ರಾಜ್ಯಪಾಲರ ವಿರುದ್ಧ ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ನಾನಾ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯಪಾಲರ ಪ್ರತಿಕೃತಿ ದಹನ ಮಾಡಿದರು. ನಗರದ ಗಾಂಧಿಚೌಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸೋಮನಾಥ ಕಳ್ಳಿಮನಿ ಮತ್ತೀತರ ಮುಖಂಡರು ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು.  ರಾಜ್ಯದ ಜನ ಅವರ ಜೊತೆಗಿದ್ದಾರೆ.  ಸಿಎಂ ತೇಜೋವಧೆ ಮಾಡುವ ಉದ್ದೇಶದಿಂದ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ.  ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ […]

ಶಾಸಕ ಯತ್ನಾಳ ವಕ್ಫ್ ಬಗ್ಗೆ ತಿಳಿದುಕೊಂಡು‌ ಮಾತನಾಡಲಿ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಕ್ಫ್ ಬಗ್ಗೆ ತಿಳಿದುಕೊಂಡು‌ ಮಾತನಾಡಲಿ ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ರೀಚೆಗೆ ಬಿಜೆಪಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಯತ್ನಾಳ‌ ಅವರು ವಕ್ಫ್ ಕಾನೂನು ರದ್ದುಪಡಿಸಲು‌ ಪ್ರಧಾನಿಗೆ ಪತ್ರ ಬರೆಯುವಿದಾಗಿ ಹೇಳಿದ್ದಾರೆ. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿಯೇ ವಕ್ಫ್ ಕಾನೂನು ಇದೆ. ಮುಜರಾಯಿಯಂತೆ ವಕ್ಫ್ ನಲ್ಲೂ ಇದೆ. ಮುಸ್ಲಿಂ ಸಮಾಜಕ್ಕೆ ಸೇರಿದ ವ್ಯಕ್ತಿಗಳು, ವಸ್ತು ಅಥವಾ ಆಸ್ತಿಯನ್ನು ಅಲ್ಲಾ(ದೇವರು)ನ ಹೆಸರು ಮೇಲೆ […]

ಲೋಕಸಭೆ ಚುನಾವಣೆ ಮತ ಎಣಿಕೆ: ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಲೋಕಸಭೆ ಚುನಾವಣೆಯ ಮತ ಎಣಿಕೆಯು ಜೂ. 4 ರಂದು ಮಂಗಳವಾರ ಚುನಾವಣೆ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.   ವಿಜಯಪುರ ಮೀಸಲು(ಪ. ಜಾ) ಲೋಕಸಭೆ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ಚುನಾವಣೆ ವೀಕ್ಷಕರೊಂದಿಗೆ ಅಂತಿಮ ಹಂತದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ  ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.   ಮತ ಎಣಿಕೆ ಆರಂಭಕ್ಕೆ ಮುನ್ನ ಬೆ. […]

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ವಿಜಯಪುರ ಜಿಲ್ಲಾಡಳಿತ ಸನ್ನದ್ಧ: ಮೇ 7 ರಂದು ಮತದಾನ. 1946090 ಮತದಾರರು, 2086 ಮತಗಟ್ಟೆಗಳ ಸ್ಥಾಪನೆ

ವಿಜಯಪುರ: ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದಿಂದ, ಮೇ.07ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19,46,090 ಮತದಾರರಿದ್ದು, ಜಿಲ್ಲೆಯಾದ್ಯಂತ ಒಟ್ಟು 2086 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಇದೇ ಮೇ 7 ರಂದು ನಡೆಯುವ ಮತದಾನ ಹಾಗೂ ಜೂನ್. 4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು […]

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ

ವಿಜಯಪುರ: ವಿಜಯಪುರ ಲೋಕಸಭೆ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಪ್ರಕಾಶ ಅಕ್ಕಲಕೋಟ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಬಿಜೆಪಿ‌‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ವಿಜಯಪುರ ನಗರದ ಡೋಹರ ಗಲ್ಲಿ‌ ಹಾಗೂ ಅಗಸರ ಗಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿ ಮನೆಮನೆಗೆ ತೆರಳಿ ಕರಪತ್ರ ಹಂಚಿ ಅವರು ಬಿಜೆಪಿ ಪರ ಮತಯಾಚಿಸಿದರು.  ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅತ್ಯುತ್ಸಾಹದಲ್ಲಿ […]

ಯಾರಿಗಾದರೂ ತೊಂದರೆ ಕೊಟ್ಟಿದ್ದನ್ನು ಸಾಬೀತು ಮಾಡಿದರೆ ಚುನಾವಣೆ ಕಣದಿಂದ ನಿವೃತ್ತಿ- ಸಂಸದರಿಗೆ ಪ್ರೊ. ರಾಜು ಆಲಗೂರ ಸವಾಲು

ವಿಜಯಪುರ: ಪ್ರೊ. ರಾಜು ಆಲಗೂರ ವಿಜೇತರಾದರೆ ಲಿಂಗಾಯಿತ ಸಮುದಾಯಕ್ಕೆ ತೊಂದರೆಯಾಗಲಿದೆ ಎಂದು ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನೀಡಿರುವ ಹೇಳಿಕೆಗೆ  ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೇಳಿಕೆ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕೀಳು ಮಟ್ಟದ ರಾಜಕಾರಣ ಆರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಈವರೆಗೂ ಯಾರಿಗೂ ಏಕವಚನದಲ್ಲಿ ಮಾತನಾಡಿಲ್ಲ.ನಾನು ಲಿಂಗಾಯಿತ ಸಮುದಾಯದ ಜೊತೆಗೆ ಅನುಚಿತವಾಗಿ ನಡೆದುಕೊಂಡಿದ್ದನ್ನು ಬಿಜೆಪಿ ಅಭ್ಯರ್ಥಿ ರುಜುವಾತು […]

ನರೇಂದ್ರ ಮೋದಿ ಮತ್ತೋಮ್ಮೆ ಪ್ರಧಾನಿಯಾಗಲಿ- ಮಹಿಳೆಯರಿಂದ ವಿಶೇಷ ಪೂಜೆ

  ವಿಜಯಪುರ : ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ ಬಿಜೆಪಿ ಮಹಿಳಾ ಮೊರ್ಚಾ ಕಾರ್ಯಕರ್ತೆಯರು ನಗರದ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಶದ ರಕ್ಷಣೆ, ಅಭಿವೃದ್ಧಿಗಾಗಿ ದಿಟ್ಟ ನಿರ್ಧಾರಗಳನ್ನು ಕೈಗೊಂಡು ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ಇನ್ನಷ್ಟು ಶಕ್ತಿ, ಆಯುರಾರೋಗ್ಯ ಕರುಣಿಸಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ.  ಅವರ ನೇತೃತ್ವದಲ್ಲಿ ಬಿಜೆಪಿ […]

ಶೇ. 100 ರಷ್ಟು ಮತದಾನ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ- ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯು ಸೈಕ್ಲಿಂಗ್ ಕ್ಷೇತ್ರಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕ್ರೀಡಾಪಟುಗಳ ಸ್ಪರ್ಧಾ ಮನೋಭಾವ ಹೆಮ್ಮರದಂತೆ ಇದೆ.  ಅದರಂತೆ ಲೋಕಸಭೆ ಚುನಾವಣಾಯಲ್ಲೂ ಸ್ಪರ್ಧೇಯೊಡ್ಡಿದವರಂತೆ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.   ಲೋಕಸಭೆ ಚುನಾವಣೆ 2024ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸೈಕಲ್ ಜಾಥಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಲ್ಲಿನ ಸೈಕ್ಲಿಂಗ್ ಕ್ರೀಡಾಪಟುಗಳು […]

ವಿಜಯಪುರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ವಿಜನ್ ಏನು ಗೊತ್ತಾ?

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ ತಾವು ಹೊಂದಿರುವ ವಿಜನ್ ನನ್ನು ಬಿಚ್ಚಿಟ್ಟಿದ್ದಾರೆ.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಾವು ಗೆಲುವು ಸಾಧಿಸಿದರೆ 10 ಅಂಶಗಳ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಪ್ರೊ. ರಾಜು ಆಲಗೂರ ಅವರ ವಿಜನ್ ಏನು? ಇಲ್ಲಿದೆ ಮಾಹಿತಿ. ನೀರಾವರಿ   1. ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೃμÁ್ಣ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಲು […]

ರಕ್ತಬಸಿದು ಪಕ್ಷ ಕಟ್ಟಿದ್ದೇನೆ ಆದರೆ ನನ್ನನ್ನು ಡಿಸಿಎಂ ಸ್ಥಾನ ಕಿತ್ತುಕೊಂಡರು ಬಿಜೆಪಿ ವಿರುದ್ಧ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ

ವಿಜಯಪುರ: ರಕ್ತಬಸಿದು ಪಕ್ಷ ಕಟ್ಟಿದ್ದೇನೆ.  ಆದರೆ, ನನ್ನ ಡಿಸಿಎಂ ಸ್ಥಾನ ಕಿತ್ತುಕೊಂಡರು ಎಂದು ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಲಕ್ಷ್ಣಣ ಸವದಿಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂಬ ಆರೋಪದ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅಂಥದ್ದೇನೂ ಇಲ್ಲ.  ನಾನು ಬಿಜೆಪಿ ಸೇರಿದಾಗ ಅಥಣಿ ಮತ್ತು ‌ಕಾಗವಾಡ ಸುತ್ತಮುತ್ತ ಗ್ರಾಮ ಪಂಚಾಯಿತಿಯಿಂದ ಹಿಡಿದು ಎಲ್ಲಿಯೂ ಬಿಜೆಪಿಯ ಜನಪ್ರತಿನಿಧಿ‌ ಇರಲಿಲ್ಲ.  ನಾನು ರಕ್ತಬಸಿದು […]