ಹುತಾತ್ಮ ಯೋಧನ ಪತ್ನಿಗೆ ಬಿ ಎಲ್ ಡಿ ಇ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗದ ಭರವಸೆ ನೀಡಿದ ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ಧಾಳಿಯಲ್ಲಿ ಹುತಾತ್ಮನಾದ ವೀರಯೋಧ ಕಾಶೀರಾಯ ಬೊಮ್ಮನಹಳ್ಳಿ ನಿವಾಸಕ್ಕೆ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಭೇಟಿ ನೀಡಿದರು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯ ಯೋಧ ಕಾಶೀರಾಯ ಬೊಮ್ಮನಹಳ್ಳಿ ಜು. 2 ರಂದು ಭಯೋತ್ಪಾದಕತ ಧಾಳಿಯಲ್ಲಿ ಹುತಾತ್ಮರಾಗಿದ್ದರು. ಇಂದು ವೀರಯೋಧನ ನಿವಾಸಕ್ಕೆ ಭೇಟಿ ನೀಡಿದ ಸುನೀಲಗೌಡ ಪಾಟೀಲ ಯೋದನ‌ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಹುತಾತ್ಮ ಯೋಧನ ಪತ್ನಿ ಸಂಗೀತಾ ಅವರಿಗೆ ಬಿ ಎಲ್ ಡಿ ಇ […]

ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ಗಳನ್ನು ವಿತರಿಸಿದ ಬಿಜೆಪಿ ಸಂಸದ, ವಿಧಾನ ಪರಿಷತ ಸದಸ್ಯ

ವಿಜಯಪುರ: ಕೊರೊನಾ ಮತ್ತು ಲಾಕಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಮತ್ತು ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಅವರು ಆಹಾರ ಕಿಟ್ ವಿತರಿಸಿದರು. ವಿಜಯಪುರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಮಿಕ ಅಧಿಕಾರಿ ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಹೆಸರು ನೋಂದಾಯಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಜಿಲ್ಲಾ […]

ಪಡಿತರ ಚೀಟಿದಾರರು ಇ -ಕೆವೈಸಿ ಮಾಡಿಸುವ ಪ್ರಕ್ರಿಯೆ ಪ್ರಾರಂಭ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಪಡಿತರ ಚೀಟಿದಾರರು ನ್ಯಾಯ ಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸುವ ಪ್ರಕ್ರಿಯೆಯನ್ನು ಕೊರೊನಾ ಲಾಕಡೌನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಇ-ಕೆವೈಸಿ ಮಾಡಿಸುವ ಕಾರ್ಯ ಆಯಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಜು. 1 ರಿಂದ ಪುನಾರಂಭವಾಗಿದೆ ಎಂದು ಜಿಲ್ಲಾಧಿಕಾರಿ ಪಿ, ಸುನೀಲ ಕುಮಾರ ತಿಳಿಸಿದ್ದಾರೆ. ಈ ಸಂಬಂಧ ಎಲ್ಲಾ ನ್ಯಾಯ ಬೆಲೆ ಅಂಗಡಿಯವರಿಗೂ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಗಳನ್ನು ಆಯಾ ಪಡಿತರ ಚೀಟಿದಾರರನ್ನು ನ್ಯಾಯ ಬೆಲೆ ಅಂಗಡಿಗೆ ಕರೆಯಿಸಿ ಇ-ಕೆವೈಸಿ ಮಾಡಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಇ-ಕೆವೈಸಿ ಮಾಡಿಸದೇ […]

ಜನವಿರೋಧಿ ಸರಕಾರ ಕಿತ್ತೆಸೆಯುವವರೆಗೆ ವಿಶ್ರಮಿಸದಿರಿ- ಸಂಗಮೇಶ ಬಬಲೇಶ್ವರ

ವಿಜಯಪುರ: ಜನವಿರೋಧಿ ಸರಕಾರ ಕಿತ್ತೊಗೆಯುವವರೆಗೂ ವಿಶ್ರಮಿಸದಿರಿ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೆಟ್ರೋಲ್, ಡೀಜಲ್ ಮತ್ತು ಅಡುಗೆ ಅನಿಲ ಗಗನಕ್ಕೇರುತ್ತಿರುವುದನ್ನು ವಿರೋಧಿಸಿ ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಸೈಕಲ್ ರ‌್ಯಾಲಿ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ. ಇಂಥ ಜನವಿರೋಧಿ ಸಂವೇದನೆಯನ್ನೇ ಕಳೆದುಕೊಂಡಿರುವ ಅಮಾನವೀಯ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ಕಿತ್ತೊಗೆಯುವವರೆಗೆ ಕಾರ್ಯಕರ್ತರು ವಿಶ್ರಮಿಸಬಾರದು ಎಂದು ಅವರು […]

ಸಂಘ, ಪರಿವಾರದ ಹಿನ್ನೆಲೆ, ಪಕ್ಷಕ್ಕೆ ಹತ್ತಿಪ್ಪತ್ತು ವರ್ಷ ದುಡಿದವರಿಗೆ ತಾ. ಪಂ. ಜಿ. ಪಂ. ಟಿಕೇಟ್ ನೀಡಿ- ಶ್ರೀಮಂತ ದುದ್ದಗಿ

ವಿಜಯಪುರ- ಸಂಘ ಪರಿವಾರದ ಹಿನ್ನೆಲೆ ಹೊಂದಿದವರು ಮತ್ತು ಬಿಜೆಪಿಯಲ್ಲಿ ಹತ್ತಿಪ್ಪತ್ತು ವರ್ಷ ದುಡಿದವರಿಗೆ ತಾ. ಪಂ. ಜಿ. ಪಂ. ಟಿಕೇಟ್ ನೀಡಬೇಕು ಎಂದು ವಿ ಎಚ್ ಪಿ ಬೆಳಗಾವಿ ವಿಭಾಗ ಮುಖಂಡ ಶ್ರೀಮಂತ ದುದ್ದಗಿ ಆಗ್ರಹಿಸಿದ್ದಾರೆ. ಮುಂಬಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತರಗೆ ಟಿಕೆಟ್ ನೀಡಬೇಕೆಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರ ಹೇಳಿಕೆ ಸ್ವಾಗತಾರ್ಹ. ಪಕ್ಷ ನಿಷ್ಠಾವಂತ ಕಾರ್ಯಕರ್ತರು ಎಂದರೆ ಏನು ಎಂಬುದು […]

ಹುತಾತ್ಮ ಯೋಧನ ಕುಟುಂಬಕ್ಕೆ ಡಿಸಿಸಿ ಬ್ಯಾಂಕ್ ವತಿಯಿಂದ ರೂ. 5 ಲಕ್ಷ ಸಹಾಯ ಧನ ನೀಡಿದ ಶಾಸಕ‌ ಶಿವಾನಂದ ಪಾಟೀಲ

ವಿಜಯಪುರ: ದೇಶಕ್ಕಾಗಿ ಹುತಾತ್ಮನಾದ ವೀರಯೋಧ ಕಾಶಿರಾಯ ಬೊಮ್ಮನಹಳ್ಳಿ ಸೇವೆ ಅಪ್ರತಿಮವಾಗಿದೆ. ಯುವಕರು ಸೇನೆಗೆ ಸೇರಲು ನಾವು ಪ್ರೇರೇಪಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಅವರು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಹುತಾತ್ಮ ಕಾಶಿರಾಯ ಬೊಮ್ಮನಹಳ್ಳಿ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಡಿಸಿಸಿ ಬ್ಯಾಂಕ್ ವತಿಯಿಂದ ರೂ. 5 ಲಕ್ಷ ಸಹಾಯ ಧನದ ಚೆಕ್ ವಿತರಿಸಿ ಮಾತನಾಡಿದರು. ಕಾಶಿರಾಯ […]

ಕಾರ್ಮಿಕ ಇಲಾಖೆಯಿಂದ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ವಿಜಯಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ವಿತರಣೆ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆಯಿತು. ಕಾರ್ಮಿಕ ಅಧಿಕಾರಿ ಮತ್ತು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಹೆಸರು ನೋಂದಾಯಿಸಿಕೊಂಡ ಕಟ್ಟಡ ಕಾರ್ಮಿಕರ ಆರೋಗ್ಯದ ಹಿತರಕ್ಷಣೆಗಾಗಿ ಮತ್ತು ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಇಂಡಿ ವಿಭಾಗದ ಉಪವಿಭಾಗಾಧಿಕಾರಿ ರಾಹುಲ ಶಿಂಧೆ, ಇಂಡಿ ತಹಶೀಲ್ದಾರ ಸಿ, […]

ಆ್ಯಂಬ್ಯೂಲನ್ಸ್ ನಲ್ಲಿಯೇ ಮಹಿಳೆಗೆ ಹೆರಿಗೆ ಮಾಡಿಸಿದ ಸಿಬ್ಬಂದಿ

ವಿಜಯಪುರ: ಮಹಿಳೆಯೊಬ್ಬಳು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬ್ಯೂಲನ್ಸ್ ನಲ್ಲಿಯೇ ಗಂಡು ಮುಗವಿಗೆ ಜನ್ಮ ನೀಡಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಬಳಿ ಪಟ್ಟಣದ ಬಳಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಬೈಲಕೂರ ಗ್ರಾಮದ ಭುವನೇಶ್ವರಿ ಬಸವರಾಜ ಛಲವಾದಿ(23) ಹೆರಿಗೆ ನೋವಿನಿಂದ ಬಳಲುತ್ತಿದ್ದಳು. ಆಕೆಯನ್ನು ನಾಲವತವಾಡದ 108 ಆ್ಯಂಬ್ಯೂಲನ್ಸ್ ನಲ್ಲಿ ಸಮೀಪದ ತಂಗಡಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋ್ಗಲಾತುತ್ತಿತ್ತು. ಆದರೆ, ಮಹಿಳೆಗೆ ಹೆರಿಗೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಆ್ಯಂಬ್ಯೂಲನ್ಸ್ ನಲ್ಲಿದ್ದ ಸಿಬ್ಬಂದಿಯಾದ ಸ್ಟಾಫ್ ನರ್ಸ್ ಶರಣು ನಾವಿ […]

ಕೊರೊನಾ ನಿಯಂತ್ರಣಕ್ಕಾಗಿ ಅರ್ಹ ಪಲಾನುಭವಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆಯ ಇ- ಆಡಳಿತ ನಿರ್ದೆಶಕಿ ಶಿಲ್ಪಾ ನಾಗ ಕರೆ

ವಿಜಯಪುರ: ಕೊರೊನಾ ಬಡವ ಶ್ರೀಮಂತ, ಹಿರಿಯರೂ, ಕಿರಿಯರೂ ಎನ್ನದೆ ಒಂದೂವರೆ ವರ್ಷದಿಂದ ಕಾಡುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಲು ಕಡ್ಡಾಯವಾಗಿ ಪ್ರತಿಯೊಬ್ಬರು ಲಸಿಕೆ ಹಾಕಿ ಕೊಳ್ಳಬೇಕು ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ ಇಲಾಖೆಯ ಇ- ಆಡಳಿತ ನಿರ್ದೆಶಕಿ ಶಿಲ್ಪಾ ನಾಗ ಕರೆ ನೀಡಿದ್ದಾರೆ. ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಆವರಣದ ಕ್ಷಯ ರೋಗ ನಿರ್ವಹಣೆ ತರಬೇತಿ ಸಭಾಂಗಣದಲ್ಲಿ ನಡೆದ ಎರಡು ದಿನಗಳ ಮೂರು ಜಿಲ್ಲೆಗಳ ಕೊವಿಡ್ ಲಸಿಕಾ ಆಂದೋಲನ ಹಾಗೂ ತರಬೇತಿ ಕಾರ್ಯಕ್ರಮವನ್ನು ವರ್ಚುವಲ್ ಸಮಾರಂಭದ ಮೂಲಕ […]

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವಿಗೆ ಕೇಂದ್ರ ಹಣಕಾಸು ಸಚಿವೆ ಒಪ್ಪಿಗೆ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮತ್ತು ಜಿ ಎಸ್ ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಕೇಂದ್ರ ಸಚಿವೆ ಈ ಭರವಸೆ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿನ ಆರ್ಥಿಕ […]