ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮುಸ್ಲಿಮರು, ಸಿದ್ಧರಾಮಯ್ಯರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ- ಮಾಜಿ ಸಚಿವ ಜಮೀರ್ ಅಹ್ಮದಖಾನ್ ವಾಗ್ದಾಳಿ

ವಿಜಯಪುರ: ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ಒಂದು ಕಾಲದ ಶಿಷ್ಯ ಮತ್ತು ಮಾಜಿ ಸಚಿವ ಜಮೀರ್ ಅಹ್ಮದಖಾನ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕೇವಲ ಮುಸ್ಲಿಮ್ ಮಾತ್ರವಲ್ಲ ಸಿದ್ಧರಾಮಯ್ಯ ಅವರ ವಿರೋಧಿಯೂ ಆಗಿದ್ದಾರೆ.  ಕುಮಾರಸ್ವಾಮಿಗೆ ಅಲ್ಪ ಸಂಖ್ಯಾತರನ್ನು ಬಲಿ ಮಾಡುವುದೊಂದೆ ಟಾರ್ಗೆಟ್ ಆಗಿದೆ.  ಮುಸ್ಲಿಮರನ್ನು ಮುಗಿಸುವುದು ಅವರ ದುರುದ್ದೇಶವಾಗಿದೆ ಎಂದು ಆರೋಪಿಸಿದರು. ಅಲ್ಪ ಸಂಖ್ಯಾತರ ಜೊತೆ ಸಿದ್ದರಾಮಯ್ಯ ಅವರಿಗೂ ಕುಮಾರಸ್ವಾಮಿ ಟಾರ್ಗೆಟ್ ಮಾಡುತ್ತಿದ್ದಾರೆ.  […]

ಜಾತಿ ಹೆಸರಲ್ಲಿ ವಿಭಜನೆಯಾದರೆ 25 ವರ್ಷಗಳಲ್ಲಿ ದೇಶದ ಸ್ಥಿತಿ ಗಂಭೀರವಾಗಲಿದೆ- ಬಸವರಾಜ ರಾಯರೆಡ್ಡಿ

ವಿಜಯಪುರ- ಜಾತಿ ಆಧಾರದಲ್ಲಿ ದೇಶ ವಿಭಜನೆಯಾಗುತ್ತಿದೆ. ಇದು ಇದೇ ರೀತಿ ಮುಂದುವರೆದರೆ ಮುಂದಿನ 20-25 ವರ್ಷಗಳ ನಂತರ ಭಾರತದ ಸ್ಥಿತಿ ಗಂಭೀರವಾಗುತ್ತದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು. ವಿಜಯಪುರ ನಗರದ ಎಂ. ಬಿ. ಪಾಟೀಲ್ ನಗರದಲ್ಲಿ ಡಾ. ಮಹಾಂತೇಶ ಬಿರಾದಾರ ಅವರ ಮನೆಯಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಇಂದು ಜಾತಿ, ಉಪಜಾತಿ ಮೂಲಕ ಆಳುವ ಪಕ್ಷಗಳೇ ಜನರನ್ನು ವಿಭಜನೆ ಮಾಡುತ್ತಿವೆ. ಆರಂಭದಲ್ಲಿ ಇದು ನಮಗೆ ಸುಂದರವಾಗಿ ಕಂಡರೂ ಮುಂಬರುವ ದಿನಗಳಲ್ಲಿ […]

ಜೈಲಿಗೆ ಕಳುಹಿಸಲು ವ್ಯವಸ್ಥೆ ಮಾಡಲಿ ನಾನು ಹೋಗಲು ಸಿದ್ಧ- ಸಚಿವ ಸುಧಾಕರಗೆ ತಿರುಗೇಟು ನೀಡಿದ ಮಾಜಿ ಸ್ಪೀಕರ ರಮೇಶಕುಮಾರ

ವಿಜಯಪುರ: ಜೈಲಿಗೆ ಕಳುಹಿಸಲು ಅವರು ವ್ಯವಸ್ಥೆ ಮಾಡಿದರೆ ನಾನು ಹೋಗಲು ಸಿದ್ಧ ಎಂದು ಮಾಜಿ ಸ್ಪೀಕರ ರಮೇಶಕುಮಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ ಅವರಿಗೆ ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಮೇಶಕುಮಾರ ಅವರನ್ನು ಜೈಲಿಗೆ ಕಳುಹಿಸುವವರೆಗೂ ಸುಮ್ಮನಿರಲ್ಲ ಎಂದು ಸಚಿವ ಡಾ. ಕೆ. ಸುಧಾಕರ ಅವರ ಹೇಳಿಕೆಗೆ ವ್ಯಂಗ್ಯವಾಗಿಯೇ ಪ್ರತಿಕ್ರಿಯೆ ನೀಡಿದರು. ನಾನೇನು ಬಿಡಬೇಕು ಅಂತ ನಾ ಹೇಳಿದಿನಾ? ಅವರ ಕೆಲಸ ಅವರು ಮುಂದುವರೆಸಲಿ.  […]

ಸೋಮಣ್ಣಗೆ ಬೆಂಗಳೂರು ಉಸ್ತುವಾರಿ ಕೊಡಿ- ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಕೊಡಿ ಇಲ್ಲಾಂದ್ರೆ…-ಯತ್ನಾಳ

ವಿಜಯಪುರ: ವಿಜಯಪುರಕ್ಕೆ ಮಂತ್ರಿ ಸ್ಥಾನ ಕೊಡದೆ ಅನ್ಯಾಯ ಮಾಡಿದ್ದೀರಿ. ಮುಂದಿನ ಬಾರಿ ಮಂತ್ರಿ‌ ಕೊಡಲಿಲ್ಲ ಅಂದ್ರೆ ಮತ್ತೆ ಬೇರೆ ಆಗುತ್ತದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ವಿ. ಸೋಮಣ್ಣ ಅವರಿಗೆ ಬೆಂಗಳೂರಿ ಉಸ್ತುವಾರಿ ಕೊಡಬೇಕು.  ಅವರು ಸಮರ್ಥರಿದ್ದಾರಿದ್ದಾರೆ.  ಅವರ ಬದಲು ನಿಮ್ಮ ಸುತ್ತಮುತ್ತ ತಿರುಗಾಡುವವರಿಗೆ […]

ಕಾಂಗ್ರೆಸ್ ಪ್ರಚಾರ ವಾಹನ ಚುನಾವಣೆ ಅಧಿಕಾರಿಗಳ ವಶಕ್ಕೆ- ಯಾಕೆ ಗೊತ್ತಾ?

ವಿಜಯಪುರ: ಕಾಂಗ್ರೆಸ್ ಪ್ರಚಾರಕ್ಕೆ ತೆರಳುತ್ತಿದ್ದ ತೆರೆದ ವಾಹನವನ್ನು ಚುನಾವಣೆ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ವಿಜಯಪುರ ಜಿಲ್ಲೆಯ ಕನ್ನೊಳ್ಳಿ ಬಳಿ ನಡೆದಿದೆ. ಸಿಂದಗಿ ಮತಕ್ಷೇತ್ರ ವ್ಯಾಪ್ತಿಯ ಕನ್ನೊಳ್ಳಿ ಚುನಾವಣೆ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಅಧಿಕಾರಿಗಳು ಕಾಂಗ್ರೆಸ್ ಪ್ರಚಾರದ ತೆರೆದ ವಾಹನ‌ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಈ ತೆರೆದ ವಾಹನ ಸಿಂದಗಿಗೆ ಪ್ರಚಾರಕ್ಕೆ ಹೊರಟಿತ್ತು. ಇದೇ ವಾಹನದಲ್ಲಿ ಸ್ವಲ್ಪ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡಸಬೇಕಿದೆ. ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ, ಡಿಕೆ ಶಿವಕುಮಾರ, ಎಐಸಿಸಿ […]

ರಾಜ್ಯದಲ್ಲಿ ಅನೈತಿಕ ಸರಕಾರ ಅಸ್ತಿತ್ವದಲ್ಲಿದೆ- ಸಬ್ ಜಾ ಸಾಥ್ ಸಬ್ ವಿಕಾಸ್ ಅಲ್ಲ ವಿನಾಶ್ ಆಗುತ್ತಿದೆ- ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಿಜಯಪುರ: ರಾಜ್ಯದಲ್ಲಿ ಅನೈತಿಕ ಸರಕಾರ ಅಸ್ತಿತ್ವದಲ್ಲಿದೆ ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಪ್ರಚಾರ ನಡೆಸಿದ ಅವರು, ಬಹಿರಂಗ ಸಭೆಯಲ್ಲಿ ಮಾತನಾಡಿದರು. ಈ ಚುನಾವಣೆ ಬಹಳ ಮಹತ್ಚದ ಚುನಾವಣೆಯಾಗಿದೆ. ‌ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಮತ್ತು ದೇಶದ ಹಿತದೃಷ್ಟಿಯಿಂದ ಈ ಚುನಾವಣೆ ಮಹತ್ವದ್ದಾಗಿದೆ‌. ರಾಜ್ಯದಲ್ಲಿ ಇವತ್ತು ಅನೈತಿಕ ಸರಕಾರ ಅಸ್ತಿತ್ವದಲ್ಲಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಈ ಸರಕಾರಕ್ಕೆ ಜನರು ಬಹುಮತ ಕೊಡದಿದ್ದರೂ […]

ಬಿ ಎಸ್ ವೈ ಹಾಕಿಕೊಟ್ಟ ಮಾರ್ಗದರ್ಶನಲ್ಲಿ ಸಿಎಂ 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರಲು ಸ್ವಚ್ಛ ಆಡಳಿತ ನೀಡುತ್ತಿದ್ದಾರೆ- ಸಚಿವ ಹಾಲಪ್ಪ ಆಚಾರ

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಕಿಕೊಟ್ಟ ಮಾರ್ಗದರ್ಶನದಡಿ ಸಿಎಂ ಬಸವರಾಜ ಬೊಮ್ಮಾಯಿ ಸ್ವಚ್ಛ ಆಡಳಿತ ನೀಡುವ ಮೂಲಕ 2023ರಲ್ಲಿ ಮತ್ತೋಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸಿಂದಗಿಗೆ ಬಂದು ಪ್ರಚಾರ ಮಾಡಲಿದ್ದಾರೆ. ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ತಕ್ಷಣ ರಾಜ್ಯಕ್ಕೆ ಅಭೂತಪೂರ್ವ ಕೊಡುಗೆ ಕೊಟ್ಟಿದ್ದಾರೆ. ರೈತರ ಮಕ್ಕಳಿಗೆ ವಿಶೇಷವಾಗಿ […]

ನಾನೇನು ಬೆಂಗಳೂರಿಂದ ದುಡ್ಡು ತಂದು ಇಲ್ಲಿ ಮುಚ್ಚಿ ಚುನಾವಣೆ ಮಾಡ್ತಿಲ್ಲ- ಅಂಬೇಡ್ಕರ್ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಜೆಡಿಎಸ್ ಅಭ್ಯರ್ಥಿಗೆ ಸಹಾಯ ಮಾಡಲಿದ್ದಾರೆ- ಎಚ್. ಡಿ. ದೇವೇಗೌಡ

ವಿಜಯಪುರ: ಸಿಂದಗಿ ಜೆಡಿಎಸ್ ಅಭ್ಯರ್ಥಿಗೆ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಬೆಂಬಲ ಸೂಚಿಸಿದ್ಸದಾರೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲ ಅಂಗಡಿ ಪರ ಪ್ರಚಾರಕ್ಕೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಬ್ಬರದ ಪ್ರಚಾರ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾವು ಅಬ್ಬರದ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಇದೇ […]

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 25 ಸಾವಿರ ಅಂತರದಿಂದ ಗೆಲುವು ಸಾಧಿಸಲಿದ್ದಾರೆ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಕನಿಷ್ಟ ಸುಮಾರು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮುಜರಾಯಿ. ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಸಿಂದಗಿ ಮತಕ್ಷೇತ್ರದ ಉಪ ಚುನಾವಣೆಯನ್ನು ವ್ಯವಸ್ಥಿತವಾಗಿ ಎದುರಿಸುತ್ತಿದ್ದೇವೆ.  ದೇವಣಗಾಂವ ಮತ್ತು ಕನ್ನೋಳ್ಳಿ ಎರಡೂ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಚಾರದ ಜವಾಬ್ದಾರಿಯನ್ನು ನನಗೆ ವಹಿಸಲಾಗಿದೆ.  ಎಲ್ಲ […]

ಇನ್ನೋಂದು ವರ್ಷದಲ್ಲಿ ಕಾಂಗ್ರೆಸ್ ದಿವಾಳಿಯಾಗಲಿದೆ ಎಂದು ಭವಿಷ್ಯ ನುಡಿದ ಸಚಿವ ಗೋವಿಂದ ಕಾರಜೋಳ

ವಿಜಯಪುರ. ಇನ್ನೊಂದು ವರ್ಷದಲ್ಲಿ ಕಾಂಗ್ರೆಸ್ ದಿವಾಳಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇಶದಲ್ಲಿ ಕಾಂಗ್ರೆಸ್ 75 ವರ್ಷ ಅಧಿಕಾರವಧಿಯಲ್ಲಿ ದೀನ, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದೆ. ಅವರು ಕಾಂಗ್ರೆಸ್ ಮಾಡಿದ ಅನ್ಯಾಯದ ವಿರುದ್ಧ ಈ ಬಾರಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬಿಜೆಪಿಗೆ ಮತದಾರರು ಎರಡು ಬಾರಿ ಸ್ಪಷ್ಟ ಬಹುಮತ ನೀಡಿದ್ದಾರೆ. ಇದು ಜನ ಬಿಜೆಪಿ […]