ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಲು ಬಿಇಓ ಕಚೇರಿ ಸಿಬ್ಬಂದಿಯ ಕರ್ತವ್ಯವಾಗಿದೆ- ಸಂತೋಷಕುಮಾರ ಎಸ್. ವಿಜಾಪುರ

ವಿಜಯಪುರ: ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಸಕಾಲದಲ್ಲಿ ನೀಡಿ ಅವರನ್ನು ಪ್ರೋತ್ಸಾಹಿಸುವುದು ಬಿಇಒ ಕಚೇರಿಯ ಎಲ್ಲ ಕಾರ್ಯ ನಿರ್ವಾಹಕರ ಕರ್ತವ್ಯ ಎಂದು ಧಾರವಾಡ ಶಹರ ಬಿಇಒ ಕಚೇರಿಯ ಪತ್ರಾಕಿಂತ ವ್ಯವಸ್ಥಾಪಕ ಸಂತೋಷಕುಮಾರ ಎಸ್. ವಿಜಾಪೂರ ಹೇಳಿದ್ದಾರೆ.  ಮುದ್ದೇಬಿಹಾಳದಲ್ಲಿ ಇತ್ತೀಚೆಗೆ ಬಿಇಒ ಕಚೇರಿಯ ತಪಾಸಣೆ ಕಾರ್ಯ ನಿರ್ವಹಿಸಿದ ಧಾರವಾಡ ಶಿಕ್ಷಣ ಇಲಾಖೆ ಆಯುಕ್ತಾಲಯದ ಅಧಿಕಾರಿಗಳ ಮತ್ತು ಸಿಬ್ಬಂದಿಯರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲೂಕಿನ ಸುಮಾರು 1100ಕ್ಕೂ ಹೆಚ್ಚಿನ ಶಿಕ್ಷಕರ ಸೇವಾ ಪುಸ್ತಕಗಳು ಹಾಗೂ ಕಚೇರಿಯ ಇತರೆ ಕಡತಗಳನ್ನು ಅಧಿಕಾರಿಗಳು […]

ವಿಜಯಪುರ ನಗರದಲ್ಲಿ ಅಭಿವದ್ಧಿ ಕಾರ್ಯಗಳಿಂದಾಗಿ ಅಸ್ತಮಾ, ದರಿದ್ರತನ ಓಡಿ ಹೋಗಿವೆ- ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರದಿಂದ ಅಸ್ತಮಾ ಮತ್ತು ದರಿದ್ರತನ ಓಡಿ ಹೋಗಿದೆ ಎಂದು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಹೇಳಿದ್ದಾರೆ.  ವಿಜಯಪುರ ನಗರ ವಲಯ ವ್ಯಾಪ್ತಿಯ ಅಫಜಲಪುರ ಟಕ್ಕೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ-49 ರಲ್ಲಿ ನೂತನವಾಗಿ ಅಳವಡಿಸಲಾದ ಸಿಸಿ ಕ್ಯಾಮೆರಾ ಉದ್ಘಾಟಿಸಿ ಅವರು ಮಾತನಾಡಿದರು. ನಗರದಲ್ಲಿ ರಸ್ತೆಗಳು ಅಭಿವೃದ್ಧಿ ಆಗಿರುವುದರಿಂದ ಧೂಳು ಕಡಿಮೆಯಾಗಿದೆ.  ಇದರಿಂದ ಸಾರ್ವಜನಿಕರಿಗೆ ತಲೆ ನೋವಾಗಿದ್ದ ಅಸ್ತಮಾ ಓಡಿ ಹೋಗಿದೆ ಎಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದಾಗ ಸ್ವತ ವೈದ್ಯರೇ ಹೇಳಿದ್ದಾರೆ.  ಕಳೆದ […]

ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ

ವಿಜಯಪುರ: ವಿಜಯಪುರದ ಲೀಡ್ ಎನ್ ಜಿ ಓ ಗ್ರಾಮೀಣಾಭಿವೃದ್ಧಿ ಸಂಸ್ಥೆ(ಐ.ಆರ್.ಡಿ), ಮುತ್ತೂಟ್ ಫೈನಾನ್ಸ್ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಜಲನಗರದ ಮುಖ್ಯ ರಸ್ತೆಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ಧಿನ್ ಸೌದಾಗರ ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐ ಆರ್ ಡಿ ಸಂಸ್ಥೆಯು ಮಹಾನಗರ ಪಾಲಿಕೆ ಸಹಕಾರದೊಂದಿಗೆ ನಗರದ ಜಲನಗರ ಮುಖ್ಯರಸ್ತೆಯ ಎರಡೂ ಬದಿಗಳಲ್ಲಿ ಸುಮಾರು 500 ಕ್ಕೂ ಹೆಚ್ಚು ಗಿಡಗಳನ್ನು ನೆಡುತ್ತಿದ್ದು ಈ ಕಾರ್ಯಕ್ಕೆ ಮುತ್ತೂಟ್ ಫೈನಾನ್ಸ್ ಸಂಸ್ಥೆ […]

ದೀಪಾ ತಟ್ಟಿಮನಿ ಅವರಿಗೆ ರಾಷ್ಟ್ರೀಯ ವುಮೆನ್ ಎಕ್ಸಲೆನ್ಸ್- 2023 ಪ್ರಶಸ್ತಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ದೀಪಾ ತಟ್ಟಿಮನಿ ಅವರಿಗೆ ನವದೆಹಲಿಯ ಇಂಡಿಯನ್ ಗ್ಯಾಲಕ್ಸಿ ಫೌಂಡೇಶನ್ 2023ನೇ ವರ್ಷದ ನ್ಯಾಷನಲ್ ವುಮೆನ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿದೆ.  ಡಾ. ದೀಪಾ ತಟ್ಟಿಮನಿ ಅವರು ಮಹಿಳಾ ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಅಧ್ಯಯನ ಮಾಡುತ್ತಿದ್ದಾರೆ.  ಜ್ಞಾನದೀಪ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆಯಾಗಿ ಸುಮಾರು ಐದು ವರ್ಷಗಳಿಂದ ಇವರು […]

ವಿಜಯಪುರ ಜಿಲ್ಲಾಡಳಿತದ ವತಿಯಿಂದ ಸೆ. 15ರಂದು ಸಂವಿಧಾನ ದಿನ ಆಚರಣೆಗೆ ನಿರ್ಧಾರ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸೆ. 15ರಂದು ರಾಜ್ಯಾದ್ಯಂತ ಏಕ ಕಾಲದಲ್ಲಿ ಸಂವಿಧಾನ ಪೀಠಿಕೆ ಬೋಧಿಸುವುದರ ಮೂಲಕ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಅಂದು ಅರ್ಥಪೂರ್ಣವಾಗಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.  ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.  ಸೆ. 15 ರಂದು ಅಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ […]

ವಿಜಯಪುರ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಶಾಸಕ ಯತ್ನಾಳ ಸೂಚನೆ

ವಿಜಯಪುರ: ನಗರದಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ನಗರದಲ್ಲಿರುವ ಶಾಸಕರ ಸಾರ್ವಜನಿಕ ಜನಸಂಪರ್ಕ ಕಾರ್ಯಾಲಯದಲ್ಲಿ ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ, ಕೆಬಿಜೆಎನ್ ಎಲ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು. ಮುಂಬರುವ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಆಗದಂತೆ ನಗರದಲ್ಲಿರುವ ಕೊಳವೆ ಬಾವಿಗಳ ದುರಸ್ತಿ, ತೆರೆದ ಬಾವಿಗಳ ಸ್ವಚ್ಚತೆ, ಮೋಟರ […]

ಹೆಚ್ಚಿನ ಸಂಖ್ಯೆಯಲ್ಲಿ ಅತೀ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಸಚಿವ ಶರಣಬಸಪ್ಪ ದರ್ಶನಾಪುರ ಕರೆ

ವಿಜಯಪುರ: ಅತೀ ಸಣ್ಣ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಗಳನ್ನು ಸ್ಥಾಪಿಸಿದರೆ, ಅವಶ್ಯಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ. ನಗರದ ಸುಕೂನ ಕಾಲನಿ ಬಳಿಯ ಸ್ಪೂರ್ತಿ ರೆಸಾರ್ಟ ಮತ್ತು ಕ್ಲಬ್ ಹೌಸನಲ್ಲಿ ಸಿಡ್ಬಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಿಡ್ಬಿ ಕಾಶಿಯಾ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತು ಹಾಗೂ ಹಣಕಾಸಿನ ನೆರವು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು […]

ನೂತನ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು- ಸಾಯಿರಾಬಾನು

ವಿಜಯಪುರ: ನೂತನ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದು ಡಯಟ್ ಪ್ರಿನ್ಸಿಪಲ್ ಸಾಯಿರಾಬಾನು ಖಾನ್ ಹೇಳಿದ್ದಾರೆ. ನಗರದ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆ ಹಾಗೂ ಡಯಟ್ ಸಹಯೋಗದಲ್ಲಿ ಜಿಲ್ಲೆಯ ನಾನಾ ಶಾಲೆಗಳ ಆಯ್ದ ಶಿಕ್ಷಕರಿಗಾಗಿ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಅಟಲ್ ಟಿಂಕರಿAಗ್ ಲ್ಯಾಬ್‌ಗಳ ಸದ್ಬಳಕೆಯ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಯಾವ ಪ್ರಯೋಗಾಲಯದಿಂದ ಚಂದ್ರಯಾನದAಥಹ ಇತಿಹಾಸವನ್ನು ಸೃಷ್ಠಿಸುವ ವಿಜ್ಞಾನಿಗಳು ಹುಟ್ಟುತ್ತಾರೋ ಗೊತ್ತಿಲ್ಲ. ಆದ್ದರಿಂದ ಎಲ್ಲರೂ ಈ ಕಾರ್ಯಾಗಾರವನ್ನು ಸದುಪಯೋಗ ಪಡಿಸಿಕೊಂಡು […]

ವಿಜಯಪುರ ನೂತನ ಎಸ್ಪಿ ಸೋನಾವಣೆ ರಿಷಿಕೇಶ ಭಗವಾನ ಅಧಿಕಾರ ಸ್ವೀಕಾರ

ವಿಜಯಪುರ: ವಿಜಯಪುರ ಜಿಲ್ಲಾ ನೂತನ‌ ಎಸ್ಪಿಯಾಗಿ 2014ರ ಬ್ಯಾಚಿನ‌ ಐಪಿಎಸ್ ಅಧಿಕಾರಿ ಸೋನಾವಣೆ ರಿಷಿಕೇಶ ಭಗವಾನ ಅಧಿಕಾರ ಸ್ವೀಕರಿಸಿದ್ದಾರೆ. ಸೆಪ್ಟೆಂಬರ್‌ 5 ರಂದು ರಾಜ್ಯ ಸರಕಾರ ಸೋನಾವಣೆ ರಿಷಿಕೇಶ ಭಗವಾನ‌ ಅವರನ್ನು ವಿಜಯಪುರ ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು. ಇಂಟಲಿಜನ್ಸ್ ವಿಭಾಗದ ಎಸ್ಪಿಯಾಗಿದ್ದ ಸೋನಾವಣೆ ರಿಷಿಕೇಶ ಭಗವಾನ ಅವರು ಈಗ ಸ್ವಲ್ಪ ಹೊತ್ತಿನ ಮುಂಚೆ ವಿಜಯಪುರ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್ಪಿ ಎಚ್. ಡಿ. ಆನಂದ ಕುಮಾರ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ವಿಜಯಪುರ ಎಸ್ಪಿಯಾಗಿದ್ದ […]

ಕೇಂದ್ರ ಪುರಸ್ಕೃತ ಅನುದಾನ ಸಮರ್ಪಕವಾಗಿ ಬಳಸಿ- ಗುಣಮಟ್ಟದ ಕಾಮಗಾರಿ ಕೈಗೊಳ್ಳಿ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಕೃಷಿ, ಗ್ರಾಮೀಣಾಭಿವೃದ್ದಿ, ಸ್ವಚ್ಛ ಭಾರತ ಮಿಷನ್, ಪ್ರಧಾನಮಂತ್ರಿ ಆವಾಸ್ ಯೋಜನೆ, ಸರ್ವ ಶಿಕ್ಷಣ ಅಭಿಯಾನ ಸೇರಿದಂತೆ ಕೇಂದ್ರ ಪುರಸ್ಕøತ ಯೋಜನೆಯಡಿಯ  ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಂಡುವ ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಸೂಚನೆ ನೀಡಿದ್ದಾರೆ.  ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ಕೇಂದ್ರ ಸರಕಾರದ ನಾನಾ ಯೋಜನೆಗಳ 1ನೇ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೇಂದ್ರ ಪುರಸ್ಕøತ ಯೋಜನೆಗಳನ್ನು ನಿಗದಿತ  ಕಾಲಾವಧಿಯಲ್ಲಿ […]