DC Visit: ಜುಮನಾಳದಲ್ಲಿ ವೃದ್ಧಾಶ್ರಮಕ್ಕೆ ಭೇಟಿ- ಹಿಟ್ಟಿನಹಳ್ಳಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ಕಳೆದ ಕೆಲವು ದಿನಗಳಿಂದ ನಾನಾ ತಾಲೂಕುಗಳ ಹಲವಾರು ಗ್ರಾಮಗಳಿಗೆ ಭೇಟಿ ನೀಡುತ್ತಿರುವ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಿಗ್ಗೆ ನಾಗಠಾಣ ಮತಕ್ಷೇತ್ರದ ಜುಮನಾಳ ಗ್ರಾಮಕ್ಕೆ ತೆರಳಿದ ಅವರು ವೃದ್ಧಾಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಇದೇ ಗ್ರಾಮದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸಿದರು. ನಂತರ ಹಿಟ್ಟಿನಹಳ್ಳಿ ಗ್ರಾಮಕ್ಕೆ ತೆರಳಿದ ಅವರು, ಅಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದರು. ಈ […]

DC Meeting: ಸಮರ್ಪಕ ಅನುದಾನ ಬಳಸಿ-ಅರ್ಹ ಫಲಾನುಭವಿಗೆ ಲಾಭ ದೊರಕಿಸಿ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯ ಅನುದಾನ ಮರಳಿ ಹೋಗದಂತೆ ನೋಡಿಕೊಂಡು ಸಮರ್ಪಕವಾಗಿ ಅನುದಾನ ಬಳಸಿ ಅರ್ಹ ಫಲಾನುಭವಿಗೆ ಯೋಜನೆಯ ಲಾಭ ದೊರಕಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2022-23ನೇ ವರ್ಷದ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಅಕ್ಟೊಬರ್ ತಿಂಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

RDPR Commissioner: ಗ್ರಾಮೀಣಾಭಿವೃದ್ದಿ ಆಯುಕ್ತರಿಂದ ನಾನಾ ಗ್ರಾ. ಪಂ. ಗಳಗೆ ಭೇಟಿ, ಪರಿಶೀಲನೆ

ವಿಜಯಪುರ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಆಯುಕ್ತೆ ಶಿಲ್ಪಾನಾಗ ಅವರು ವಿಜಯಪುರ ಜಿಲ್ಲೆಯ ನಾನಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಮತ್ತು ಮುಳವಾಡ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿ, 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಅನುಷ್ಠಾನಗೊಳ್ಳುತ್ತಿರುವ ಸರೋವರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಆದ್ಯತೆ ಮೇಲೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ನೀರಿನ ಮೂಲಗಳ ಅಭಿವೃಧ್ದಿಗೊಳಿಸುವಿಕೆ, ನರೇಗಾ ತಂತ್ರಾಂಶದಲ್ಲಿ ಕಾಯಕ […]

DC Voter Awareness: ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನ: ವಿಶೇಷ ಚೇತನ ಮತದಾರರಿಗೆ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಡಾ. ದಾನಮ್ಮನವರ

ವಿಜಯಪುರ: ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ವಿಶೇಷ ಚೇತನ ಮತದಾರರು ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಕುರಿತು ಜಾಗೃತಿ ಮೂಡಿಸಿದರು. ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದಿರುವ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿಕಲಚೇತನರಿಗೆ ಜಾಗೃತಿ ಮೂಡಿಸಿ, ಯಾವುದೇ ವ್ಯಕ್ತಿ ಮತದಾನದಿಂದ ದೂರ ಉಳಿಯದೇ, ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರು ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನ ನಡೆಯುತ್ತಿದ್ದು, […]

DC Indi Visit: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ : ಇಂಡಿ ತಹಸೀಲ್ದಾರ ಕಚೇರಿಯಲ್ಲಿ ಅಹವಾಲು ಸ್ವೀಕಾರಿಸಿದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಇಂಡಿ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಾನಾ ಸಾರ್ವಜನಿಕರು ದಾರಿ ಸಮಸ್ಯೆ ಕುರಿತು ಒಂಬತ್ತು ಅರ್ಜಿಗಳನ್ನು ಸಲ್ಲಿಸಿದ್ದು, ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಡಿಸಿ ಸೂಚಿಸಿದರು.   ಇಂಡಿ ಸರಕಾರಿ ಆಸ್ಪತ್ರೆಗೆ ಅಂಬ್ಯೂಲೆನ್ಸ್ ವ್ಯವಸ್ಥೆ, ಭೂಯ್ಯಾರ ನದಿ ಹಿನ್ನೀರಿನಿಂದ ಹಾಳಾದ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು.  ಮಿನಿ ವಿಧಾನಸೌಧ ಪಕ್ಕದ […]

Gardern Cleaning: ಬಡಾವಣೆಯ ಯುವಕರ ಜೊತೆಗೂಡಿ ಉದ್ಯಾನ ಸ್ವಚ್ಛಗೊಳಿಸಿದ ಕಾರ್ಪೋರೇಟರ್ ಮಳುಗೌಡ ಪಾಟೀಲ

ವಿಜಯಪುರ: ಇದೇ ಮೊದಲ ಬಾರಿಗೆ ವಿಜಯಪುರ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ ಬಿಜೆಪಿಯ ನೂತನ ಕಾರ್ಪೋರೇಟರ್ ಮಳುಗೌಡ ಪಾಟೀಲ ತಮ್ಮ ಮಾದರಿ ಕಾರ್ಯದ ಮೂಲಕ ಗಮನ ಸೆಳೆದಿದ್ದಾರೆ. ವಿಜಯಪುರ ನಗರದ ವಾರ್ಡ್ ಸಂಖ್ಯೆ 6ರ ಕಾರ್ಪೋರೇಟರ್ ಆಗಿರುವ ಅವರು, ತಮ್ಮ ವಾರ್ಡಿನಲ್ಲಿರುವ ಪ್ರಕೃತಿ ಬಡಾವಣೆಯಲ್ಲಿರುವ ಉದ್ಯಾನವನದಲ್ಲಿ ಮಳುಗೌಡ ಪಾಟೀಲ ಅವರು ಬಡಾವಣೆಯ ಯುವಕರು ಮತ್ತು ಹಿರಿಯರೊಂದಿಗೆ ಸೇರಿಕೊಂಡು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ರವಿವಾರ ನಮ್ಮ ವಾರ್ಡಿನಲ್ಲಿ ಬರುವ ಎಲ್ಲಾ ಉದ್ಯಾನವನವನ್ನು ಸ್ವಚ್ಛಗೊಳಿಸಲಾಗುತ್ತಿದೆ.  […]

MBP Talawar Honour: ಎಂ. ಬಿ. ಪಾಟೀಲರಿಗೆ ತಳವಾರ ಸಮಾಜದವರಿಂದ ಸನ್ಮಾನ- ಯಾಕೆ ಗೊತ್ತಾ?

ವಿಜಯಫುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರನ್ನು ತಳವಾರ ಸಮಾಜದ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ವಿಜಯಪುರ ನಗರದರಲ್ಲಿರುವ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ಆಗಮಿಸಿದ ತಳವಾರ ಸಮಾಜದ ಮುಖಂಡರು, ಬಬಲೇಶ್ವರ ಮತಕ್ಷೇತ್ರದಲ್ಲಿ ತಳವಾರ ಸಮುದಾಯಕ್ಕೆ ಎಸ್. ಟಿ. ಪ್ರಮಾಣ ಪತ್ರ ಒದಗಿಸುವಲ್ಲಿ ಶಾಸಕರು ಪ್ರಾಮಾಣಿಕ ಪ್ರಯತ್ನಾ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಸನ್ಮಾನಿಸುತ್ತಿರುವುದಾಗಿ ತಿಳಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ. ಬಿ. ಪಾಟೀಲ, ತಳವಾರ ಸಮುದಾಯ […]

Voter List DC: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ- ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನ್ನವರ

ವಿಜಯಪುರ: ಚುನಾವಣೆ ಆಯೋಗದ ನಿರ್ದೇಶನದಂತೆ ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ನಗರದ ನಾನಾ ಮತಗಟ್ಟೆ, ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಮತಗಟ್ಟೆ ಸಂಖ್ಯೆ 153 ಹಾಗೂ ಮತಗಟ್ಟೆ ಸಂಖ್ಯೆ 119ರ ಸ್ವತಂತ್ರ ಕಾಲನಿ, ಖಾಜಾನಗರ, ಗುಂಡಬಾವಡಿ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರ ಪಟ್ಟಿ ಪರಿಷ್ಕರಣೆ […]

Child Labour: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಬೇಕು-ನ್ಯಾಯಾಧೀಶ ವೆಂಕಣ್ಣ ಹೊಸಮನಿ

ವಿಜಯಪುರ: ಬಾಲಕಾರ್ಮಿಕ ಪದ್ಧತಿ ಅಪರಾಧವಾಗಿದ್ದು, ಜನರು ಜಾಗೃತರಾಗಿ ಬಾಲಕಾರ್ಮಿಕರ ಕುರಿತು ದೂರು ಸಲ್ಲಿಸುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದ್ದಾರೆ.  ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ […]

Udyog Mela: ಮಹಿಳಾ ವಿವಿ ಉದ್ಯೋಗ ಮೇಳದಲ್ಲಿ 140 ಅಭ್ಯರ್ಥಿಗಳು ಆಯ್ಕೆ, 378 ಅಭ್ಯರ್ಥಿಗಳು 2ನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆ

ವಿಜಯಪುರ: ಕರ್ನಾಟಕ ಸರಕಾರದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಜಿಲ್ಲಾಡಳಿತ, ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿವಿ ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 140 ಅಭ್ಯರ್ಥಿಗಳು ಆಯ್ಕೆಯಾಗಿದ್ದು, 378 ಅಭ್ಯರ್ಥಿಗಳು ಎರಡನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ. ಈ ಉದ್ಯೋಗ ಮೇಳದಲ್ಲಿ 25 ಕಂಪನಿಗಳು/ ಸಂಸ್ಥೆಗಳು ಭಾಗವಹಿಸಿದ್ದವು.  2000 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸುಮಾರು 800ಕ್ಕೂ […]