ಸಿಂದಗಿ, ಹಾನಗಲ್ ಎರಡೂ ಬೈ ಎಲೆಕ್ಷನ್ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ವಿಜಯಪುರ ಜಿಲ್ಲೆಯ ಸಿಂಧಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಪ್ರಮುಖರೊಂದಿಗೆ ಚುನಾವಣಾ ಪ್ರಚಾರ ಮತ್ತು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗಿದೆ. ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದಾವಣಗೆರೆ ಅಭಿವೃದ್ಧಿಯ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಮುಖಂಡರಾದ ಬಳ್ಳಾರಿ ಅವರೊಂದಿಗೆ ನಮ್ಮದು 40 ವರ್ಷಗಳ ಸಂಬಂಧ. ಅವರೊಂದಿಗೆ ಸಹ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು. ಬೆಂಗಳೂರು ಜಿಲ್ಲಾ […]

ಹೊಸ ಪಕ್ಷ ರಚನೆಗೆ ಮುಂದಾಗಿದ್ದೆ ಐಟಿ ರೇಡ್ ಗೆ ಕಾರಣ- ಯತ್ನಾಳ ಆರೋಪ

ವಿಜಯುರ: ಕರ್ನಾಟಕದಲ್ಲಿ ಲೂಟಿ ಹೊಡೆದ ಹಣದಿಂದ ಕುಮಾರಸ್ವಾಮಿ ಜೊತೆಗೂಡಿ ಹೊಸ ಪಕ್ಷ ರಚನೆಗೆ ಮುಂದಾಗಿದ್ದೆ ಐಟಿ ಧಾಳಿಗೆ ಕಾರಣ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಭ್ರಷ್ಡಾಚಾರದ ಹಣದಿಂದ ರಾಜ್ಯದಲ್ಲಿ ಬಿಜೆಪಿಗೆ ಬುದ್ದಿ ಕಲಿಸಲು ಹೊಸ ಪಕ್ಷ ಕಟ್ಟಲು ಮುಂದಾಗಿದ್ದರು. ಈಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಮೂಲಕ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು […]

ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್ ಒಪ್ಪಂದ- ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಯ ಗುರಿ- ಪ್ರತಿ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಲಾಭ

ಬೆಂಗಳೂರು: ಉದ್ಯಮ ರಂಗವು ನಿರೀಕ್ಷಿಸುವಂಥ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ನಾಸ್ಕಾಂ(ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ವೇರ್ ಅಂಡ್ ಸರ್ವೀಸ್ ಕಂಪನೀಸ್) ಜೊತೆ ಒಡಂಬಡಿಕೆಗೆ ಸಹಿ ಹಾಕಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ‌ ನಡೆದ ಸಮಾರಂಭದಲ್ಲಿ ಈ ಮಹತ್ವದ ಒಡಂಬಡಿಕೆಗೆ ಅಂಕಿತ ಹಾಕಲಾಯಿತು. ಬಳಿಕ ಮಾತನಾಡಿದ ಸಚಿವರು, ಒಡಂಬಡಿಕೆಯು ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ […]

ಪ್ಯಾಂಟಿನ ಬೆಲ್ಟಿನಲ್ಲಿಟ್ಟು 804 ಗ್ರಾಂ ಚಿನ್ನದ ಗಟ್ಟಿ ಸಾಗಿಸಲು ಯತ್ನ- ಆರೋಪಿ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಬೆಲ್ಟಿನಲ್ಲಿಟ್ಟುಕೊಂಡು 804 ಗ್ರಾಂ ಚಿನ್ನದ ಗಟ್ಟಿ ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದು, ಗಟ್ಟಿಚಿನ್ನ ವಶಪಡಿಸಿಕೊಂಡಿದ್ದಾರೆ. ಗಟ್ಟಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡಲು ದುಷ್ಕರ್ಮಿಗಳು ನಾನಾ ತಂತ್ರಗಳನ್ನು ರೂಪಿಸುತ್ತಿರುತ್ತಾರೆ. ಅಂತಾರಾಷ್ಟ್ರೀಯ ವಿಮಾನಗಳ ಮೂಲ ಆಗಮಿಸುವ ಕೆಲವು ಜನ ಕಳ್ಳರು ದೇಹದ ಯಾವುದಾದರೊಂದು ಭಾಗದಲ್ಲಿ ಅಡಗಿಸಿ ಇಟ್ಟುಕೊಂಡು ವಿದೇಶಗಳಿಂದ ವಿಮಾನದ ಮೂಲಕ ಚಿನ್ನವನ್ನು ಕದ್ದು ತರುವ ಉದಾಹರಣೆಗಳು ಸಾಕಷ್ಠಿವೆ. ಆದರೆ, ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಓರ್ ಬೆಲ್ಟಿನಲ್ಲಿ ಚಿನ್ನದ ಗಟ್ಟಗಳನ್ನು ಅಡಗಿಸಿಟ್ಟುಕೊಂಡು ಅಕ್ರಮವಾಗಿ ಸಾಗಿಸುವಾಗ […]

ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮದಲ್ಲಿ ನಾನಾ ಕೈಗಾರಿಕೋದ್ಯಮಿಗಳು ಸೇರಿದಂತೆ ನಾನಾ ಕೈಗಾರಿಕೆ ಸಂಸ್ಥೆಗಳ ಮಾಲಿಕರು, ಹಿರಿಯ ಸಿಬ್ಬಂದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್.‌ […]

ಮತದಾನ ಕುರಿತು ಸಿಂದಗಿ ಮತಕ್ಷೇತ್ರದಲ್ಲಿ ವಿಜಯಪುರ ಜಿಲ್ಲಾಡಳಿತದಿಂದ ಜಾಗೃತಿ ಜಾಥಾ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರಕ್ಕೆ ಅ. 30 ರಂದು ಬೈ ಎಲೆಕ್ಷನ್ ನಡೆಯುತ್ತಿದ್ದು, ಇದಕ್ಕಾಗಿ ವಿಜಯಪುರ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವೀಪ್ ಯೋಜನೆ ಅಂಗವಾಗಿ ಮತದಾರರ ಜಾಗೃತಿ ಜಾಥಾ ನಡೆಸಲಾಯಿತು.  ಸಿಂದಗಿ ಮತಕ್ಷೇತ್ರದ ನಾನಾ ಗ್ರಮಾಗಳಲ್ಲಿ ನಡೆದ ಈ ಜಾಥಾದಲ್ಲಿ ಮತದಾನದ ಮಹತ್ವ ಮತ್ತು ಮತದಾನದ ಹಕ್ಕಿನ ಕುರಿತು ಕೈಯಲ್ಲಿ ಭಿತ್ತಿಪತ್ರ ಹಿಡಿದು ಯುವಕರು ಪಾಲ್ಗೋಂಡು ಜಾಗೃತಿ ಮೂಡಿಸಿದರು.

ಆರ್ ಎಸ್ ಎಸ್ ಬಗ್ಗೆ ಮಾತನಾಡುವುದನ್ನು ಬಿಡಿ- ಬೇಕಿದ್ದರೆ ನಮ್ಮ ಜೊತೆ ಕುಸ್ತಿಗೆ ಬನ್ನಿ- ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಯತ್ನಾಳ ವಾಗ್ದಾಳಿ

ವಿಜಯಪುರ: ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಕುಮಾರಸ್ವಾಮಿ ಅವರದು ತಾಲಿಬಾನ್ ಪಾರ್ಟಿ.  ಆರ್ ಎಸ್ ಎಸ್ ಬಗ್ಗೆ ಏನು ಬೇಕಾದರೂ ಮಾತನಾಡುತ್ತಾರೆ.  ಆರ್ ಎಸ್ ಎಸ್ ನವರೇನು ಎಕೆ-47 ಕೊಟ್ಟು ಭಯೋತ್ಪಾದಕರನ್ನು ರೆಡಿ ಮಾಡಿದ್ದಾರಾ? […]

ಬೈ ಎಲೆಕ್ಷನ್ ನಲ್ಲಿ ಮತದಾರರು ಬಿಜೆಪಿ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ- ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ

ವಿಜಯಪುರ: ಬಿಜೆಪಿಯ ದುರಾಡಳಿತಕ್ಕೆ ಮತದಾರರು ಬೈ ಎಲೆಕ್ಷನ್ ನಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಯಾವ ವರ್ಗಕ್ಕೂ ಅನುಕಾಲವಾಗಿಲ್ಲ.  ಇದನ್ನು ಗಮನದಲ್ಲಿಟ್ಟುಕೊಂಡಿರುವ ಬೈ ಎಲೆಕ್ಷನ್ ನಡೆಯುತ್ತಿರುವ ಎರಡು ಕ್ಷೇತ್ರಗಳ ಜನ ತಕ್ಕ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಸಿಂದಗಿ ಮತ್ತು ಹಾನಗಲ ಮತದಾರರ ಮೇಲೆ ವಿಶ್ವಾಸ […]

ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಎರಡು ಹೋಳಾದರೆ ಅಚ್ಚರಿಯಿಲ್ಲ- ಸಚಿವ ಕೆ. ಎಸ್. ಈಶ್ವರಪ್ಪ

ವಿಜಯಪುರ: ಮುಂಬರುವ ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಎರಡು ಹೋಳಾದರೆ ಅಚ್ಚರಿಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪ ಚುನಾವಣೆ ಬಳಿಕ ಕಾಂಗ್ರೆಸ್ […]

ಬಸವ ಕಲ್ಯಾಣ ಮಾದರಿಯಲ್ಲಿ ಸಿಂದಗಿ ಬೈ ಎಲೆಕ್ಷನ್ ನಲ್ಲಿಯೂ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಗೆಲ್ಲಲಿದೆ- ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ವಿಜಯಪುರು: ಬಸವ ಕಲ್ಯಾಣ ಮಾದರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿಯೂ ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಎಂದು ಮಾಜಿ ಡಿಸಿಎಂ ಮತ್ತು ಸಿಂದಗಿ ಬಿಜೆಪಿ ಉಸ್ತುವಾರಿ ಲಕ್ಷ್ಮಣ ಸವದಿ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕೆ ಬಿಜೆಪಿ ಏಳು ತಂಡಗಳನ್ನ ರಚನೆ ಮಾಡಿದೆ.  ನಾನಾ ಸಚಿವರು, ವಿಜಯಪುರ ಸಂಸದ ರಮೇಶ ಜಿಗಜಿಣಗಿ, […]