ಪ್ರಕೃತಿ ಎರಡನೇ ತಾಯಿ ಇದ್ದಂತೆ- ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ- ಡಾ. ಆರ್. ಎಂ. ಮಿರ್ದೆ

ವಿಜಯಪುರ: ಪ್ರಕೃತಿ ಎರಡನೇ ತಾಯಿ ಇದ್ದಂತೆ.  ಸುಂದರವಾದ ಪರಿಸರವನ್ನು ಕಾಳಜಿ ವಹಿಸಿ ಸಂರಕ್ಷಿಸುವುದು ನಮ್ಮೆಲ್ಲಹ ಹೊಣೆಯಾಗಿದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್ ಕಾಲೇಜಿನ ಪ್ರಾಚಾರ್ಯೆ ಡಾ. ಆರ್. ಎಂ. ಮಿರ್ದೇ ಹೇಳಿದ್ದಾರೆ. ಕಾಲೇಜಿನಲ್ಲಿ ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್, ಐಕ್ಯೂಎಸಿ, ಇಕೋ ಕ್ಲಬ್ ಹಾಗೂ ಸಸ್ಯಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಸಸ್ಯಶಾಸ್ತ್ರ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು […]

ಡೇ ನಲ್ಮ: ಸಾಲ ಮಂಜೂರಾತಿಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಡೇ ನಲ್ಮ ಅಭಿಯಾನದ ಪಿಎಂ ಸ್ವ-ನಿಧಿ ಅಡಿ ಬಾಕಿ ಇರುವ ಅರ್ಜಿಗಳ ಸಾಲ ಮಂಜೂರಾತಿಗೆ ಶೀಘ್ರ ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.   ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವ ನಿಧಿ ಸಮೃದ್ದಿ ಯೋಜನೆಯಡಿ ಎಂಟು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. ಪಿಂಕ್ ಆಟೋ […]

ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಸಂಶೋಧನೆ ಕೈಗೊಳ್ಳಿ- ಪ್ರೊ. ಬಿ. ಕೆ. ತುಳಸಿಮಾಲ

ವಿಜಯಪುರ: ಸಂಶೋಧನಾ ವಿದ್ಯಾರ್ಥಿನಿಯರು ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಸಂಶೋಧನೆಯನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಹೇಳಿದರು. ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಘಟಕದ ವತಿಯಿಂದ ಆಯೋಜಿಸಲಾದ ಸಂಶೋಧನೆ ವಿದ್ಯಾರ್ಥಿನಿಯರಿಗೆ ಲ್ಯಾಪ್-ಟಾಪ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲ್ಯಾಪಟಾಪ್‍ಗಳ ಸದುಪಯೋಗವನ್ನು ಸಂಶೋಧನೆಗಷ್ಟೇ ಸೀಮಿತಗೊಳಿಸದೇ ಮಾಹಿತಿ ವಿಶ್ಲೇಷಣೆಗಳನ್ನು ಮಾಡಿ ಆ ಮೂಲಕ ಆರ್ಥಿಕವಾಗಿ ಸದೃಢರಾಗಬಹು […]

ಗುಮ್ಮಟ ನಗರಿಯಲ್ಲಿ ಡಿಸಿ ಟಿ. ಭೂಬಾಲನ ಸಿಟಿ ರೌಂಡ್ಸ್- ಒಳಚರಂಡಿ, ನೀರು ಸರಬರಾಜು, ರಸ್ತೆ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ವಿಜಯಪುರ ನಗರದ ಜುಮ್ಮಾ ಮಸೀದಿ ರಸ್ತೆ, ಹಕೀಮ್ ಚೌಕ್, ಗೋಲಗುಂಬಜ್, ರೇಲ್ವೆ ಸ್ಟೇಶನ್ ರಸ್ತೆ, ನವಬಾಗ ರಸ್ತೆ ಸೇರಿದಂತೆ ನಾನಾ ಸ್ಥಳಗಳಿಗೆ ಭೇಟಿ ನೀಡಿ ರಸ್ತೆ, ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಬೆ. 7 ಗಂಟೆಗೆ ಮಹಾನಗರ ಪಾಲಿಕೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಗರ ನೀರು ಸರಬರಾಜು ಮಂಡಳಿ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ  ನಾನಾ ಅಧಿಕಾರಿಗಳೊಂದಿಗೆ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿಗಳು, ನಗರದ ಅತಾವುಲ್ಲಾ ವೃತ್ತದಿಂದ ಜಂಡಾಕಟ್ಟಿಯ […]

ರೂ. 10 ಸೇರಿದಂತೆ ಎಲ್ಲಾ ನಾಣ್ಯಗಳನ್ನು ಕಾನೂನು ಬದ್ಧವಾಗಿ ಸ್ವೀಕರಿಸಿ: ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಭಾರತೀಯ ರಿಸರ್ವ್ ಬ್ಯಾಂಕಿನಿಂದ ಚಲಾವಣೆಯಾಗಿರುವ ಎಲ್ಲಾ ನಾಣ್ಯಗಳನ್ನು ಕಾನೂನು ಬದ್ಧವಾಗಿ ಸ್ವೀಕರಿಸಬೇಕು.  ರೂ. 10 ನಾಣ್ಯಗಳನ್ನು ಸ್ವೀಕರಿಸದಿರುವುದು ನಾಣ್ಯ ಕಾಯ್ದೆ 2011ರ ಸೆಕ್ಷನ್ 6(1)ರ ಉಲ್ಲಂಘನೆಯಾಗುವುದರಿಂದ ಎಲ್ಲ ನಾಣ್ಯಗಳನ್ನು ಕಾನೂನಾತ್ಮಕವಾಗಿ ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.   ಭಾರತೀಯ ರಿಸರ್ವ್ ಬ್ಯಾಂಕ್ ಕಾಲಕಾಲಕ್ಕೆ ವಿಶಿಷ್ಟ ಲಕ್ಷಣಗಳುಳ್ಳ ನಾಣ್ಯಗಳನ್ನು ಬಿಡುಗಡೆ ಮಾಡುತ್ತದೆ.  ನಾಣ್ಯಗಳ ಅಸಲಿತನ ಬಗ್ಗೆ ಶಂಕೆ ವ್ಯಕ್ತಪಡಿಸಿ, ವ್ಯಾಪಾರಸ್ಥರು, ಅಂಗಡಿಯವರು ಮತ್ತು ಸಾರ್ವಜನಿಕರ ಮನಸ್ಸಿನಲ್ಲಿ ಶಂಕೆ ಬಿತ್ತಿರುತ್ತಾರೆ.  ಇದರಿಂದ ದೇಶದ ಕೆಲವು ನಿರ್ದಿಷ್ಟ ಭಾಗಗಳಲ್ಲಿ […]

ಭೂತನಾಳ ಕೆರೆಗೆ ಕೃಷ್ಣಾ ನೀರು- ಕುಡಿಯುವ ನೀರಿನ ಬಗ್ಗೆ ಆತಂಕ ಬೇಡ- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ:ನಗರದ ಹೊರ ವಲಯದಲ್ಲಿರುವ ಭೂತನಾಳ ಕೆರೆಗೆ ಕೃಷ್ಣಾ ನದಿಯಿಂದ ನೀರು ತುಂಬಿಸಲಾಗುತ್ತಿದ್ದು, ಶೀಘ್ರದಲ್ಲಿ ಕೆರೆ ಸಂಪೂರ್ಣವಾಗಿ ಭರ್ತಿಯಾಗಲಿದೆ.  ಇದರಿಂದ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಟ್ಟಿರುವ ಐತಿಹಾಸಿಕ ಭೂತನಾಳ ಕೆರೆಯಿಂದ ವಿಜಯಪುರ ನಗರದ ಉತ್ತರ ಮತ್ತು ಪಶ್ಚಿಮ ಭಾಗದ 10 ವಾರ್ಡುಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.  ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ […]

ಭೂತನಾಳ, ಬೇಗಂ ತಾಲಾಬ, ಮಮದಾಪುರ ಕೆರೆಗಳಿಗೆ ಹರಿದ ಕೃಷ್ಮೆಯ ನೀರು- ಎಂ. ಬಿ. ಪಾಟೀಲ ಹರ್ಷ

ವಿಜಯಪುರ: ನಗರಕ್ಕೆ ಕುಡಿಯುವ ನೀರು ಪೂರೈಸುವ ಭೂತನಾಳ ಕೆರೆ ಮಳೆಯ ಕೊರತೆಯಿಂದ ಬತ್ತಿ ಹೋಗಿತ್ತು.  ಇದೀಗ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಕೃಷ್ಣಾ ನದಿಯಿಂದ ಸಪ್ತ ಕೆರೆಗಳಲ್ಲಿ ಬರುವ ಭೂತನಾಳ, ಬೇಗಂ ತಲಾಬ್ ಮತ್ತು ಮಮದಾಪುರ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಚಾಲನೆಗೊಂಡಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಮೃತ ಯೋಜನೆಯಡಿ ನಗರದ ಜನರಿಗೆ […]

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ವಿಜಯಪುರ: ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಕಾರ್ಯದರ್ಶಿ, ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ ನೀಡಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳೊಂದಿಗೆ ನಡೆಸಿದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಈ ನಿಟ್ಟಿನಲ್ಲಿ ರೈತರಿಗೆ ಯಾವುದೇ ಕೊರತೆಯಾಗದಂತೆ ರಸಗೊಬ್ಬರ, ಬಿತ್ತನೆ […]

ಮಳೆ ಹಿನ್ನೆಲೆ- ಇಂದು ವಿಜಯಪುರ ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ- ಟಿ. ಭೂಬಾಲನ್

ವಿಜಯಪುರ: ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ಶುಕ್ರವಾರ ಜುಲೈ-28 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲ ಪದವಿ, ಸ್ನಾತಕೋತ್ತರ ಪದವಿ,ಡಿಪ್ಲೋಮಾ, ಇಂಜಿನೀಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೊಷಿಸಿರುವುದಿಲ್ಲ. ಎಂದಿನಂತೆ ತರಗತಿ ನಡೆಯಲಿವೆ ಎಂದು ಅವರು […]

ಆಲಮೇಲ ತಾಲೂಕಿನ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಅವರು ಆಲಮೇಲ ತಾಲೂಕಿನಾದ್ಯಂತ ನಾನಾ ಸ್ಥಳಗಳಿಗೆ ಭೇಟಿ ಅಭಿವೃದ್ಧಿ ಕಾಮಗಾರಿಗಳ ನೀಡಿ ಪರಿಶೀಲನೆ ನಡೆಸಿದರು. ಆಲಮೇಲ ತಾಲೂಕಿನ ಕೊರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದರಿ ಗ್ರಾಮದಲ್ಲಿ ನಿರ್ಮಾಣವಾದ ಅಂಗವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪಿಓಪಿ ಸೇರಿದಂತೆ ಬಾಕಿಯಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಅಂಗನವಾಡಿ ಮುಂದೆ ಖಾಲಿಯಿರುವ ಸ್ಥಳದಲ್ಲಿ ಆಟದ ಮೈದಾನ, ಜಾರು ಬಂಡೆಯಂತಹ ಮಕ್ಕಳಿಗೆ ಅನುಕೂಲಕರವಾದ ಆಟಿಗೆಗಳನ್ನು ಅಳವಡಿಸಿ,ಸಸಿಗಳನ್ನು ನೆಟ್ಟು ಮಕ್ಕಳ ಸ್ನೇಹಿ ಅಂಗನವಾಡಿಯನ್ನಾಗಿಸಲು […]