ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ: ಪೊಲೀಸ್ ಸೇವೆ ಸ್ಮರಣೀಯ- ಡಿಸಿ ಟಿ. ಭೂಬಾಲನ್

ವಿಜಯಪುರ: ಪೊಲೀಸ್ ಪೇದೆಯಿಂದ ಹಿಡಿದು ಐಜಿಪಿ ವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ವ್ಬವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ.  ನಿವೃತ್ತ ಪೊಲೀಸ್ ಸಿಬ್ಬಂದಿ […]

ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ 1000ಕ್ಕೂ ಹೆಚ್ಚು ಬಾಳೆಗಿಡಗಳು- ಕೈಗೆ ಬಂದ ತುತ್ತು ಬಾಯಿಗೆ ಬಾರದೆ ಕಂಗಾಲಾದ ರೈತ

ವಿಜಯಪುರ: ಬಿರುಗಾಳಿ ಸಹಿತ ಮಳೆಗೆ ಬಾಳೆ ತೋಟ ನಾಶವಾದ ಘಟನೆ ವಿಜಯಪುರ ತಾಲೂಕಿನ ಬೊಮ್ಮನಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮುರುಗೆಪ್ಪ ಚೌಗುಲಾ ಎಂಬುವರಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದ್ದು, ಶನಿವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಇಡೀ ಬಾಳೆ ತೋಟ ಹಾಳಾಗಿದೆ.  ಮುರುಗೆಪ್ಪ ಚೌಗುಲಾ ಸುಮಾರು ಒಂದು ಕಾಲು ಎಕರೆ ಪ್ರದೇಶದಲ್ಲಿ ಬಾಳೆ ಗಿಡಗಳನ್ನು ಬೆಳೆದಿದ್ದರು.  ಫಸಲು ಕೂಡ ಉತ್ತಮವಾಗಿತ್ತು.  ಇನ್ನು ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಿತ್ತು.   ಆದರೆ, ಶನಿವಾರ ಸಂಜೆ ಬೀಸಿದ […]

ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ಆಯೋಗದ ನಿಯಮಾನುಸಾರ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.  ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚು ತಪ್ಪದೆ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿ  ಕಚೇರಿಯಲ್ಲಿ  ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆ ನಡೆಸಿ  ಮಾತನಾಡಿದ ಅವರು, ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಚೆಕ್‌ಪೋಸ್ಟಗಳಲ್ಲಿ […]

Video News: ಗುಮ್ಮಟ ನಗರಿಯಲ್ಲಿ ಲೋಕಾ ದಾಳಿ: ಆರ್ ಟಿ ಓ ಇನ್ಸಪೆಕ್ಟರ್ ಷಣ್ಮುಖಪ್ಪ ತೀರ್ಥಗೆ ಸೇರಿದ ಆರು ಕಡೆ ಧಾಳಿ

ವಿಜಯಪುರ: ಮನೆಯ ಗೇಟಿನ ಮೇಲೆ Best Officer Here ಬೋರ್ಡು.  ಮನೆಯ ಮೇಲೆ ಗುಡ್ಡಾಂಬೆ ಹೆಸರು.  ಆರ್. ಟಿ. ಓ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತರ ಧಾಳಿ.  ಇದು ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಭ್ರಷ್ಟ ಅಧಿಕಾರಿಯ ನಿವಾಸದ ಮೇಲೆ ನಡೆಸಿರುವ ದಾಳಿ.  ಹೌದು.  ಗುಮ್ಮಟ ನಗರಿ ವಿಜಯಪುರದಲ್ಲಿ ಭ್ರಷ್ಟ ಅಧಿಕಾರಿಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಧಾಳಿ ನಡೆಸಿದ್ದಾರೆ. ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಚಾಲುಕ್ಯ ನಗರ ಪಶ್ಚಿಮ ಬಡಾವಣೆಯಲ್ಲಿರುವ ಷಣ್ಮುಖಪ್ಪ ತೀರ್ಥ ಅವರ […]

ಗಾಂಧಿಚೌಕ್ ಪೊಲೀಸರ ಕಾರ್ಯಾಚರಣೆ- ಮೂವರ ಬಂಧನ- ರೂ. 15.60 ಲಕ್ಷ ಮೌಲ್ಯದ 26 ಬೈಕ್ ವಶ

ವಿಜಯಪುರ: ನಗರದ ಗಾಂಧಿಚೌಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಜನ ಆರೋಪಿಗಳನ್ನು ಬಂಧಿಸಿ 26 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಷ ಸೋನಾವಣೆ, ನಗರದಲ್ಲಿ ಕಳೆದ ಹಲವಾರು ದಿನಗಳಿಂದ ಬೈಕ್ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.  ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಮತ್ತು ರಾಮನಗೌಡ ಹಟ್ಟಿ, ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ಮಾರ್ಗದರ್ಶನದಲ್ಲಿ ಗಾಂಧಿಚೌಕ್ ಸಿಪಿಐ ಮಹಾಂತೇಶ ಕೆ. ಧಾಮಣ್ಣವರ ನೇತ್ವದಲ್ಲಿ ರಚಿಸಲಾಗಿದ್ದ […]

ಲೋಕಸಭೆ ಚುನಾವಣೆ 2024: ಗ್ರಾಮೀಣ ಭಾಗದಲ್ಲಿ ಡಿಸಿ ಟಿ. ಭೂಬಾಲನ್ ಪ್ರವಾಸ- ವಿಕಲಚೇತನರು, 85 ವರ್ಷ ಮೇಲ್ಪಟ್ವರಿಗೆ ಮತದಾನ ಮಾಹಿತಿ

ವಿಜಯಪುರ: ಪ್ರಜಾಪ್ರಭುತ್ವದ ಸಂವಿಧಾನಿಕ  ಹಕ್ಕಾಗಿರುವ  ಮತದಾನದಿಂದ ಯಾವುದೇ ಮತದಾರರು ವಂಚಿತರಾಗಬಾರದೆನ್ನುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯಲ್ಲಿ 85ವರ್ಷ ಮೇಲ್ಪಟ್ಟವರಿಗೆ ಮತ್ತು ವಿಕಲಚೇತನರಿಗೆ ಮನೆಯಲ್ಲಿಯೇ ಮತ ಚಲಾವಣೆ ಮಾಡುವ ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲೆಯ ಮನಗೂಳಿ ಮತ್ತು ಯರನಾಳ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಈ ಕುರಿತು ಮಾಹಿತಿ ನೀಡಿದರು  ಅಲ್ಲದೇ, ಮತಗಟ್ಟೆಗೆ  ಬಂದು ಮತದಾನ ಮಾಡಲು ಅಶಕ್ತರಾಗಿರುವವರನ್ನು ಮತಗಟ್ಟೆಯ ಬಿಎಲ್‌ಓ ಗಳು  ಗುರುತಿಸಿ ಅರ್ಜಿ ನಮೂನೆ 12ಡಿ […]

ಬಸವ ನಾಡಿನಲ್ಲಿ ಮತದಾನ ಜಾಗೃತಿ ಜಾಥಾ- ಸಾವಿರಾರು ಜನ ಭಾಗಿ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಎನ್.ಎಸ್.ಎಸ್ ಘಟಕ, ಬಿ.ಎಲ್‌.ಡಿ.ಇ ಸಂಸ್ಥೆಯ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯ, ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಮತದಾನ ಜಾಗೃತಿ ಬೃಹತ್ ಜಾಥಾ ನಡೆಯಿತು.  ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಜಾಥಾ ಗಾಂಧಿ ಚೌಕಿಗೆ ಆಗಮಿಸಿತು.  ಈ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ಘೋಷಿಸುವುದರ ಮೂಲಕ  ಜನರಲ್ಲಿ ಮತದಾನದ ಮಹತ್ವದ ಕುರತು ಅರಿವು ಮೂಡಿಸಲಾಗಿಯಿತು. […]

ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಆರಂಭ- ಜಿ. ಪಂ. ಸಿಇಓ ರಿಷಿ ಆನಂದ

ವಿಜಯಪುರ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಎದುರಾಗದಂತೆ, ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ನಿವಾರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಜಿಲ್ಲಾ ಪಂಚಾಯಿತಿ ವಿಜಯಪುರ(08352-277293), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ(08352-277941) ಇವರನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೇ ತಾಲೂಕು ಮಟ್ಟದಲ್ಲಿ ಮುದ್ದೇಬಿಹಾಳ(08356-200606), ತಾಳಿಕೋಟೆ(08356-200103), ಸಿಂದಗಿ(08488-221772), ದೇವರಹಿಪ್ಪರಗಿ (08424-200114), ಆಲಮೇಲ(08488-298900), ವಿಜಯಪುರ(08352-254044), ಬಬಲೇಶ್ವರ(08355-200005), ತಿಕೋಟಾ(08352-200129), […]

ವಿಜಯಪುರ ನಗರದ ಸಿಂದಗಿ ನಾಕಾ ಚೆಕಪೋಸ್ಟ್ ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ

ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಸಿಂದಗಿ ನಾಕಾ ಬಳಿ ತೆರೆಯಲಾಗಿರುವ ಚೆಕಪೋಸ್ಟ್ ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಂಗಳವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರ ನಗರಕ್ಕೆ ಒಳಬರುವ ಮತ್ತು ನಗರದಿಂದ ಹೊರ ಹೋಗೂುವ ಎಲ್ಲಾ ವಾಹನಗಳ ತಪಾಸಣೆ ಕಾರ್ಯ ವೀಕ್ಷಿಸಿಸಿದ ಅವರು, ಚೆಕಫೋಸ್ಟ್ ನಲ್ಲಿ ದಿನದ 24 ಗಂಟೆ ಪಾಳಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು. ಬೇಸಿಗೆ ಇರುವುದರಿಂದ ಚೆಕಫೋಸ್ಟಗಳಲ್ಲಿ ಅಗತ್ಯ ಮೂಲಭೂತ […]

ಕನಾನ್ ಮುಶ್ರಿಫ್ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ- ಸಂತಸ ವ್ಯಕ್ತಪಡಿಸಿದ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ವಿಜಯಪುರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕನಾನ್ ಅಬ್ಬುದ್ ಹಮೀದ್ ಮುಶ್ರಿಫ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಅವರ ಹಿರಿಯ ಪುತ್ರನಾಗಿರುವ ಕನಾನ್ ಪದವೀಧರರಾಗಿದ್ದು, ತಂದೆಯ ಜೊತೆ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಿದ್ದಾರೆ.  ಅಬ್ದುಲ್ ಹಮೀದ್ ಮುಶ್ರಿಫ್ 2018 ಮತ್ತು 2023ರಲ್ಲಿ ವಿಜಯಪುರ ನಗರ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತರಾಗಿದ್ದರು.  ಈಗ ಅವರ ಪುತ್ರನಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ […]