ಭ್ರಷ್ಟ ಅಧಿಕಾರಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾಕಬೇಕು- ಮತಾಂತರ ಮುಂದುವರೆದರೆ ಸಿಕ್ಕಸಿಕ್ಕಲ್ಲಿ ಒದೆಯಬೇಕಾಗುತ್ತದೆ- ಪ್ರಮೋದ ಮುತಾಲಿಕ

ವಿಜಯಪುರ: ಭ್ರಷ್ಟ ಅಧಿಕಾರಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾಕಬೇಕು.  ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾ ಸೇನೆ ಸಂಸ್ಥಾಪಕ ಪ್ರಮೋ ಮುತಾಲಿಕ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಭ್ರಷ್ಟ ಅಧಿಕಾರಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾಕಬೇಕು.  ಇವರ ಹಿಂದೆ ದೊಡ್ಡ ದೊಡ್ಡ ರಾಜಕಾರಣಿಗಳಿದ್ದಾರೆ.  ಅವರನ್ನೂ ಹೊರಗೆ ಹಾಕಬೇಕು.  ಹೊರಗೆ ಇದ್ದವರು ಬಂದೂಕು, ಚಾಕು, ಚೂರಿ ಹಿಡಿದುಕೊಂಡು ಲೂಟಿ ಮಾಡುತ್ತಾರೆ.  ರಾಜಕೀಯದಲ್ಲಿ ಇದ್ದವರು ಅಧಿಕಾರಿಗಳನ್ನು ಬಳಸಿಕೊಂಡು ಲೂಟಿ ಮಾಡುತ್ತಾರೆ.  ಎಲ್ಲ ಪಕ್ಷದ ಬಹುತೇಕ ರಾಜಕಾರಣಿಗಳು ಭ್ರಷ್ಟರು, ಗೂಂಡಾಗಳಾಗಿದ್ದಾರೆ ಎಂದು […]

ಬಸವ ನಾಡಿನಲ್ಲಿ ಮತ್ತೆ ಭೂಕಂಪನ ಅನುಭವ- ಮನೆಯಿಂದ ಹೊರಬಂದ ಜನತೆ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ರವಿವಾರ ರಾತ್ರಿ ಮತ್ತೆ ಭೂಮಿ ಕಂಪಿಸಿದೆ. ರವಿವಾರ ರಾತ್ರಿ10.49ಕ್ಕರ ಭೂಕಂಪನದ ಅನುಭವವಾಗಿದೆ. ದ್ರಾಕ್ಷಿ ನಾಡು ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಸಿದ್ದಾಪುರ ಕೆ., ಹುಬನೂರ ಭಾಗಗಳಲ್ಲಿ ಭೂಕಂಪನದ ಅನುಭವಾಗಿದೆ. ಭೂಮಿಯಿಂದ ಜೋರಾದ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಗಾಬರಿಗೊಂಡ ಜನತೆ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ, ಇದು ಭೂಕಂಪನ ಹೌದು ಅಥವಾ ಅಲ್ಲ ಎಂಬುದನ್ನು ವಿಜಯಪುರ ಜಿಲ್ಲಾಡಳಿತ ಇನ್ನಷ್ಟೆ ಸ್ಪಷ್ಟಪಡಿಸಬೇಕಿದೆ.

ಕಸಾಪ ಚುನಾವಣೆ: ವಿಜಯಪುರ ಜಿಲ್ಲೆಯಲ್ಲಿ ಮ. 1ರ ವರೆಗೆ ಶೇ. 40ಕ್ಕೂ ಹೆಚ್ಚು ಮತದಾನ

ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ವಿಜಯಪುರ ಜಿಲ್ಲೆಯಲ್ಲಿ ಮತದಾನ ಆರಂಭವಾಗಿದ್ದು, ಬಿರುಸಿನಿಂದ ಸಾಗಿದೆ. ವಿಜಯಪುರ ನಗರದ ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಾಲ್ಕು ಮತಗಟ್ಟೆಗಳನ್ನು ತೆರೆಯಲಾಗಿದೆ. ಸಾಹಿತ್ಯ ಪರಿಷತ್ ಸದಸ್ಯರು ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆ. 8ಕ್ಕೆ ಆರಂಭವಾಗಿರುವ ಮತದಾನ ಸಂ. 4ಕ್ಜೆ ಮುಕ್ತಾಯವಾಗಲಿದೆ. ಮ. 1ರ ವರೆಗೆ ಶೇ. 40ಕ್ಕೂ ಹೆಚ್ಚು ಮತದಾನವಾಗಿದೆ. ಈಗಲೂ ನಾನಾ ಮತಗಟ್ಟೆಗಳಲ್ಲಿ ಸರದಿಯಲ್ಲಿ ನಿಂತಿರುವ ಮತದಾರರು ತಮ್ಮ ಹಕ್ಕು ಚಲಾಯಿಸಲು ಕಾಯುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ […]

ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ನ್ಯಾಕ್ ನಿಂದ ‘ಎ’ ಗ್ರೇಡ್ ಮಾನ್ಯತೆ- ಎಂ. ಬಿ. ಪಾಟೀಲ

ವಿಜಯಪುರ: ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲ್ಯಾಂಕ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ದೊರೆತಿದೆ ಎಂದು ಬಿ ಎಲ್ ಡಿ ಇ ಅಧ್ಯಕ್ಷ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ನ. 11 ರಿಂದ 13ರ ವರೆಗೆ ನ್ಯಾಕ್ ಸದಸ್ಯರು ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು.‌ ಇಲ್ಲಿನ ಮೂಲಭೂತ ಸೌಕರ್ಯಗಳು, ಪಠ್ಯಕ್ರಮ […]

ಇಂದಿರಾ ಗಾಂಧಿ ಜನ್ಮದಿನದ ಅಂಗವಾಗಿ ಐಕ್ಯತಾ ದಿನಾಚರಣೆ- ಪ್ರಮಾಣ ವಚನ ಬೋಧಿಸಿದ ಸಿಎಂ

ಬೆಂಗಳೂರು: ದೇಶದ ಏಕತೆ, ಅಖಂಡತೆ ಮತ್ತು ಸಮಗ್ರತೆ ಕಾಪಾಡಲು ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಅಂಗವಾಗಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಐಕ್ಯತಾ ಪ್ರಮಾಣ ವಚನ ಬೋಧಿಸಿ ಅವರು‌ ಮಾತನಾಡಿದರು. ಭಾರತ ಹಲವಾರು ಭಾಷೆಗಳು, ಸಾಂಸ್ಕೃತಿಕ ಹಿನ್ನೆಲೆ ಮತ್ತು ಸಂಸ್ಕೃತಿಗಳಿಂದ ಕೂಡಿರುವ ದೇಶ. ಭಾರತ ಒಗ್ಗಟ್ಟಾಗಿ, ಒಕ್ಕೂಟವಾಗಿ, ಸ್ವತಂತ್ರವಾಗಿ 75 ವರ್ಷಗಳ ಕಾಲ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು […]

ಶಿಕ್ಷಣ ನೀಡಿ ಬದುಕು ರೂಪಿಸಿದ ಬಿ ಎಲ್ ಡಿ ಇ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಅರ್ಪಿಸಿದ ಖ್ಯಾತ ನೇತ್ರತಜ್ಞ ಡಾ. ಪ್ರಭುಗೌಡ ಪಾಟೀಲ ಲಿಂಗದಳ್ಳಿ

ವಿಜಯಪುರ: ಇದು ನಿಸ್ವಾರ್ಥ ಸೇವೆಗೆ ಸಂದ ಗೌರವವನ್ನು ತನಗೆ ವಿದ್ಯೆ ನೀಡಿ ಜೀವನ ರೂಪಿಸಲು ನೆರವಾದ ಸಂಸ್ಥೆಗೆ ಅರ್ಪಿಸಿದ ಖ್ಯಾತ ವೈದ್ಯರ ಸ್ಟೋರಿ. ಭಾರತದ ಸ್ವಾತಂತ್ರ್ಯೋತಸ್ವದ ಅಮೃತ ಮಹೋತ್ಸವದ ಸಂತಸದ ಘಳಿಗೆಯಲ್ಲಿ ರಾಜ್ಯ ಸರಕಾರ ಬಸವ ನಾಡು ವಿಜಯಪುರದ ಖ್ಯಾತ ನೇತ್ರ ತಜ್ಞ ಡಾ. ಪ್ರಭುಗೌಡ ಪಾಟೀಲ ಲಿಂಗದಳ್ಳಿ ಅವರು ಮುಖ್ಯಸ್ಥರಾಗಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಗೆ 2020-21ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಡಾ. ಪ್ರಭುಗೌಡ ಪಾಟೀಲ ವಿಜಯಪುರ ಜಿಲ್ಲೆಯ ಅಷ್ಟೇ ಅಲ್ಲ, ರಾಜ್ಯಾದ್ಯಂತ […]

ಪಿಯು ಮಂಡಳಿಯಲ್ಲಿ ತುಘಲಕ ದರ್ಬಾರ ನಡೆಯುತ್ತಿದೆ- ಸಿಎಂ, ಶಿಕ್ಷಣ ಸಚಿವರು ಗಮನ ಹರಿಸಲಿ- ಆಡಳಿತಾರೂಢ ಬಿಜೆಪಿ ಎಂ ಎಲ್ ಸಿ ಅರುಣ ಶಹಾಪುರ ಆಗ್ರಹ

ವಿಜಯಪುರ: ಪಿಯು ಮಂಡಳಿಯ ಏಕಪಕ್ಷೀಯ ನಿರ್ಣಯದಿಂದ ಬೇಸತ್ತಿರುವ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಯು ಮಂಡಳಿಯಲ್ಲಿ ತುಘಲಕ ದರ್ಬಾರ ನಡೆಯುತ್ದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ನಾಗೇಶ ಅವರು ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮದ್ಯಂತರ ಪರೀಕ್ಷೆಯನ್ನು ಬೋರ್ಡ ನಿಂದ ನಡೆಸುತ್ತೇವೆ ಎಂಬ ನಿರ್ಧಾರ ಮಾಡಿದೆ.  ಹಾಗಿದ್ದರೆ ಮಿಡ್ ಟರ್ಮ ಮತ್ತು ಪ್ರಿಪರೇಟರಿ […]

ವಿ. ಪ. ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ- ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ವಿಜಯಪುರ: ಬಿಜಾಪೂರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ, ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನ. 23ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸಾರ್ವಜನಿಕ ದಿನವನ್ನು ಹೊರತು ಪಡಿಸಿ ಪ್ರತಿದಿನ ಬೆ. 11 ರಿಂದ ಮ. 3ರ ವರೆಗೆ ವಿಜಯಪುರ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಅಥವಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿಗಳ ವಿಜಯಪುರ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. […]

ವಿ. ಪ. ಚುನಾವಣೆ: ಸಿದ್ಧರಾಮಯ್ಯ, ಡಿಕೆಶಿ ಭೇಟಿ ಮಾಡಿದ ವಿಜಯಪುರ ಕಾಂಗ್ರೆಸ್ ಮುಖಂಡರು

ವಿಜಯಪುರ: ವಿಧಾನ ಪರಿಷತ ಚುನಾವಣೆ ದಿನಾಂಕ ನಿಗದಿಯಾಗಿದ್ದು, ವಿಜಯಪುರ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ದ್ವಿಸದಸ್ಯ ಸ್ಥಾನಕ್ಕೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯಪುರದಿಂದ ಹಾಲಿ ಸದಸ್ಯ ಸುನಿಲಗೌಡ ಪಾಟೀಲ ಅವರಿಗೆ ಮತ್ತೆ ಟಿಕೆಟ್ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿಗೆ ತೆರಳಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ತಮ್ಮನ್ನು ಭೇಟಿ ಮಾಟಿದ ಸಂಗತಿಯನ್ನು ಕಾಂಗ್ರೆಸ್ ನಾಯಕರಾದ ಎಸ್. ಸಿದ್ಧರಾಮಯ್ಯ ಮತ್ತು ಡಿ. ಕೆ. ಶಿವಕುಮಾರ ತಮ್ಮ ಫೇಸ್ […]

ಬಾಗಲಕೋಟೆ ಜಿಲ್ಲೆಯ ಮುಧೋಳ ಸೇರಿ ಎಂಟು ನಗರಗಳಿಗೆ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ- ಸಚಿವ ಕಾರಜೋಳ‌ ಸಂತಸ

ವಿಜಯಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್- 2021 ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಕರ್ನಾಟಕದ ಮುಧೋಳ ಸೇರಿದಂತೆ ಎಂಟು ನಗರಗಳು ಪ್ರಶಸ್ತಿಗೆ ಆಯ್ಕೆಯಾಗಿವೆ. ಬೃಹತ್ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಮುಧೋಳ, ಹೊಸದುರ್ಗ ಕೃಷ್ಣರಾಜನಗರ, ಕುಮಟಾ ಮತ್ತು ಪಿರಿಯಾಪಟ್ಟಣ ನಗರಗಳಿಗೆ ಪ್ರಶಸ್ತಿ ಲಭ್ಯವಾಗಿದೆ. ಸಚಿವ ಗೋವಿಂದ ಕಾರಜೋಳ ಸಂತಸ ಈ ಮಧ್ಯೆ, ತಮ್ಮ ಸ್ವಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಪ್ರಶಸ್ತಿ ಲಭ್ಯವಾಗಿರುವುದಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದವ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ. […]