MBP Congress Rajayuga: ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ- ಅಭಿವೃದ್ಧಿಯ ರಾಜಯುಗ ಆರಂಭವಾಗಲಿದೆ- ಎಂ. ಬಿ. ಪಾಟೀಲ

ವಿಜಯಪುರ: ಮುಂದಿನ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಯ ರಾಜಯೋಗ ಆರಂಭವಾಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಹೇಳಿದರು. ತಿಕೋಟಾ ತಾಲೂಕಿನ ಕನಮಡಿಯಲ್ಲಿ ಬಳಿಯ ಧರಿದೇವರ ದೇವಸ್ಥಾನದ ಹತ್ತಿರ ರೂ.1.25 ಕೋಟಿ ವೆಚ್ಚದ ಬಾಂದಾರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ವಿಜಯಪುರ ಜಿಲ್ಲೆಯ ರೈತರಿಗೆ ಸಾಕಷ್ಟು ಅನಕೂಲವಾಗಿದೆ. ಗಡಿ ಭಾಗದ ಜನ ಗುಳೆ ಹೋಗುವುದನ್ನು ಬಿಟ್ಟು […]

Arasiddhi Lokayukta SP: ರಾಯಚೂರು ಲೋಕಾಯುಕ್ತ ಎಸ್ಪಿಯಾಗಿ ಡಾ. ರಾಮ ಲಕ್ಷ್ನಣಸಾ ಅರಸಿದ್ಧಿ ಅಧಿಕಾರ ಸ್ವೀಕಾರ

ರಾಯಚೂರು: ರಾಯಚೂರು ಲೋಕಾಯುಕ್ತ ನೂತನ ಎಸ್ಪಿಯಾಗಿ ಡಾ. ರಾಮ ಲಕ್ಷ್ನಣಸಾ ಅರಸಿದ್ಧಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮುಂಚೆ ವಿಜಯಪುರ ಡಿವೈಎಸ್ಪಿ, ಬೆಳಗಾವಿ ಎಎಸ್ಪಿ ಮತ್ತು ವಿಜಯಪುರ ಎಎಸ್ಪಿಯಾಗಿ ಅವರು ಸೇವೆ ಸಲ್ಲಿಸಿದ್ದಾರೆ. ವಿಜಯಪುರ ಡಿವೈಎಸ್ಪಿಯಾಗಿದ್ದಾಗ ಎಎಸ್ಪಿಯಾಗಿ ಅವರು ಬಡ್ತಿ ಹೊಂದಿದ್ದರು. ಬಳಿಕ ವರ್ಗಾವಣೆಯಾಗಿದ್ದರು. ಎಎಸ್ಪಿಯಾಗಿ ವಿಜಯಪುರದಲ್ಲಿ ಸುಮಾರು ಮೂರು ವರ್ಷ ಸೇವೆ ಸಲ್ಲಿಸಿದ್ದರು. ವಿಜಯಪುರ ಎಎಸ್ಪಿಯಾಗಿರುವಾಗಲೇ ಅವರು ಐಪಿಎಸ್ ಅಧಿಕಾರಿಯಾಗಿ ಬಡ್ತಿ ಪಡೆದಿದ್ದರು. ನಂತರ ವಿಜಯಪುರದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದರು. ಈಗ ಅವರು ರಾಯಚೂರು ಲೋಕಾಯುಕ್ತ ಎಸ್ಪಿಯಾಗಿ […]

Flagship Event: ಬಸವ ನಾಡಿನಲ್ಲಿ ನ. 20, 21ರಂದ ಮೊದಲ ಬಾರಿಗೆ ಉಕ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ

ವಿಜಯಪುರ: ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಐಇಇಇ(ಇನಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್) ಫ್ಲ್ಯಾಗಶಿಪ್ ಇವೆಂಟ್ ಅಂತಾರಾಷ್ಟ್ರೀಯ ಸಮ್ಮೇಳನ ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನ. 20 ಮತ್ತು 21ರಂದು ನಡೆಯಲಿದೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ, ಸಂಶೋಧನಾ ವಿಜ್ಞಾನಿಗಳು, ಎಂಜಿನಿಯರ್ಸ್‍ಗಳು ಮತ್ತು ಸಂಶೋಧನೆಕಾರರಿಗೆ ಅವರ ಇತ್ತೀಚಿನ ಸಂಶೋಧನೆ […]

Marriage At 75: ಇಳಿ ವಯಸ್ಸಿನಲ್ಲಿ ಪತ್ನಿಯ ಅಕ್ಕನನ್ನು ವರಿಸಿದ ಮಾಜಿ ಮೇಯರ್- ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳಿಂದ ಶುಭ ಹಾರೈಕೆ

ಹುಬ್ಬಳ್ಳಿ: ಮದುವೆ ಎಂದರೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತವೆ ಎಂಬ ಮಾತಿದೆ.  ಇತ್ತೀಚೆಗೆ ಕೇರಳದ ತ್ರಿಶೂರಿನಲ್ಲಿ 10ನೇ ತರಗತಿ ಸಹಪಾಠಿಗಳಿಬ್ಬರು ವಾಟ್ಸಾಪ್ ಗ್ರುಪ್ ನಲ್ಲಿದ್ದ ಸ್ನೇಹಿತರ ಒತ್ತಾಸೆಯ ಮೇರೆಗೆ 35 ವರ್ಷಗಳ ನಂತರ ಮದುವೆಯಾಗಿದ್ದರು.  ಈ ಘಟನೆ ಇನ್ನೂ ನೆನಪಿರುವಾಗಲೇ, ಈಗ ಮತ್ತೋಂದು ವಿಶೇಷ ಮದುವೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.   ಇದೀಗ 75ನೇ ಇಳಿ ವಯಸ್ಸಿನ ಬಿಜೆಪಿ ಮುಖಂಡ ಮತ್ತು ಮಾಜಿ ಮೇಯರ್ ಮದುವೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.  ಅದೂ ಕೂಡ ಹೆಂಡತಿಯ ಅಕ್ಕನನ್ನು ಮದುವೆಯಾಗಿದ್ದು ವಿಶೇಷವಾಗಿದ್ದರೆ, […]

KUWJ Conference: ಕಾನಿಪ‌ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಡಿ. 23, 24 ದಿನಾಂಕ‌ನಿಗದಿ-ಬಸವ ನಾಡಿನಲ್ಲಿ ಸಿಎಂ‌ ಉದ್ಘಾಟನೆ

ವಿಜಯಪುರ: ಬಹು ನಿರೀಕ್ಷಿತ ಕಾರ್ಯನಿರತ ಪತ್ರಕರ್ತರ ಸಂಘದ(ಕಾನಿಪ) ರಾಜ್ಯ ಮಟ್ಟದ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಡಿ.23 ಮತ್ತು 24 ರಂದು ವಿಜಯಪುರ ನಗರದ ಕಂದಗಲ‌ ಹಣಮಂತರಾಯ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ಡಿ. 23 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದು‌ ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಡಗೂರ ಮಾಹಿತಿ ನೀಡಿದ್ದಾರೆ ಎಂದು ಕಾನಿಪ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ತಿಳಿಸಿದ್ದಾರೆ.

KUWJ Conference: ಕಾನಿಪ‌ ರಾಜ್ಯ ಸಮ್ಮೇಳನ: ದಿನಾಂಕ ನಿಗದಿ ಮಾಡಿ- ಡಾ. ದಾನಮ್ಮನವರ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆಯಲಿರುವ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನ ದಿನಾಂಕವನ್ನು ಬೇಗನೆ ನಿಗದಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ‌. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶ, ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ಅಶೋಕ ಯಡಹಳ್ಳಿ ನೇತೃತ್ವದ ನಿಯೋಗ ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಅದಾಲತ್ […]

Conference Preparation: ಬಸವ ನಾಡಿನಲ್ಲಿ ಪತ್ರಕರ್ತರ ರಾಜ್ಯಮಟ್ಟದ 37ನೇ ಸಮ್ಮೇಳನದ ಪೂರ್ವಭಾವಿ ಸಭೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆಯಲಿರುವ ಪತ್ರಕರ್ತರ ರಾಜ್ಯಮಟ್ಟದ 37ನೇ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಂಘದ ಎಲ್ಲ ಸದಸ್ಯರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದ್ದಾರೆ.  ನಗರದ ವನಶ್ರೀ ಸಂಸ್ಥಾನ ಮಠದ ಸಭಾಭವನದಲ್ಲಿ ನಡೆದ ಸಮ್ಮೇಳನದ ಪೂರ್ವಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸಮ್ಮೇಳನಕ್ಕೆ ದೊಡ್ಡಮಟ್ಟದ ಸಿದ್ಧತೆ, ವ್ಯವಸ್ಥೆ ಆಗಬೇಕಾಗುತ್ತದೆ.  ಸಮ್ಮೇಳನವನ್ನು ಗಂಭೀರವಾಗಿ ಪರಿಗಣಿಸಿ ಸಂಘದ ಪ್ರತಿಯೊಬ್ಬ ಸದಸ್ಯರೂ ಅದರ ಭಾಗವಾಗಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು.  ಎಲ್ಲರೂ […]

Irrigation Karjol: ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಭೇಟಿಯಾಗಿ ರಾಜ್ಯ ನೀರಾವರಿ ಯೋಜನೆಗಳಿಗೆ ಅನುಮೋದನೆ ಕೋರಿದ ಸಚಿವ ಕಾರಜೋಳ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಜಲ ಸಂಪನ್ಮೂಲ ಸಚಿವ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ ಅವರಿಗೆ ಮನವಿ ಮಾಡಿದ್ದಾರೆ. ನವದಹೆಲಿಯಲ್ಲಿ ಕೇಂದ್ರ ಸಚಿವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಂಜೆ ನಡೆದ ಮಹತ್ವದ ಸಭೆಯಲ್ಲಿ ಕಾರಜೋಳ ಈ ಮನವಿ ಮಾಡಿದರು. ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ […]

AP Group: ಎಪಿ ಗ್ರುಪ್ ವತಿಯಿಂದ ಬಿ. ವೈ. ವಿಜಯೇಂದ್ರ ಜನ್ಮದಿನ ಆಚರಣೆ

ವಿಜಯಪುರ: ಎಪಿ ಗ್ರುಪ್ ವತಿಯಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಜನ್ಮದಿನವನ್ನು ಬಸವ ನಾಡು ವಿಜಯಪುರದಲ್ಲಿ ಆಚರಿಸಲಾಯಿತು. ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ಇರುವ ಹನುಮಂತ ದೇವರ ದೇವಸ್ಥಾನದಲ್ಲಿ ಎಪಿ ಗ್ರುಪ್ ಅಧ್ಯಕ್ಷ ಮತ್ತು ವಿಜಯಪುರ ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಈರಣ್ಣ ಪಟ್ಟಣಶೆಟ್ಟಿ, ರಾಜ್ಯದ ಜನಪ್ರೀಯ ಮತ್ತು ಯುವಕರ ಕಣ್ಮಣಿ ನಾಯಕಾರಿಗಿರುವ […]

Two Earthquakes: ಬಸವ ನಾಡಿನಲ್ಲಿ ಮತ್ತೆ ಎರಡು ಬಾರಿ ಭೂಕಂಪನ- ಎಲ್ಲಿ? ಯಾವಾಗ ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಉಂಟಾಗಿದೆ.  ಎರಡು ದಿನ ಈ ಭೂಕಂಪನ ಅನುಭವಕ್ಕೆ ಬಂದಿದೆ.  ಶುಕ್ರವಾರ ರಾತ್ರಿ 9.47ಕ್ಕೆ ಈ ಭೂಕಂಪನ ಸಂಭವಿಸಿದ್ದು, ವಿಜಯಪುರ ನಗರ ಮತ್ತು ಮನಗೂಳಿ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ. ಮನಗೂಳಿಯಿಂದ ನೈರುತ್ಯ ಭಾಗದಲ್ಲಿ 3.9 ಕಿ. ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.  ರಿಕ್ಚರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪನ ಇದಾಗಿದ್ದು, ಭೂಮಿ 10 ಕಿ. ಮೀ. ಆಳದಲ್ಲಿ ಈ ಕಂಪನ ಉಂಟಾಗಿದೆ. ನಸುಕಿನ ಜಾವ ಮತ್ತೆ […]