Harihar Yatnal: ನಿರಾಣಿ ಸಚಿವರಾಗಲು ಪೀಠ ಕಟ್ಟಿದ್ದಾರೆ- ಹರಿಹರ ಶ್ರೀ ಬ್ರೋಕರ್- ಶಾಸಕ‌ ಯತ್ನಾಳ

ವಿಜಯಪುರ: ಹರಿಹರ ಪಂಚಮಸಾಲಿ ಪೀಠಾಧೀಶ ವಚನಾನಂದ ಸ್ವಾಮೀಜಿ ಓರ್ವ ಬ್ರೋಕರ್ ಎಂದು ವಿಜಯಪುರ ನಗರ ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ‌ ಯತ್ನಾಳ ಕಿಡಿ ಕಾರಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಜೋಕರ್ ಪದ ಬಳಕೆ ಮಾಡಿರುವ ಪಚನಾನಂದ ಶ್ರೀಗಳ ವಿರುದ್ಧ ಹರಿಹಾಯ್ದರು. ಹರಿಹರ ಪೀಠದ ಸ್ವಾಮೀಜಿ ಬ್ರೋಕರ್ ಸ್ವಾಮಿ ಆಗಿದ್ದಾರೆ. ಹಣ ವಸೂಲಿ ಮಾಡುವುದು, ಮಂತ್ರಿ ಮಾಡಿ ಎಂದು ಹಣ ಕೇಳುವ ಕೆಲಸ ಮಾಡುತ್ತಾರೆ. ಮಂತ್ರಿ ಮಾಡಿ ಎಂದು ಬ್ರೋಕರ್ ಕೆಲಸ ಮಾಡುತ್ತಾರೆ […]

Congress Protest: ಮಹಾನಗರ ಪಾಲಿಕೆ ಚುನಾವಣೆ: ಮತದಾರ ಪಟ್ಟಿಯಲ್ಲಿ ಅಕ್ರಮ ಆರೋಪ- ಕಾಂಗ್ರೆಸ್ ಪ್ರತಿಭಟನೆ

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆ ಮತದಾರ ಪಟ್ಟಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ್ ಮುಶ್ರಿಫ್, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಗರ ಮತಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ.  ಈ ಕುರಿತು ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಧಿಕಾರಿಗಳು ತಪ್ಪೆಸಗಿರುವ […]

MS Loni Congress: ಮಲ್ಲಿಕಾರ್ಜುನ ಎಸ್. ಲೋಣಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮತ್ತು 2021ರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಎಸ್. ಲೋಣಿ ಅವರು ಕಾಂಗ್ರೆಸ್ಸಿಗೆ ಮರುಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ಪ್ರತಿಪಕ್ಷದ ನಾಯಕ ಎಸ್.ಸಿದ್ಧರಾಮಯ್ಯ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಎಸ್. ಲೋಣಿ ಕಾಂಗ್ರೇಸ್ಗೆ ಸೇರ್ಪಡೆಯಾದರು. ಡಿ.ಕೆ.ಶಿವಕುಮಾರ ಮತ್ತು ಎಸ್. ಸಿದ್ಧರಾಮಯ್ಯ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಕೂಡ […]

Yantal High Command: ರಾಜ್ಯ ನಾಯಕರಿಗೆ ನನ್ನ ಶಕ್ತಿ ಮನವರಿಕೆಯಾಗಿದೆ- ಅಪರಾಧ ತನಿಖೆಗೆ ಸಿಎಂ, ಗೃಹ ಸಚಿವರು ಪೋಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಿ- ಶಾಸಕ ಯತ್ನಾಳ ಆಗ್ರಹ

ವಿಜಯಪುರ: ರಾಜ್ಯ ನಾಯಕರಿಗೆ ನನ್ನ ಶಕ್ತಿ ಏನು ಎಂಬುದು ಅರಿವಾಗಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಗೆ ತಮ್ಮನ್ನು ಆಹ್ವಾನಿಸಿರುವ ಕುರಿತು ಪ್ರತಿಕ್ರಿಯೆ ನೀಡಿದರು. ಪಕ್ಷ ಆಹ್ವಾನ ನೀಡಿದೆ ಅದಕ್ಕಾಗಿ ಬಂದಿದ್ದೇನೆ.  ಶಾಸಕನಾದ ಬಳಿಕ ಇದೇ ಮೊದಲ ಬಾರಿಗೆ ಆಹ್ವಾನ ನೀಡಿದ್ದಾರೆ.  ಹೀಗಾಗಿ ಬಂದಿದ್ದೇನೆ.  ಈ ಹಿಂದೆ ಸ್ಥಳೀಯ ಮುಖಂಡರು ಪಕ್ಷದ ರಾಜ್ಯ ನಾಯಕರಿಗೆ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದರು.  […]

Corporators Honour: ಪಾಲಿಕೆ ನೂತನ ಸದಸ್ಯರಿಗೆ ಸುವಿಧಾ, ಕರವೇ, ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನ

ವಿಜಯಪುರ: ಮಹಾನಗರ ಪಾಲಿಕೆಗೆ ಆಯ್ಕೆಯಾದ ನೂತನ ಸದಸ್ಯರನ್ನು ಸುವಿಧಾ ಸಾಮಾಜಿಕ ಸಂಸ್ಥೆ, ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕ, ಲಯನ್ಸ್ ಕ್ಲಬ್ ಆಫ್ ವಿಜಯಪುರ ಪರಿವಾರಗಳ ಸಂಯುಕ್ತ ಆಶ್ರಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಸಯ್ಯದ ಫೈರೋಜ ಹುಸೇನಿ, ಶ್ರೀ ಶಂಭುಲಿಂಗ ಮಹಾರಾಜರು, ಸಂಗಮೇಶ ಶರಣರು, ಫಾ. ಟಿಯೋಲೋ ಮಚಾದೋ ಸಾನಿಧ್ಯ ವಹಿಸಿ ನೂತನ ಸದಸ್ಯರನ್ನು ಸನ್ಮಾನಿಸಿ ಆಶೀರ್ವದಿಸಿದರು. ಮಹಾನಗರ ಪಾಲಿಕೆಯ ನೂತನ ಸದಸ್ಯರಾದ ರಾಜು ಮಗಿಮಠ, ರಾಧಾಬಾಯಿ ದೇವಗಿರಿ, ಪ್ರೇಮಾನಂದ ಬಿರಾದಾರ, ಅಲ್ತಾಫ್ ಇಟಗಿ, […]

Jarakiholi Yatnal: ಗೋಕಾಕಿನಲ್ಲಿ ಉತ್ತರ ಕೊಡುತ್ತೇನೆ- ಇಂಥವರಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ- ಯತ್ನಾಳ ವಾಗ್ದಾಳಿ

ವಿಜಯಪುರ: ಹಿಂದೂ ಅಶ್ಲೀಲ ಪದ ಎಂದು ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೀಡಿರುವ ಹೇಳಿಕೆ ಖಂಡಿಸಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರದಲ್ಲಿ ಪ್ರತಿಭಟನೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ, ಕಾಂಗ್ರೆಸ್ ಪಕ್ಷ ಪಾಕಿಸ್ತಾನ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು. ಮುಸ್ಲಿಮರ ತುಷ್ಟಿಕರಣಕ್ಕೆ ಕಾಂಗ್ರೆಸ್ಸಿನವರು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ.  ಹಿಂದೂ ಧರ್ಮಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಸನಾತನ ಧರ್ಮ ಇದಾಗಿದೆ.  ಹಿಂದೂ […]

Arun Singh Yatnal: ಗುಮ್ಮಟ ನಗರಿಗೆ ದೌಡಾಯಿಸಿ ಯತ್ನಾಳ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ ಅರುಣಸಿಂಗ್

ವಿಜಯಪುರ: ಬಸವ ನಾಡು ವಿಜಯಪುರ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭೇಟಿ ಮಾಡಿ 15 ನಿಮಿಷ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಈ ಕಾರ್ಯಕ್ರಮದಲ್ಲಿ ಅರುಣಸಿಂಗ್, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮಾಜಿ ಶಾಸಕ ರವಿಕಗಾಂತ ಪಾಟೀಲ ಸೇರಿದಂತೆ ಬಿಜೆಪಿಯ ನಾನಾ ಮುಖಂಡರು ಪಾಲ್ಗೋಂಡಿದ್ದರು.  ಆದರೆ, ವಿಜಯಪುರ […]

Vijayendra Birthday: ಬಿ. ವೈ. ವಿಜಯೇಂದ್ರ ಜನ್ಮದಿನ: ಬಸವ ನಾಡಿನಲ್ಲಿ ವಿಶೇಷ ಪೂಜೆ- ವಿಜಯೇಂದ್ರ ಸಿಎಂ ಆಗಲಿ ಎಂದು ಪ್ರಾರ್ಥಿಸಿದ ಬೆಂಬಲಿಗರು

ವಿಜಯಪುರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರ ಜನ್ಮದಿನದ ಅಂಗವಾಗಿ ಬಸವ ನಾಡು ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ವಿಜಯಪುರ ನಗರದ ಗ್ರಾಮದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಕೃಷ್ಣಾ ಕಾಡಾ ನಿರ್ದೇಶಕ ರವಿ ಖಾನಾಪುರ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.  ಅಲ್ಲದೇ, ಕ್ಷೀರ ಹಂಚಿಕೆ ಮಾಡಿದರು.  ವಿಜಯೇಂದ್ರ ಅವರಿಗೆ ದೇವರು ಒಳ್ಳೆಯ ಆರೋಗ್ಯ ಮತ್ತು […]

Corporators CM Meet: ಯತ್ನಾಳ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ವಿಜಯಪುರ ಪಾಲಿಕೆ ಬಿಜೆಪಿ ಕಾರ್ಪೋರೇಟರ್ ಗಳು

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿ ನೂತನ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ತೆರಳಿದ ಸದಸ್ಯರು ಮುಖ್ಯಮಂತ್ರಿಯನ್ನು ಭೇಟಿ ಮಾಡಿದರು‌.  ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ಸದಸ್ಯರು ಕೃತಜ್ಞತೆ ಸಲ್ಲಿಸಿದರು. ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಅತೀ ಹೆಚ್ಚು ಸದಸ್ಯರು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯತ್ನಾಳ ಸೂಚನೆಯಂತೆ ಬಿಜೆಪಿ ಸದಸ್ಯರು […]

Congress Honour: ಪಾಲಿಕೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಶ್ರಿಫ್ ರಿಂದ ಸನ್ಮಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ 10 ಜನ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಜನಸಂಪರ್ಕ ಕಚೇರಿಯಲ್ಲಿ ಅಭಿನಂದನೆ ಸಭೆ ನಡೆಯಿತು. ಆಯ್ಕೆಯಾದ 10 ಕಾಂಗ್ರೆಸ್ ಕಾರ್ಪೊರೇಟರ್ ಗಳನ್ನು ಅಬ್ದುಲ್ ಹಮೀದ್ ಮುಶ್ರೀಫ್ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ ಮುಶ್ರಿಫ್, ಮಹಾನಗರ ಪಾಲಿಕೆ ಸದಸ್ಯರ ನಡುವಿನ ಏಕತೆ ಮತ್ತು ಒಗ್ಗಟ್ಟಿನಿಂದ ಮುಂದಿನ ಸಾರ್ವತ್ರಿಕ‌ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಮತದಾರರ […]