ವಿಜಯಪುರ ನೂತನ ಡಿವೈಎಸ್ಪಿಯಾಗಿ ಬಸವರಾಜ ಯಲಿಗಾರ ವರ್ಗಾವಣೆ

ವಿಜಯಪುರ: ವಿಜಯಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಬಸವರಾಜ ಯಲಿಗಾರ ಅವರನ್ನು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬಸವರಾಜ ಯಲಿಗಾರ ಈಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಡಿವೈಎಸ್ಪಿಯಾಗಿ ಕೆಲಸ ಮಾಡುತ್ತಿದ್ದು, ಈಗ ಅವರನ್ನು ವಿಜಯಪುರ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಮುಂಚೆ ಕೂಡ ಬಸವರಾಜ ಯಲಿಗಾರ ವಿಜಯಪುರ ಜಿಲ್ಲೆಯಲ್ಲಿ ಪಿ.ಎಸ್.ಐ, ಸಿಪಿಐ ಆಗಿ ಕೆಲಸ ಮಾಡಿದ್ದಾರೆ.  ಮೂಲತಃ ಧಾರವಾಡ ಜಿಲ್ಲೆಯವರಾಗಿರುವ ಬಸವರಾಜ ಯಲಿಗಾರ ವಿಜಯಪುರ ಜಿಲ್ಲೆಯ ಅಳಿಯರಾಗಿರುವುದೂ ಗಮನಾರ್ಹವಾಗಿದೆ. ವಿಜಯಪುರ ಉಪವಿಭಾಗದ ಹಾಲಿ ಡಿವೈಎಸ್ಪಿ ಸಿದ್ಧೇಶ್ವರ […]

ರಾಷ್ಟ್ರೀಯ ಶಿಕ್ಷಣ ನೀತಿಗೆ 3ನೇ ವರ್ಷದ ಸಂಭ್ರಮ: ಎನ್ಇಪಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಿದೆ- ಗುಲ್ನಾದ್ ಕೌರ್

ವಿಜಯಪುರ: ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಳೆದ ಮೂರು ವರ್ಷಗಳಲ್ಲಿ ಪರಿಣಾಮಕಾರಿ ಅನುಷ್ಠಾನ ಮಾಡಲಾಗಿದೆ ಎಂದು ವಿಜಯಪುರ ಕೇಂದ್ರೀಯ ವಿದ್ಯಾಲಯದ ಕಾರ್ಯ ನಿರ್ವಾಹಕ ಪ್ರಾಂಶುಪಾಲ ಗುಲ್ನಾಜ್ ಕೌರ್ ಹೇಳಿದ್ದಾರೆ. ನಗರದ ಅಫಜಲಪೂರ ಟಕ್ಕೆಯಲ್ಲಿರುವ ಕೇಂದ್ರೀಯ ವಿದ್ಯಾಲಯದ ಸಭಾಂಗಣದಲ್ಲಿ ಕೇಂದ್ರ ಸರಕಾರ 2020 ರಲ್ಲಿ ಜಾರಿಗೊಳಿಸಿದ ಎನ್‌ಇಪಿ 3ನೇ ವರ್ಷಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೂರು ವರ್ಷಗಳ ಹಿಂದೆ ಕೇಂದ್ರ ಸರಕಾರ ಪರಿಚಯಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ನಮ್ಮ ರಾಷ್ಟ್ರದ ಪರಿಣಾಮಕಾರಿಯಾದ ಶೈಕ್ಷಣಿಕ ಗುರಿ […]

ಸಿಎಂ ಸಿದ್ಧರಾಮಯ್ಯಗೆ ಕ್ಯಾರಿಕೇಚರ್ ಕಾಣಿಕೆ ನೀಡಿದ ವಸವನಾಎಇನ ವ್ಯಂಗ್ಯಚಿತ್ರಕಾರ ಶರಣು ಚಟ್ಟಿ

ಬೆಂಗಳೂರು: ನಗರದ ಪ್ರೇಸ್ ಕ್ಲಬ್ ನಲ್ಲಿ ನಡೆದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಸವನಾಡು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿಯ ವ್ಯಂಗ್ಯ ಚಿತ್ರಕಾರ ಶರಣು ಚೆಟ್ಟಿ ಕ್ಯಾರಿಯೇಚರ್ ಕಾಣಿಕೆ ನೀಡಿದ್ದಾರೆ. ಗೊಲಗೇರಿಯಸರಕಾರಿ ಕನ್ನಡ ಹೆಣ್ಣು‌ ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿ ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಅವರಯ ತಾವು ರಚಿಸಿರುವ ಮುಖ್ಯಮಂತ್ರಿಗಳ ವ್ಯಂಗ್ಯಭಾವಚಿತ್ರ ಮತ್ತು ತುಂಟ ಮಕ್ಕಳು ಪುಸ್ತಕವನ್ನು ಕಾಣಿಕೆಯಾಗಿ ನೀಡಿದರು. ಅವರ ಕಲಾಕೃತಿ ವೀಕ್ಷಿಸಿದ ಮುಖ್ಯಮಂತ್ರಿಗಳು ಶರಣು ಚಟ್ಟಿ ಅವರ […]

ನೆಗೆಟಿವ್, ಅಪರಾಧ ಸುದ್ದಿಗಳ ಬದಲು ಪಾಸಿಟಿವ್ ನ್ಯೂಸ್ ಗಳಿಗೆ ಆದ್ಯತೆ ನೀಡಬೇಕು- ಎಂ. ಬಿ.‌‌ ಪಾಟೀಲ

ವಿಜಯಪುರ: ಬ್ರೇಕಿಂಗ್ ನ್ಯೂಸ್ ಹೆಸರಿನಲ್ಲಿ‌ ನೆಗೆಟಿವ್ ಸುದ್ದಿ ಪ್ರಸಾರ ಹೆಚ್ಚಾಗುತ್ತಿದ್ದು, ಅದರ ಬದಲು ಪಾಸಿಟಿವ್ ನ್ಯೂಸ್ ಗಳಿಗೆ ಆದ್ಯತೆ ನೀಡಬೇಕು‌ ಎಂದು ಬೃಹತ್ ಮತ್ತು ಮದ್ಯಮ‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡುತ್ತಿದ್ದರು. ಈ ಹಿಂದೆ ಪತ್ರಿಕೆಗಳು ಬಹಳ ವಿಶ್ವಾಸಾರ್ಹತೆ ಹೊಂದಿದ್ದವು. ಈಗ ಟಿವಿ ಮಾಧ್ಯಮ, ಯೂಟ್ಯೂಬ್ ಗಳಿಂದಾಗಿ ಬಹಳ […]

ವಿಜಯಪುರ ವಿಮಾನ ನಿಲ್ದಾಣ: ಫೆಬ್ರವರಿ ವೇಳೆಗೆ ಪೂರ್ಣಗೊಳಿಸುವ ಗುರಿಯಿದೆ- ಎಂ. ಬಿ. ಪಾಟೀಲ

ವಿಜಯಪಯರ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯನ್ನು ಮುಂದಿನ ವರ್ಷ ಫೆಬ್ರವರಿಯೊಳಗೆ ಪೂರ್ಣಗೊಳಿದುವ ಗುರಿಯಿದೆ ಎಂದು ಬೃಹತ್ ಮತ್ತು‌ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಿರ್ಮಿಸಲಾಗುತ್ತಿರುವ ವಿಮಾನ‌ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಜಿಲ್ಲೆ ಹಲವಾರು ಐತಿಹಾಸಿಕ ಸ್ಮಾರಕಗಳನ್ನು ಹೊಂದಿದ್ದು, ಪ್ರವಾಸಿ ತಾಣವೂ ಆಗಿದೆ. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳಿಗೂ ಹೆಸರುವಾಸಿಯಾಗಿದೆ. ಶೈಕ್ಷಣಿಕವಾಗಿ ಮತ್ತು […]

ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥರಾಗಿದ್ದ ಲೋಕಾಯುಕ್ತ ಡಿವೈಎಸ್ಪಿ ಅರುಣ ನಾಯಕ ನಿಧನ

ವಿಜಯಪುರ: ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥರಾಗಿದ್ದ ವಿಜಯಪುರ ಲೋಕಾಯುಕ್ತ ಎಸ್ಪಿ ಅರುಣ ನಾಯಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದ ಬಳಿ‌‌ ಇರುವ ಒಳಾಂಗಣ ಕ್ರೀಡಾಂಗಣದಲ್ಲಿ ಅರುಣ ನಾಯಕ ಅವರು ರಾತ್ರಿ 8.30ರ ಸುಮಾರಿಗೆ ಇತರ ಆಟಗಾರರೊಂದಿಗೆ ಆಟವಾಡುತ್ತಿದ್ದರು.  ಸುಮಾರು‌ ಆರು ಗೇಮ್ ಆಟವಾಡಿದ ಮೇಲೆ ಸುಸ್ತಾದವರಂತೆ ಕಂಡು ಬಂದ ಅವರು ಪಕ್ಕದ ಬೆಂಚ್ ಮೇಲೆ ಹೋಗಿ ಕುಳಿತರು.  ಅಷ್ಟರಲ್ಲಿ ಉಸಿರಾಟವೂ ಹೆಚ್ಚಾಗಿದ್ದ ಶಬ್ದ ಬಂದ ಹಿನ್ನೆಲೆಯಲ್ಲಿ ಅವರ ಜೊತೆ ಆಟವಾಡುತ್ತಿದ್ದ ಸಗರ ಅಬೂಬಕರ, ಅಜೀಂ, […]

ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ತಜ್ಞರ ಜೊತೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು- ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಪುಸ್ತಕಗಳ ಹೊರೆ ಇಳಿಸಲಾಗುವುದು.  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡಲಾಗಿದೆ.  ಪೂರಕ ಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ತಲುಪಿಸಲಾಗಿದೆ ಎಂದು ಅವರು […]

ಮಹಿಳಾ ವಿವಿಯಲ್ಲಿ ಹೆಸರಿನಲ್ಲಿ ಸುಳ್ಳು ನೇಮಕಾತಿ ಆದೇಶ ಪತ್ರ ವಿತರಣೆ ಆರೋಪ- ಎಚ್ಚರದಿಂದಿರಲು ಕುಲಸಚಿವರ ಸೂಚನೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನೌಕರಿ ಕೊಡಿಸುವುದಾಗಿ ವಿಶ್ವವಿದ್ಯಾನಿಲಯದ ಲಾಂಛನ ಮತ್ತು ಕವರಗಳನ್ನು ಬಳಸಿಕೊಂಡು ಅನಾಮಿಕ ವ್ಯಕ್ತಿಗಳು ಹಿಂದಿನ ಮತ್ತು ಪ್ರಸ್ತುತ ಕುಲಸಚಿವರು ಮತ್ತು ಸಹಾಯಕ ಕುಲಸಚಿವರ ಸಹಿಯೊಂದಿಗೆ ಸುಳ್ಳು ಪತ್ರಗಳನ್ನು ನೀಡುತ್ತಿದ್ದಾರೆ ಎಂಬುದು ಗಮನಕ್ಕೆ ಬಂದಿದ್ದು ಇಂಥ ವ್ಯಕ್ತಿಗಳ ಮೋಸದ ಜಾಲದ ಬಗೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕುಲಸಚಿವ ಪ್ರೊ. ಬಿ. ಎಸ್. ನಾವಿ ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇದುವರೆಗೆ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬೋಧಕರ […]

ಕಲುಷಿತ ನೀರು ಪೂರೈಕೆ ಬಗ್ಗೆ ಎಚ್ಚರಿಕೆ ವಹಿಸಿ: ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಜಲಮೂಲ, ಟ್ಯಾಂಕರ್ ವ್ಯವಸ್ಥೆ ಮಾಡಿ- ಡಿಸಿ ಭೂಬಾಲನ್ ಟಿ

ವಿಜಯಪುರ: ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಹಳ್ಳಿ ಹಾಗೂ ವಾರ್ಡಗಳಲ್ಲಿ ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಜಲಮೂಲಗಳನ್ನು ಗುರುತಿಸಿಟ್ಟುಕೊಳ್ಳಬೇಕು.  ಜಲಮೂಲವಿಲ್ಲದೆಡೆ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಅವಶ್ಯಕ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಟಿ. ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಗಾರು ಮಳೆ ವಿಳಂಬದಿಂದ ಅವಶ್ಯವಿದ್ದ ಕಡೆ ಟ್ಯಾಂಕರ್ ಗಳ […]

ಬೆತ್ತಲೆಯಾಗಿ ಮೊಬೈಲ್ ಟವರ್ ಹತ್ತಿ ತುತ್ತತುದಿಯಲ್ಲಿ ಯುವಕನ ಹುಚ್ಚಾಟ- ಮದ್ಯ, ಗುಟ್ಕಾ ಆಮಿಷ ತೋರಿಸಿ ಕೆಳಗಿಳಿಸಿದ ಗ್ರಾಮಸ್ಖರು, ಪೊಲೀಸರು

ವಿಜಯಪುರ: ಮೊಬೈಲ್ ಟವರ್ ಹತ್ತಿದ ಯುವಕನೊಬ್ಬ ಬೆತ್ತಲೆಯಾಗಿ ಹುಚ್ಚಾಟ ತೋರಿಸುತ್ತ ಆವಾಂತರ ಸೃಷ್ಠಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆಯಿಂದಲೇ ಮೊಬೈಲ್ ಟವರ್ ಮೇಲಿದ್ದ ಯುವಕ ಬೆತ್ತಲೆಯಾಗಿಯೇ ಟಾವರ್ ನ ತುತ್ತ ತುದಿಯ ಮೇಲೆ ನಿಂತು ಬೇಕಾದಂತೆ ಕೈ ಬೀಸುತ್ತಿದ್ದ.  ಈ ಸುದ್ದಿ ಇಡೀ ಗ್ರಾಮವಷ್ಟೇ ಅಲ್ಲ, ಅಕ್ಕಪಕ್ಕದ ಹಳ್ಳಿಗಳಲ್ಲಿಯೂ ಕಾಳ್ಗಿಚ್ಚಿನಂತೆ ಹರಡಿತು.  ಸುದ್ದಿ ತಿಳಿದ ಗ್ರಾಮಸ್ಥರೂ ಸೇರಿದಂತೆ ಅಕ್ಕಪಕ್ಕದ ಜನರೂ ಆ ಸ್ಥಳಕ್ಕೆ ದೌಡಾಯಿಸಿದರು.  ಮಾಹಿತಿ ಪಡೆದ ಆಲಮೇಲ ಪೊಲೀಸರು […]