Reservatin Ibrahim: ಮುಸ್ಲಿಂ ಮೀಸಲಾತಿ ವಿಚಾರ: ಯಡಿಯೂರಪ್ಪರಿಂದ ರದ್ದುಪಡಿಸಲು ಸಾಧ್ಯವಾಗದದ್ದು ಬೊಮ್ಯಾಯಿಂದ ಹೇಗೆ ಸಾಧ್ಯ? ಸಿ ಎಂ ಇಬ್ರಾಹಿಂ

ವಿಜಯಪುರ: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಮುಸ್ಲಿಮರ ಮೀಸಲಾತಿ ರದ್ದುಗೊಳಿಸಲು ಸಾಧ್ಯವಾಗಲಿಲ್ಲ.  ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಸಾಧ್ಯವಾಗುತ್ತಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಅಧಿಕಾರದಲ್ಲಿದ್ದಾಗ ಸಂವಿಧಾನ ಬದ್ಧವಾಗಿ, ಸಮಿತಿ ರಚಿಸಿ ಆ ಕಮೀಟಿ ವರದಿ ಆಧಾರದ ಮೇಲೆ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡಲಾಗಿದೆ.  ಯಡಿಯೂರಪ್ಪ ಸಿಎಂ ಇದ್ದಾಗ ಈ […]

BJP Expel: ಬಿಜೆಪಿಯಿಂದ 14 ಮುಖಂಡರ ಉಚ್ಛಾಟನೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ವಿಜಯಪುರ‌ ಮಹಾನಗರ ಪಾಲಿಕೆ ಚುನೆವಣೆಯಲ್ಲಿ ಬಂಡಾಯದ ಬೇಗುದಿಗೆ ಸಿಲುಕಿರುವ ಬಿಜೆಪಿ ಈಗ ಕ್ರಮ ಕೈಗೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ತಟ್ಟಿರುವ ಬಿಸಿ ಕಡಿಮೆ ಮಾಡಲು ಮುಂದಾಗಿದೆ. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಮತ್ತು ಪಕ್ಷಾಂತರವಾಗಿ ಬೇರೆ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ನಾನಾ ವಾರ್ಡುಗಳಲ್ಲಿ ಕಣದಲ್ಲಿರುವ ಅಭ್ಯರ್ಥಿಗಳನ್ನು ಉಚ್ಛಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಆದೇಶ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ […]

Voting Booth Change: ಪಾಲಿಕೆ ಚುನಾವಣೆ: ಕೆಲವು ಮತಗಟ್ಟೆಗಳ ಹೆಸರು, ವಿಳಾಸ ಬದಲಾವಣೆ- ಎಲ್ಲಿ, ಯಾಕೆ ಗೊತ್ತಾ?

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2022ಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಇರುವ ಮತಗಟ್ಟೆ ಹೆಸರು ಮತ್ತು ವಿಳಾಸವನ್ನು ಮರು ನಾಮಕರಣ ಮತ್ತು ವಿಂಗಡಣೆ ಮಾಡಿ ಅದೇ ಅವರಣದಲ್ಲಿನ ಬೇರೆ ಕೊಠಡಿಯಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ ತಿಳಿಸಿದ್ದಾರೆ. ಇತ್ತೀಚಿಗೆ ಸತತವಾಗಿ ಸುರಿದ ಮಳೆಯಿಂದಾಗಿ ಕೆಲವು ಸರಕಾರಿ, ಖಾಸಗಿ ಶಾಲೆಗಳಲ್ಲಿ ಸ್ಥಾಪಿಸಲಾದ ಮತಗಟ್ಟೆ ಕೇಂದ್ರಗಳಲ್ಲಿ ಮೇಲ್ಛಾವಣಿ ಸೋರುತ್ತಿದ್ದು, ಶಿಥಿಲಗೊಂಡಿವೆ. ಕೆಲವೊಂದು ಮತದಾನ ಕೇಂದ್ರಗಳ ವಿಳಾಸದಲ್ಲಿ ಇಲಾಖೆಯಿಂದ ಶಾಲೆಗಳಿಗೆ […]

Arunsingh Yatnal: ಅರುಣಸಿಂಗ್ ಬಗ್ಗೆ ಈಗ ಮಾತಾಡೊಲ್ಲ- ನಟ ಚೇತನ ನಾಲಾಯಕ್ ಎಂದ ಶಾಸಕ

ವಿಜಯಪುರ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ತಮ್ಮ ವಿರುದ್ಧ ನೀಡಿರುವ ಹೇಳಿಕೆಯ ಬಗ್ಗೆ ವಿಜಯಪುರ ನಗರ ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ ನಯವಾಗಿಯೇ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಂಥ, ಇಂಥ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನಗೆ ಸಮಯ ಇಲ್ಲ ಎಂದು ಹೇಳಿದರು. ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ನನಗೆ ಬೇರೆ ಪ್ರತಿಕ್ರಿತೆ ನೀಡಲು ಸಮಯ ಇಲ್ಲ. ನಾನು ಯಾರನ್ನಾದರೂ ಬಿಡ್ತೀನಾ? ನಾನು ಯಾರ ಮನೆಗೂ ಹೋಗಿ ನಿಂತಿಲ್ಲ. ವೇದಿಕೆಯಲ್ಲಿ ಅಬ್ಬರಿಸುತ್ತೇನೆ. ನನ್ನ […]

Election Symbols: ಕಣದಲ್ಲಿರುವ 174 ಅಭ್ಯರ್ಥಿಗಳ ಹೆಸರು, ಅವರಿಗೆ ಸಿಕ್ಕಿರುವ ಚಿನ್ಹೆಗಳು ಯಾವವು ಗೊತ್ತಾ?

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಅ. 28 ರಂದು ಮತದಾನ ನಡೆಯುತ್ತಿದ್ದು, ಇದೀಗ ಅಂತಿಮವಾಗಿ 174 ಜನ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.  ನಾನಾ ಪಕ್ಷಗಳ ಮತ್ತು ಪಕ್ಷೇತರರಿಗೆ ಚುನಾವಣೆ ಚಿನ್ಹೆಗಳನ್ನು ಹಂಚಿಕೆ ಮಾಡಲಾಗಿದ್ದು, ಯಾವ ವಾರ್ಡಿನಿಂದ ಯಾವ ಅಭ್ಯರ್ಥಿ ಸ್ಪರ್ಧಿಸಿದ್ದಾರೆ ಮತ್ತು ಅವರಿಗೆ ಹಂಚಿಕೆಯಾಗಿರುವ ಚುನಾವಣೆ ಚಿನ್ನೆಯ ವಿವರ ಬಸವ ನಾಡು ವೆಬ್ ಗೆ ಲಭ್ಯವಾಗಿದೆ. ವಾರ್ಡುಗಳ ಸಂಖ್ಯೆ, ಅಭ್ಯರ್ಥಿಯ ಹೆಸರು, ಪಕ್ಷ ಮತ್ತು ಹಂಚಿಕೆಯಾಗಿರು ಚಿನ್ನೆಯ ಮಾಹಿತಿ ಇಲ್ಲಿದೆ.   ವಾರ್ಡ ಸಂಖ್ಯೆ […]

BJP Action: ಮಹಾನಗರ ಪಾಲಿಕೆ ಚುನಾವಣೆ- ಬಂಡಾಯ ಅಭ್ಯರ್ಥಿಗಳ ವಿರುದ್ಧ ಕಠಿಣ ಕ್ರಮ- 33 ವಾರ್ಡುಗಳಲ್ಲಿ ಬಿಜೆಪಿ ಗೆಲುವು ಖಚಿತ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಂಡಾಯವಾಗಿರುವ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಚ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಶಿಸ್ತಿನ ಪಕ್ಷ.  ಹೀಗಾಗಿ ಬಂಡಾಯವಾಗಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಲಾಗಿತ್ತು.  ಆದರೆ, ಕೆಲವರು ಕಣದಿಂದ ಹಿಂದೆ ಸರಿಯದಿರುವ ಹಿನ್ನೆಲೆಯಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದೆ.  ಪ್ರಧಾನಿ […]

Corporation Election: 35 ವಾರ್ಡುಗಳಿಗೆ ಅಂತಿಮವಾಗಿ ಕಣದಲ್ಲಿ ಉಳಿದ 174 ಅಭ್ಯರ್ಥಿಗಳು- ಯಾವ ವಾರ್ಡಿನಲ್ಲಿ ಎಷ್ಟು ಜನ ಸ್ಪರ್ಧೆ? ಇಲ್ಲಿದೆ ಮಾಹಿತಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯವಾಗಿದೆ.  ಈ ಚುನಾವಣೆಯಲ್ಲಿ ಈಗ ಒಟ್ಟು 35 ವಾರ್ಡುಗಳಲ್ಲಿ 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಕಾಂಗ್ರೆಸ್ ಎಲ್ಲ 35 ವಾರ್ಡುಗಳಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ 33 ಮತ್ತು ಜೆಡಿಎಸ್ 25 ವಾರ್ಡುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಯಾವ ವಾರ್ಡಿನಲ್ಲಿ ಎಷ್ಟು ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ವಾರ್ಡುಗಳು ಮತ್ತು ಅಂತಿಮವಾಗಿ ಕಣದಲ್ಲಿರುವ ಒಟ್ಟು ಅಭ್ಯರ್ಥಿಗಳು 3 6 6 9 3 3 5 4 […]

MBP Tour: ಅ. 18, 19 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ- ನಾನಾ ಕಾರ್ಯಕ್ರಮಗಳಲ್ಲಿ ಭಾಗಿ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಅ. 18 ಮತ್ತು 19 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅ. 18 ಮಂಗಳವಾರ ಬೆ. 10ಕ್ಕೆ ತಿಕೋಟಾ ತಾಲೂಕಿನ ಟಕ್ಕಳಕಿ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಲಾಗಿರುವ ರೈತ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅ. 19 ರಂದು ಬುಧವಾರ ಬೆ. 9ಕ್ಕೆ ತಿಕೋಟಾದಲ್ಲಿ ನಗರೋತ್ಥಾನ್ ಯೋಜನೆಯಡಿಯಲ್ಲಿ ಸಿಸಿ ರಸ್ತೆ ಮತ್ತು ಡ್ರೇನ್ ಕಾಮಗಾರಿ ಭೂಮಿ ಪೂಜೆ ಸಲ್ಲಿಸಿ, ಬೆ. […]

SDPI Election: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಸ್ ಡಿ ಪಿ ಐ ಯಿಂದ ಎಂಟು ಅಭ್ಯರ್ಥಿಗಳು ಕಣಕ್ಕೆ- ಅಫ್ಸರ್ ಕೊಡ್ಲಿಪೇಟೆ

ವಿಜಯಪುರ: ವಿಜಯ.ಪುರ ಮಹಾನಗರ ಪಾಲಿಕೆಗೆ ಅ. 28 ರಂದು ನಡೆಯಲಿರುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿ ಪಿ ಐ) ಎಂಟು ವಾರ್ಡುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಿಳಿಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಈಗಾಗಲೇ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಿ ಕೊಡಲಾಗಿದೆ.  ಇನ್ನುಳಿದ ಅಭ್ಯರ್ಥಿಗಳನ್ನು ಮುಂದಿನ ಎರಡ್ಮೂರು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು. ಕಳೆದ ಮೂರೂವರೆ ವರ್ಷಗಳ […]

MBP CM: ಎಂಬಿಪಿ ಮುಂದಿನ ದಿನಗಳಲ್ಲಿ ಸಿಎಂ ಆಗಿ ರೈತರ ಕಣ್ಣೀರು ಒರೆಸಲಿ- ಮಲಘಾಣ ಗ್ರಾಮದ ರೈತನ ಆಶಯ

ವಿಜಯಪುರ: ಎಂ. ಬಿ. ಪಾಟೀಲ ಅವರು ಮುಂಬರುವ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಇಡೀ ರಾಜ್ಯದ ರೈತರ ಕಣ್ಣೀರು ಒರೆಸುವಂತಾಗಲಿ ಎಂದು ಮಲಘಾಣದ ಗ್ರಾಮಸ್ಖ ಈರಯ್ಯ  ಕಟಗೇರಿಮಠ ಆಶಯ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಈ ಭಾಗದಲ್ಲಿ 600 ರಿಂದ 700 ಅಡಿವರೆಗೆ ಬೋರವೆಲ್ ಕೊರೆಯಿಸಿದರೂ ಒಂದು ಹನಿ ನೀರು ಬರುತ್ತಿರಲಿಲ್ಲ.  […]