ಚುನಾವಣೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತವೆ- ಡಾ. ಪ್ರಕಾಶ ಸಿದ್ದಾಪುರ

ವಿಜಯಪುರ: ಚುನಾವಣೆಗಳು ಪ್ರಜಾಪ್ರಭುತ್ವನ್ನು ಗಟ್ಟಿಗೊಳಿಸುತ್ತವೆ.  ಈ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೋಂಡು ತಮ್ಮ ಹಕ್ಕು ಚಲಾಯಿಸಬೇಕು ಎಂದು ತಿಕೋಟಾ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪುರ ಹೇಳಿದ್ದಾರೆ. ತಿಕೋಟಾ ಪಟ್ಟಣದಲ್ಲಿರುವ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನಲ್ಲಿ  ಶನಿವಾರ ಚುನಾವಣೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅವರು, ಮತದಾನ ಪ್ರತಿಯೊಬ್ಬರ ಹಕ್ಕು.  ಎಲ್ಲರೂ ನರ್ಸಿಂಗ್ […]

ಕೇಂದ್ರ ಬರ ಅಧ್ಯಯನ ತಂಡ ನ. 4ರಂದು ವಿಜಯಪುರ ಜಿಲ್ಲೆಗೆ ಭೇಟಿ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಅಧ್ಯಯನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್‌ ನೇತೃತ್ವದ ತಂಡ ನ. 4ರಂದು ಭೇಟಿ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಂಡದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಪಿ. ರಾಜೀವ, ವೀರಣ್ಣ ಚರಂತಿಮಠ, ಎ. ಎಸ್‌. ಪಾಟೀಲ ನಡಹಳ್ಳಿ, ಸಿದ್ದು ಸವದಿ ಇರಲಿದ್ದಾರೆ ಎಂದು ತಿಳಿಸಿದರು. […]

ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ- ಸಂಜಯ ಶೆಟ್ಟೆಣ್ಣವರ

ವಿಜಯಪುರ: ಇದೇ ತಿಂಗಳು 30 ನಡೆಯಬೇಕಿದ್ದ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಎರಡೂ ಸ್ಥಾನಗಳಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು.  ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ.  ಈ ಅರ್ಜಿಯ ವಿಚಾರಣೆ ಅ.30 ರಂದು ನಡೆಯಲಿದೆ.  ಹೀಗಾಗಿ  ಅಲ್ಲಿಯವರೆಗೆ ಚುನಾವಣೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ.  ಈ ಹಿನ್ನೆಲೆಯಲ್ಲಿ ಅ. 30 ರಂದು ನಡೆಯಬೇಕಿದ್ದಮೇ ಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ […]

ಅಸಮರ್ಪಕ ವಿದ್ಯುತ್ ಪೂರೈಕೆ, ಮಹಿಷಿ ದಸರಾ ವಿಚಾರ- ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ ಎಸ್. ಎ. ರಾಮದಾಸ ವಾಗ್ದಾಳಿ

ವಿಜಯಪುರ: ಸರಕಾರದ ಮುಂದಾಲೋಚನೆ ಕೊರತೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂದು ಮಾಜಿ ಸಚಿವ ಎಸ್. ಎ. ರಾಮದಾಸ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಡ್ ಶೆಡ್ಡಿಂಗ್ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದಾಗ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದೇಶದಲ್ಲಿ ಕರ್ನಾಟಕದಲ್ಲಿಯೇ ಅತಿಹೆಚ್ಚು ಕರೆಂಟ್ ಉತ್ಪಾದನೆ ಆಗುತ್ತಿತ್ತು ಎಂದು ಹೇಳಿದ ಅವರು, ಆದರೆ ಈ ಸರಕಾರ ಬಂದ ಮೇಲೆ ವಿದ್ಯುತ್ ಸಮಸ್ಯೆ ಹೆಚ್ಚಾಗಿದೆ.  ಇದು ದುರ್ದೈವದ […]

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ನೂತನ ಅಧ್ಯಕ್ಷರಾಗಿ ಕುಮಾರ ಚಂದ್ರಕಾಂತ ದೇಸಾಯಿ, ಉಪಾಧ್ಯಕ್ಷರಾಗಿ ಅಶೋಕ ಪಾಂಡಪ್ಪ ಲೆಂಕೆಣ್ಣವರ ಆಯ್ಕೆ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ಪ್ರತಿಷ್ಠಿತ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಕುಮಾರ ಚಂದ್ರಕಾಂತ ದೇಸಾಯಿ ಮತ್ತು ಉಪಾಧ್ಯಕ್ಷರಾಗಿ ಅಶೋಕ ಪಾಂಡಪ್ಪ ಲೆಂಕೆಣ್ಣವರ ಆಯ್ಕಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕುಮಾರ ಚಂದ್ರಕಾಂತ ದೇಸಾಯಿ(ಜೈನಾಪೂರ) ಪರ 11  ಮತಗಳು ಬಂದರೆ ಅವರ ಪ್ರತಿಸ್ಪರ್ಧಿ ಎಚ್. ಎಸ್. ಕೋರಡ್ಡಿ ಪರ 8 ಮತಗಳು ಬಂದವು.  ಹೀಗಾಗಿ ಕುಮಾರ ಚಂದ್ರಾಕಾಂತ ದೇಸಾಯಿ ಮೂರು ಮತಗಳ ಅಂತರದಿಂದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಪಾಂಡಪ್ಪ […]

ಏಳೆಂಟು ತಿಂಗಳಲ್ಲಿ ರಾಜ್ಯ ಸರಕಾರ ಪತನ- ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಏಳೆಂಟು ತಿಂಗಳಲ್ಲಿ ರಾಜ್ಯ ಸರಕಾರ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ವಿಜಯಪುರ ನಗರದಲ್ಲಿಬ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿನ ಬಳಿಕ ಕಾರ್ಯಕರ್ತರಿಗೆ ಅಭಿನಂದನೆ ಮತ್ತು ಔತಣಕೂಟ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಲವಾರು ಕಾರಣಗಳಿಂದ ಬಿಜೆಪಿಗೆ ಸೋಲಾಯಿತು. ಅನೇಕ‌ ತಪ್ಪು ನಿರ್ಣಯಗಳು, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಘೋಷಣೆ, ಬಿಜೆಪಿ ಸರಕಾರದಲ್ಲಿ ಕೆಲವು ಸಚಿವರು ಮಾಡಿದ ಭ್ರಷ್ಟಾಚಾರ, ಬಿಜೆಪಿ ಸರಕಾರದಲ್ಲಿ ಹಿಂದುತ್ವ ನಿರ್ಲಕ್ಷ್ಯ ಮಾಡಲಾಯಿತು. ಈ ಎಲ್ಲ ವಿಚಾರಗಳಿಂದ ಚುನಾವಣೆಯಲ್ಲಿ […]

ಬಿಜೆಪಿ ಅವಧಿಯಲ್ಲಿ ಟೆಂಡರ್ ಗಾತ್ರ ಹೆಚ್ಚಿಸಿರುವ ಕುರಿತು ಸಮಗ್ರ ತನಿಖೆಯಾಗಬೇಕು- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಟೆಂಡರ್ ಗಾತ್ರ ಹಚ್ಚಿಸಿರುವ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಅಹಿಂದ ಮತ್ತು ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಭಾಗವಾಗಿ ನಾನಾ ಟೆಂಡರ್ ಗಳ ಅಂದಾಜು ವೆಚ್ಚವನ್ನು ಹೆಚ್ಚಿಸಲಾಗಿದೆ.  ಈ ಹೆಚ್ಚಳಕ್ಕೆ ಏನು ಕಾರಣ? ಯಾವ ದರಕ್ಕೆ ಗುತ್ತಿಗೆ ನೀಡಲಾಗಿದೆ? ಸೇರಿದಂತೆ ಎಲ್ಲ ಅಂಶಗಳ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಹೇಳಿದರು. ಬಿಜೆಪಿ […]

ರಾಜ್ಯ ಸರಕಾರದಿಂದ ಸರ್ವಾಧಿಕಾರಿ ಧೋರಣೆ ಆರೋಪ- ಗುಮ್ಮಟ ನಗರಿಯಲ್ಲಿ ಬಿಜೆಪಿಯಿಂದ ಹಲಗೆ ಬಾರಿಸಿ ಪ್ರತಿಭಟನೆ

ವಿಜಯಪುರ: ಕಾಂಗ್ರೆಸ್ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ವಿಧಾನಸಭೆ ಅಧಿವೇಶನದಲ್ಲಿ ಮಾರ್ಷಲ್‌ ಗಳು ದೌರ್ಜನ್ಯ ಎಸಗಿದ್ದಾರೆ.  ಅಲ್ಲದೇ, ಕಾಂಗ್ರೆಸ್ ಸರಕಾರದ ಸಂವಿಧಾನ ವಿರೋಧಿ ಧೋರಣೆ ಅನುಸರಿಸುವ ಮೂಲಕ 10 ಶಾಸಕರನ್ನು ಅಮಾನತು ಮಾಡಿದೆ.  ಸಭಾಧ್ಯಕ್ಷರ ಈ ನಡೆ ಅಸಂವಿಧಾನಿಕವಾಗಿದೆ.  ಅಲ್ಲದೇ, ಹಿರಿಯ ಶಾಸಕರೆಂಬ ಕಾಳಜಿಯೂ ಇಲ್ಲದೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಎಳೆದಾಡಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.  […]

ಯತ್ನಾಳ‌ ಅಸ್ವಸ್ಥ- ಸಿಎಂ, ಸ್ಪೀಕರ, ಬೊಮ್ಮಾಯಿ, ಬಿ ಎಸ್ ವೈ ಆಸ್ತತ್ರೆಗೆ ಭೇಟಿ- ಆರಾಮವಾಗಿರುವೆ ಎಂದ ಶಾಸಕ

ಬೆಂಗಳೂರು: ಅಧಿವೇಶನ‌ ಸಂದರ್ಭದಲ್ಲಿ ಉಂಟಾದ ಗದ್ದಲದಲ್ಲಿ ಅಸ್ವಸ್ಥರಾದ ವಿಜಯಪುರ ನಗರ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ, ಸ್ಪೀಕರ್ ಯು. ಟಿ. ಖಾದರ, ಮಾಜಿ ಸಿಎಂ ಗಳಾದ ಬಿ. ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮುಖಂಡರಾದ ಸಿ. ಟಿ. ರವಿ ಸೇರಿದಂತೆ ಅನೇಕ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ ಅವರ ಆರೋಗ್ಯ ವಿಚಾರಿಸಿದ್ದಾರೆ. ಮಧ್ಯಾಹ್ನ ವಿಧಾನ ಸಭೆ ಅಧಿವೇಶನದಲ್ಲಿ ಗದ್ದಲ ಉಂಟಾಗಿತ್ತು.  […]

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ವರ್ಗಾವಣೆ ದಂಧೆ ನಡೆಯುತ್ತಿದೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಒಂದು ಕೈಯಲ್ಲಿ ಯೋಜನೆ ನೀಡಿ ಮತ್ತೊಂದು ಕಡೆಗೆ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ.  ನಾನಾ ಕಡೆಗಳಲ್ಲಿ ಹತ್ಯೆಗಳು ಆಗುತ್ತಿವೆ.  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತೆ ಆಗಿದೆ.  ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆಯನ್ನು […]