ಸಿಂದಗಿ ಬೈ ಎಲೆಕ್ಷನ್- ಚುನಾವಣೆ ವೆಚ್ಚಗಳ ಕರಡು ದರಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭೆ ಮತಕ್ಷೇತ್ರದ ಬೈ ಎಲೆಕ್ಷನ್ ಗೆ ಸಂಬಂಧಿಸಿದಂತೆ ಚುನಾವಣೆಗೆ ಮಾಡಬಹುದಾದ ನಾನಾ ವೆಚ್ಚಗಳ ಕರಡು ದರಪಟ್ಟಿ ಕುರಿತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ ಹೊರಡಿಸಿದ್ದಾರೆ. ಈ ದರಪಟ್ಟಿ ಕುರಿತು ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆ ಅಂಗವಾಗಿ ಅಭ್ಯರ್ಥಿಗಳು ಬಳಸುವ ನಾನಾ ವಾಹನಗಳು, ಪ್ರಚಾರ ಸಾಮಗ್ರಿ ಹಾಗೂ ಇತರ ವೆಚ್ಚಗಳಿಗೆ […]

ಸಿಂದಗಿ, ಹಾನಗಲ ಬೈ ಎಲೆಕ್ಷನ್ ಗೆ ಉಸ್ತುವಾರಿಗಳನ್ನು ನೇಮಕ ಮಾಡಿದ ಬಿಜೆಪಿ- ಯತ್ನಾಳಗೆ ಜವಾಬ್ದಾರಿ, ವಿಜಯೇಂದ್ರಗಿಲ್ಲ ಉಸ್ತುವಾರಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಎರಡೂ ಕ್ಷೇತ್ರಗಳಿಗೆ ಸಚಿವರನ್ನೊಳಗೊಂಡ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಈ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಮತ್ತು ಬಿ. ಎಸ್. ಯಡಿಯೂರಪ್ಪ ಕಟ್ಟಾ ವಿರೋಧಿ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಆದರೆ, ಈವರೆಗೆ ಬೈ ಎಲೆಕ್ಷನ್ ಗಳಲ್ಲಿ ಒಂದಿಲ್ಲೋಂದು ಕ್ಷೇತ್ರಗಳ ಉಸ್ತುವಾರಿ ನೀಡಲಾಗುತ್ತಿದ್ದ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ಯಾವುದೇ […]

ಸಿಂದಗಿ, ಹಾನಗಲ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ

ಬಳ್ಳಾರಿ: ಮುಂಬರುವ ಸಿಂದಗಿ ಮತ್ತು ಹಾನಗಲ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಸಿದಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ಕ್ಷೇತ್ರದಿಂದ ತರಿಸಿಕೊಂಡ ವರದಿಯ ಕುರಿತು ಚರ್ಚಿಸಿ, ಪಕ್ಷದ ಸಂಸದೀಯ ಮಂಡಳಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗುವುದು. ಶೀಘ್ರವೇ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ಪಕ್ಷವು ಬೂತ್ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರ ವರೆಗೆ ಎಲ್ಲರೂ ಒಂದಾಗಿ ಕಾರ್ಯ […]

ವಿಜಯನಗರ ನೂತನ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸಪೇಟೆ: ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದಾರೆ. ಗಾಂಧಿ ಜಯಂತಿ ದಿನ ಅಸ್ತಿತ್ವಕ್ಕೆ ಬಂದ ನೂತನ ವಿಜಯನಗರ ಜಿಲ್ಲೆ ಕುರಿತ ಸರಕಾರದ ಆದೇಶವನ್ನು ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ 56 ನಾನಾ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆಯನ್ನು ಸಿಎಂ ನೆರವೇರಿಸಿದರು. ! ವರ್ಣರಂಜಿತವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಪಟಾಕಿ, ಸಿಡಿ ಮದ್ದುಗಳನ್ನು ಹಾರಿಸಲಾಯಿತು.‌ ಈ ಸಂದರ್ಭದಲ್ಲಿ ಜನರ ಹರ್ಷೋದ್ಘಾರ […]

ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಸಿಎಂ ಬಸವರಾಜ ಬೊಮ್ಮಯಿ- ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಆದ್ಯತೆ: ಮುಖ್ಯಮಂತ್ರಿ

ಬೆಂಗಳೂರು: ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ ಆಚರಣೆ ಹಾಗೂ ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಗಾಂಧೀಜಿ ಒಬ್ಬ ವ್ಯಕ್ತಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲ; ನೈತಿಕ ಭಾರತವನ್ನು […]

ಆರ್ಥಿಕವಾಗಿ ದುರ್ಬಲರಾದ ಎಲ್ಲ ಜಾತಿಯವರನ್ನು ಮೇಲೆತ್ತುವ ಕೆಲಸವಾಗಬೇಕು ಎಂದ ರಂಭಾಪುರ ಶ್ರೀ

ವಿಜಯಪುರ: ಜಾತಿ ಮೀಸಲಾತಿ ನೀಡುವ ಬದಲು ಜನಪ್ರತಿನಿಧಿಗಳು ಆರ್ಥಿಕವಾಗಿ ದುರ್ಬಲವಾಗಿರುವ ಎಲ್ಲ ಜಾತಿಯವರನ್ನು ಮೇಲೆತ್ತುವ ಕೆಲಸ ಮಾಡಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರ ಸೋಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳು ಜಾತಿ ಜಾತಿಗಳ ಮಧ್ಯೆ ಸಂಘರ್ಷವನ್ನು ಹುಟ್ಟು ಹಾಕುವ ವಿದ್ಯಮಾನಗಳು ಕೆಲವು ಭಾಗಗಳಲ್ಲಿ ನಡೆಯುತ್ತಿದೆ, ಇದು ಸರಿಯಲ್ಲ, ಯಾವುದೇ ಜಾತಿ, ಧರ್ಮಗಳಿರಲಿ. ಮೊದಲು ನಾವು ಭಾರತ ಮಾತೆಯ ಮಕ್ಕಳು ಎನ್ನುವ ಭಾವನೆ ಇರಬೇಕು. […]

ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ತಿಳಿದು ಮಾತನಾಡಲಿ- ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಮಾಜಿ ಸಿಎಂ ಎಸ್. ಸಿದ್ದರಾಮಯ್ಯ ಇತ್ತಿಚೆಗೆ ಆರ್ ಎಸ್ ಎಸ್ ನ್ನು ತಾಲಿಬಾನ್ ಗೆ ಹೋಲಿಕೆ ಮಾಡಿ ಮಾತನಾಡಿರುವುದನ್ನು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಖಂಡಿಸಿದ್ದಾರೆ. ವಿಜಯಪುದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆಯ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಮುಖಂಡರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೊಂದು ದೇಶಭಕ್ತ ಸಂಘಟನೆ ಎಂದು ಹೊಗಳಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ಕುರಿತು ಮಾತನಾಡುವುದನ್ನು ಬಿಡಬೇಕು ಎಂದು ಆಗ್ರಹಿಸಿದರು ಇದೇ ವೇಳೆ […]

ಸಿಂದಗಿ ಬೈ ಎಲೆಕ್ಷನ್- ಮಹಿಳಾ ಅಭ್ಯರ್ಥಿಗೆ ಮಣೆ ಹಾಕಿ ಚಾಣಾಕ್ಷತೆ ಮೆರೆದ ಜೆಡಿಎಸ್- ಅಭ್ಯರ್ಥಿ ಯಾರು ಗೊತ್ತಾ?

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೆಡಿಎಸ್ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಚಾಣಾಕ್ಷತೆ ಮೆರೆದಿದೆ. ಎಂ. ಎಂ. ಬಿ. ಎಡ್. ಪದವೀಧರೆ ಮತ್ತು ಕಲಬುರ್ಗಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಯಲ ವಿಭಾಗದಲ್ಲಿ ಪೊಲೀಸ್ ಇನ್ಸಪೆಕ್ಟರ್ ಆಗಿರುವ ಶಕೀಲ್ ಅಂಗಡಿ ಅವರ ಪತ್ನಿ ನಾಜಿಯಾ ಶಕೀಲ್ ಅಹ್ಮದ ಅಂಗಡಿ ಅವರಿಗೆ ಜೆಡಿಎಸಲ್ ಟಿಕೆಟ್ ನೀಡಿದೆ. ನಾಜೀಯಾ ಶಕೀಲ ಅಹ್ಮದ್ ಅಂಗಡಿ ಅವರ ಮಾವ ದಿ. ಐ. ಬಿ. ಅಂಗಡಿ […]

ಅಥಣಿಯಲ್ಲಿ ಪೊಲೀಸರ ಅಂಧಾ ದರ್ಬಾರ? ಪೊಲೀಸ್ ERSS 112 ಕಾರು ಢಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡ ತಾಯಿ ಮಗನ ವಿರುದ್ಧವೇ ಕೇಸ್- ಗಾಯಾಳುಗಳಿಂದ ದೂರು ಪಡೆಯಲು ಹಿಂದೇಟು ಆರೋಪ

ಅಥಣಿ: ಇದು ಸಾರ್ವಜನಕರಿಗೆ ರಕ್ಷಣೆ ನೀಡಬೇಕಾದ ಪೊಲೀಸರ ಇನ್ನೋಂದು ಮುಖವಾಡಕ್ಕೆ ಸಾಕ್ಷಿಯಾಗಿರುವ ಘಟನೆ. ಈ ಘಟನೆಯಲ್ಲಿ ಪೊಲೀಸರ ಕಾರು ಬೈಕಿಗೆ ಢಿಕ್ಕಿ ಹೊಡೆದು ತಾಯಿ-ಮಗ ಗಂಭೀರವಾಗಿ ಗಾಯಗೊಂಡಿದ್ದರೂ ಪೊಲೀಸರು ಗಾಯಾಳುಗಳ ವಿರುದ್ಧವೇ ಕೇಸ್ ದಾಖಲಿಸಿ ಕೈತೊಳೆದುಕೊಂಡಿದ್ದಾರೆ.   ಅಷ್ಟಕ್ಕೂ ಆಗಿದ್ದೇನೆಂದರೆ, ಸೋಮವಾರ ಮ. 12.30 ಸುಮಾರಿಗೆ ಸಂಕೋನಟ್ಟಿ ಗ್ರಾಮದ ತೋಟದ ವಸ್ತಿಯಿಂದ ತಾಯಿ ಸುಮಾರು 60 ವರ್ಷದ ವತ್ಸಲಾ ಶಂಕರ ಮುಗ್ದುಮ ಮತ್ತು ಸುಮಾರು 45 ವರ್ಷದ ಮಗ ಗುರುಲಿಂಗ ಮುಗ್ದುಮ ಬೈಕಿನಲ್ಲಿ ಅಥಣಿಯ ಕಡೆಗೆ ಹೊರಟಿದ್ದರು. […]

ಕರ್ನಾಟಕ ಮಾಧ್ಯಮ ಅಕಾಡೆಮಿಗೆ 40 ವರ್ಷ ಪೂರ್ಣ- ಲಾಂಛನ ಬಿಡುಗಡೆ ಮಾಡಿ, ಕ್ಲಬ್ ಹೌಸ್ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ 40 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಾಂಛನ ಬಿಡುಗಡೆ ಮಾಡಿ ಕ್ಲಬ್ ಹೌಸ್ ಉದ್ಘಾಟಿಸಿದರು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ಬಳಿಕ ನನ್ನ ಕನಸಿನ ಕರ್ನಾಟ ವಿಷಯ ಕುರಿತು ಸಿಎಂ ಮಾತನಾಡಿದರು. ಕೈಗಾರಿಕೆಗಳ ಮೂಲಕ ಹೆಚ್ಚಿನ ಉದ್ಯೋಗ ಸೃಜನೆಗೆ ಅವಕಾಶವಿರುವುದರಿಂದ ರಾಜ್ಯದಲ್ಲಿ ಹೂಡಿಕೆ ಮಾಡುವ ಕೈಗಾರಿಕೋದ್ಯಮಗಳಿಗೆ ಉದ್ಯೋಗ ಸೃಜನೆ ಆಧಾರದಲ್ಲಿ ಪ್ರೋತ್ಸಾಹಕ ನೀಡುವ ಕುರಿತು ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಕರ್ನಾಟಕದಲ್ಲಿ ಕೈಗಾರಿಕೆ, ಉದ್ಯಮಗಳಿಗೆ ಸ್ವಾತಂತ್ರ್ಯ ಪೂರ್ವ […]