ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸಹಕಾರ ಸಂಘಕ್ಕೆ ಈ ವರ್ಷ ರೂ. 4.50 ಲಕ್ಷ ನಿವ್ವಳ ಲಾಭ- ರಾಜಶೇಖರ ಮಗಿಮಠ

ವಿಜಯಪುರ: ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸಹಕಾರ ಸಂಘ ಈ ವರ್ಷ ರೂ. 4.50 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಮಗಿಮಠ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸಂಘದ 22ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕು ಈ ವರ್ಷ ರೂ. 4.50 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು. 1928 ಸಂಘದ ಸದಸ್ಯರು ಸಹ ಸದಸ್ಯರಿದ್ದು, ಸಂಘ ರೂ. 32.06 ಲಕ್ಷ ಷೇರು ಬಂಡವಾಳ ಹೊಂದಿದೆ.  […]

ಬ್ಯಾಂಕುಗಳಿಂದ ಸಾಲ ಪಡೆಯುವಾಗ ವಹಿಸುವ ಆಸಕ್ತಿ ಮರಳಿಸುವಾಗಲು ಇರಬೇಕು- ಶ್ರೀ ಗುರು ಶಾಂತಲಿಂಗ ಶಿವಾಚಾರ್ಯ

ವಿಜಯಪುರ: ಬ್ಯಾಂಕುಗಳಿಂದ ಸಾಲ ಪಡೆಯುವಾಗ ತೋರಿಸುವ ಆಸಕ್ತಿಯನ್ನು ಸಮಯಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಬೊಮ್ಮನಹಳ್ಳಿಯ ಶ್ರೀ ಗುರು ಶಾಂತಲಿಂಗ ಶಿವಾಚಾರ್ಯರು ಹೇಳಿದ್ದಾರೆ. ನಗರದ ಎಪಿಎಂಸಿಯಲ್ಲಿರುವ ಶ್ರೀ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ಶ್ರೀ ಸೌಹಾರ್ದ ಸಹಕಾರಿ ಸಂಘ 2022 -23ನೇ ಆರ್ಥಿಕ ವರ್ಷದ 4ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ನೂರು ಜನರ ಹಣ ಕೂಡಿಸಿ ಒಬ್ಬರಿಗೆ ಸಾಲದ ರೂಪದಲ್ಲಿ ಕೊಡಬೇಕಾಗುತ್ತದೆ.  ಹಣ ತರುವುದು ಮತ್ತು ಕೊಡುವುದು […]

ಪ್ರತಿಷ್ಠಿತ ಶ್ರೀ‌ ಸಿದ್ಧೇಶ್ವರ ಸಹಕಾರಿ ಬ್ಯಾಂಕಿಗೆ ಈ ವರ್ಷ ರೂ. 1.22 ಕೋ. ನಿವ್ವಳ ಲಾಭ- ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ

ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ 1.22 ಕೋ. ನಿವ್ವಳ ಲಾಭ- ಅಧ್ಯಕ್ಷ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ರೂ. 1. 22 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ ತಿಳಿಸಿದ್ದಾರೆ. ನಗರದ ಆಶ್ರಮ ರಸ್ತೆಯಲ್ಲಿರುವ ಶ್ರೀ ಪರಮಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಸಮುದಾಯ ಭವನದಲ್ಲಿ ನಡೆದ ಬ್ಯಾಂಕಿನ‌ 111ನೇ ಸರ್ವ ಸಾಧಾರಣ ಸಭೆಯನ್ನು ಉದ್ಘಾಟಿಸಿ ಅವರು‌ ಮಾತನಾಡಿದರು. ರಾಜ್ಯದ ಸಹಕಾರಿ ರಂಗದಲ್ಲಿ ಬೆಳೆದ ಕೆಲವೇ ಬ್ಯಾಂಕುಗಳಲ್ಲಿ ನಮ್ಮ […]

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ -4ರ ಯೋಜನೆ- ಕಾಮಗಾರಿಗಳ ಪರಿಶೀಲನೆ ನಡಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಪಟ್ಟಣ ಪಂಚಾಯಿತಿ ಮತ್ತು ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಡಿ ಕೈಗೊಂಡಿರುವ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4ರ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಮತ್ತು ಬಸವನ ಬಾಗೇವಾಡಿಗೆ ಭೇಟಿ ನೀಡಿದ ಅವರು, ಈ ಕಾಮಗಾರಿಯ ಸಿಸಿ ರಸ್ತೆ ಹಾಗೂ ಡಾಂಬರ ರಸ್ತೆಗಳ ಪರಿಶೀಲನೆ ನಡೆಸಿದರು. ಅಂದಾಜು ಪತ್ರಿಕೆಯಂತೆ ಕಾಮಗಾರಿಯ ಅಳತೆ ಹಾಗೂ ಗುಣಮಟ್ಟ ಕಾಪಾಡಿಕೊಂಡು ಕಾರ್ಯ ನಿರ್ವಹಿಸಲು ಅಭಿಯಂತರರು, […]

ಪೌರ ಕಾರ್ಮಿಕರ ಯೋಜನೆಗಳ ಸದುಪಯೋಗ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಿ- ಮಹಾದೇವ ಮುರಗಿ ಕರೆ

ವಿಜಯಪುರ: ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತೀ ಮುಖ್ಯವಾಗಿದೆ. ಪೌರ ಕಾರ್ಮಿಕರ ಹಿತ ಕಾಪಾಡಲು ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಪೌರ ಕಾರ್ಮಿಕರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ ನೀಡಿದ್ದಾರೆ. ನಗರಾಭಿವೃದ್ದಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಬೇಗಂ ತಲಾಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಸೇವೆ […]

ವಿಜಯಪುರ ಡಿಸಿಸಿ ಬ್ಯಾಂಕಿಗೆ ರೂ. 14.30 ಕೋ. ನಿವ್ವಳ ಲಾಭ- ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(DCC) ಬ್ಯಾಂಕು 2022-23ನೇ ಆರ್ಥಿಕ ವರ್ಷದಲ್ಲಿ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ಬ್ಯಾಂಕಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕು ತನ್ನ ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಿ, ಆದಾಯ ತೆರಿಗೆ ಪೂರ್ವ ರೂ. 19.31 ಕೋ. ಲಾಭ ಗಳಿಸಿದ್ದು, ನಿಯಮಾನುಸಾರ ರೂ. 5.01 ಕೋ. ತೆರಿಗೆ ಪಾವತಿಸಿ ನಂತರ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ. ಇದು […]

ಸೆ. 25 ರಂದು ಜನತಾ ದರ್ಶನ- ಅಹವಾಲು ಕುಂದು, ಕೊರತೆ ದಾಖಲಿಸಿ ಪರಿಹಾರ ಪಡೆದುಕೊಳ್ಳಲು ಡಿಸಿ ಟಿ. ಭೂಬಾಲನ ಮನವಿ

ವಿಜಯಪುರ: ಜಿಲ್ಲಾ ಮಟ್ಟದ ಅಹವಾಲುಗಳನ್ನು ಆಲಿಸಲು ಸೆ. 25ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆ. 10 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು-ಕುಂದು ಕೊರತೆ ದಾಖಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿರುವುದರಿಂದ ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ […]

ವಿಜಯಪುರ ಜಿಲ್ಲೆಯಲ್ಲಿ ಸೆ.25ರಂದು ಜನತಾ ದರ್ಶನ- ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜನೆಗೆ ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ: ಜಿಲ್ಲಾ ಮಟ್ಟದ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ  ಕಾರ್ಯಕ್ರಮ ಹಮ್ಮಿಕೊಂಡು ಪರಿಹಾರ ಒದಗಿಸಲು ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಸೆ.25ರಂದು ಬೆಳಿಗ್ಗೆ 10 ಗಂಟೆಗೆ    ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಿದ ಜನತಾ ದರ್ಶನ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿಗಳ ಕಚೇರಿ […]

ವಿಜಯಪುರ ಜಿಲ್ಲೆಯಲ್ಲಿ 3ನೇ ಶನಿವಾರ ಅಂಗನವಾಡಿ ಮಕ್ಕಳ ಪಾಲಕರ ಸಭೆ- 48315 ಜನ ಭಾಗಿ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಗ್ರಾ. ಪಂ. ಗಳ ಮೂಲಕ ಮಕ್ಕಳ ಸ್ನೇಹಿ ಕುರ್ಚಿ ಮತ್ತು ಮೇಜು ಒದಗಿಸಿರುವುದು ಮಕ್ಕಳು ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಲು ಮತ್ತು ಆಸಕ್ತಿ ತಳೆಯಲು ಸಹಕಾರಿಯಾಗಿದೆ ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂದೆ ತಿಳಿಸಿದ್ದಾರೆ. ಪ್ರತಿ ಮೂರನೇ ಶನಿವಾರ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ ನಡೆಯುತ್ತದೆ.  ಈ ಸಭೆಗೆ ಆಗಮಿಸಿದ್ದ ಮಕ್ಕಳ ಪಾಲಕರು, ಕೇಂದ್ರದಲ್ಲಿ ಆಗಿರುವ ಬದಲಾವಣೆಯಿಂದ ತಮ್ಮ ಮಕ್ಕಳು ಓದಿನಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ.  […]

ಬಾಗಲಕೋಟೆ ಹೋಮಿಯೋಪಥಿ ಕಾಲೇಜನಲ್ಲಿ ಪ್ರಜಾಪ್ರಭುತ್ವ ದಿನ ಆಚರಣೆ

ಬಾಗಲಕೋಟೆ: ನಗರದ ಬಿ. ವಿ. ವಿ. ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.  ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಅರುಣ ವಿ. ಹೂಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಪಂಚ ಯುದ್ಧ ಮುಕ್ತವಾದರೆ ಪ್ರತಿಯೊಬ್ಬನೂ ಶಾಂತಿ, ಸಮಾಧಾನದಿಂದ ಬದುಕಬಹುದು.  ಇದರಿಂದ ದೇಶದ ಅಭಿವೃದ್ಧಿಯಾಗುತ್ತದೆ.  ಹಿಂಸೆಯಿಂದ ಏನನ್ನೂ ಗಳಿಸಲು ಸಾಧ್ಯವಿಲ್ಲ.  ಪ್ರೀತಿಯಿಂದ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ನೆನಪಿಸುವುದೇ ಪ್ರಜಾಪ್ರಭುತ್ವ ದಿನದ ಉದ್ದೇಶವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬ ಪ್ರಜೆಯೂ ಮತದಾನದ ಮಹತ್ವವನ್ನು ಅರಿತುಕೊಂಡಿರಬೇಕು.  ಯಾವುದೇ […]