ನಾಗಠಾಣ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಚಾಲನೆ

ವಿಜಯಪುರ: ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ತಮ್ಮ ಮತಕ್ಷೇತ್ರ ವ್ಯಾಪ್ತಿಯ ನಾನಾ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಚಡಚಣ ಪಟ್ಟಣದಲ್ಲಿ ಅಂದಾಜು ರೂ. 58 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪ್ರವಾಸಿ ಮಂದಿರದ ಎರಡನೇ ಮಹಡಿಯ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚಡಚಣ ಪಟ್ಟಣದ ನಾನಾ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 2020-21 […]

ಭೀಮಾ ತೀರದ ಪೊಲೀಸರ ಭರ್ಜರಿ ಕಾರ್ಯಾಚರಣೆ ಇಬ್ಬರ ಬಂಧನ- ರೂ. 9.30 ಲಕ್ಷ ಮೌಲ್ಯದ 20 ಬೈಕ್ ವಶ

ವಿಜಯಪುರ: ವಿಜಯಪುರ ಜಿಲ್ಲೆಯ ಭೀಮಾ ತೀರಷ ಚಡಚಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನೂತನ ಎಸ್ಪಿ ಎಚ್. ಡಿ. ಆನಂದ ಕುಮಾರ, ಚಡಚಣ ಪೊಲೀಸರು 20 ಬೈಕ್ ಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಜೀರಂಕಲಗಿ ಗ್ರಾಮದ 21 ವರ್ಷದ ರೇವಣಸಿದ್ದ ಗುರಪ್ಪಾ ಬಿರಾದಾರ ಮತ್ತು ಇಂಡಿ ತಾಲೂಕಿನ ಕೂಡಗಿ ಗ್ರಾಮದ 30 ವರ್ಷದ ಸುರೇಶ ರಾವುತರಾಯ ಬಿರಾದಾರ ಎಂಬುವರರನ್ನು ಬಂಧಿಸಲಾಗಿದೆ. ಬಂಧಿತ […]

ಭೂತನಾಳ ಕೆರೆ ಬಳಿ ಉದ್ಯಾನವನ, ವಾಟರ್ ಫ್ರಂಟ್ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ಭೂತನಾಳ ಕೆರೆ ವ್ಯಾಪ್ತಿಯ ಉದ್ಯಾನವನ ಹಾಗೂ ವಾಟರ್ ಫ್ರಂಟ್ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ನಗರದ ಭೂತನಾಳ ಕೆರೆ ಪಕ್ಕದಲ್ಲಿರುವ ಉದ್ಯಾನವನ ಹಾಗೂ ವಾಟರ್ ಫ್ರಂಟ್ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಉದ್ಯಾನವನ ಹಾಗೂ ವಾಟರ್ ಫ್ರಂಟ್ ಈ ಕಾಮಗಾರಿಗಳನ್ನು ಆಧ್ಯತೆ ಮೇಲೆ ಪೂರ್ಣಗೊಳಿಸುವಂತೆ ಮಹಾನಗರ ಪಾಲಿಕೆಯ ಎಂಜಿನಿಯರ್ ಗೆ ಸೂಚನೆ ನೀಡಿದರು.   ರೂ. 9 ಕೋ. ಅಂದಾಜು ಮೊತ್ತದಲ್ಲಿ ಈ ಕಾಮಗಾರಿಯಲ್ಲಿ ಪಾದಚಾರಿ […]

ಮುಳವಾಡ ಕೈಗಾರಿಕೆ ಪ್ರದೇಶದಲ್ಲಿ ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ನಿವೇಶನಕ್ಕೆ ತಲಾ ಒಂದು ಎಕರೆ ನೀಡಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 34 ಜನ ಎಸ್ಸಿ ಮತ್ತು ಎಸ್ಟಿ ಅರ್ಹ ಫಲಾನುಭವಿಗಳಿಗೆ ತಲಾ ಒಂದು ಎಕರೆಯಂತೆ ನಿವೇಶನ ಹಂಚಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ, ಸುನೀಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಕೈಗಾರಿಕೆ ಪ್ರದೇಶದಲ್ಲಿ 307.27 ಎಕರೆ ಜಮೀನನ್ನು ಅಭಿವೃದ್ಧಿ ಪಡಿಸಿ ಅದರಲ್ಲಿ 69.59 ಎಕರೆ ಜಮೀನನ್ನು ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ […]

ಬಸವ ನಾಡಿನಲ್ಲಿ ನನ್ನ ಗಿಡ ನನ್ನ ಭೂಮಿ ಸಂಘಟನೆಯಿಂದ ಸಂವಾದ

ವಿಜಯಪುರ: ವಿಜಯಪೂರ ನಗರದ ನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ಜ್ಞಾನಯೋಗಾಶ್ರಮದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರ ನಗರದ ಗಣ್ಯರು ಮತ್ತು ಮೂರ್ತಿ ತಯಾರಕರು ಪಾಲ್ಗೋಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಮಾತನಾಡಿ, ನಾವು ಎಲ್ಲರೂ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಪ್ರತಿಷ್ಠಾಪಿಸಿ ಪರಿಸರ ಸಂರಕ್ಷಣೆ ಮುಂದಾಗೋಣ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ನಾನಾ ಸ್ವಾಮೀಜಿಗಳು, ಬಿಜೆಪಿ ಮುಖಂಡರಾದ ಚಂದ್ರಶೇಖರ […]

ಬಸವ ನಾಡಿನಲ್ಲಿ ಅಂಗವಿಕಲರಿಗೆ ಸಲಕರಣೆ ವಿತರಿಸಿದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ವಿಕಲಚೇತನರು ಯಾವುದೇ ಪರಿಸ್ಥಿತಿಯಲ್ಲಿ ಎದೆಗುಂದದೆ ಸ್ವಾವಲಂಬಿ ಜೀವನ ನಡೆಸಿ, ಇತರರಿಗೆ ಮಾದರಿಯಾಗಬೇಕು ಎಂದು ಬಿ. ಎಲ್. ಡಿ. ಇ. ಸಂಸ್ಥೆಯ ಅಧ್ಯಕ್ಷ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ್ ಹೇಳಿದರು. ವಿಜಯಪುರ ನಗರದ ಬಿ. ಎಲ್. ಡಿ. ಇ. ಸಂಸ್ಥೆ ಆವರಣದಲ್ಲಿ ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ನಡೆದ ವಿಕಲಚೇತನರಿಗೆ ಕೃತಕ ಅಂಗಾಂಗ ಜೋಡಣೆ ಹಾಗೂ ಸಾಧನ ಸಲಕರಣೆಗಳ ಉಚಿತ ವಿತರಣೆ ಕಾರ್ಯಕ್ರಮ […]

ರಾಜ್ಯದಲ್ಲಿ ಜನಮನ್ನಣೆ ಇಲ್ಲದ ಸರಕಾರದಿಂದ ಜನಪರ ಕಾರ್ಯಕ್ರಮ ಅಸಾಧ್ಯ- ಎಚ್. ಸಿ. ಮಹಾದೇವಪ್ಪ

ವಿಜಯಪುರ: ರಾಜ್ಯದಲ್ಲಿ ಜನಮನ್ನಣೆ ಇಲ್ಲದ ಸರಕಾರ ಅಸ್ತಿತ್ವದಲ್ಲಿದ್ದುದರಿಂದ ಜನಪರ ಕಾರ್ಯಕ್ರಮಗಳನ್ನು ನೀಡಲು ಅಸಾಧ್ಯವಾಗಿದೆ ಎಂದು ಮಾಜಿ ಸಚಿವ ಎಚ್. ಸಿ. ಮಹಾದೇವಪ್ಪ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಎಲ್ಲ ನಾಯಕರಿಗೆ ಸಿಎಂ ಆಗಬೇಕು ಎನ್ನುವ ಬಯಕೆಯಿದೆ. ಮುಖ್ಯಮಂತ್ರಿ ಸ್ಥಾನ ಎಂದರೆ ಅದೇನು ಸಂತೆಯಲ್ಲಿ ಸಿಗುವ ಬದನೆಕಾಯಿನಾ? ಎಂದು ಸದ್ಯದ ರಾಜ್ಯದ ಬೆಳವಣಿಗೆ ಕುರಿತು ತೀಕ್ಷವಾಗಿ ಪ್ರತಿಕ್ರಿಯೆ ‌ನೀಡಿದರು. ಸಿಎಂ ಸ್ಥಾನ ಸಂವಿಧಾತ್ಮಕ ಹುದ್ದೆ. ಅದಕ್ಕೆ ಅದರದೇ ಆದ ಕಾನೂನು ಚೌಕಟ್ಟು, ಘನತೆ ಇದೆ. ಆ […]

ಮೀನು ಕೃಷಿಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ- ಜಂಟಿ ಕೃಷಿ ನಿರ್ದೇಶಕ ಡಾ. ರಾಜಶೇಖರ ವಿಲಿಯಮ್ಸ್

ವಿಜಯಪುರ ನಗರದ ಹೋಟೆಲ್ ಟೌನ್ ಪ್ಯಾಲೇಸ್ ನಲ್ಲಿ ಮೀನುಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ, ಬಯೋಪ್ಲಾಕ್ ಭಾರತ, ನವದೆಹಲಿಯ ಬಯೋಪ್ಲಾಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಯುಕ್ತಾಶ್ರಯದಲ್ಲಿ ನಡೆದ ಜೀವಂತ ಹಾವು ಭತ್ತಿ ಮೀನಿನ(ಸ್ನೇಕ್ ಹೆಡ್ ಫಿಶ್) ಕೋಯ್ಲು ಮತ್ತು ಮಾರುಕಟ್ಟೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪ್ರಾಣಿಜನ್ಯ ಪ್ರೋಟಿನ್ ಬೇಡಿಕೆ ಪ್ರತಿವರ್ಷ ಹೆಚ್ಚಾಗುತ್ತಿದೆ. ಇದರಿಂದ ಭವಿಷ್ಯದ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲಗಳನ್ನು ಕಾಪಾಡುವ ಮತ್ತು ಗುಣಮಟ್ಟದ ಪ್ರೋಟಿನ್ ಒದಗಿಸುವುದು ದೊಡ್ಡ ಸವಾಲಾಗಿದೆ ಎಂದು ತಿಳಿಸಿದರು. ಭೂತನಾಳ ಮೀನುಗಾರಿಕೆ ಸಂಶೋಧನಾ ಮತ್ತು […]

ರೋಣಿಹಾಳದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ವಿಜಯಪುರ: ಬಸವಣ್ಣನವರ ಕಾಯಕಕ್ಕೆ ಹಡಪದ ಅಪ್ಪಣ್ಣನವರು ಆಧಾರ ಸ್ತಂಭವಾಗಿದ್ದರು, ಆಪ್ತ ಕಾರ್ಯದರ್ಶಿಯಾಗಿ ಅಚ್ಚುಮೆಚ್ಚಿನ ಶರಣರಾಗಿದ್ದರು ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ ಅಧ್ಯಕ್ಷ ಜಗದೀಶ ಸಾಲಳ್ಳಿ ಹೇಳಿದರು. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ಬಸವ ಪ್ರಿಯ ಹಡಪದ ಅಪ್ಪಣ್ಣ ಸಮಾಜ ಸೇವಾ ಅಭಿವೃದ್ಧಿ ಸಂಘ ಯಲ್ಲಮದೇವಿ ದೇವಸ್ಥಾನ ಸಭಾಂಗಣದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಪ್ಪಣ್ಣನವರು ಸದಾಕಾಲ ಬಸವಣ್ಣನವರೊಂದಿಗೆ ಇರುತ್ತಿದ್ದರು. ಬಸವಣ್ಣನವರನ್ನು ಭೇಟಿ ಮಾಡಲು ಬರುವವರು ಮೊದಲು ಅಪ್ಪಣ್ಣನವರ ಅನುಮತಿ […]

ಬಸವ ನಾಡಿನಲ್ಲೊಂದು ವಿನೂತನ ಪ್ರಯತ್ನ- ಸ್ವಚ್ಛಂದ ಪರಿಸರದಲ್ಲಿ ಚೆಂಬೆಳಕಿನಲ್ಲಿ ರಾತ್ರಿ ಕಳೆಯಲಿರುವ ಪರಿಸರ ಪ್ರೇಮಿಗಳು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಪರಿಸರಕ್ಕೆ ಪೂರಕ ಮತ್ತು ಪರಿಸರದ ಬಗ್ಗೆ ಜನಜಾಗೃತಿ ಮೂಡಿಸುವ ವಿನೂತನ ಪ್ರಯತ್ನಗಳು ನಡೆಯುತ್ತಲೇ ಇವೆ. ಅದರಲ್ಲೂ ಗುರು ಪೂರ್ಣಿಮೆಯಂದು ಪರಿಸರದ ಕಾಳಜಿಯ ಜೊತೆಗೆ ಮಾನವ ನಿರ್ಮಿತ ಕಾಡಿನ ಪರಿಸರದಲ್ಲಿ ರಾತ್ರಿಯಿಡೀ ಕಳೆಯುವ ಮೂಲಕ ಹೊಸದೊಂದು ಪ್ರಯೋಗಕ್ಕೆ ಪರಿಸರ ಪ್ರೇಮಿಗಳು ಮುಂದಾಗಿದ್ದಾರೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿರುವ ಜೀವ ವೈವಿದ್ಯತೆ, ಪರಿಸರ ವ್ಯವಸ್ಥೆ ಪುನರ್ ಪ್ರತಿಷ್ಠಾಪಿಸುವ ನಿಟ್ಟಿನಲ್ಲಿ ಡಾ. ಮಹಾಂತೇಶ ಬಿರಾದಾರ ನೇತೃತ್ವದಲ್ಲಿ ಯುವಕರ ತಂಡ ತಮ್ಮಂಥ ತರುಣರನ್ನು ಪರಿಸರದತ್ತ ಹೆಚ್ಚೆಚ್ಚು ಆಕರ್ಷಿಸಲು […]