ಬದುಕು ಕಟ್ಟಿಕೊಟ್ಟ ನಾಯಕನ ಕಂಚಿನ ಪ್ರತಿಮೆ ನಿರ್ಮಿಸಿ ಕೃತಜ್ಞತೆ ಸಲ್ಲಿಸಿದ ಸಂಗಾಪುರ ಎಸ್. ಎಚ್. ಗ್ರಾಮಸ್ಥರು

ವಿಜಯಪುರ: ಜನಪ್ರತಿನಿಧಿಗಳು ಎಂ. ಬಿ. ಪಾಟೀಲ ಅವರ ಮಾದರಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದರೆ ಈ ನಾಡಿನಲ್ಲಿ ಬರ ಎಂಬುದು ಇರುವುದಿಲ್ಲ ಎಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಎರೆ ಹೊಸಹಳ್ಳಿ ಶ್ರೀಮಹಾಯೋಗಿ ವೇಮನ ಸಂಸ್ಥಾನಮಠದ ಶ್ರೀ ವೇಮನಾನಂದ ಮಹಾಸ್ವಾಮೀಜಿ ಹೇಳಿದ್ದಾರೆ. ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿ ಆಧುನಿಕ ಭಗೀರಥ, ಜಲಕ್ರಾಂತಿ ಪುರುಷ, ಡಾ. ಎಂ. ಬಿ. ಪಾಟೀಲ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಾತ್ಮರ […]

ಲೋಕ್ ಪೊಲ್ ಚುನಾವಣೆ ಪೂರ್ವ ಸಮೀಕ್ಷೆ: ಬಬಲೇಶ್ವರದಲ್ಲಿ ಕಾಂಗ್ರೆಸ್ ಗೆಲುವು- ಎಂ. ಬಿ. ಪಾಟೀಲರ ಕೆಲಸ, ವರ್ಚಸ್ಸು ಪ್ರಮುಖ ಕಾರಣ

ವಿಜಯಪುರ: ಚುನಾವಣೆ ಸಮೀಕ್ಷೆಯಲ್ಲಿ ಮುಂಚೂಣಿಯಲ್ಲಿರುವ ಲೋಕ್ ಪೊಲ್ ಸಂಸ್ಥೆ ನಡೆಸಿರುವ ಚುನಾವಣೆ ಪೂರ್ವ ಸಮೀಕ್ಷೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರು ಬಬಲೇಶ್ವರ ಮತಕ್ಷೇತ್ರದಲ್ಲಿ ಈ ಬಾರಿಯೂ ಭಾರಿ ಅಂತರದಲ್ಲಿ ಗೆಲುವು ಸಾಧಿಸುವುದು ನಿಚ್ಛಳವಾಗಿದೆ. ಲೋಕ್ ಪೊಲ್ ರಾಷ್ಟ್ರೀಯ ಮಟ್ಟದಲ್ಲಿ ಸಮೀಕ್ಷೆ ನಡೆಸುವ ಮೂಲಕ ಹೆಸರು ಮಾಡಿದ್ದು, ಕರ್ನಾಟಕದ ಚುನಾವಣೆ ಪೂರ್ವ ಸಮೀಕ್ಷೆಯನ್ನೂ ನಡೆಸಿದೆ.  ಈ ಸಮೀಕ್ಷೆಯಲ್ಲಿ ಬಬಲೇಶ್ವರ ಮತಕ್ಷೇತ್ರದಲ್ಲಿ ಎಂ. ಬಿ. ಪಾಟೀಲರು ತಮ್ಮ ಬಿಗೀ ಹಿಡಿತ ಮುಂದುವರೆಸಿದ್ದಾರೆ. ಲೋಕ್ ಪೊಲ್ ಸಂಸ್ಥೆಯ […]

ಬಿ.ಎಲ್.ಡಿ.ಇ.ಎ ಎಂಜಿನಿಯರಿಂಗ್ ಕಾಲೇಜಿಗೆ ಇಂಡಿಯಾ ಬುಕ್ ಆಫ್ ರೆಕಾಡ್ಸ್ದಿಂದ ಮೆಚ್ಚುಗೆ ಪ್ರಮಾಣ ಪತ್ರ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಪ್ರಮಾಣ ಪತ್ರ ಲಭಿಸಿದೆ. ಇನ್ನೋವೆಟಮ್ ಎಂಜಿನಿಯರಿಂಗ್ ಕಂಪನಿ ನಡೆಸಿದ ಒಂದು ದಿನದ ಕಾರ್ಯಗಾರದಲ್ಲಿ  150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.  ವಿದ್ಯಾರ್ಥಿಗಳಿಗೆ ವೆಬಸೈಟ ಅಭಿವೃದ್ಧಿ ಹಾಗೂ ಹೋಸ್ಟಿಂಗ್ ಕುರಿತು ತರಭೇತಿ ಕೊಡಲಾಯಿತು.  ಶೈಕ್ಷಣಿಕ ಮತ್ತು ಉಧ್ಯಮ ಸಂಪನ್ಮೂಲ ವ್ಯಕ್ತಿಗಳು, ವಿದ್ಯಾರ್ಥಿಗಳಿಗೆ ವೆಬಸೈಟ ಅಭಿವೃದ್ಧಿ ಹೋ ಸ್ಟಿಂಗ್ ಬಗ್ಗೆ ಮಾಹಿತಿ […]

ಫೋನ್ ಕಾಲ್ ಹಿಸ್ಟರಿ ದುರಪಯೋಗ- ಪೊಲೀಸ್ ಮಾಹಾನಿರ್ದೇಶಕರಿಗೆ ಎಂ. ಬಿ. ಪಾಟೀಲ ದೂರು ಸಲ್ಲಿಕೆ

ವಿಜಯಪುರ: ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಫೋನ್ ಕರೆ ಹಿಸ್ಟರಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಈ ಕುರಿತು ಎಂ. ಬಿ. ಪಾಟೀಲ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು (ಐ ಜಿ ಪಿ) ಅವರಿಗೆ ಬೆಂಗಳೂರಿನಲ್ಲಿ ನೀಡಿರುವ ದೂರಿನ ಪ್ರತಿ ವಿಜಯ ಕರ್ನಾಟಕ ವೆಬ್ ಗೆ […]

ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ನೂತನ ವಾಹನಗಳ ವಿತರಿಸಿದ ಸಚಿವ ಗೋವಿಂದ ಕಾರಜೋಳ

ವಿಜಯಪುರ: ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧೀನದಲ್ಲಿ ಬರುವ ವಲಯ, ವೃತ್ತ ವಿಭಾಗ ಹಾಗೂ ಉಪ ವಿಭಾಗ ಕಚೇರಿಗಳಿಗೆ ಮತ್ತು ಪುನರ್ವಸತಿ ಮತ್ತು ಪುನರ್‍ನಿಮಾಣ ಹಾಗೂ ಭೂಸ್ವಾಧೀನಾಧಿಕಾರಿಗಳ ಕಚೇರಿಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ನೂತನ ಬೊಲೆರೋ ವಾಹನಗಳನ್ನು ವಿತರಿಸಿದರು. ನಗರದ ಅಥಣಿ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ನಡೆದ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಕಾರ್ಯಕ್ರಮಕ್ಕೆ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಾನಾ ಅಧಿಕಾರಿಗಳಿಗೆ ವಾಹನಗಳ ಕೀಯನ್ನು […]

ಪಂಚಮಸಾಲಿ ಮೀಸಲಾತಿ ಹೋರಾಟ: ಬೆಂಗಳೂರಿನಲ್ಲಿ ಧರಣಿ ನಿರತ ಶ್ರೀಗಳನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ ಎಂ. ಬಿ. ಪಾಟೀಲ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಕೂಡಲಸಂಗಮ ಶ್ರೀಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಫ್ರೀಡಂ ಪಾರ್ಕಿನಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ 52 ದಿನ ಪೂರೈಸಿದ್ದು, ಎಂ. ಬಿ. ಪಾಟೀಲ ಅವರು ಶ್ರೀಗಳನ್ನು ಭೇಟಿ ಮಾಡಿದರು. ಅಲ್ಲದೇ, ಹೋರಾಟಕ್ಕೆ ತಮ್ಮ ಬೆಂಬಲ […]

ಪಂಚಮಸಾಲಿ ಹೋರಾಟ: ಮೀಸಲಾತಿಗೆ ಆಗ್ರಹಿಸಿ ಬೆಂಗಳೂರು, ವಿಜಯಪುರ ಸೇರಿ ನಾನಾ ಕಡೆ ರಸ್ತೆ ತಡೆ

ವಿಜಯಪುರ: 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಹೋರಾಟ 50 ದಿನ ಪೂರೈಸಿದ್ದು, ರಾಜ್ಯದ ನಾನಾ ಕಡೆ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಹೆದ್ದಾರಿ ತಡೆ ಬೆಂಗಳೂರಿನಲ್ಲಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಂಗಳೂರು- ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಯಿತು.  ಸಮಾಜದ ಮುಖಂಡರೊಂದಿಗೆ ರಸ್ತೆಯಲ್ಲಿಯೇ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಡಿಕೆ ಈಡೇರಿಸುವಂತ ಆಗ್ರಹಿಸಿದರು. ವಿಜಯಪುರದಲ್ಲಿಯೂ ಪ್ರತಿಭಟನೆ ಇತ್ತ […]

ರಾಜ್ಯ ಸರಕಾರಿ ನೌಕರರಿಗೆ ಮೂಲ ವೇತನದ ಶೇ. 17 ಮಧ್ಯಂತರ ಪರಿಹಾರ – ಸಿಎಂ ಘೋಷಣೆ- ಮೂಲ ವೇತನ ಈಗ ಎಷ್ಟು ಹೆಚ್ಚಳವಾಗುತ್ತೆ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರಕಾರಿ ನೌಕರರ ಮೂಲ ವೇತನದ ಶೇ. 17 ರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ. 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು. ಸಮಿತಿ ರಚನೆ ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ […]

ಮಾಧ್ಯಮ ಅಕಾಡೆಮಿ ನಿಯಮಾವಳಿ ತಿದ್ದುಪಡಿಗೆ ಇಂದು ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಿಗೆ ಪ್ರಾತಿನಿಧ್ಯ ಒದಗಿಸಲು ಅಕಾಡೆಮಿಯ ನಿಯಮಾವಳಿಗಳಿಗೆ ತಿದ್ದುಪಡಿಗೆ ಸಮಿತಿ ರಚಿಸಲು ಕೂಡಲೇ ಆದೇಶ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಕಾಡೆಮಿಯಿಂದ ಆಗುತ್ತಿರುವ ತಾರತಮ್ಯದ ವಿರುದ್ಧ ದನಿ ಎತ್ತಿರುವ ಉತ್ತರ ಕರ್ನಾಟಕದ ಪತ್ರಕರ್ತರ ನಿಯೋಗವು ಇಂದು ಬೊಮ್ಮಾಯಿಯವರನ್ನು ಭೇಟಿ ಮಾಡಿದ ವೇಳೆ ಮನವಿ ಸ್ವೀಕರಿದ ಅವರು, ಉತ್ತರ ಕರ್ನಾಟಕಕ್ಕೆ ಮಾಧ್ಯಮ ಅಕಾಡೆಮಿಯಿಂದ ಮೊದಲಿನಿಂದಲೂ ಅನ್ಯಾಯವಾಗುತ್ತಿದೆ.  ಇಲ್ಲಿನ ಪತ್ರಕರ್ತರು ಈಗಲಾದರೂ ಎಚ್ಚೆತ್ತಿರುವುದು ಸ್ವಾಗತಾರ್ಹ.  […]

ಕಾನಿಪ ಪತ್ರಕರ್ತರ ದತ್ತಿ ನಿಧಿಗೆ ರೂ. 1.10 ಲಕ್ಷ ಹಣ ನೀಡಿದ ಹಿರಿಯ ಪತ್ರಕರ್ತ ಟಿ. ಕೆ. ಮಲಗೊಂಡ- ರಾಜ್ಯಾಧ್ಯಕ್ಷ ತಗಡೂರ ಅವರಿಂದ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) ದತ್ತಿ ನಿಧಿಗೆ ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ಟಿ. ಕೆ. ಮಲಗೊಂಡ ಅವರು ರೂ. 1.10ಲಕ್ಷ ಹಣ ನೀಡಿದ್ದಾರೆ.  ಬೆಂಗಳೂರಿನಲ್ಲಿ ಸಂಘದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರಿಗೆ ದತ್ತಿ ನಿಧಿ ಸ್ಥಾಪಿಸಲು ಮಲಗೊಂಡ ಅವರು ಹಣ ನೀಡಿದರು.  ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಮಲಗೊಂಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಅಪರಾಧಕ್ಕೆ ಸವಾಲು ಪತ್ರಿಕೆಯ ಸಂಪಾದಕರಾದ ಟಿ. ಕೆ. ಮಲಗೊಂಡ ಅವರು, ಪ್ರತಿ ವರ್ಷ ಕೆಯುಡಬ್ಲ್ಯೂಜೆ ಪ್ರಶಸ್ತಿ ಪ್ರದಾನ ಮಾಡುವ […]