Savarkar Babaleshwar: ಬಿಜೆಪಿ ವರ್ತನೆಗೆ ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಆಕ್ರೋಶ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ ಫೋಟೋ ಅಂಟಿಸಿದ ಘಟನೆಯನ್ನು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾವರ್ಕರ್ ಭಾವಚಿತ್ರವನ್ನ ಕಾಂಗ್ರೆಸ್ ಕಚೇರಿಗೆ ಅಂಟಿಸಿರುವುದು ನಾಚಿಕೆಗೇಡಿನ ಸಂಗತಿ.  ಇತಿಹಾಸವನ್ನು ಅರಿತವರು ಇತಿಹಾಸವನ್ನು ಸೃಷ್ಟಿ ಮಾಡುತ್ತಾರೆ.  ಇತಿಹಾಸವನ್ನು ತಿರುಚಲು ಹೊರಟವರು ಇಂಥ ಅತಿರೇಕದ ವರ್ತನೆಗಳನ್ನ ಮಾಡುವುದರ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಾರೆ.  ಸಾವರ್ಕರ್ ಭಾವಚಿತ್ರವನ್ನ ಕಾಂಗ್ರೆಸ್ ಕಚೇರಿಗೆ ಅಂಟಿಸಿದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆವರು ಆಗ್ರಹಿಸಿದ್ದಾರೆ. […]

Alagur Action: ಜಿಲ್ಲಾ ಕಾಂಗ್ರೆಸ್ ಕಚೇರಿ ಮೇಲೆ ಸಾರರ್ಕರ ಫೋಟೋ ಅಂಟಿಸಿದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು- ಪ್ರೊ. ರಾಜು ಆಲಗೂರ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯ ಗೋಡೆ ಮತ್ತು ಬಾಗಿಲುಗಳಿಗೆ ಸಾವರ್ಕರ್ ಅವರ ಫೋಟೋಗಳನ್ನು ಅಂಟಿಸಿದವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಆಗ್ರಹಿಸಿದ್ದಾರೆ. ಈ ಘಟನೆ ತಿಳಿದ ನಂತರ ಕಚೇರಿಗೆ ಆಗಮಿಸಿದ ಅವರು ಕಾಂಗ್ರೆಸ್ ಮುಖಂಡ ಹಮೀದ ಮುಶ್ರಿಫ್ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಪ್ರೊ. ರಾಜು ಆಲಗೂರ, ಸಾವರ್ಕರ್ ಫೋಟೊ ಅಂಟಿಸಿದ ಬಿಜೆಪಿ ಕಾರ್ಯಕರ್ತನ‌ ವಿರುದ್ಧ […]

Savarkar Photo Hugar: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾವೇ- ಬಸವರಾಜ ಹೂಗಾರ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟವನ್ನು ಬಿಜೆಪಿ ಯುಮ ಮೋರ್ಚಾದವರೇ ಅಂಟಿಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹೂಗಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಪೋಟೋ ಅಂಟಿಸಿದ್ದು ನಾವೇ.  ಅದರಲ್ಲಿ ಪ್ರಶ್ನೆಯೇ ಇಲ್ಲ.  ಹುಬ್ಬಳ್ಳಿ ಮತ್ತು ಶಿವಮೊಗ್ಗದಲ್ಲಿ ನಡೆದ ಘಟನೆಗೆ ಪ್ರತಿಯಾಗಿ ನಾವು ಪೋಟೋ ಅಂಟಿಸಿದ್ದೇವೆ.  60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಹುಬ್ಬಳ್ಳಿಯಲ್ಲಿ ಸಾವರ್ಕರ್ ಅವರ ಪೋಟೋ ಸುಟ್ಟಿದ್ದರು.  ಈ ಮೂಲಕ ಸಾವರ್ಕರ್ […]

Savarkar Photo: ಕಾಂಗ್ರೆಸ್ ಕಚೇರಿ ಹೊರಗೋಡೆಗಳಿಗೆ ಸಾವರ್ಕರ್ ಫೋಟೋ ಅಂಟಿಸಿದ ಕಿಡಿಗೇಡಿಗಳು

ವಿಜಯಪುರ: ರಾಜ್ಯದಲ್ಲಿ ಸಾವರ್ಕರ ವಿವಾದ ತೀವ್ರವಾಗಿದ್ದು, ಕಿಡಗೇಡಿಗಳು ಕಾಂಗ್ರೆಸ್ ಕಚೇರಿ ಗೋಡೆಗೆ ಸಾವರ್ಕರ ಫೋಟೋ ಅಂಟಿಸಿದ ಘಟನೆ ಗುಮ್ಮಟ ನಗರಿ ವಿಜಯಪುರದಲ್ಲಿ ನಡೆಸಿದೆ. ವಿಜಯಪುರ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳು‌ ವೀರ ಸಾವರ್ಕರ ಅವರ ಫೋಟೋ ಅಂಟಿಸಿ ಪರಾರಿಯಾಗಿದ್ದಾರೆ. ಕಾಂಗ್ರೆಸ್ ಕಚೇರಿಯ ಹೊರಗಡೆ ಗೋಡೆಗೆ ನಾನಾ ಕಡೆ ಸಾವರ್ಕರ ಫೋಟೋ ಅಂಟಿಸಲಾಗಿತ್ತು. ‌ರವಿವಾರವತಡರಾತ್ರಿ ಹತ್ತಾರು ಫೋಟೋಗಳನ್ನು ಅಂಟಿಸಿ‌‌ದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಾಂಗ್ರೆಸ್ ಕಚೇರಿಯ ಕಟ್ಟಡ, ಬಾಗಿಲು, ಬೋರ್ಡ್ ಗೆ ಸಾವರ್ಕರ ಫೋಟೋ ಅಂಟಿಸಲಾಗಿತ್ತು. […]

Bharat Jodo: ಕಾಂಗ್ರೆಸ್ ನಿಂದ ಭಾರತ ಜೋಡೋ ಕಾರ್ಯಕ್ರ‌- ಸುನೀಲಗೌಡ ಪಾಟೀಲ, ಹಮೀದ ಮುಶ್ರಿಫ್ ಭಾಗಿ

ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಜಯಪುರ ನಗರ ಮತಕ್ಷೇತ್ರಾದ್ಯಂತ ಕಾಂಗ್ರೆಸ್ ವತಿಯಿಂದ ಭಾರತ ಜೋಡೊ ಯಾತ್ರೆ ನಡೆಯಿತು. ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಈ ಯಾತ್ರೆ ನಗರದ ಹಕೀಂ ಚೌಕನಿಂದ ಗಾಂಧಿ ವೃತ್ತದ ವರೆಗೆ ನಡೆಯಿತು. ಭಾರತ ಜೊಡೊ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ […]

BSY Celebration: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಬಿ ಎಸ್ ವೈ, ಬಿ ಎಲ್ ಸಂತೋಷ ಸೇರ್ಪಡೆ- ಬಸವ ನಾಡಿನಲ್ಲಿ ಎಪಿ ಗ್ರುಪ್ ವತಿಯಿಂದ ಸಂಭ್ರಮಾಚರಣೆ

ವಿಜಯಪುರ: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ ಅವರನ್ನು ಸೇರ್ಪಡೆ ಮಾಡಿದ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರ ನಗರದಲ್ಲಿ ಎಪಿ ಗ್ರುಪ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.  ವಿಜಯಪುರನ ನಗರದ ಶಿವಾಜಿ ಚೌಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ವಿಜಯಪುರ ನಗರದ ಎ ಪಿ ಗ್ರೂಪ್ ವತಿಯಿಂದ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಎ ಪಿ ಗ್ರೂಪ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ , […]

Corporation Category Viral: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ವಾರ್ಡುಗಳ ಮೀಸಲಾತಿ ಪಟ್ಟಿ ವೈರಲ್- ಇದು ನಿಜಾನಾ? ಯಾಕಂದ್ರೆ…

ವಿಜಯಪುರ: ಬಹು ನಿರೀಕ್ಷಿತ ವಿಜಯಪುರ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಸರಕಾರ ಪ್ರಕಟಿಸಿದೆ ಎನ್ನಲಾದ ಮಾಹಿತಿಯೊಂದು ಇದೀಗ ವೈರಲ್ ಆಗಿದೆ. ಆದರೆ, ಈ ಪಟ್ಟಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಧಿನ ಕಾರ್ಯದರ್ಶಿಗಳ ಕೆ. ಎಲ್. ಪ್ರಸಾದ ಅವರು ಆದೇಶ ಹೊರಡಿಸಿದ್ದಾರೆ.  ಇದು ನಿಜವಾದ ಪಟ್ಟಿಯೋ ಅಥವಾ ಸುಳ್ಳೋ ಎಂಬುದನ್ನು ಸರಕಾರವೇ ಸ್ಪಷ್ಟಪಡಿಸಿದೆ. ಈಗ ವೈರಲ್ ಆಗಿರುವ ವಾರ್ಡವಾರು ಮೀಸಲಾತಿ ಪಟ್ಟಿಯ ವಿವರ ಇಲ್ಲಿದೆ.   ಈಗ ವೈರಲ್ ಆಗಿರುವ ಪಟ್ಟಿಯ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಇನ್ನಷ್ಟೇ […]

BJP Appointment: ಬಿಜೆಪಿ ಜಿಲ್ಲಾ ವಕ್ತಾರರಾಗಿ ಸುರೇಶ ಬಿರಾದಾರ, ಜಿಲ್ಲಾ ಉಪಾಧ್ಯಕ್ಷರಾಗಿ ರಾಜಶೇಖರ ಪೂಜಾರ ನೇಮಕ

ವಿಜಯಪುರ: ವಿಜಯಪುರ ಜಿಲ್ಲಾ ಬಿಜೆಪಿ ವಕ್ತಾರರನ್ನಾಗಿ ಹಿರಿಯ ಮುಖಂಡ ಸುರೇಶ ಬಿರಾದಾರ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ನೇಮಕ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸುರೇಶ ಬಿರಾದಾರ ಅವರಿಗೆ ಜಿಲ್ಲಾ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾಜಶೇಖರ ಪೂಜಾರ ನೇಮಕ ಈ ಮಧ್ಯೆ, ರಾಜಶೇಖರ ಪೂಜಾರ ಅವರನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆರ್. ಎಸ್. ಪಾಟೀಲ ಕೂಚಬಾಳ ಮಾಹಿತಿ ನೀಡಿದ್ದಾರೆ. ಉಭಯ ನಾಯಕರು […]

Siddharamaiah Mushriff: ಸಿದ್ಧರಾಮಯ್ಯ ಅಮೃತ ಮಹೋತ್ಸವಕ್ಕೆ ವಿಜಯಪುರದಿಂದ 175 ವಾಹನಗಳಲ್ಲಿ ಕಾರ್ಯಕರ್ತರ ಪ್ರಯಾಣ- ಅಬ್ದುಲಹಮೀದ ಮುಶ್ರಿಫ್

ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ವಿಜಯಪುರ ನಗರದಿಂದ 175 ನಾನಾ ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಾವಣಗೆರೆಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲಹಮೀದ ಮುಶ್ರಿಫ್ ತಿಳಿಸಿದ್ದಾರೆ.  ವಿಜಯಪುರ ನಗರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ಧರಾಮಯ್ಯ ಜನಾನುರಾಗಿ ಜನನಾಯಕ.  ಸಕಲ ವರ್ಗಗಳ ಕಲ್ಯಾಣವನ್ನು ಬಯಸಿದ ನೇತಾರರಾಗಿದ್ದಾರೆ.  ಅವರು ವಿಜಯಪುರ ಜಿಲ್ಲೆಗೆ ನೀಡಿದ ಕೊಡುಗೆ ಅನನ್ಯ.  ಕೊಡುಗೆ ನೀಡಿರುವ ಭಾಗ್ಯಗಳ ಸರದಾರ ಸಿದ್ಧರಾಮಯ್ಯ ಅವರ ಜನ್ಮದಿನೋತ್ಸವಕ್ಕೆ […]

BJP Mass Resign: ವಿಜಯಪುರದಲ್ಲೂ ಬಿಜೆಪಿ ಯುವ ಮುಖಂಡರ ಆಕ್ರೋಶ- ಒಂಬತ್ತು ನಾನಾ ಮಂಡಳಗಳ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಮೊದಲ ವರ್ಷಾಚರಣೆ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಬಿಜೆಪಿಯ ಒಂಬತ್ತು ಮಂಡಳಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಕೊಲೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಆಕ್ರೋಶ ಸ್ಪೋಟಗೊಂಡಿದ್ದು, ವಿಜಯಪುರದಲ್ಲಿಯೂ ಇದು ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ಮೂಲಕ ಬಹಿರಂಗವಾಗಿದೆ. ದಕ್ಷಿಣ ಕನ್ನಡ ಘಟನೆ ಮತ್ತು ಸರಕಾರದ ವೈಪಲ್ಯ ಖಂಡಿಸಿ ಬೇಸರಗೊಂಡಿರುವ ಬಿಜೆಪಿ‌ ಪದಾಧಿಕಾರಿಗಳು ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾ […]