Congress Protest: ಕೇಂದ್ರದಿಂದ ಇಡಿ ಮೂಲಕ ಸೋನಿಯಾ ಗಾಂಧಿಗೆ ಕಿರುಕುಳ ಆರೋಪ- ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ಇಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದಲ್ಲಿ ಗಾಂಧಿಚೌಕಿನನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ನಡೆಯನ್ನು ಖಂಡಿಸಿದರು. ನಂತರ ಗಾಂಧಿ ಚೌಕಿನಿಂದ ಅಂಬೇಡ್ಕರ್ ಚೌಕ್ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ […]

BJP Kuchabal: ಪ್ರತಿಪಕ್ಷಗಳು ಉಚಿತ ಯೋಜನೆ ಘೋಷಣೆ ಮಾಡಿ ಜನರ ಬಲ ಕುಂದಿಸುತ್ತವೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಪ್ರತಿಪಕ್ಷಗಳು ಉಚಿತ ಯೋಜನೆಗಳನ್ನು ಘೋಷಣೆ ಮಾಡಿ ಜನರ ಬಲವನ್ನು ಕುಂದಿಸುವ ಕೆಲಸ ಮಾಡುತ್ತಿವೆ.  ಆದರೆ, ಬಿಜೆಪಿ ಮಾತ್ರ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಬಿಜೆಪಿ ಜಿಲ್ಲಾ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತವಾಡಿದರು. ಬಿಜೆಪಿ ಹೊರತಾದ ರಾಜಕೀಯ ಪಕ್ಷಗಳು ಆಳ್ವಿಕೆ ನಡೆಸಿದ ರಾಜ್ಯಗಳಲ್ಲಿ ಕೇವಲ ಚುನಾವಣೆ ದೃಷ್ಠಿಕೋನದಿಂದ ಉಚಿತ ಯೋಜನೆಗಳ ದುಂಬಾಲು ಬಿದ್ದು ಆ ರಾಜ್ಯಗಳನ್ನು […]

Agnipath Oppose: ಗುಮ್ಮಟ ನಗರಿಯಲ್ಲಿ‌ ಕೈ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ: ದೇಶ ಕಾಯುವ ಯೋಧರನ್ನು ಕೇಂದ್ರ ಸರಕಾರ ಬಿಜೆಪಿ ಗುತ್ತಿಗೆ ಕಾರ್ಮಿಕರನ್ನಾಗಿ ಮಾಡಲು ಹೊರಟಿದೆ ಎಂದು ಆರೋಪಿಸಿ ಅಗ್ನಿಪಥ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಗುಮ್ಮಟ ನಗರಿ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಮುಖಂಡ ಅಬ್ದುಲ್‌ಹಮೀದ ಮುಶ್ರೀಫ್ ನೇತೃತ್ವದಲ್ಲಿ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ ಚೌಕಿನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್‌ಹಮೀದ ಮುಶ್ರೀಫ್, ಕೇಂದ್ರದ ಬಿಜೆಪಿ […]

Shamaprasad Akkalakot: ದೇಶಾಭಿಮಾನಕ್ಕೆ ಮತ್ತೋಂದು ಹೆಸರು ಡಾ. ಶಾಂಪ್ರಸಾದ ಮುಖರ್ಜಿ- ಪ್ರಕಾಶ ಅಕ್ಕಲಕೋಟ

ವಿಜಯಪುರ: ಅಪ್ಪಟ ದೇಶಾಭಿಮಾನಕ್ಕೆ ಇನ್ನೊಂದು ಹೆಸರು ಡಾ. ಶ್ಯಾಂಪ್ರಸಾದ್ ಮುಖರ್ಜಿ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹೇಳಿದ್ದಾರೆ.  ವಿಜಯಪುರ ನಗರದ ಚಿದಂಬರ ದೇವಾಲಯದ ಮಂಗಲ ಕಾರ್ಯಾಲಯದಲ್ಲಿ ವಿಜಯಪುರ ನಗರ ಮಂಡಳ ರೈತ ಮೋರ್ಚಾ ಏರ್ಪಡಿಸಿಗಿದ್ದ ಡಾ. ಶ್ಯಾಂ ಪ್ರಸಾದ ಮುಖರ್ಜಿ ಅವರ ಬಲಿದಾನ ದಿವಸ ಕಾರ್ಯಕ್ರಮವನ್ನು ಸಸಿ ನೆಡುವ ಅವರು ಚಾಲನೆ ನೀಡಿ ಮಾತನಾಡಿದರು. ಅಪ್ಪಟ ದೇಶಾಭಿಮಾನಿಯಾಗಿದ್ದ ಡಾ. ಶ್ಯಾಂ ಪ್ರಸಾದ ಮುಖರ್ಜಿ ಅವರಿಗೆ ಕಾಂಗ್ರೆಸ್ ತುಷ್ಟೀಕರಣ ನೀತಿ ಕಿಂಚಿತ್ತೂ ಇಷ್ಟವಾಗಿರಲಿಲ್ಲ.  […]

Panchamasali Babaleshwar: ಕೂಡಲ ಸಂಗಮ ಶ್ರೀಗಳ ಪಂಚಮಸಾಲಿ 2A ಮೀಸಲಾತಿ ಹೋರಾಟ ಉಪೇಕ್ಷಿಸುವುದು ಬೇಡ- ಸಂಗಮೇಶ ಬಬಲೇಶ್ವರ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವಂತೆ ಹೋರಾಟ ನಡೆಸುತ್ತಿರುವ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಹೋರಾಟವನ್ನು ಉಪೇಕ್ಷಿಸಿದರೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಎಚ್ಚರಿಕೆ ನೀಡಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶ್ರೀಗಳು ಮೀಸಲಾತಿಗೆ ಆಗ್ರಹಿಸಿ ಕೂಡಲ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿ ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ […]

Congress Protest: ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ- ಚಡಚಣದಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ‌ ಕಾಂಗ್ರೆಸ್ ಕಾರ್ಯಕರ್ತರು ಚಡಚಣ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯಕರ್ಶಿ ಕಾಂತಾ ನಾಯಕ, ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಡಿ. ಹಕ್ಕೆ, ನಾಗಠಾಣ ಬ್ಲಾಕ್ ಅಧ್ಯಕ್ಷ ಶಹಾಜಹಾನ ಮುಲ್ಲಾಮುಂತಾದವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಬಿಜೆಪಿ ನೇತೃತ್ವದ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಡಿ ಮೂಲಕ ಎಐಸಿಸಿ ಅಧ್ಯಕ್ಷೆ […]

Agnipath Shivanand Patil: ಉದ್ಯೋಗ ಅಭದ್ರತೆ ಕಾರಣ ಯುವಕರು ವಿರೋಧಿಸುತ್ತಿದ್ದಾರೆ- ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಅಗ್ನಿಪಥ ಯೋಜನೆ ವಿಚಾರದಲ್ಲಿ ಯುವಕರಿಗೆ ಅಭದ್ರತೆ ಕಾಡುತ್ತಿದೆ.  ಈ ಹೀಗಾಗಿ ಯುವಕರು ಆ ರೀತಿ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಗ್ನಿಪಥ ಯೋಜನೆ ಜಾರಿ ವಿಚಾರದಲ್ಲಿ ಸ್ವಲ್ಪ ಆತುರತೆಯಾಗಿದೆ.  ಕಳೆದ ಏಳೆಂಟು ವರ್ಷಗಳಲ್ಲಿ ಯುವಕರಿಗೆ ನಿರುದ್ಯೋಗ ಸಮಸ್ಯೆ ಕಳೆದ ಹೆಚ್ಚಾಗಿದೆ.  ಈ ಬಗ್ಗೆ ಸ್ವತಃ ಬಿಜೆಪಿ ಸಂಸದ ವರುಣ ಗಾಂಧಿ ಅವರಂಥ ನಾಯಕರೇ ಹೇಳಿದ್ದಾರೆ.  ಕೇಂದ್ರದಲ್ಲಿ 60 […]

PM Arrived: ಬೆಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದಾರೆ. ಭಾರತೀಯ ವಾಯುಸೇನೆ ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮತ್ತು ಇತರ ಅಧಿಕಾರಿಗಳು ಸ್ವಾಗತಿಸಿದರು.   ವಿಮಾನದಿಂದ ಕೆಳಗಿಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಲು ಹೊದಿಸಿ ಸ್ವಾಗತಿಸಿದರು. ಅಲ್ಲದೇ, ಪ್ರಧಾನಿ ಅವರಿಗೆ ಪುಸ್ತಕವೊಂದನ್ನು ನೀಡಿದರು.

Hukkeri Reaction: ಬೆಳಗಾವಿಯ ಜಿಲ್ಲೆಯಲ್ಲೀಗ ನಮ್ಮದೇ ಹವಾ- 2023ರಲ್ಲಿ ಕಾಂಗ್ರೆಸ್ ಪಾರುಪತ್ಯ- ಪ್ರಕಾಶ ಹುಕ್ಕೇರಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಈಗ ಕಾಂಗ್ರೆಸ್ ಹವಾ ಜೋರಾಗಿದೆ. ಆರು ತಿಂಗಳಲ್ಲಿ ವಿಧಾನ ಪರಿಷತ್ತಿನ‌ ಎರಡು ಸ್ಥಾನ‌ ಗೆದ್ದಿದ್ದೇವೆ.‌ 2023ರಲ್ಲಿ ಜಿಲ್ಲಾದ್ಯಂತ ಕಾಂಗ್ರೆಸ್ ಪಾರುಪತ್ಯ ಇರಲಿದೆ ಎಂದು ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಸೇರಿ ಕೆಲಸ ಮಾಡಿದ್ದಾರೆ‌. ಒಗ್ಹಟ್ಟಿನ ಫಲವಾಗಿ ಕಳೆದ ಆರು ತಿಂಗಳಲ್ಲಿ ವಿಧಾನ […]

Shahapur Reaction: ಸೋಲನ್ನು ಸ್ವೀಕರಿಸುತ್ತೇನೆ- ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ- ಅರುಣ ಶಹಾಪುರ

ಬೆಳಗಾವಿ: ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ನಡೆಸ ಚುನಾವಣೆಯಲ್ಲಿ ತಾವು ಸೋಲನ್ನು ಒಪ್ಪಿಕೊಂಡು ಮುಂದುವರೆಯುವುದಾಗಿ ಬಿಜೆಪಿ ಪರಾಜಿತ ಅಭ್ಯರ್ಥಿ ಅರುಣ ಶಹಾಪುರ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಅವರು, ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಬಗ್ಗೆ ಜನ ನಂಬಿಕೆಯನ್ನು ಕಳೆದುಕೊಳ್ಳುವ ಸ್ಥಿತಿ ಇದ್ದಾಗಲೂ ನನಗೆ ಬೆಂಬಲಚಾಗಿ ನಿಂತು ಮತ ಹಾಕಿದ ಶಿಕ್ಷಕರು ಆಶಾವಾದ ಮೂಡಿಸಿದ್ದಾರೆ. ಹಣದ ಪ್ರಭಾವ ಮತ್ತು ರಾಜಕೀಯ ಶಡ್ಯಂತ್ರ ಮಧ್ಯೆಯೂ ಕೂಡ ನನ್ನ ಪರವಾಗಿ ನಿಂತು ಮತ ಚಲಾಯಿಸಿದ ಶಿಕ್ಷಕರಿಗೆ ಅಭಿನಂದನೆ […]