ಫೆ. 4, 5 ರಂದು ಕಾನಿಪ ರಾಜ್ಯ ಸಮ್ಮೇಳನ- ಸಿಎಂ ಉದ್ಘಾಟನೆ- ಸಂಘದ ಜಿಲ್ಲಾಧ್ಯಕ್ಷ ಸಂಗಮೇಟ ಟಿ. ಚೂರಿ

ವಿಜಯಪುರ: ಬಸವನಾಡು ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯಮಟ್ಟದ ಸಮ್ಮೇಳನ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 4ರಂದು ಬೆ. 10.30ಕ್ಕೆ ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸಲಿದ್ದಾರೆ.  ಸಚಿವ ಗೋವಿಂದ ಕಾರಜೋಳ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಸಚಿವ ಮುರುಗೇಶ ನಿರಾಣಿ ವ್ಯಂಗ್ಯಚಿತ್ರ ಪ್ರದರ್ಶನಕ್ಕೆ ಚಾಲನೆ […]

ವಿಜಯಪುರ ಕಾನಿಪ ಸಮ್ಮೇಳನಕ್ಕೆ ಉದ್ಘಾಟನೆಗೆ ಖಂಡಿತವಾಗಿಯೂ ಬರುತ್ತೇನೆ- ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಬಸವನಾಡು ವಿಜಯಪುರದಲ್ಲಿ ಫೆ. 4 ಮತ್ತು 5 ರಂದು ನಡೆಯಲಿರುವ 37 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಉದ್ಘಾಟನೆಗೆ ಖಂಡಿತವಾಗಿಯೂ ಬರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೋಮ್ಮೆ ಸ್ಪಷ್ಟಪಡಿಸಿದ್ದಾರೆ.  ಸಮ್ಮೇಳನದ ಆಮಂತ್ರಣ ಪತ್ರಿಕೆ ನೀಡಿ ಅಧಿಕೃತ ಆಮಂತ್ರಣ ನೀಡಲು ಹುಬ್ಬಳ್ಳಿಗೆ ಆಗಮಿಸಿ್ದ್ದ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಟಿ. ಚೂರಿ ನೇತೃತ್ವದ ಪತ್ರಕರ್ತರ ತಂಡಕ್ಕೆ ಸಿಎಂ ಮತ್ತೋಮ್ಮೆ ಭರವಸೆ ನೀಡಿದರು.   ನಗರದ ಆದರ್ಶ ನಗರದಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ತಮ್ಮನ್ನು […]

ಫೆ. 4, 5 ರಂದು ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನ- ಯಶಸ್ಸಿಗೆ ಸಹಕರಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮನವಿ

ವಿಜಯಪುರ: ಬಸವನಾಡು ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕಾರ್ಯನಿರತ ಪತ್ರಕರ್ತರ 37ನೇ ರಾಜ್ಯ ಸಮ್ಮೇಶನದ ಯಶಸ್ಸಿಗೆ ಎಲ್ಲ ಪತ್ರಕರ್ತರು, ಜಿಲ್ಲೆಯ ನಾಗರಿಕರು ಸಹಕರಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮನವಿ ಮಾಡಿದ್ದಾರೆ.  . ನಗರದ ಜಿ. ಪಂ. ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಗಡಿ ಭಾಗದಲ್ಲಿ ನಡೆಯುವ ಈ ಸಮ್ಮೇಳನ ಹಲವು ವೈಶಿಷ್ಠ್ಯಗಳೊಂದಿಗೆ ಐತಿಹಾಸಿಕವಾಗಿ ನಡೆಸಲು ಎಲ್ಲರೂ ಕೈಜೋಡಿಸಬೇಕು.  ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸುವ ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಅಚ್ಚುಕಟ್ಟಾಗಿ […]

ಬಸವನಾಡಿನಲ್ಲಿ ಫೆ. 4, 5 ರಂದು ಪತ್ರಕರ್ತರ ರಾಜ್ಯಮಟ್ಟಡ ಸಮ್ಮೇಳನ- ಸಿಎಂ ಮೌಖಿಕವಾಗಿ ಒಪ್ಪಿಗೆ- ಶಿವಾನಂದ ತಗಡೂರು

ಬೆಂಗಳೂರು: ಜ. 9 ಮತ್ತು 10 ರಂದು ಬಸವನಾಡು ವಿಜಯಪುರದಲ್ಲಿ ನಡೆಯಬೇಕಿದ್ದ ಕಾರ್ಯನಿರತ ಪತ್ರಕರ್ತರ 37ನೇ ಸಮ್ಮೇಳನವನ್ನು ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.  ಈಗ ಈ ಸಮ್ಮೇಳನವನ್ನು ಫೆ. 4 ಮತ್ತು 5 ರಂದು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆ.   ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿರುವ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಹಾಗೂ ಪದಾಧಿಕಾರಿಗಳು […]

ಬಸವನಾಡಿನಲ್ಲಿ ಚಳಿಗಾಳಿ ಮುಂದುವರಿಕೆ- ಬೆಚ್ಚಗಿರಲು ರಾಷ್ಟ್ರೀಯ ವಿಪತ್ತು ನಿರ್ಹವಣೆ ಪ್ರಾಧಿಕಾರ ಸೂಚನೆ- ವಿಜಯಪುರ ಜಿಲ್ಲಾಡಳಿತ

ವಿಜಯಪುರ: ಬಸವನಾಡು ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಛಳಿಗಾಳಿ ಮುಂದುವರೆಯಲಿದೆ.  ಸಾರ್ವಜನಿಕರು ಬೆಚ್ಚಗಿರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನೇವರಿ 9 ರಂದು ವಿಜಯಪುರದಲ್ಲಿ 6.5 ಡಿ. ಸೆ. ರಾಜ್ಯದಲ್ಲಿಯೇ ಅತೀ ಕಡಿಮೆ ಉಷ್ಣಾಂಶ ದಾಖಲಾಗಿತ್ತು.  ಈಗ ಬಾಗಲಕೋಟೆಯಲ್ಲಿ ವಿಜಯಪುರಕ್ಕಿಂತಲೂ ಕಡಿಮೆ ಅಂದರೆ 6 ಡಿ. ಸೆ. ತಾಪಮಾನ ದಾಖಲಾಗಿದೆ.  ಮುಂದಿನ 24 ಗಂಟೆಗಳಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಶೀತ ಮಾರುತಗಳು ಮುಂದುವರೆಯಲಿವೆ ಎಂದು ರಾಷ್ಟ್ರೀಯ ವಿಪತ್ತು […]

ಬಸವ ನಾಡಿನ ಸಂತನ ದರ್ಶನಕ್ಕೆ ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ನಡೆದಾಡಿದ ದೇವರ ಭಕ್ತಸಾಗರ

ವಿಜಯಪುರ: ನಡೆದಾಡುವ ದೇವರೆಂದೆ ಹೆಸರಾಗಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ದೇಹತ್ಯಾಗ ಮಾಡಿದ್ದು, ಅವರ ಅಂತಿಮ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಜ್ಞಾನಯೋಗಾಶ್ರಮದಲ್ಲಿ ಸೋಮವಾರ ಸಂಜೆ 6ಕ್ಕೆ ಇಹಲೋಕ ತ್ಯಜಿಸಿದ ಶ್ರೀಗಳ ಅಂತಿಮ ದರ್ಶನಕ್ಕೆ ಬೆಳಗಿನ ಜಾವ 4.30ರ ವರೆಗೂ ಅವಕಾಶ ಕಲ್ಪಿಸಲಾಗಿತ್ತು.  ನಂತರ ತೆರೆದ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರವನ್ನು ವಿಜಯಪುರದ ಸೈನಿಕ ಶಾಲೆಗೆ ಶಿಫ್ಟ್ ಮಾಡಲಾಗಿದೆ.  ಹಾರಗಳಿಂದ ಅಲಂಕೃತವಾಗಿದ್ದ ತೆರೆದ ವಾಹನದಲ್ಲಿ ಲಿಂಗಾಯಿತ ಪದ್ಧತಿಯಂತೆ ಶ್ರೀಗಳ ಪಾರ್ಥಿವ ಶರೀರವನ್ನು ಕೂಡಿಸಿ ಸಕಲ ಸರಕಾರಿ […]

ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ- ವಿಜಯಪುರ ಕಾನಿಪ ಸಮ್ಮೇಳನ ಮುಂದೂಡಿಕೆ

ವಿಜಯಪುರ: ನಡೆದಾಡುವ ದೇವರು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಜ. 9 ಮತ್ತು 10 ರಂದು ನಗರದಲ್ಲಿ ನಡೆಯಬೇಕಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಈ ಕುರಿತು ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ ಎಂದು ಕಾನಿಪ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಏರುಪೇರಾಗಿರುವ ಕಾರಣ ವಿಜಯಪುರದಲ್ಲಿ ಜನವರಿ 9 ಮತ್ತು […]

Doni Flood: ಡೋಣಿ ನದಿ ಪ್ರವಾಹ ಹಾನಿ- 15 ದಿನಗಳೊಳಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ಅವೈಜ್ಞಾನಿಕವಾಗಿ ಡೋಣಿ ನದಿಗೆ ಬ್ರಿಡ್ಜ್ ನಿರ್ಮಿಸಿರುವುದರಿಂದ ಪ್ರತಿವರ್ಷ ಪ್ರವಾಹದಿಂದ ಡೋಣಿ ನದಿ ತೀರದಲ್ಲಿರುವ ಗ್ರಾಮಗಳಿಗೆ ನೀರು ಹರಿದು ಬೆಳೆ ನಾಶವಾಗಿರುವುದರಿಂದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ 15 ದಿನಗಳೊಳಗೆ ಸರ್ವೇ ಕಾರ್ಯ ನಡೆಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಡೋಣಿ ನದಿ ಪಾತ್ರದಲ್ಲಿರುವ ಗ್ರಾಮಗಳಿಗೆ ಪ್ರವಾಹದಿಂದ ಹಾನಿಯಾದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಪ್ರವಾಹದಿಂದ ಡೋಣಿ ಪಾತ್ರದ […]

ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೂ ನಾಗರಿಕತೆ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ- ಬಸನಗೌಡ ಪಾಟೀಲ

ವಿಜಯಪುರ: ಕನ್ನಡ ದಿನಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೂ ರಾಜ್ಯದಲ್ಲಿ ನಾಗರಿಕತೆಯ ಬೆಳವಣಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿವೆ ಎಂದು ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ನಿದೇಶಕ ಬಸನಗೌಡ(ರಾಹುಲ) ಎಂ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ವಿರಕ್ತ ಮಠದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭ‌‌ ಉದ್ಘಾಟಿಸಿ ಮಾತನಾಡಿದರು. ಕಾನಿಪ ತಿಕೋಟಾ ತಾಲೂಕು ಉದ್ಘಾಟನೆ ಮಾಡಿದುವುದು ಸಂತಸ ತಂದಿದೆ‌. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಪತ್ರಕರ್ತರು ಸಮಾಜಮುಖಿ ಕೆಲಸಗಳ […]

ರೈತನ ಮಗ ವೈದ್ಯನಾಗುವ ಕನಸು ನನಸಾಗಲು ನೆರವಾದ ಎಂ. ಬಿ. ಪಾಟೀಲ- ಎಂಬಿಬಿಎಸ್ ಪ್ರವೇಶಕ್ಕೆ ಆರ್ಥಿಕ ನೆರವು

ವಿಜಯಪುರ: ಬ್ಯಾಂಕ್ ನಿಂದ ಸಾಲವೂ ಸಿಗದೇ, ವೈದ್ಯನಾಗುವ ಕನಸು ಕೈಚೆಲ್ಲಿ ಕುಳಿತಿದ್ದ ಬಡರೈತನ ಮಗನಿಗೆ ಆರ್ಥಿಕ ನೆರವು ನೀಡುವ ಮೂಲಕ ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಮತ್ತೊಮ್ಮೆ ಸಹಾಯ ಹಸ್ತ ಚಾಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್ ಗ್ರಾಮದ ರಾಹುಲ ಮುರೆಗೇಪ್ಪ ಕುರುಬರ ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಬೆಂಗಳೂರಿನ ಈಸ್ಟ್ ಪಾಯಿಂಟ್ ಮೆಡಿಕಲ್ ಖಾಸಗಿ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಸೀಟ್ ಪಡೆದಿದ್ದರು. ಆದರೆ, ಪ್ರವೇಶಕ್ಕೆ ಹಣ ಹೊಂದಿಸಲು ಪ್ರಯತ್ನಿಸಿದರೂ […]