ಗ್ರಾ ಪಂ ಸದಸ್ಯರ ಗೌರವ ಧನ ಹೆಚ್ಚಿಸುವವರೆಗೆ ಶಾಸಕರ ವೇತನ ಹೆಚ್ಚಳ ಹಣ ತಿರಸ್ಕರಿಸುವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮ ಪಂಚಾಯಿತಿ(Gram Panchayati) ಸದಸ್ಯರ ಗೌರವ ಧನ(Honourarium) ಹೆಚ್ಚಿಸುವ ವರೆಗೆ ಶಾಸಕರ(MLA) ವೇತನ ಹೆಚ್ಚಳ ತಿರಸ್ಕರಿಸುವೆ ಎಂದು ವಿಜಯಪುರ- ಬಾಗಲಕೋಟೆ (Vijayapura-Bagalakote)ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ (Congress MLC) ಸುನಿಲಗೌಡ ಪಾಟೀಲ(Sunilgouda Patil) ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಸದನದಲ್ಲಿ ನಾಲ್ಕು ಬಾರಿ ಒತ್ತಾಯ ಮಾಡಿದ್ದೇನೆ. ಆದರೆ, ಕಳೆದ ಅಧಿವೇಶನದಲ್ಲಿ ಸರಕಾರ ಈ ಕುರಿತು ನಿರಾಸಕ್ತಿ ತೋರಿಸಿದೆ. ತಾವು ಕೇಳಿದ ಪ್ರಶ್ನೆಗೆ ಈ […]

ಕೆಳದಿ ರಾಣಿ ಚೆನ್ನಮ್ಮಳ ಪಟ್ಟಾಭಿಷೇಕದ 350ನೇ ವರ್ಷಾಚರಣೆ- ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಪುಷ್ಪನಮನ

ಬೆಂಗಳೂರು: ಕೆಳದಿ ರಾಣಿ ಚೆನ್ನಮ್ಮಳ ಪಟ್ಟಾಭಿಷೇಕದ 350 ನೇ ವರ್ಷಾಚರಣೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.   ಈ ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಳದಿ ರಾಣಿ ಚೆನ್ನಮ್ಮಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ ನಿರಾಣಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಮತ್ತು ಪಂಚಮಸಾಲಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕಿ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೊಬೈಲ್ ಟವರ್‌ಗಳಿಂದ ಅಪಾಯಕಾರಿ ವಿಕಿರಣ ಹೊರಹೊಮುತ್ತದೆ ಎನ್ನುವುದು ತಪ್ಪು ಕಲ್ಪನೆ: ರಾಕೇಶಕುಮಾರ ದುಬೆ

ಬೆಂಗಳೂರು: ನಗರದ ಎಲ್ಲಾ ಮೊಬೈಲ್ ಟವರ್‌ಗಳು ದೂರ ಸಂಪರ್ಕ ಇಲಾಖೆ ನಿಯಮಗಳಿಗೆ ಒಳಪಟ್ಟಿದ್ದು, ಯಾವ ಟವರ್‌ಗಳೂ ಅಪಾಯಕಾರಿ ವಿಕಿರಣ ಹೊರಸೂಸುತ್ತಿಲ್ಲ ಎಂದು ಕರ್ನಾಟಕ ಲೈಸನ್ಸ್ ಸರ್ವಿಸ್ ಏರಿಯಾ(ಎಲ್‌ಎಸ್‌ಎ) ಸಲಹೆಗಾರರಾದ ರಾಕೇಶ ಕುಮಾರ ದುಬೆ ತಿಳಿಸಿದ್ದಾರೆ. ಕೇಂದ್ರ ದೂರ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಲೈಸನ್ಸ್ ಸರ್ವಿಸ್ ಏರಿಯಾ(ಎಲ್‌ಎಸ್‌ಎ) ಬೆಂಗಳೂರಿನಲ್ಲಿ ಸೆಕ್ಯೂಲಾರ್ ಟವರ್‌ಗಳಿಂದ ಹೊರಹೊಮ್ಮುವ ವಿಕಿರಣಗಳ ಬಗ್ಗೆ ತಪ್ಪು ತಿಳುವಳಿಕೆಯ ಕುರಿತು ಜಾಗೃತಿ ನೀಡುವ ವರ್ಚುವಲ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ರಾಕೇಶ ಕುಮಾರ, ಬಹುತೇಕರಲ್ಲಿ ಮೊಬೈಲ್ […]

ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ.100 ಕೋ. ಅನುದಾನ ಮೀಸಲಿಡಿ- ಶಾಸಕ ಯಶವಂತರಾಯಗೌಡ ಪಾಟೀಲ ಸಿಎಂ ಗೆ ಮನವಿ

ವಿಜಯಪುರ: ಬಜೆಟ್ ನಲ್ಲಿ ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ. 100 ಕೋ. ಹಣ ಮೀಸಲಿಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನ ಮಾಳಿ-ಮಾಲಗಾರ ಸಮುದಾಯದವರಿದ್ದಾರೆ.  ಈ ಸಮುದಾಯ ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿದೆ.  ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಸಮಾಜ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ […]

ವಸತಿ ಯೋಜನೆಗಳಡಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬ್ಲಾಕ್ ತೆರವುಗೊಳಿಸಿ- ಎಂ ಎಲ್ ಸಿ ಸುನೀಲಗೌಡ ಪಾಟೀಲರಿಂದ ಸಚಿವ ಸೋಮಣ್ಣಗೆ ಪತ್ರ

ವಿಜಯಪುರ: ನಾನಾ ವಸತಿ ಯೋಜನೆಗಳಡಿ(Housing Schemes) ಹೆಚ್ಚುವರಿಯಾಗಿ ಮಂಜೂರಾಗಿರುವ ಮನೆಗಳ ನಿರ್ಮಾಣವನ್ನು ಬ್ಲಾಕ್(Block) ಮಾಡಲಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟೆ(Vijayapura – Bagalakote) ಸ್ಥಳೀಯ ಸಂಸ್ಥೆಗಳ(Local Body) ವಿಧಾನ ಪರಿಷತ ಸದಸ್ಯ(MLC) ಸುನೀಲಗೌಡ ಪಾಟೀಲ(Sunilgouda) ಅವರು ವಸತಿ ಸಚಿವ(Minister) ವಿ. ಸೋಮಣ್ಣ(V Somanni) ಅವರಿಗೆ(Letter) ಪತ್ರ ಬರೆದಿದ್ದಾರೆ.   ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ, ಬಸವ ವಸತಿ ಯೋಜನೆ, ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ ಮತ್ತು ಇಂದಿರಾ ಆವಾಸ ಯೋಜನೆಗಳಡಿ ವಿಜಯಪುರ […]

1995ರ ನಂತರದ ಶಾಲೆಗಳಿಗೆ ಅನುದಾನ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿ- ಎಂಎಲ್ಸಿ ಅರುಣ ಶಹಾಪುರ ಮತ್ತೀತರರಿಂದ ಸಿಎಂ ಭೇಟಿ

ಬೆಂಗಳೂರು: ಬಿಜೆಪಿ(BJP) ಶಿಕ್ಷಕ(Teacher) ಮತ್ತು ಪದವೀಧರ(Graduate) ಕ್ಷೇತ್ರದ ವಿಧಾನ ಪರಿಷತ್ತಿನ(MLC) ಸದಸ್ಯರು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommayi) ಅವರನ್ನು ಭೇಟಿ ಮಾಡಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಎಂಎಲ್‌ಸಿ ಅರುಣ ಶಹಾಪುರ(Arun Shahapur) ಮತ್ತು ಇತರ ಎಂಎಲ್‌ಸಿ ಗಳು ಸಿಎಂ ಭೇಟಿ ಮಾಡಿದರು.  ಅಲ್ಲದೇ, ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ […]

ರಾಯಚೂರು ಘಟನೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಯಚೂರು ಘಟನೆಯನ್ನು ಖಂಡಿಸಿ ನಾಬಾ ಸಂಘಟಬೆಗಳ ಸಾವಿರಾರು ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಜ. 26 ರಂದು ಬಾಬಾಸಾಹೆಬರ ಭಾವಚಿತ್ರಕ್ಕೆ ಅವಮಾನಿಸಲಾಗಿದೆ. ಇದಕ್ಕೆ ಕಾರಣರಾದ ನ್ಯಾಯಾಧೀಶರ ವಿರುದ್ಧ ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿಧಾನಸೌಧ – ಹೈಕೋರ್ಟ್ ಚಲೊ ಜಾಥಾ ಸಂಗವಾಗಿ ಈ ಪ್ರತಿಭಟನಾ ಮೆರವಣಿಗೆ ನಡೆಸಲಾತಿತು. ಬೆಂಗಳೂರಿನ ಕೆಂಪೇಗೌಡ ರೇಲ್ವೆ ನಿಲ್ದಾಣದಿಂದ ಆರಂಭವಾದ ಬೃಹತ್ ಪ್ರತಿಭಟನೆಲಾ ಮೆರವಣಿಗೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ […]

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಜನರ ಅನುಕೂಲಕ್ಕೆ ಮೂರು ಎಕರೆ ಜಾಗ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು: ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ ಮೂರು ಎಕರೆ ಜಾಗ ನೀಡುವುದಾಗಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.  ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಸಿಎಂ ಈ ಭರವಸೆ ನೀಡಿದರು. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ […]

ಹಾರುಬೂದಿಯಿಂದ ಹಾಳಾಗುತ್ತಿರುವ ರೈತರ ಬಾಳು- ಅನ್ನದಾತರ ಗೋಳು ಕೇಳುವವರು ಯಾರು?

ವಿಜಯಪುರ: ವಿದ್ಯುಸ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರಕಾರ ನಾನಾ ಕಡೆಗಳಲ್ಲಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪಿಸಿದೆ.  ಈಗ ಇಂಥದ್ದೆ ಒಂದು ಉಷ್ಣ ವಿದ್ಯುತ್ ಸ್ಥಾವರ ರೈತರ ಬಾಳಿಗೆ ಕಂಟಕ ತಂದಿದೆ.  ಬಸವ ನಾಡು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಬಳಿ ಇರುವ ಉಷ್ಣ ವಿದ್ಯುತ್ ಸ್ಥಾವರದ ಹಾರುಬೂದಿ ಈಗ ಇದೇ ತಾಲೂಕಿನ ಮಸೂತಿ ಗ್ರಾಮಸ್ಥರ ಪಾಲಿಗೆ ಶಾಪವಾಗಿ ಪರಿಣಿಸಿದೆ.  ಪ್ರತಿನಿತ್ಯ ಕೂಡಗಿ ಉಷ್ಣ ವಿದ್ಯುಸ್ಥಾವರದಲ್ಲಿ ವಿದ್ಯುತ್ ಉತ್ಪಾದಿಸಲು ಬಳಸು ಕಲ್ಲಿದ್ದಲಿನ ಬೂದಿಯೇ ಈಗ ಈ ರೈತರ […]