ಚಂದ್ರನ ತಲುಪಿದ ಭಾರತ- ಸಚಿವ ಎಂ. ಬಿ. ಪಾಟೀಲ ಅಭಿನಂದನೆ

ವಿಜಯಪುರ: ಭಾರತದ ಬಹುನಿರೀಕ್ಷಿತ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಕಳುಹಿಸಿದ್ದ ವಿಕ್ರಮ್ ಚಂದ್ರನ ಮೇಲೆ ಸುರಕ್ಷಿತವಾಗಿ ತಲುಪಿದೆ.  ಚಂದ್ರನನ್ನು ತಲುಪಿದ ವಿಶ್ವದ ನಾಲ್ಕನೇ ರಾಷ್ಟ್ವವಾಗಿ ಭಾರತ ಹೊರ ಹೊಮ್ಮಿದ್ದು, ಚಂದ್ರನ ದಕ್ಷಿಣ ದ್ರುವ ತಲುಪಿದ ಮೊದಲ ದೇಶ ಎಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. ಭಾರತದ ಚಂದ್ರಯಾನ 3 ಯಶಸ್ವಿಯಾಗಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೌಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ […]

ಆಲಮಟ್ಟಿ ನಾರಾಯಣಪುರ ಜಲಾಷಯ ವ್ಯಾಪ್ತಿಯ ರೈತರಿಗೆ ಚಾಲು ಬಂದ್ ಪದ್ಧತಿಯಲ್ಲಿ ನೀರು ಬಿಡುಗಡೆ- ಸಚಿವ ಆರ್ ಬಿ ತಿಮ್ಮಾಪುರ

ವಿಜಯಪುರ: ಆಲಮಟ್ಟಿ ಮತ್ತು ನಾರಾಯಣಪುರ ಜಲಾಷಯ ವ್ಯಾಪ್ತಿಯ ಕಾಲುವೆಗಳಿಗೆ ಚಾಲು ಮತ್ತು ಬಂದ್ ಪದ್ಧತಿಯಲ್ಲಿ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮತ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ನೇತ್ವತ್ವದಲ್ಲಿ 2023-24ನೇ ವರ್ಷದ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ಬಾರಿ ಮುಂಗಾರು ಹಂಗಾಮಿಗೆ 14 […]

ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ, ಕಠಿಣ ಶಿಕ್ಷೆಗೆ ತುರ್ತು ಕ್ರಮ- ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು: ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ ಮತ್ತು ಸುಳ್ಳು ಸುದ್ದಿ ಹರಡುವುದರ ವಿರುದ್ಧ ಕಠಿಣ ಶಿಕ್ಷೆಗೆ ಒಳಪಡಿಸಲು ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.  ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಪ್ರಕಟಿಸಿದ್ದಾರೆ. ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿವೆ.  ಸಮಾಜದ ದೃವೀಕರಣಕ್ಕೆ ಕಾರಣವಾಗುತ್ತಿವೆ.  ಇದರ ನಿಯಂತ್ರಣ ಅಗತ್ಯವಾಗಿದ್ದು, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ […]

ಮಕ್ಕಳಿಗೆ ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಜಾಗೃತಿ ಪಾಠ- ಮಾಸ್ಟರ್ ಕಿಶನ್, ಧ್ರುವ ಎಂ. ಪಾಟೀಲ ವಿನೂತನ ಪ್ರಯತ್ನ

ವಿಜಯಪುರ: ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದ ಮನುಕುಲದ ಮೇಲಾಗುತ್ತಿರುವ ಗಂಭೀರ ಪರಿಣಾಮಗಳ ಬಗ್ಗೆ ಮಕ್ಕಳಿಗೆ ವಿದ್ಯಾರ್ಥಿ ದಿಸೆಯಿಂದಲೇ ಜಾಗೃತಿ ಮೂಡಿಸಿ ಅವರನ್ನು ಭವಿಷ್ಯದ ಹಸಿರು ಸೈನಿಕ(ಗ್ರೀನ್ ವಾರಿಯರ್ಸ್)ರನ್ನಾಗಿ ಮಾಡುವ ವಿನೂತನ ಮತ್ತು ವಿಶಿಷ್ಠ ಕಾರ್ಯಕ್ರಮವೊಂದು ಬಸವ ನಾಡಿನಲ್ಲಿ ನಡೆಯಿತು.  ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಪಿ.ಪಿ.ಎ(ಸೊಸಾಯಿಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲ್ಯಾಂಟ್ಸ್ ಆ್ಯಂಡ್ ಎನಿಮಲ್ಸ್), ಶಾಲಾ ಶಿಕ್ಷಣ ಇಲಾಖೆ ಮತ್ತು ಅರ್ಜುಣಗಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ನಡೆದ […]

2 ತಿಂಗಳಲ್ಲಿ 67 ಪ್ರಕರಣಗಳಲ್ಲಿ ಭ್ರಷ್ಟರ ವಿರುದ್ಧ ಕ್ರಮ- 5 ವರ್ಷಗಳಿಂದ ಧೂಳು ಹಿಡಿದಿದ್ದ ಪ್ರಕರಣಗಳಲ್ಲಿ ಕ್ರಮ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಶುದ್ಧ ಆಡಳಿತ ನೀಡಲು ಕಾಂಗ್ರೆಸ್ ಸರಕಾರ ಬದ್ಧವಾಗಿದೆ.  ಅಧಿಕಾರಕ್ಕೆ ಬಂದ ಎರಡೇ ತಿಂಗಳಿನಲ್ಲಿ ಕಳೆದ ಐದು ವರ್ಷಗಳಿಂದ ಧೂಳು ಹಿಡಿದಿದ್ದ 67 ಭ್ರಷ್ಟ ಕಂದಾಯ ಇಲಾಖೆ ಅಧಿಕಾರಿ ಮತ್ತು ನೌಕರರ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗಿದ್ದು, ಆರೋಪಿಗಳಿಗೆ ಶಿಕ್ಷೆಯನ್ನೂ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇಷ್ಟು ಮಾತ್ರದ ಕ್ರಮದಿಂದ ದೊಡ್ಡ ಇಲಾಖೆಯೊಂದರಲ್ಲಿ ಸುಧಾರಣೆ ಸಾಧಿಸಿಬಿಡಬಹುದು, ಇಲಾಖೆಯನ್ನು ಭ್ರಷ್ಟಾಚಾರದಿಂದ […]

ಬೆಲೆಏರಿಕೆಯಿಂದ ತತ್ತರಿಸಿರುವ ಜನರಿಗೆ ಸರಕಾರ ಗ್ಯಾರಂಟಿ ಸ್ಕೀಂ ಗಳ ಮೂಲಕ ಶಕ್ತಿ ತುಂಬುತ್ತಿದೆ- ಎಂ. ಬಿ. ಪಾಟೀಲ

ವಿಜಯಪುರ: ಬೆಲೆ ಏರಿಕೆಯಿಂದ ತತ್ತರಿಸಿರುವ ನಾಡಿನ ಜನರಿಗೆ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಶಕ್ತಿ ತುಂಬುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಗೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ನಗರದಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿಗಳ ಕುರಿತು ಭರಸವೆ ನೀಡಿದ್ದೇವು. ಅದಕ್ಕೆ ಸ್ಪಂದಿಸಿ ಅಧಿಕಾರ ನೀಡಿದ ಜನರಿಗಾಗಿ ಈ ಯೋಜನೆಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ. […]

ಬೆಂಗಳೂರಿನಲ್ಲಿ ಮೇಕ್ ಮೈಟ್ರಿಪ್ ನಿಂದ ಎರಡು ಹೊಸ ಫ್ರಾಂಚೈಸಿ ಮಳಿಗೆಗಳ ಪ್ರಾರಂಭ

ಬೆಂಗಳೂರು: ಭಾರತದ ಮುಂಚೂಣಿಯ ಆನ್ಲೈನ್ ಟ್ರಾವೆಲ್ ಕಂಪನಿ ಮೇಕ್ ಮೈ ಟ್ರಿಪ್ ಕರ್ನಾಟಕದ ಬೆಂಗಳೂರಿನಲ್ಲಿ ಎರಡು ಹೊಸ ಫ್ರಾಂಚೈಸಿ ಮಳಿಗೆಗಳನ್ನು ತೆರೆದಿದೆ. ಈ ಮಳಿಗೆಗಳು ಕಮ್ಮನಹಳ್ಳಿ ಮತ್ತು ಇನ್ಫೆಂಟ್ರಿ ರಸ್ತೆಯ ಪ್ರದೇಶದಲ್ಲಿದ್ದು ನಗರದಲ್ಲಿ ಕ್ರಮವಾಗಿ ಮೇಕ್ ಮೈಟ್ರಿಪ್ ನ 16 ಮತ್ತು 17ನೇ ಮಳಿಗೆಗಳಾಗಿವೆ ಹಾಗೂ ಕರ್ನಾಟಕದಲ್ಲಿ ಹದಿನಾಲ್ಕನೆಯದಾಗಿವೆ.  ಈ ಫ್ರಾಂಚೈಸಿ ಜಾಲದ ವಿಸ್ತರಣೆಯು ಭಾರತದಲ್ಲಿ ಮುಂಚೂಣಿಯ 100+ ನಗರಗಳಲ್ಲಿ ಗ್ರಾಹಕರಿಗೆ ಸೇವೆ ಒದಗಿಸುವ ವಿಸ್ತಾರ ಕಾರ್ಯತಂತ್ರದ ಭಾಗವಾಗಿದ್ದು ಜನರು ಅವರು ವಿಶ್ವಾಸವಿರಿಸುವವರೊಂದಿಗೆ ಹೆಚ್ಚು ಅನುಕೂಲಕರವಾಗಿ ಸಂವಹನ […]

ಅಕ್ಕಮಹಾದೇವಿ ಮಹಿಳಾ ವಿವಿ ನೂತನ ರಜಿಸ್ಟ್ರಾರ್ ಆಗಿ ಶಂಕರಗೌಡ ಎಸ್. ಸೋಮನಾಳ ಅಧಿಕಾರ ಸ್ವೀಕಾರ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಶಂಕರಗೌಡ ಎಸ್. ಸೋಮನಾಳ ಅಧಿಕಾರ ಸ್ವೀಕರಿಸಿದ್ದಾರೆ. ಹಾಲಿ ಕುಲಸಚಿವರಾಗಿದ್ದ ಪ್ರೊ. ಬಿ. ಎಸ್. ನಾವಿ ಅವರು ನೂತನ ಕುಲಸಚಿವರಾಗಿ ನೇಮಕವಾಗಿರುವ ಶಂಕರಗೌಡ ಎಸ್. ಸೋಮನಾಳ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಉಪಕುಲಸಚಿವ ಡಾ. ಯು. ಕೆ. ಕುಲಕರ್ಣಿ, ಡಾ. ದೀಪಕ ಶಿಂದೆ, ಸಹಾಯಕ ಕುಲಸಚಿವ ಡಾ. ಪ್ರಕಾಶ ಬಡಿಗೇರ, ಡಾ. ಜಾಯ್ ಹೊಸಕೇರಿ, ಡಾ. ಸವಿತಾ ಹುಲಮನಿ […]

ವೃದ್ಧ ದಂಪತಿಯ ಮನವಿಗೆ ಒಂದೇ ಗಂಟೆಯಲ್ಲಿ ಸ್ಪಂದನೆ- ಡಿಸಿ ಟಿ. ಭೂಬಾಲನ ಮಾಡಿದ ಕೆಲಸ ಇತರರಿಗೆ ಮಾದರಿ

ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗಳಿಗೆ ಒಂದು ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಇತರ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.   ವಿಜಯಪುರ ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಮತ್ತು ಸುರೇಖಾ ರಾಮದುರ್ಗ ಕಡು ಬಡವ ವೃದ್ಧ ದಂಪತಿಯಾಗಿದ್ದು, ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು.  ತಮ್ಮ ಜೀವನೋಪಾಯಕ್ಕೆ ಆಸರೆ ಒದಗಿಸಲು ಮನವಿ ಮಾಡಿಕೊಂಡಿದ್ದರು.  ಜಿಲ್ಲಾಧಿಕಾರಿಗಳು ಅವರ ದೂರನ್ನು ಶಾಂತಚಿತ್ತದಿಂದ ಅಲಿಸಿ, ಸ್ಥಳದಲ್ಲಿಯೇ ವೃದ್ದ ದಂಪತಿಗಳಿಗೆ ಪಿಂಚಣಿ ಮಂಜೂರು ಮಾಡಿ ಕೊಡುವ […]

ರಾಜ್ಯ ಮಟ್ಟದ ಅಬ್ಯಾಕಸ್, ವೇದಿಕ ಗಣಿತ ಸ್ಪರ್ಥೆಯಲ್ಲಿ ಬಸವನಾಡಿನ ವಿದ್ಯಾರ್ಥಿಗಳ ಸಾಧನೆ

ವಿಜಯಪುರ: ಮಹಾರಾಷ್ಟ್ರದ ಸೋಲಾಪೂರದ ಶ್ರದ್ಧಾ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಬ್ಯಾಕಸ್ ಮತ್ತು ವೇದಿಕ್ ಗಣಿತ ಸ್ಪರ್ಧೆಯಲ್ಲಿ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿರುವ ಸಿದ್ಧೇಶ್ವರ ಕೋಚಿಂಗ್ ಕ್ಲಾಸ್ ನ ವಿದ್ಯಾರ್ಥಿನಿ ಸ್ಪಂದನಾ ಬಸನಗೌಡ ಬಿರಾದಾರ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಗಮನ ಸೆಳೆದಿದ್ದಾರೆ.  ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಗೌರವಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸುರೇಶ ಜತ್ತಿ, ದೇವರು ಪ್ರತಿಯೊಬ್ಬ ಮಗುವಿನಲ್ಲಿ ವಿಶೇಷ ಸಾಮರ್ಥ್ಯ ಕೊಟ್ಟಿರುತ್ತಾನೆ.  ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಕರು […]