ಜೆಎಸ್ಎಸ್ ಆಸ್ಪತ್ರೆಯಲ್ಲಿ ವಿನೂತನ ಕಾರ್ಯಕ್ರಮ- ರೋಗಿಗಳೊಂದಿಗೆ ದೀಪಾವಳಿ ಆಚರಣೆ- ಶೈಲಜಾ ಪಾಟೀಲ ಯತ್ನಾಳ ಚಾಲನೆ

ವಿಜಯಪುರ: ಆಸ್ಪತ್ರೆ ಎಂದರೆ ಕೇವಲ ಆರೋಗ್ಯ ಸುಧಾರಣz ಕೇಂದ್ರಗಳಾಗುವುದಕ್ಕಿಂತ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಜನ್ಮ ದಿನೋತ್ಸವ ಮತ್ತು ದೀಪಾವಳಿ ಅಂಗವಾಗಿ ಆಯೋಜಿಸಲಾಗಿದ್ದ ಆರೋಗ್ಯ ದೀಪೋತ್ಸವ ಹಾಗೂ ಮುತ್ಯದೆಯರಿಗೆ ಉಡಿ ತುಂಬುವ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯದ ಜೊತೆಯಲ್ಲಿ ಸಂಸ್ಕಾರ, ಸಂಸ್ಕೃತಿಯನು ಉಳಿಸುವ ಕಾಯಕವನ್ನು ಮಾಡಬೇಕು ಎನ್ನುವುದಕ್ಕೆ ನಮ್ಮ […]

ಶ್ರೀ ಸಿದ್ಧೇಶ್ವರ ಸಂಸ್ಥೆಯ ಗೋರಕ್ಷಾ ಕೇಂದ್ರದ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ

ವಿಜಯಪುರ: ಶ್ರೀ ಸಿದ್ಧೇಶ್ವರ ಸಂಸ್ಥೆಯ ಕಗ್ಗೋಡ ಶ್ರೀ ರಾಮನಗೌಡ ಬಾ ಪಾಟೀಲ(ಯತ್ನಾಳ) ಗೋ ರಕ್ಷಾ ಕೇಂದ್ರದ ಸಾವಯವ ಗೋ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಲಾಯಿತು. ನಗರದ ಶ್ರೀ ಸಿದ್ಧೇಶ್ವರ ದೇವಾಲಯದ ಪಕ್ಕದಲ್ಲಿ ಪ್ರಾರಂಭಿಸಲಾಗಿರುವ ಈ ಮಾರಾಟ ಮಳಿಗೆಯನ್ನು ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ ಮತ್ತು ಚೇರಮನ್‌ ಬಸಯ್ಯ ಎಸ್. ಹಿರೇಮಠ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್. ಎಚ್. ದೇಸಾಯಿ, ಬಸವರಾಜ ಸುಗೂರ, ಕೋಶಾಶದ್ಯಕ್ಷ ಶಿವಾನಂದ ನೀಲಾ, ನಿರ್ದೇಶಕ ರಮೇಶ ಹಳ್ಳದ, ಸದಾಶಿವ ಗುಡ್ಡೋಡಗಿ, ಎಂ. […]

ಗುಮ್ಮಟ ನಗರಿಯಲ್ಲಿ ಟಿಪ್ಪು ಜಯಂತಿ ಸಂಭ್ರಮ- ಟಿ. ಎಸ್. ಎಸ್. ಸಂಘಟನೆಯಿಂದ ಆಯೋಜನೆ

ವಿಜಯಪುರ: ನಗರದ ಟಿಪ್ಪು ಸುಲ್ತಾನ ಸರ್ಕಲ್‌ನಲ್ಲಿ ಟಿ. ಎಸ್. ಎಸ್ ಸಂಘಟನೆಯ ವತಿಯಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಜಯಂತಿಯವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಭಾವಚಿತ್ರಕ್ಕೆ ಸರ್ವಧರ್ಮಿಯರು ಒಗ್ಗೂಡಿ ಪುಷ್ಪಾರ್ಚನೆ ಸಲ್ಲಿಸಿ ಟಿಪ್ಪು ಧ್ವಜಾರೋಹಣ ನೆರವೇರಿಸಿ ಜೈಕಾರ ಹಾಕಿದರು.  ಈ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಉರ್ದು ಪತ್ರಕರ್ತ ರಫೀ ಭಂಡಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ […]

ಅನಾಥಾಶ್ರಮ ಮಕ್ಕಳಿಗೆ ದೀಪಾವಳಿ ಗಿಫ್ಟ್ ನೀಡಿದ ವಿಜಯಪುರದ ನಾಗರಾಳೆ ಶಿಕ್ಷಣ ಸಂಸ್ಥೆ ಹಾರೈಕೆ

ವಿಜಯಪರ: ನಗರದ ನಾಗರಾಳೆ ಶಿಕ್ಷಣ ಸಂಸ್ಥೆ ವತಿಯಿಂದ ದೀಪಾವಳಿ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಸವ ನಗರದಲ್ಲಿರುವ ಅನಾಥಾಶ್ರಮದ ಮಕ್ಕಳಿಗೆ ಸಿಹಿ ಮತ್ತು ಸ್ವೇಟರ್ ವಿತರಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸಿದರಾಯ ಬಿ. ನಾಗರಾಳೆ, ಇಲ್ಲಿ ವಾಸವಾಗಿರುವ ಅನಾಥ ಮಕ್ಕಳಿಗೆ ಸ್ವೇಟರ್ ನೀಡಿದ್ದು ಅತೀವ ಸಂತಸವನ್ನುಂಟು ಮಾಡಿದೆ.  ಈ ಎಲ್ಲ ಮಕ್ಕಳಿಗೆ ದೇವರು ಆರೋಗ್ಯವನ್ನು ನೀಡಲಿ.  ದೀಪಾವಳಿ ಇವರ ಬಾಳಲ್ಲಿ ಹೊಸ ಹುಮ್ಮಸ್ಸನ್ನು ತರಲಿ ಎಂದು ಶುಭ ಹಾರೈಸಿದರು. ಕರ್ನಾಟಕ ರಾಜ್ಯ ಕಾರ್ಮಿಕರ ಮತ್ತು […]

ವೀರಯೋಧ ಕಾಶೀರಾಯ ಬಮ್ಮನಳ್ಳಿ ಸ್ಮರಣಾರ್ಥ ಸರ್ವಧರ್ಮ ಸಮ್ಮೇಳನ- ದೇಶಪ್ರೇಮ ಬೆಳೆಸಿಕೊಳ್ಳಲು ಗೋವಿಂದ ಕಾರಜೋಳ ಕರೆ

ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯರು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಿಎಲ್‌ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಫೀ ಬಂಡಾರಿ ಅವರಿಗೆ ಸನ್ಮಾನ

ವಿಜಯಪರ: ಪ್ರಸಕ್ತ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಡೇಲಿ ಸಾಲಾರ ಉರ್ದುು ದಿನಪತ್ರಿಕೆಯ ಹಿರಿಯ ಪತ್ರಕರ್ತ ರಫೀ ಭಂಡಾರಿ ಅವರನ್ನು ಅವರ ಅಭಿಮಾನಿಗಳು ಹಾಗೂ ನಾನಾ ಮುಖಂಡರು ಸನ್ಮಾನಿಸಿ ಗೌರವಿಸಿದರು.  ನಗರದ ಗಗನ ಮಹಲ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಯು ವಿಹಾರ ಬಳಗದ ನಾನಾ ಸಮಾಜದ ಮುಖಂಡರು ಅತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಪೀ ಭಂಡಾರಿ, ತಮ್ಮ ಈ ಪ್ರಶಸ್ತಿಯನ್ನು ಭಾಷೆ ಮತ್ತು ಕೋಮು ಸೌಹಾರ್ಧತೆಗೆ ಸಮರ್ಪಿಸುವುದಾಗಿ ತಿಳಿಸಿದರು. ಹಿಂದೂ- ಮುಸ್ಲಿಂ ಸಮಾಜ […]

ಬಿ.ಎಲ್.ಡಿ.ಇ ಸಂಸ್ಥೆ ಬಸವ ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದೆ- ಅಥಣಿ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ

ವಿಜಯಪುರ: ಬಸವಾದಿ ಶರಣರ ಆಶಯದಂತೆ ಪ್ರಾರಂಭವಾದ ಬಿ.ಎಲ್.ಡಿ.ಇ ಸಂಸ್ಥೆ ಜಿಲ್ಲೆಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಅಥಣಿಯ ಶ್ರೀ ಮೋಟಗಿಮಠದ ಶ್ರೀ ಪ್ರಭುಚನ್ನಬಸಸವ ಸ್ವಾಮೀಜಿ ಹೇಳಿದ್ದಾರೆ. ನಗರದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ಆಯೋಜಿಸಿದ್ದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಿಟೀಷರ ಆಡಳಿತದಲ್ಲಿ ಹಿಂದುಳಿದಿದ್ದ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ 1910ರಲ್ಲಿ […]

ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ- ಬೀದರಿನ ಡಾ. ಶಿವಕುಮಾರ ಮಹಾಸ್ವಾಮೀಜಿ

ವಿಜಯಪುರ: ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಇಂದಿಗೂ ಎಲ್ಲರಿಗೂ ದಾರಿದೀಪವಾಗಿವೆ ಎಂದು ಬೀದರಿನ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಹೇಳಿದ್ದಾರೆ. ನಗರದ ಸೋಲಾಪುರ ರಸ್ತೆ ಬಳಿಯ ಸಂಸ್ಕೃತಿ ಕಾಲನಿ ಹತ್ತಿರವಿರುವ ಶ್ರೀ ಸಿದ್ಧಾರೂಢರ ಮಠದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ಸಿದ್ಧಾರೂಢರ ಮೂರ್ತಿ ಪ್ರತಿಷ್ಠಾಪನೆಯ 17ನೇ ವಾರ್ಷಿಕೋತ್ಸವ ಹಾಗೂ ಮಾತೋಶ್ರೀ ಪಾರ್ವತಮ್ಮನವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ 5ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀ ಸಿದ್ಧಾರೂಢರು ತಮ್ಮ ಅವಧಿಯಲ್ಲಿ ಅನೇಕ ಪವಾಡಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ.  12ನೇ […]

ಉದ್ಯಮಿಯಾಗಿ ಹೆಚ್ಚೆಚ್ಚು ಉದ್ಯೋಗ ಸೃಷ್ಠಿಸಿ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು- ಎಚ್. ಕೆ. ಪಾಟೀಲ

ವಿಜಯಪುರ: ಉದ್ಯಮಿಯಾಗಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯಲ್ಲಿ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾಗುವ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭ ಮತ್ತು ವಿಜಯಪುರ ನಗರದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸ್ಥೆ ವತಿಯಿಂದ ನಿರ್ಮಿಸಲಾಗುತ್ತಿರುವ ಆಂಗ್ಲ ಮಾಧ್ಯಮ ಶಾಲೆಯ ಕಟ್ಡಡ ಮತ್ತು ವಿದ್ಯಾರ್ಥಿ ವಸತಿ ನಿಲಯದ […]

ಪತ್ರಕರ್ತರಾದ ರಮೇಶ, ಮಲ್ಲಿಕಾರ್ಜುನಮಠ, ಸೀತಾರಾಮ, ಕಂಪೂನವರ, ಸಾಧಕರಾದ ಎಸ್. ಡಿ. ಕುಮಾನಿ, ಎ. ಜೆ ಕುಲಕರ್ಣಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ವಿಜಯಪುರ: ಪತ್ರಕರ್ತರಾದ ಕೆ. ವಿ. ರಮೇಶ(ವಿಜಯವಾಣಿ ಸ್ಥಾನಿಕ ಸಂಪಾದಕ), ಅಲ್ಲಮಪ್ರಭು ಮಲ್ಲಿಕಾರ್ಜುನಮಠ(ತೆಂಕಣಗಾಳಿ ಸಂಪಾದಕ), ಸೀತಾರಾಮ ಕುಲಕರ್ಣಿ(ನವನಾಡ ಕರ್ನಾಟಕ ಸಂಪಾದಕ), ಷಡಾಕ್ಷರಿ ಕಂಪೂನವವರ(ಸುವರ್ಣ ನ್ಯೂಸ್), ಸಮಾಜ ಸೇವಕ ಎಸ್. ಡಿ. ಕುಮಾನಿ, ಇತಿಹಾಸ ತಜ್ಞ ಮತ್ತು ಸಂಶೋಧಕ ಎ. ಜೆ. ಕುಲಕರ್ಣಿ ಸೇರಿದಂತೆ 20 ಜನರನ್ನು ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಸಂಗಮೇಶ ಭೀಮಣ್ಣ ಕೆರೆಪ್ಪಗೋಳ, ಸಮಾಜ ಸೇವೆ-ಕನ್ನಡ ಸೇವೆ ಕ್ಷೇತ್ರದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಬಾಳಿ ಹಾಗೂ ಸಿದ್ರಾಮಪ್ಪಾ ದುಂಡಪ್ಪಾ ಕುಮಾನಿ, […]