ಕನಾನ್ ಮುಶ್ರಿಫ್ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ- ಸಂತಸ ವ್ಯಕ್ತಪಡಿಸಿದ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ವಿಜಯಪುರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕನಾನ್ ಅಬ್ಬುದ್ ಹಮೀದ್ ಮುಶ್ರಿಫ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಅವರ ಹಿರಿಯ ಪುತ್ರನಾಗಿರುವ ಕನಾನ್ ಪದವೀಧರರಾಗಿದ್ದು, ತಂದೆಯ ಜೊತೆ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಿದ್ದಾರೆ.  ಅಬ್ದುಲ್ ಹಮೀದ್ ಮುಶ್ರಿಫ್ 2018 ಮತ್ತು 2023ರಲ್ಲಿ ವಿಜಯಪುರ ನಗರ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತರಾಗಿದ್ದರು.  ಈಗ ಅವರ ಪುತ್ರನಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ […]

ವಿಜಯಪುರ ಜಿಲ್ಲಾ ಕೃಷಿಯೆತರ ಪತ್ತಿನ ಸಹಕಾರಿ ಸಂಘದ ಒಕ್ಕೂಟದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆ

ವಿಜಯಪುರ: ವಿಜಯಪುರ ಜಿಲ್ಲಾ ಕೃಷಿಯೆತರ ಪತ್ತಿನ ಸಹಕಾರಿ ಸಂಘದ ಒಕ್ಕೂಟದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರ. ವಿಜಯಪುರ ನಗರ ಮತಕ್ಷೇತ್ರದಿಂದ ಪತ್ರಕರ್ತ ದೀಪಕ ಶಿಂತ್ರೆ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯ ಗುರುಶಾಂತ ನಿಡೋಣಿ, ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಮಗಿಮಠ, ಪರಶುರಾಮ ಚಿಂಚಲಿ, ಡಾ. ಸದಾಶಿವ ಪವಾರ, ನಬಿಸಾಬ್ ಕರ್ಜಗಿ, ಇಂಡಿ ತಾಲೂಕಾ ಮತಕ್ಷೇತ್ರದಿಂದ ರಾಜ್ಯ ಸಹಕಾರ ರತ್ನ ಪುರಸ್ಕೃತ ಶ್ರೀಮಂತ ಇಂಡಿ, ವಿಜಯಪುರ ಗ್ರಾಮೀಣ ಕ್ಷೇತ್ರದ ಬಸವರಾಜ ಬಂಡಿ, […]

ಧೂಳಖೇಡ ಸೌಹಾರ್ದ ಬ್ಯಾಂಕ್ ಕಳ್ಳತನ ಪ್ರಕರಣ- ಆರು ಜನ ಅಂತಾರಾಜ್ಯ ಕಳ್ಳರ ಬಂಧಿಸಿದ ಝಳಕಿ ಪೊಲೀಸರು

ವಿಜಯಪುರ: ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಸೌಹಾರ್ದ ಬ್ಯಾಂಕಿನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಝಳಕಿ ಪೊಲೀಸರು ಭೇದಿಸಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಝಳಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಋಷಿಕೇಶ ಸೋನಾವಣೆ, ಫೆ. 28 ರಂದು ಮಧ್ಯರಾತ್ರಿ ಸೌಹಾರ್ದ ಬ್ಯಾಂಕ್ ನಲ್ಲಿದ್ದ ರೂ. 19.45 ಲಕ್ಷ ಹಣವನ್ನು ಕಳ್ಳತನ ಮಾಡಲಾಗಿತ್ತು.  ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಝಳಕಿ ಪೊಲೀಸರು 6 ಜನ ಆರೋಪಿಗಳನ್ನು ಕಳುವಾದ […]

ಬಬಲೇಶ್ವರದಲ್ಲಿ ತಾಲೂಕು ಆಡಳಿತ ಸೌಧ ಲೋಕಾರ್ಪಣೆ: ಒಂದೇ ಸ್ಥಳದಲ್ಲಿ ನಾನಾ ಸರಕಾರಿ ಸೇವೆ ಪಡೆಯಲು ಅನುಕೂಲ- ಎಂ. ಬಿ. ಪಾಟೀಲ

ವಿಜಯಪುರ: ಬಬಲೇಶ್ವರ ಪಟ್ಟಣದ ಅಡವಿಸಂಗಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ರೂ.10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಸೌಧ(ಮಿನಿ ವಿಧಾನಸೌಧ) ನೂತನ ಕಟ್ಟಡ, ಕಟ್ಟಡವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಿದರು. ಶನಿವಾರ ಬಬಲೇಶ್ವರದಲ್ಲಿ ಆಯೋಜಿಸಲಾದ ನೂತನ ತಾಲೂಕಾಡಳಿತ ಕಟ್ಟಡ ಉದ್ಘಾಟನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಈ ಕಟ್ಟಡದ ನೆಲಮಹಡಿಯಲ್ಲಿ ತಹಸೀಲ್ದಾರ ಕಚೇರಿ, […]

ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನಾ ಧರಣಿ

ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು. ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಬೇಕು.  ರೇವಣಸಿದ್ಧೇಶ್ವರ ಏತ ನೀರಾವರಿಯ ಯೋಜನೆಯ 2 ಮತ್ತು 3ನೇ ಹಂತದ ಕಾಮಗಾರಿ ಟೆಂಡರ್ ಕರೆಯಬೇಕು ಹಾಗೂ ಜಿಲ್ಲೆಯ ಶಾಶ್ವತ ನೀರಾವರಿಗಾಗಿ ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಗೆ ಎತ್ತರಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು. ಬರದಿಂದಾಗಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಲಿಂಬೆ, ಮಾವು, […]

ಎನ್.ಟಿ.ಪಿ.ಸಿಯಿಂದ ಐಟಿಐ ಸಂಸ್ಥೆಗೆ ರೂ. 90 ಲಕ್ಷ ರೂ. ಅನುದಾನ- ವಿದ್ಯಾರ್ಥಿಗಳಿಗಾಗಿ ಎರಡಂತಸ್ತಿನ ಕಟ್ಟಡ ನಿರ್ಮಾಣ- ಶಾಸಕ ಯತ್ನಾಳ

ವಿಜಯಪುರ: ನಗರದ ಐಟಿಐ ಸಂಸ್ಥೆಗೆ ಕೂಡಗಿಯ ಎನ್.ಟಿ.ಪಿ.ಸಿ ವಿದ್ಯಾರ್ಥಿಗಳ ಸರ್ವೋತ್ತಮ ಅಭಿವೃದ್ಧಿಗಾಗಿ ಎರಡು ಅಂತಸ್ಥಿನ ಕಟ್ಟಡ ನಿರ್ಮಿಸಲು ರೂ. 90 ಲಕ್ಷ ಅನುದಾನ ನೀಡಿದೆ ಎಂದು ನಗರ ಶಾಸಕರಾದ ಬಸನಗೌಡ ರಾ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ ಹಾಗೂ ಎನ್.ಟಿ.ಪಿಸಿ ಸಹಯೋಗದಲ್ಲಿ ಆರ್ ಆ್ಯಂಡ್ ಆರ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಿಒಇ ಕಟ್ಟಡದ ಮೊದಲನೆಯ ಹಾಗೂ ಎರಡನೆಯ ಮಹಡಿ ಮೇಲೆ ಬೋಧನಾ ಕೊಠಡಿ ಹಾಗೂ […]

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಡಾ. ಎಲ್. ಎಚ್. ಬಿದರಿ ನೇತೃತ್ವದ ಹೋರಾಟ ಸಮಿತಿ ಭೇಟಿ

ವಿಜಯಪುರ: ಜಿಲ್ಲೆಯ ಬುರಣಾಪುರ ಬಳಿ ನಿರ್ಮಿಸಲಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ವಿಮಾನ ನಿಲ್ದಾಣ ಹೋರಾಟ ಸಮಿತಿ ಸಂಚಾಲಕ ಡಾ. ಎಚ್. ಎಚ್. ಬಿದರಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕಾಮಗಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಮಿತಿ ಸದಸ್ಯರು, ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಂತಸ ವ್ಯಕ್ತಪಡಿಸಿದರು.  ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ಮಹೇಶ ನಿಲ್ದಾಣದಲ್ಲಿರುವ ಎಲ್ಲ ವಿಭಾಗಗಳನ್ನು ತೋರಿಸಿ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.  ಭದ್ರತಾ ವಿಭಾಗದ ಮುಖ್ಯಸ್ಥ ಭೀಮಪ್ಪಾ […]

ವಿಜಯಪುರ ದೇಶದಲ್ಲಿಯೇ ಅತೀ ಹೆಚ್ಚು ಶುದ್ಧ ಗಾಳಿ ಇರುವ 6ನೇ ನಗರ- ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ದೇಶದಲ್ಲಿಯೇ ಅತೀ ಹೆಚ್ಚು ಶುದ್ಧ ಗಾಳಿ ಇರುವ ನಗರ 6ನೇ ನಗರವಾಗಿರುವುದು ಹೆಮ್ಮೆಯ ವಿಷಯ.  ನಿರೀಕ್ಷೆ ಮೀರಿ ಅಭಿವೃದ್ಧಿ ಆಗಿರುವುದೇ ಇದಕ್ಕೆ ಕಾರಣ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಕಾರಾಗೃಹ ವಸತಿಗೃಹದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಓಪನ್ ಜಿಮ್ ಉದ್ಘಾಟಿಸಿ ಅವರು ಮಾತನಾಡಿದರು. ನಗರದಲ್ಲಿ ಒಳಚರಂಡಿ ನರ‍್ಮಾಣ ಮಾಡುವ ಜೊತೆಗೆ ಆಂತರಿಕ ರಸ್ತೆಗಳು ಸೇರಿ ಪ್ರಮುಖ […]

ಗ್ರಾಫಿಕ್ ಡಿಸೈನ್ ಬಹುಬೇಡಿಕೆಯ ಕಲೆಯಾಗಿದೆ- ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ

ವಿಜಯಪುರ: ಗ್ರಾಫಿಕ್ ಡಿಸೈನ್ ಎನ್ನುವುದು ಪ್ರಸ್ತುತ ದಿನಮಾನದಲ್ಲಿ ಬಹುಬೇಡಿಕೆಯ ಕಲೆಯಾಗಿದೆ. ಇದರ ಕುರಿತಾದ ಈ ಕಾರ್ಯಾಗಾರದಲ್ಲಿ ನೀವೆಲ್ಲರೂ ಸಕ್ರೀಯವಾಗಿ ಪಾಲ್ಗೊಂಡು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾಲಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ.  ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂಹನ ಹಾಗೂ ಅಹಲ್ಯಬಾಯಿ ಸಂಶೋಧನಾ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾದ ಗ್ರಾಫಿಕ್ ಡಿಸೈನಿಂಗ್ ಕಾರ್ಯಗಾರ ಉದ್ಘಾಟಿಸಿ  ಅವರು ಮಾತನಾಡಿದರು. ಕ್ಷಣಕ್ಷಣಕ್ಕೂ ತಂತ್ರಜ್ಞಾನದ ವೇಗ ಹೆಚ್ಚುತ್ತಿದೆ. ಅದರ […]

ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ- ಆಯೋಗದ ಸದಸ್ಯ ಎಸ್. ಕೆ. ವಂಟಿಗೋಡಿ ಸಲಹೆ

ವಿಜಯಪುರ: ಸಾರ್ವಜನಿಕರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ತುಂಬಾ ಜಾಗರೂಕತೆಯಿಂದ ಸಹಾನುಭೂತಿಯಿಂದ ಸಮಸ್ಯೆಗಳನ್ನು ಆಲಿಸಿ ನಿಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾನವ ಹಕ್ಕುಗಳ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಮಾನವ ಹಕ್ಕುಗಳ ಸಂರಕ್ಷಣೆ, ಉಲ್ಲಂಘಣೆ ತಡೆಗಟ್ಟುವುದು, ಪರಿಹಾರ ಒದಗಿಸುವುದೇ ಮಾನವ […]