಿವರಗಿ ಗ್ರಾಮ ಪಂಚಾಯಿತಿಗಳು ಈ ಬಾರಿ ಗಾಂಧಿಗ್ರಾಮ […]

ಪ್ರಕೃತಿ ವಿಕೋಪ ತಡೆಗಟ್ಟಲು ಸಂಬಂಧಿಸಿದ ಇಲಾಖೆಗಳು ಸದಾ ಸರ್ವ ಸನ್ನದ್ದವಾಗಿರಬೇಕು- ಮಹಾದೇವ ಮುರಗಿ

ವಿಜಯಪುರ: ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಸಂಬಂಧಿಸಿದ ಇಲಾಖೆಗಳು ಸರ್ವ ಸನ್ನದ್ಧವಾಗಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ವಿಜಯಪುರ ಹಾಗೂ ಕಂದಾಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಪತ್ತು ನಿರ್ವಹಣಾ ಕುರಿತು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಮುಂಚಿತವಾಗಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು.  ಮಳೆಗಾಲದಲ್ಲಿ ಸಂಭವಿಸಬಹುದಾದ ಅತಿವೃಷ್ಟಿಯ ಕುರಿತು ಮುನ್ನೆಚ್ಚರಿಕೆ ಕ್ರಮ […]

ಕೊಟ್ಪಾ ಕಾಯ್ದೆ ಸಮರ್ಪಕ ಅನುಷ್ಠಾನ ಮಾಡಿ- ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಯಲ್ಲಿ ಕೊಟ್ಪಾ ಕಾಯ್ದೆಯ ಸೆಕ್ಷನ್-4ರ ನಾಮಫಲಕದ ಗೋಡೆ ಬರಹ ಬರೆಸುವುದು ಹಾಗೂ ನಾಮಫಲಕಗಳನ್ನು ಶಾಲಾ-ಕಾಲೇಜಿನ ಪ್ರವೇಶ ದ್ವಾರದಲ್ಲಿ ಅಳವಡಿಸುವುದು ಸೇರಿದಂತೆ ಜಿಲ್ಲೆಯಾದ್ಯಂತ ಕೊಟ್ಪಾ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೊಟ್ಪಾ ಕಾಯ್ದೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೊಟ್ಪಾ ಕಾಯ್ದೆಯ ನಾಮಫಲಕ ಗೋಡೆ ಬರಹ ಬರೆಸಬೇಕು. ಶಾಲಾ ಕಾಲೇಜಿನ ಕಂಪೌಂಡಿನಿಂದ 100 ಮೀಟರ್ ಅಂತರದಲ್ಲಿ […]

ಶ್ರೀ ಸಿದ್ದೇಶ್ವರ ಸಂಸ್ಥೆಯಿಂದ ಜಿಲ್ಲೆಯ ಪ್ರತಿ ತಾಲೂಕಿಗೊಂದು ಪಬ್ಲಿಕ್ ಶಾಲೆ- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಶತಮಾನದ ಇತಿಹಾಸವಿರುವ ನಗರದ ಶ್ರೀ ಸಿದ್ದೇಶ್ವರ ಸಂಸ್ಥೆ ವತಿಯಿಂದ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಪಬ್ಲಿಕ್ ಶಾಲೆ ಆರಂಭಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಡಾ. ಫ. ಗು. ಹಳಕಟ್ಟಿ ಸಭಾ ಭವನದಲ್ಲಿ ನಡೆದ ಶ್ರೀ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ ಸಿದ್ಧೇಶ್ವರ ಸಂಸ್ಥೆ ಈಗ ಹೆಮ್ಮರವಾಗಿ ಬೆಳೆದು ನಿಂತಿದ್ದು, ಧಾರ್ಮಿಕ, ಸಾಮಾಜಿಕ […]

ಗ್ರಾಮೋದ್ಯೋಗ ಎಣ್ಣೆ ಉತ್ಪಾದಕರ ಕೈಗಾರಿಕೆ ಸಹಕಾರಿ ಸಂಘಕ್ಕೆ ಈ ವರ್ಷ ರೂ. 18.83 ರೂ. ನಿವ್ವಳ ಲಾಭ- ಸುರೇಶ ಜಿ. ಗಚ್ಚಿನಕಟ್ಟಿ ಲಾಭ

ವಿಜಯಪುರ: ನಗರದ ಗ್ರಾಮೋದ್ಯೋಗ ಎಣ್ಣೆ ಉತ್ಪಾದಕರ ಕೈಗಾರಿಕೆ ಸಹಕಾರಿ ಸಂಘ ಈ ವರ್ಷ ರೂ. 18 ಲಕ್ಷ 83 ಸಾವಿರದ 336 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುರೇಶ ಗುರಲಿಂಗಪ್ಪ ಗಚ್ಚಿನಕಟ್ಟಿ ತಿಳಿಸಿದ್ದಾರೆ. ಸಂಘ 74ನೇ ವಾರ್ಷಿಕ ವರದಿ ಮತ್ತು ಅಡಾವ ಪತ್ರಿಕೆಯ ಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷ ಸಂಘದ ವತಿಯಿಂದ ರೂ.56789538 ವ್ಯವಹಾರ ನಡೆಸಲಾಗಿದ್ದು, ಇದರಲ್ಲಿ ಒಟ್ಟು ರೂ. 3279527 ಲಾಭವಾಗಿದೆ.   ಅದರಲ್ಲಿ ಖರ್ಚು ವೆಚ್ಚಗಳನ್ನು ತೆಗೆಯಲಾಗಿ ರೂ. 1883336 ನಿವ್ವಳ ಲಾಭವಾಗಿದೆ.  […]

ಪಂ. ದೀನ ದಯಾಳ ಉಪಾಧ್ಯಾಯ ಅಂತ್ಯೋದಯ ಪರಿಕಲ್ಪನೆಯ ಹರಿಕಾರ: ಪ್ರಕಾಶ ಅಕ್ಕಲಕೋಟ

ವಿಜಯಪುರ: ಪಂ. ದೀನ ದಯಾಳ ಉಪಾಧ್ಯಾಯ ಅಂತ್ಯೋದಯ ಪರಿಕಲ್ಪನೆಯ ಹರಿಕಾರರಾಗಿದ್ದಾರೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ವಾರ್ಡ್ ನಂ. 35 ರಲ್ಲಿ ಪಂ. ದೀನದಯಾಳ ಉಪಾಧ್ಯಾಯ ಅವರ ಜನ್ಮದಿನ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಅವರು ಮಾತನಾಡಿದರು. ಅಂತ್ಯೋತದಯ ಪರಿಕಲ್ಪನೆ ಹರಿಕಾರರಾದ ಪಂ. ದೀನ ದಯಾಳರು ಒಬ್ಬ ಉದಾತ್ತ ಮತ್ತು ಆದರ್ಶವ್ಯಕ್ತಿಯಾಗಿದ್ದಾರೆ.  ಪ್ರಚಂಡ ಸಂಘಟನಾ ಸಾಮರ್ಥ್ಯ ಹೊಂದಿದವರಾಗಿದ್ದ ಅವರು […]

ಸಮಸ್ಯೆ ಮುಕ್ತ ಸಮಾಜ ನಿರ್ಮಾಣಕ್ಕೆ ಸರಕಾರ ಜನತಾ ದರ್ಶನ ಕಾರ್ಯಕ್ರಮದ ಮೂಲಕ ದಿಟ್ಟ ಹೆಜ್ಜೆ ಇಟ್ಟಿದೆ- ವಿಠ್ಠಲ ಧೋಂಡಿಬಾ ಕಟಕದೊಂಡ

ವಿಜಯಪುರ: ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಯೋಜನೆಗಳ ಲಾಭ ದೊರಕಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಮೂಲಕ ಸಮಸ್ಯೆಗಳ ಮುಕ್ತ ಸಮಾಜ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯನ್ನಿಟ್ಟು ಆರಂಭಿಸಿದ ಜನತಾ ದರ್ಶನ ಕಾರ್ಯಕ್ರಮದ ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಳ್ಳುವಂತೆ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಕರೆ ನೀಡಿದರು. ಜಿಲ್ಲಾಡಳಿತದ ವತಿಯಿಂದ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ಜನತಾ ದರ್ಶನಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಸಮಾಜದ ಕಟ್ಟ ಕಡೆಯ […]