Highmask Light Foundation: ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಗೆ ಡಾ. ದೇವಾನಂದ ಚವ್ಹಾಣ ಭೂಮಿಪೂಜೆ

ವಿಜಯಪುರ: ನಾಗಠಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಜಯಪುರ ನಗರದ ವಾರ್ಡ್ ನಂ.12ರ ಗಚ್ಚಿನಕಟ್ಟಿ ಕಾಲನಿ ಬಾಳಿ ಪರಿಸಿ ಅಡ್ಡೆ ಹತ್ತಿರ ಹೊಸದಾಗಿ ರೂ. 17.30 ಲಕ್ಷ ರೂ. ವೆಚ್ಚದಲ್ಲಿ 16 ಮೀಟರ್ ಎತ್ತರದ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಗೆ ಹಾಗೂ ವಾರ್ಡ್ ನಂ.12ರ ಅಕ್ಕಿ ಕಾಲೋನಿ ಬಲಮುರಿ ಗಣಪತಿ ದೇವಸ್ಥಾನ ಹತ್ತಿರ ರೂ. 4 ಲಕ್ಷ ರೂ. ವೆಚ್ಚದಲ್ಲಿ 12.50 ಮೀಟರ್ ಎತ್ತರದ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಗೆ ಜೆಡಿಎಸ್ ಶಾಸಕ ಡಾ. ದೇವಾನಂದ […]

ZP CEO: ತಿಕೋಟಾ ತಾಲೂಕಿನಲ್ಲಿ ಜಿಪಂ ಸಿಇಓ ಪ್ರವಾಸ: ಬಾಬಾನಗರ, ಬಿಜ್ಜರಗಿ ಗ್ರಾ. ಪಂ. ಗಳ ಕಾರ್ಯವೈಖರಿಗೆ ಮೆಚ್ಚುಗೆ

ವಿಜಯಪುರ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ತಿಕೋಟಾ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ತಾಲೂಕಿನ ಬಾಬಾನಗರ ಮತ್ತು ಬಿಜ್ಜರಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು. ಈ ವೇಳೆ ನಾ‌ನಾ ಕಾಮಗಾರಿಗಳನ್ನು ಪರಿಶೀಲಿಸಿದರು. ಬಾಬಾನಗರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ, ಸಮಗ್ರ ಶಾಲಾ ಅಭಿವೃದ್ಧಿ ಕಾರ್ಯಕ್ರಮದಡಿ ಶಾಲೆಯೊಂದ ಸುವ್ಯವಸ್ಥೆ ಕಂಡು ಸಿಇಓ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹೈಟೆಕ್ ಶೌಚಾಲಯ, ರನ್ನಿಂಗ್ ಟ್ರ‍್ಯಾಕ್, ಅಡುಗೆ ಕೋಣೆ, ಭೋಜನಾಲಯ, ಶಾಲಾ ಕಂಪೌಂಡ್ ಮತ್ತು ಆಟದ ಮೈದಾನ ಕಾಮಗಾರಿ, ಅಮೃತ […]

MLC Sunilgouda: ಬಬಲೇಶ್ವರ, ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸುನೀಲಗೌಡ ಪಾಟೀಲ

ವಿಜಯಪುರ: ಬಬಲೇಶ್ವರ ಮತ್ತು ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಚಾಲನೆ ನೀಡಿದರು. ಬಬಲೇಶ್ವರ ಪಟ್ಟಣದಲ್ಲಿ ನಿರ್ಮಿತಿ ಕೇಂದ್ರ ರೂ.10 ಲಕ್ಷ ವೆಚ್ಚದಲ್ಲಿ ಸರಕಾರಿ ಹೆಣ್ಣು ಮಕ್ಕಳ ಶಾಲೆ ಮತ್ತು  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಸುಜಾತಾ ಕಳ್ಳೀಮನಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಜಾತ ಜಂಗಮಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ಮುಖಂಡರಾದ ಬಿ.ಜಿ.ಬಿರಾದಾರ, […]

DC Deadline: ಸಿಂದಗಿಯಲ್ಲಿ ಡಿಸಿಯಿಂದ ಅಹವಾಲು ಸ್ವೀಕಾರ- ವಾರದಲ್ಲಿ ವಿಲೇವಾರಿಗೆ ಸೂಚನೆ

ವಿಜಯಪುರ: ಒಂದು ವಾರದಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಹಸೀಲ್ದಾರ ಕಚೇರಿಗೆ ಅವರು ಭೇಟಿ ನೀಡಿದರು.  ಪ್ರತಿ ಮಂಗಳವಾರ ತಾಲೂಕು ಕಚೇರಿಗೆ ಭೇಟಿಯ ಪೂರ್ವ ನಿರ್ಧರಿತ ಕಾರ್ಯಕ್ರಮದ ವೇಳಾಪಟ್ಟಿಯಂತೆ ಅವರು ತಾಲೂಕು ಕಚೇರಿಗೆ ಭೇಟಿದರು. ತಹಸೀಲ್ದಾರ, ತಾ. ಪಂ. ಇಓ ಮತ್ತು ಇನ್ನಿತರ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಈ ವೇಳೆ ಸ್ವೀಕೃತಗೊಂಡ ಒಟ್ಟು 26 ಅರ್ಜಿಗಳ ಪೈಕಿ […]

Series Theft: ಭೀಮಾ ತೀರದ ಉಮರಾಣಿ ಗ್ರಾಮದ ಮನೆಗಳಲ್ಲಿ ಸರಣಿ ಕಳ್ಳತನ- ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರ ಓಡಾಟ

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ತೀರದ ಉಮರಾಣಿ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದ್ದರು, ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ದಾಖಲಾಗಿದೆ‌. ಉಮರಾಣಿ ಗ್ರಾಮದಲ್ಲಿ ಮೂರು ಮನೆಗಳ ಸರಣಿ ಕಳ್ಳತನ ನಡೆದಿದೆ. ಗ್ರಾನದ ಸದಾಶಿವ ಕೋಳಿ, ಜಗದೇವ ಕೋಳಿ, ಮಲ್ಲಯ್ಯ‌ ಎಂಬುವವರಿಗೆ ಸೇರಿದ ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮನೆಗೆ ಬೀಗ ಹಾಕಿ‌ ಮನೆಯವರು ಬೇರೆಡೆ ತೆರಳಿದ್ದರು. ಈ ವೇಳೆ ಕಳ್ಳರು ಕೈ ಚಳಕ ತೊರಿಸಿದ್ದಾರೆ. ಸುಮಾರು 40 ಗ್ರಾಂ ಚಿನ್ನಾಭರಣ, ರೂ. 50 ಸಾವಿರ ನಗದು ಕದ್ದು […]

MLC Bhumipuje: ತಿಕೋಟಾ, ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ನೀರು ಸರಬರಾಜು ಯೋಜನೆಗೆ ಸುನೀಲಗೌಡ ಪಾಟೀಲ ಭೂಮಿ ಪೂಜೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಅವರು ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ಜೆ.ಜೆ.ಎಂ. ಯೋಜನೆಯಡಿ ಮನೆ– ಮನೆಗೆ ನಳದ ಮೂಲಕ ನೀರು ಸರಬರಾಜು ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ತಿಕೋಟಾ ತಾಲೂಕಿನ ಅತಾಲಟ್ಟಿ ಎಲ್.ಟಿ. ರೂ. 67.75ಲಕ್ಷ ವೆಚ್ಚದಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ನಾನು ರಾಠೋಡ, […]

DySP Charge: ವಿಜಯುರ ನೂತನ ಡಿವೈಎಸ್ಪಿಯಾಗಿ ಸಿದ್ಧೇಶ್ವರ ಅಧಿಕಾರ ಸ್ವೀಕಾರ

ವಿಜಯಪುರ: ವಿಜಯಪುರ ನೂತನ ಡಿವೈಎಸ್ಪಿಯಾಗಿ ಸಿದ್ಧೇಶ್ವರ ಅಧಿಕಾರ ವಹಿಸಿಕೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತದಲ್ಲಿ ಡಿವೈಎಸ್ಪಿಯಾಗಿದ್ದ ಅವರನ್ನು ಎತಡು ದಿನಗಳ ಹಿಂದೆ ಸರಕಾರ ವಿಜಯಪುರ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿತ್ತು. ಸಿದ್ದೇಶ್ವರ ಅವರಿಗೆ ನಿಕಟಪೂರ್ವ ಡಿವೈಎಸ್ಪಿ ಲಕ್ಷ್ಮಿನಾರಾಯಣ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಬಳಿಕ ಸಿದ್ಧೇಶ್ವರ ಅವರು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಅವರನ್ನು ಭೇಟಿ ಮಾಡಿ ವಿಶ್ ಮಾಡಿದರು. ಸಿದ್ಧೇಶ್ವರ ಅವರು ಈ ಮುಂಚೆ ವಿಜಯಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ […]

ZP CEO Visit: ಕೆಆರ್‌ಐಡಿಎಲ್ ವಿಜಯಪುರ ಕಚೇರಿಗೆ ಸಿಇಓ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ನಗರದ ಕರ್ನಾಟಕ ರೂರಲ್ ಇನಫ್ರಾಸ್ಟ್ರಕ್ಚರ್ ಡೆವಲಪಮೆಂಟ್ ಲಿಮಿಟೆಡ್ ವಿಭಾಗದ ಕಚೇರಿಗೆ ಭೇಟಿ ನೀಡಿದರು. ಕೆ ಆರ್ ಐ ಡಿ ಎಲ್ ವಿಭಾಗ ಹಾಗೂ ಉಪ ವಿಭಾಗಗಳ ಕಚೇರಿಗಳ ಸ್ಥಿತಿಗತಿ ಪರಿಶೀಲಿಸಿದ ಅವರು, ಬಳಿಕ ಕೆ ಆರ್ ಐ ಡಿ ಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಯೋಜನೆಗಳಾದ ಗ್ರಾಮ ವಿಕಾಸ, ಮುಖ್ಯಮಂತ್ರಿ ಗ್ರಾಮ ವಿಕಾಸ, ಮುಖ್ಯಮಂತ್ರಿ ಮಾದರಿ ಗ್ರಾಮ ವಿಕಾಸ, ಅಮೃತ […]

F G Halakatti: ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿ ಭಾವುಕರಾದ ಡಾ. ಎಂ. ಎಸ್. ಮದಭಾವಿ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ವಚನಪಿತಾಮಹ ಡಾ. ಫ‌. ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಡೆಯಿತು. ಡಾ. ಫ‌ ಗು. ಹಳಕಟ್ಟಿಯವರ ಸಮಗ್ರ ಜೀವನ- ಕಾರ್ಯಸಾಧನೆಯ ಬಗ್ಗೆ ಇದೆ ವೇಳೆ ಸ್ಮರಿಸಲಾಯಿತು. ಅಪರ ಜಿಲ್ಲಾಧಿಕಾರಿಗ ರಮೇಶ ಕಳಸದ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಗ್ರಹ ಮತ್ತು ಸಂಪಾದನೆ ಮೂಲಕ ಡಾ. ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯವನ್ನು […]

New DySP: ಸಿದ್ಧೇಶ್ವರ ವಿಜಯಪುರ ನೂತನ ಡಿವೈಎಸ್ಪಿ

ವಿಜಯಪುರ: ಸಿದ್ಧೇಶ್ವರ ಅವರನ್ನು ವಿಜಯಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಿದ್ಧೇಶ್ವರ ಅವರು ಈ ಮುಂಚೆ ವಿಜಯಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಸಿಂದಗಿ ಸಿಪಿಐ ಆಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಈವರೆಗೆ ಸಿದ್ಧೇಶ್ವರ ಅವರು ಬೆಂಗಳೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಈಗ ವಿಜಯಪುರ ಡಿವೈಎಸ್ಪಿಯಾಗಿ ಸರಕಾರ ವರ್ಗಾವಣೆ ಮಾಡಿದೆ. ಸಿದ್ಧೇಶ್ವರ ಅವರ ಲೋಕಾಯುಕ್ತ ನಿವೃತ್ತ […]