Yatnal BSY Cabinet: ಸಂಪುಟ ವಿಸ್ತರಣೆ , ಪುನಾರಚನೆಯಾಗಲಿ- ಈಶ್ವರಪ್ಪಗೆ ಸಚಿವ, ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲಿ- ಯತ್ನಾಳ ಆಗ್ರಹ

ವಿಜಯಪುರ: ಸಿಎಂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಬೇಕು.  ಖಾಲಿ ಇರುವ ಸಚಿವ ಸ್ಥಾನಗಳನ್ನು ತಾವೇ ಇಟ್ಟುಕೊಂಡು ಕೂಡಬಾರದು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಆರೋಪದ ಕಾರಣದಿಂದ ಈಶ್ವರಪ್ಪ ರಾಜೀನಾಮೆ ನೀಡಿದ್ದರು.  ಆರೋಪ ಮುಕ್ತವಾದ ಕೂಡಲೇ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿದೆ ಎಂದು ಹೇಳಿದರು. ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಬೇಕು ಇದೇ ವೇಳೆ ಮಾಜಿ ಸಭಾಪತಿ ಬಸವರಾಜ […]

Corporation Election: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಅ. 28 ರಂದು ಚುನಾವಣೆ- ಡಿಸಿ ಡಾ ದಾನಮ್ಮನವರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಚುನಾವಣೆ ದಿನಾಂಕಯನ್ನು ರಾಜ್ಯ ಚುನಾವಣೆ ಆಯೋಗ ನಿಗದಿ ಪಡಿಸಿದ್ದು, ಅ. 28 ರಂದು ಮತದಾನ ನಡೆಯಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 10ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅ. 17ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಅ. 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಏ. 28ರಂದು ಮತದಾನ ನಡೆಯಲಿದೆ ಎಂದು ತಿಳಿಸಿದರು. […]

Congress Jigajinagi: ದೇಶ ಒಡೆದ ಕಾಂಗ್ರೆಸ್ಸಿನಿಂದ ಸಣ್ಣ ಹುಡುಗನನ್ನು ಕರೆದುಕೊಂಡು ಭಾರತ ಜೋಡೋ ಯಾತ್ರೆ- ರಮೇಶ ಜಿಗಜಿಣಗಿ

ವಿಜಯಪುರ: ಕಾಂಗ್ರೆಸ್ ದೇಶ ಒಡೆದಿದೆ.  ಈಗ ಸಣ್ಣ ಹುಡುಗನನ್ನು ಕರೆದುಕೊಂಡು ಭಾರತ ಜೋಡೋ ಯಾತ್ರೆ ನಡೆಸುತ್ತಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ವ್ಯಂಗ್ಯವಾಡಿದ್ದಾರೆ. ವಿಜಯಪುರ ನಗರದ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿ ಸಭಾಂಗಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಲಾಗಿದ್ದ ಜಿಲ್ಲಾ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ 70 ವರ್ಷ ದೇಶವನ್ನು ಲೂಟಿ ಮಾಡಿ ಸತ್ಯಾನಾಶ ಮಾಡಿ ಈಗ ನಾಟಕವಾಡುತ್ತಿದೆ.   ಆದರೂ ಮುಗ್ದ ದಲಿತ ಬಾಂಧವರು ಕಾಂಗ್ರೆಸ್ ಬೆನ್ನು ಹತ್ತಿದ್ದಾರೆ.  […]

Dasara Kanta Nayak: ದಸರಾ ಹಿನ್ನೆಲೆ-ನಾಗಠಾಣ ಮತಕ್ಷೇತ್ರದ ನಾನಾ ಕಡೆ ಮಹಿಳೆಯೊಂದಿಗೆ ಸಂವಾದ ನಡೆಸಿದ ಕಾಂತಾ ನಾಯಕ

ವಿಜಯಪುರ: ದಸರಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ನಾಗಠಾಣ ಮತಕ್ಷೇತ್ರದ ನಾನಾ ಗ್ರಾಮಗಳಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಿದರು. ನಾಗಠಾಣ ಮತಕ್ಷೇತ್ರದ ಬೊಮ್ಮನಳ್ಳಿ, ಚಡಚಣ ನಗರ, ರೇವತಗಾಂವ, ಶಿರಾಡೋಣ , ಕೋಂಕಣಗಾಂವ, ಜೀರಂಕಲಗಿ, ಟಾಕಳಿ, ಕೆರೂರ ಗ್ರಾಮಗಳಲ್ಲಿ ಅವರು ಮಹಿಳೆಯರೊಂದಿಗೆ ಸಂವಾದ ನಡೆಸಿದರು.   ಅಲ್ಲದೇ, ಅರಿಶಿನ ಕುಂಕುಮ ಕಾರ್ಯಕಮಗಳಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಪ್ರಮುಖರು ಮತ್ರು ಮಹಿಳೆಯು ಪಾಲ್ಗೊಂಡಿದ್ದರು.

BJP Deenadayal Upadhyal: ಬಿಜೆಪಿ ಯುವ ಮೋರ್ಚಾ ವತಿಯಿಂದ ಪಂ. ದೀನದಯಾಳ ಉಪಾಧ್ಯಾಯ ಜಯಂತಿ ಆಚರಣೆ

ವಿಜಯಪುರ: ಪಂ.ದೀನದಯಾಳ ಉಪಾಧ್ಯಾಯ ಅವರ ಜಯಂತೋತ್ಸವವನ್ನು ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಆಚರಿಸಲಾಯಿತು.  ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಸಸಿಗಳನ್ನು ನೆಡುವ ಮೂಲಕ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಅಲ್ಲದೇ, ಪಂ.ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಎಲ್ಲರೂ ಪುಷ್ಪಾಂಜಲಿ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಪಂ. ದೀನದಯಾಳ ಉಪಾಧ್ಯಾಯ ಅವರು ಜನಕಲ್ಯಾಣ ಹಾಗೂ ದೇಶಭಕ್ತಿಯನ್ನೇ ಉಸಿರಾಗಿಸಿಕೊಂಡಿದ್ದರು.  ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಮುಖ್ಯವಾಹಿನಿಗೆ ಬರಬೇಕು ಎಂಬ ಸದುದ್ದೇಶ ಹೊಂದಿದ್ದ ಮಹಾನ್ […]

Corporation Mushriff: ಪಾಲಿಕೆ ಮೀಸಲಾತಿ ವಿರುದ್ಧ ಹಮೀದ ಮುಶ್ರಿಫ್ ಆಕ್ರೋಶ- ಸಿಎಂ ಯತ್ನಾಳ ಕೈಗೊಂಬೆಯಾಗಿದ್ದಾರೆ ಎಂದು ಆರೋಪ

ವಿಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡುಗಳ ಮೀಸಲಾತಿಯನ್ನು ಕಾಂಗ್ರೆಸ್ ಮುಖಂಡ ಹಮೀದ ಮುಶ್ರಿಫ್ ಖಂಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಸ್ವಾರ್ಥ ರಾಜಕಾರಣಕ್ಕಾಗಿ ಮೀಸಲಾತಿ ಪ್ರಕಟ ಮಾಡಿದೆ. ನಗರಾಭಿವೃದ್ಧಿ ಇಲಾಖೆಗೆ ಬಿಜೆಪಿ ಅಭಿವೃದ್ಧಿ ಕಚೇರಿ ಎಂದು ಹೆಸರಿಡಬೇಕು. ಬಿಜೆಪಿ ಶಾಸಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಾರ್ಡ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟ ಮಾಡಲಾಗಿದೆ. ಬಿಜೆಪಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಏಕೆ ಮೀಸಲಾತಿ ಹಂಚಿಕೆ ಮಾಡಿಲ್ಲ? ಎಂದು ಅವರುನಪ್ರಶ್ನಿಸಿದರು. ಮೀಸಲಾತಿ ಪ್ರಕಟಣೆಯಲ್ಲಿ‌ ಮಾರ್ಗಸೂಚಿ ಪಾಲಿಸಿಲ್ಲ. ‌ಮನಸ್ಸಿಗೆ ಬಂದಂತೆ […]

Congress Protest: ಗುಮ್ಮಟ ನಗರಿಯಲ್ಲಿ ಮೂಲಭೂತ ಸೌಕರ್ಯಗಳ ದುರವಸ್ಥೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಹದಗೆಟ್ಟ ರಸ್ತೆ, ಹೊರ ಚರಂಡಿ, ಒಳಚರಂಡಿ, ವಿದ್ಯುತ್ ದೀಪಗಳ ಅವ್ಯವಸ್ಥೆ ಖಂಡಿಸಿ ಅಬ್ದುಲ್ ಹಮೀದ್ ಮುಶ್ರೀಫ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ್ ಮುಶ್ರೀಫ್ ವಿಜಯಪುರ ನಗರಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಜನ ನರಳಾಡುವಂತಾಗಿದೆ. ನಗರದ ರಸ್ತೆಗಳು ಗುಂಡಿಗಳಿಂದ ತುಂಬಿದ್ದು, ಜನ ನಡೆದಾಡುವುದು ದುಸ್ತರವಾಗಿದೆ. ಹೊರ ಮತ್ತು ಒಳಚರಂಡಿ ವ್ಯೆವಸ್ಥೆ ಸರಿಯಾಗಿಲ್ಲ. ಇದರಿಂದಾಗಿ ರಸ್ತೆಗಳು ಅವ್ಯವಸ್ಥೆಯ ಅಗರವಾಗಿವೆ. ಅದರಲ್ಲಿ […]

Taj Boudi Issue:‌ ತಾಜಬಾವಡಿ ವಿಚಾರದಲ್ಲಿ ಐದು ವರ್ಷ ಶಾಸಕರು ಮಾಡಿದ್ದೇನು? ಗೂಂಡಾ ಕಾಯಿದೆ ಹೇಳಿಕೆತನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಲಿ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ವಿಜಯಪುರ ನಗರದಲ್ಲಿ ಗಣೇಶ ವಿಸರ್ಜನೆಗೆ ಐತಿಹಾಸಿಕ ತಾಜಮಾವಡಿ ಬಳಕೆ ವಿಚಾರ ಈಗ ತೀವ್ರ ವಾಕ್ ಸಮರಕ್ಕೆ ಕಾರಣವಾಗಿದೆ. ತಾಜಬಾವಡಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿದತೆ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಬಿಜೆಪಿಯವರೇ ಆದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಕಿಡಿ ಕಾರಿದ್ದಾರೆ‌. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಪ್ಪು ಪಟ್ಟಣಶೆಟ್ಟಿ, ಐದು ವರ್ಷಗಳ ಹಿಂದೆ ಅಂದಿನ ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ ಅವರು […]

Corporation Category: ವಿಜಯಪುರಕ್ಕೆ ಎಸ್ ಟಿ ಮೇಯರ್, ಹಿಂದುಳಿದ ವರ್ಗ ಬ ಉಪಮೇಯರ್- ಮೀಸಲಾತಿ ಪ್ರಕಟಿಸಿದ ಸರಕಾರ

ಬೆಂಗಳೂರು- ವಿಜಯಪುರ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಮೀಸಲಾತಿ ಪಟ್ಟಿಯನ್ನು ಸರಕಾರ ಪ್ರಕಟಿಸಿದೆ. ವಿಜಯಪುರ ಮೇಯರ್ ಸ್ಥಾನ ಎಸ್ಟಿಗೆ ಒಲಿದಿದ್ದರೆ ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬ ಗೆ ಮೀಸಲಿಡಲಾಗಿದೆ. ಈ ಕುರಿತು ಸರಕಾರ ಆದೇಶ ಹೊರಡಿಸಿದೆ. ಉಳಿದ ಮಹಾನಗರ ಮೀಸಲಾತಿ ಪಟ್ಟಿ ಮಾಹಿತಿ ಇಲ್ಲಿದೆ ಬಳ್ಳಾರಿ- ಮೇಯರ್( ಹಿಂದುಳಿದ ವರ್ಗ ಎ ಮಹಿಳೆ), ಉಪಮೇಯರ್(ಸಾಮಾನ್ಯ ಮಹಿಳೆ) ಬೆಳಗಾವಿ- ಮೇಯರ್(ಸಾಮಾನ್ಯ ), ಉಪಮೇಯರ್(ಎಸ್ ಸಿ. ಮಹಿಳೆ), ದಾವಣಗೆರೆ- ಮೇಯರ್(ಸಾಮಾನ್ಯ ಮಹಿಳೆ ), ಉಪಮೇಯರ್(ಹಿಂದುಳಿದ […]

Sambanni Warn: ಬಿಜೆಪಿಯಿಂದ ಸಾವರ್ಕರ ಹೆಸರಿನಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ- ಗಂಗಾಧರ ಸಂಬಣ್ಣಿ ಆರೋಪ

ವಿಜಯಪುರ: ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್ ಫೋಟೋಗಳನ್ನು ಅಂಟಿಸುವ ಮೂಲಕ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸೇವಾದಳದ ಜಿಲ್ಲಾಧ್ಯಕ್ಷ ಡಾ. ಗಂಗಾಧರ ಸಂಬಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿಯವರು ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಇಂಥ ಹೀನ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ವಿಫಲರಾಗಿ ಈಗ ಸಾರ್ವಜನಿಕರ ಗಮನವನ್ನು ಬೇರೆ ಕಡೆ ಸೆಳೆಯಲು ಈ ತಂತ್ರ ಅನುಸರಿಸುತ್ತಿದ್ದಾರೆ. ಇದು ಅವರಿಗೆ ಶೋಭ ತರುವುದಿಲ್ಲ. […]