ಗುಮ್ಮಟ ನಗರಿಯಿಂದ ಯತ್ನಾಳಗೆ ಟಿಕೆಟ್ ನೀಡಬೇಕು- ಬಿಜೆಪಿ ಕಾರ್ಪೋರೇಟರ್ ಗಳ ಆಗ್ರಹ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ನಗರ ಮತಕ್ಷೇತ್ರದಿಂದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೇಮಾನಂದ ಬಿರಾದಾರ, ಮಾಜಿ ಉಪಮೇಯರ್ ರಾಜೇಶ ದೇವಗಿರಿ ಮತ್ತೀತರರು, ಕಳೆದ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಛಾಟಿತರಾಗಿರುವ ಮುಖಂಡರು ಯತ್ನಾಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.   ಮಹಾನಗರ ಪಾಲಿಕೆಯ ಬಿಜೆಪಿಯ 18 ಕಾರ್ಪೋರೇಟರ್ […]

ಒಳಮೀಸಲಾತಿ ರದ್ದು ಪಡಿಸಲು ಆಗ್ರಹಿಸಿ ಬಂಜಾರಾ ಸಮುದಾಯದಿಂದ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದ್ದು, ಅದನ್ನು ರದ್ದು ಪಡಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ(ಎ.ಐ.ಬಿ.ಎಸ್‌.ಎಸ್‌.) ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ಹೀರು ರಾಠೋಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತರಾತುರಿಯಲ್ಲಿ , ಸಚಿವರಾದ ಗೋವಿಂದ ಕಾರಜೋಳ, ಅಂಗಾರಾ, ಪ್ರಭು ಚವ್ಹಾಣ, ಡಿ. ಸುಧಾಕರ ಅವರನ್ನೊಳಗೊಂಡ ಐದು ಜನರ ಉಪಸಮಿತಿ ರಸಿಚಿ ಚುನಾವಣೆ ಸಂರ್ಭದಲ್ಲಿ ಪರಿಶಿಷ್ಠ ಜಾತಿಯಲ್ಲಿರುವ 101 ಸಮುದಾಯಗಳನ್ನು ಒಡೆಯುವ ಕೆಲಸ […]

ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯ ಚುನಾವಣೆ ಆಯೋಗದಿಂದ ನಡೆದ ವಿಡಿಯೋ ಕಾನ್ಫರೆನ್ಸಲ್ಲಿ  ಮಾತನಾಡಿದ ಅವರು, ಜಿಲ್ಲೆಯ ಎಂಟು ವಿಧಾನ ಸಭೆ ಮತಕ್ಷೇತ್ರಗಳಲ್ಲಿ ಸುಗಮವಾಗಿ ಮತದಾನ ನಡೆಯಲು ಎಲ್ಲ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾದ ಮತಗಟ್ಟೆಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡು ಮತದಾನದ ಮಹತ್ವದ ಕುರಿತು ಅರಿವು […]

ಒಳಮೀಸಲಾತಿಗೆ ವಿರೋಧ- ತಿಕೋಟಾ ತಾಲೂಕು ಬಂಜಾರ ಸಮುದಾಯದಿಂದ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಒಳಮೀಸಲಾತಿಯನ್ನು ವಿರೋಧಿಸಿ ತಾಲೂಕು ಬಂಜಾರಾ ಸಮುದಾಯದ ಮುಖಂಡರು ತಿಕೋಟಾದಲ್ಲಿ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಸದಾಶಿವ ಆಯೋಗದ ಅವೈಜ್ಞಾನಿಕ ವರದಿಯನ್ನು ಅನುಷ್ಠಾನಗೊಳಿಸಲಾಗಿದ್ದು, ಅದನ್ನು ಹಿಂಪಡೆಯಬೇಕು.  2012ರಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅಂದಿನ ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಸರಕಾರಕ್ಕೆ ಸಲ್ಲಿಸಿದ್ದಾರೆ.  ಇದು ಅವೈಜ್ಞಾನಿಕ ಅಷ್ಟೇ ಅಲ್ಲ, ಕಾನೂನುಬಾಹಿರವೂ ಆಗಿದೆ.  ಅಲ್ಲದೇ, ಇದನ್ನು ವಿರೋಧಿಸಿ ಈಗಾಗಲೇ ಹಲವಾರು ಬಾರಿ ಬಂಜಾರ, ಭೋವಿ, ವಡ್ಡರ, ಕೊರಚ, ಕರೊವ ಸಮುದಾಯದವರು ರಾಜ್ಯಾದ್ಯಂತ ಹೋರಾಟವನ್ನು ಮಾಡಿದ್ದಾರೆ.  2020ರಲ್ಲಿ […]

ದೇವರ ಹಿಪ್ಪರಗಿಯಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಬೇಕು- ಎಸ್. ಆರ್. ಪಾಟೀಲರಿಗೆ ನೀಡಿದರೆ ಕೆಲಸ ಮಾಡಲ್ಲ- ಬಾಪುಗೌಡ ಪಾಟೀಲ ವಡವಡಗಿ

ವಿಜಯಪುರ: ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಾಪುಗೌಡ ಮಲ್ಲನಗೌಡ ಪಾಟೀಲ(ವಡವಡಗಿ) ಆಗ್ರಹಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರ ಹಿಪ್ರರಗಿ ಮತಕ್ಷೇತ್ರದವನಾಗಿ ಕಳೆದ 19 ವರ್ಷಗಳಿಂದ ಕಾಂಗ್ರೆಸ್ ಸಂಘಟನೆಗಾಗಿ ಬಹಳಷ್ಟು ದುಡಿದಿದ್ದೇನೆ.  2005 ರಿಂದ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಸಮಾಜ ಸೇವೆ ಮಾಡುತ್ತ ಕಾಂಗ್ರೆಸ್ ಬಲಪಡಿಸಿದ್ದೇನೆ.  ಈ ಕ್ಷೇತ್ರದಿಂದ ಎ. ಎಸ್. ಪಾಟೀಲ ನಡಹಳ್ಳಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಲು […]

ವಿಧಾನಸಭೆ ಚುನಾವಣೆ: ಚುನಾವಣಾಧಿಕಾರಿಗಳಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ವಿಜಯಪುರ: ವಿಧಾನಸಭೆ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗವು ಜಾರಿಗೊಳಿಸಿರುವ ನೀತಿ ಸಂಹಿತೆಗಳನ್ನು ತಪ್ಪದೇ ಪಾಲಿಸುವಂತೆ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿಜಯಪುರ ನಗರ ವಿಧಾನಸಭೆ ಮತಕ್ಷೇತ್ರದ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ  ಸೂಚನೆ ನೀಡಿದರು. ವಿಜಯಪುರ ನಗರ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ವಿಧಾನಸಭೆ ಚುನಾವಣೆಗೆ ಏ. 13 ಗುರವಾರ ಅಧಿಸೂಚನೆ ಹೊರಡಿಸುವುದು. ನಾಮಪತ್ರ ಸಲ್ಲಿಸಲು ಏ. […]

ಬಾಲಾಜಿ ಶುಗರ್ಸ್ ಮೇಲೆ ಎರಡನೇ ಬಾರಿ ಚುನಾವಣಾಧಿಕಾರಿಗಳ ಧಾಳಿ- ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಗಳು ವಶ

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಬಾಲಾಜಿ ಶುಗರ್ಸ್ ಕಾರ್ಖಾನೆಯ ಮೇಲೆ ಚುನಾವಣಾಧಿಕಾರಿಗಳು ಎರಡನೇ ಬಾರಿ ಧಾಳಿ ನಡೆಸಿದ್ದು, ಮತ್ತೆ ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಐಟಂ ಗಳು ಪತ್ತೆಯಾಗಿವೆ.  ಈ ಸಂದರ್ಭದಲ್ಲಿ ನೂರಾರು ಬಾಕ್ಸ್ ಗಳಲ್ಲಿ ಸಂಗ್ರಹಿಸಿ ಇಡಲಾಗಿದ್ದ ಗಿಫ್ಟ್ ಗಳನ್ನು ಪತ್ತೆ ಮಾಡಲಾಗಿದೆ.  ಮಾ. 27 ರಂದು ರೂ. 2. 10 ಕೋ. ಮೊತ್ತದ ಗಿಫ್ಟ್ ಗಳು ಪತ್ತೆಯಾಗಿದ್ದವು.  ಈ ವೇಳೆ, ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಎಸ್. ಆರ್. […]

ಚಡಚಣ ಪೊಲೀಸರ ಕಾರ್ಯಾಚರಣೆ- ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ. 27 ಲಕ್ಷ ಮೌಲ್ಯದ ಚಿನ್ನಾಭರಣ ವಶ

ವಿಜಯಪುರ: ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ ರೂ. 27 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಚಡಚಣ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭಾಗದ ಚಡಚಣದಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು ದೇವರ ನಿಂಬರಗಿ ಬಳಿ ಧಾಳಿ ನಡೆಸಿದಾಗ ಕಾರಿನಲ್ಲಿ ತೆರಳುತ್ತಿದ್ದವರನ್ನು ವಿಚಾರಣೆ ನಡೆಸಿದಾಗ ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ 480 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.  ರೂ. 6 ಲಕ್ಷ ನಗದು ಸಹಿತ ಒಟ್ಟು ರೂ. 27 ಲಕ್ಷದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.  MH- 13/AZ- 4201 ನಂಬರಿನ ಕಾರಿನಲ್ಲಿ ಈ ಹಣ […]

ಸೌಮ್ಯ ರೀತಿ ಹೋರಾಟಕ್ಕೆ ಸ್ಪಂದಿಸದಿದ್ದರೆ ಉಗ್ರ ಹೋರಾಟ- ಒಳಮೀಸಲಾತಿ ವಿರುದ್ಧ ಶಾಸಕ ದೇವಾನಂದ ಚವ್ಹಾಣ ಆಕ್ರೋಶ

ವಿಜಯಪುರ: ರಾಜ್ಯ ಸರಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.  ಬಂಜಾರಾ ಸಮುದಾಯಕ್ಕೆ ಮೀಸಲಾತಿ ಪ್ರಮಾಣದಲ್ಲಿ ಕಡಿಮೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸರಕಾರ ಜೇನುಗೂಡಿಗೆ ಕಲ್ಲು ಹೊಡೆದಿದೆ.  ಒಳ ಮೀಸಲಾತಿಯಿಂದ‌ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು. ಬಂಜಾರ ಸಮುದಾಯದ ತಾಳ್ಮೇ ಪರೀಕ್ಷಿಸಬೇಡಿ.  ಸರಕಾರಕ್ಕೆ ಎಚ್ಚರಿಕೆ ಕೊಡ್ತೀನಿ.  ಬಂಜಾರ‌ […]

ಒಳ ಮೀಸಲಾತಿಯಿಂದ ಬಂಜಾರಾ, ಭೋವಿ, ಕೊರಚ ಸಮುದಾಯಗಳಿಗೆ ಅನ್ಯಾಯ- ಕಾಂತಾ ನಾಯಕ ಆರೋಪ

ವಿಜಯಪುರ: ಒಳ ಮೀಸಲಾತಿಯಿಂದಾಗಿ ಬಂಜಾರಾ ಸಮಾಜ ಸೇರಿದಂತೆ ಭೋವಿ ಹಾಗೂ ಕೊರಚ ಸಮುದಾಯಗಳಿಗೆ ಅನ್ಯಾಯವಾಗಲಿದೆ.  ಬಿಜೆಪಿಯ ಈ ಹುನ್ನಾರದಿಂದಾಗಿ ಈ ಸಮುದಾಯಗಳ ಬೆನ್ನಿಗೆ ಚೂರಿ ಹಾಕುವಂಥ ಕೆಲಸವನ್ನು ಬಿಜೆಪಿ ಮಾಡುತ್ತಿರುವುದು ತಪ್ಪು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಸರಕಾರ ಯಾವಾಗಲೂ ಜನರ ಬೆನ್ನಿಗೆ ಚೂರಿ ಹಾಕುವಂಥ ಕೆಲಸವನ್ನು ಮಾಡುತ್ತಲೇ ಬಂದಿದೆ.  ಬಿಜೆಪಿಯವರ ಆಟಕ್ಕೆ ಜನರು ಬಲಿಯಾಗುತ್ತಿದ್ದಾರೆ.  ಈಗ […]