ಡಾ. ಬಿದರಿ ಚೈಲ್ಡ್ ಅಕಾಡೆಮಿ ಆಶ್ರಯದಲ್ಲಿ 8 ರಿಂದ 16 ವರ್ಷದ ಮಕ್ಕಳಿಗಾಗಿ ಲಿಟಲ್ ಸಿಂಗಿಂಗ್ ಸ್ಟಾರ್ಸ್ ಗಾಯನ, ಚಿತ್ರಕಲೆ, ಆಶುಭಾಷಣ, ಆರೋಗ್ಯವಂತ ಮಗು ಸ್ಪರ್ಧೆ

ವಿಜಯಪುರ: ನಗರದ ಚಿಕ್ಕಮಕ್ಕಳ ಖ್ಯಾತ ತಜ್ಞ ಡಾ. ಎಲ್. ಎಚ್. ಬಿದರಿ ಅವರ ಮಹತ್ವಾಂಕ್ಷೆಯ ಡಾ. ಬಿದರಿ ಚೈಲ್ಡ್ ಅಕಾಡೆಮಿ ನವೆಂಬರ್ 19 ರಂದು ಲೋಕಾರ್ಪಣೆಯಾಗಲಿದ್ದು, ಇದರ ಅಂಗವಾಗಿ ನಾನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತುವ ಹಾಗೂ ಅವರ ಸರ್ವಾಂಗೀಣ ಅಭಿವೃದ್ಧಿಯ ಗುರಿಯೊಂದಿಗೆ ಈ ಸಂಸ್ಥೆ ತನ್ನ ಸೇವೆ ಪ್ರಾರಂಭಿಸಲಿದೆ.  ಇದರ ಮೊದಲ ಹಂತದ ಯೋಜನೆಯಲ್ಲಿ ಜಿಲ್ಲೆಯ ಮಕ್ಕಳಲ್ಲಿರುವ ಗಾಯನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 8 ರಿಂದ 16 ವರ್ಷದೊಳಗಿನ […]

ನವೆಂಬರ್ 1 ಕನ್ನಡಿಗರಾಗುವ ಬದಲು ನಂ.1 ಕನ್ನಡಿಗರಾಗಿ: ಪ್ರಕಾಶ ಆರ್. ಕೆ.

ವಿಜಯಪುರ: ನವೆಂಬರ್ 1 ಕನ್ನಡಿಗರಾಗುವ ಬದಲು ನಂ.1 ಕನ್ನಡಿಗರಾಗಬೇಕು ಎಂದು ಗಾನಯೋಗಿ ಸಂಘದ ಪ್ರಕಾಶ ಆರ್. ಕೆ. ಹೇಳಿದ್ದಾರೆ.   ಕರ್ನಾಟಕ ರಾಜ್ಯೋತ್ಸವದ 50ರ ಸಂಭ್ರಮದ ಅಂಗವಾಗಿ ಗಾನಯೋಗಿ ಸಂಘ ವತಿಯಿಂದ ಅಂಗವಾಗಿ ವಿಜಯಪುರ ನಗರದ ಸಿಂದಗಿ ಬೈಪಾಸ್ ಫ್ಲೈಓವರ್ ಗೋಡೆಗೆ ಕರ್ನಾಟಕ ಪ್ರಥಮ ಪ್ರೌಢ ಸಾಮ್ರಾಟ ಇಮ್ಮಡಿ ಪುಲಿಕೇಶಿಯ ಚಿತ್ರವನ್ನು ಬಿಡಿಸುವ ಮೂಲಕ ರಾಜ್ಯೋತ್ಸವ ಗಮನ ಸೆಳೆದಿದೆ.  ಈ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾತನಾಡಿದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಾನಯೋಗಿ ಸಂಘದ ಪ್ರಕಾಶ ಆರ್. ಕೆ. ಕನ್ನಡಕ್ಕಾಗಿ […]

ಬಸವೇಶ್ವರರ ಜನ್ಮಭೂಮಿ ಅಭಿವೃದ್ಧಿ ಪಡಿಸಿ ಕುರುಹು ಉಳಿಸುವ ಕೆಲಸವಾಗಬೇಕು- ಸಚಿವ ಶಿವಾನಂದ ಎಸ್. ಪಾಟೀಲ

ವಿಜಯಪುರ: ಬಸವಣ್ಣನವರ ಜನ್ಮಭೂಮಿ ಬಸವನ ಬಾಗೇವಾಡಿ ಅಭಿೃವೃದ್ಧಿ ಪ್ರಾಧಿಕಾರ ರಚಿಸಬೇಕು.  ಅವರ ಕುರುಹು ಉಳಿಸುವ ಕೆಲಸ ನಡೆಯಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎ. ಪಿ. ಎಂ. ಸಿ. ಸಚಿವ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸವೇಶ್ವರರ ಹೆಸರು ಈಗಾಗಲೇ ಪ್ರಚಲಿತವಾಗಿದೆ.  ಬಸವೇಶ್ವರರ ಹುಟ್ಟಿದ್ದು ವಿಜಯಪುರ ಜಿಲ್ಲೆಯಲ್ಲಿ ಎಂಬುದು ಜಗತ್ತಿಗೆ ಜಗಜ್ಜಾಹೀರು ಆಗಿದೆ.  ಆದರೆ, ಯಾವುದೇ ಸರಕಾರ ಬರಲಿ.  ಈ ಸರಕಾರವೇ ಇರಲಿ, ಬೇರೆ […]

ದಸರಾ ಅಂಗವಾಗಿ ಸಾರ್ವಜನಿಕರೊಂದಿಗೆ ಶಾಸಕ ಯತ್ನಾಳ ಅವರಿಂದ ಬನ್ನಿ ವಿನಿಮಯ

ವಿಜಯಪುರ: ವಿಜಯ ದಶಮಿ ಅಂಗವಾಗಿ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡರು. ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ ಶಾಸಕರು, ಫಲ್ಲಕ್ಕಿಯೊಂದಿಗೆ ನಗರದ ಎಪಿಎಂಸಿ ಹತ್ತಿರದ ನೀಲಕಂಠೇಶ್ವರ ದೇವಸ್ಥಾನದ ಬಳಿ ತೆರಳಿ ಬನ್ನಿ ಮುಡಿಯುವ ಕಾರ್ಯದಲ್ಲಿ ಭಾಗಿಯಾದರು. ನಂತರ ಮರಳಿ ಸಿದ್ದೇಶ್ವರ ದೇವಸ್ಥಾನ ಆವರಣಕ್ಕೆ ಆಗಮಿಸಿ, ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ರೈತರು, ಮುಖಂಡರು, […]

ದಸರಾ ಸಂಭ್ರಮ- ಸಾರ್ವಜನಿಕರು, ರೈತರು, ಮುಖಂಡರು, ಹಿತೈಷಿಗಳೊಂದಿಗೆ ಸಚಿವ ಎಂ. ಬಿ. ಪಾಟೀಲ ಬನ್ನಿ ವಿನಿಮಯ

ವಿಜಯಪುರ: ನಾಡಹಬ್ಬ ದಸರಾ ಅಂಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿದರು. ಬೆಳಿಗ್ಗೆಯಿಂದಲೇ ಸಚಿವರ ಗೃಹ ಕಚೇರಿಗೆ ಆಗಮಿಸಿದ ಅಪಾರ ಸಂಖ್ಯೆಯಲ್ಲಿದ್ದ ರೈತರು, ಮುಖಂಡರು, ಸಾರ್ವಜನಿಕರು, ಸಚಿವರ ಅಭಿಮಾನಿಗಳು ಹಾಗೂ ಬೆಂಬಲಿಗರು ಸಚಿವರಿಗೆ ಬನ್ನಿ ನೀಡಿ ಶುಭ ಕೋರಿದರು.  ಇದಕ್ಕೆ ಪ್ರತಿಯಾಗಿ ಸಚಿವರೂ ಕೂಡ ಎಲ್ಲರಿಗೂ ಬನ್ನಿ ನೀಡಿ ಶುಭ ಕೋರಿದರು.  ವಿಜಯಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ನಾನಾ […]

ಬಂಜಾರಾ ಸಮುದಾಯದ ಜನ ಶ್ರಮಜೀವಿಗಳು- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಬಂಜಾರಾ ಸಮುದಾಯದ ಜನ ಶ್ರಮಜೀವಿಗಳು.  ಯಾವುದೇ ಜಲಾಷಯ, ಸೇತುವೆ ಸೇರಿದಂತೆ ಕಟ್ಟಡಗಳ ನಿರ್ಮಾಣದಲ್ಲಿ ಬೆವರ ಹನಿ‌ ಇದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌರ‍್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ಮಂಗಳವಾರ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್.ಟಿ. 1ರಲ್ಲಿ ದರ‍್ಗಾದೇವಿ ಮಹಾದ್ವಾರ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರಾ ಮಹಿಳೆಯರೂ ಕೂಡ ಶ್ರಮಜೀವಿಯಾಗಿ ಸಮುದಾಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿ ಹಿಡಿದಿದ್ದಾರೆ.  ಭಕ್ತಿ ಮತ್ತು ಶ್ರದ್ಧೆಗೆ ಈ […]

ದಸರಾ ಅಂಗವಾಗಿ ಪಾರೇಖ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ

ವಿಜಯಪುರ: ನಾಡಹಬ್ಬ ದಸರಾ ಮತ್ತು ವಿಜಯ ದಶಮಿ ಅಂಗವಾಗಿ ನಗರದ ಜ್ಞಾನಯೋಗಾಶ್ರಮದ ಹತ್ತಿರ ಇರುವ ಪಾರೇಖ ನಗರದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಾಲಯದ ಬನ್ನಿಗಿಡದ ಪಲ್ಲಕ್ಕಿಯನ್ನು ಹೊತ್ತ ಬಡಾವಣೆಯ ಹಿರಿಯರು ಮತ್ತು ಯುವಕರು ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಹಿರಿಯರು, ಮಹಿಳೆಯರು ಮತ್ತು ಮಕ್ಕಳೂ ಕೂಡ ಪಲ್ಲಕ್ಕಿ ಉತ್ಸವದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡರು.

ನವರಾತ್ರಿ ಶುಭ ದಿನದಂದು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಬಸವ ನಾಡಿನ ಪೋಷಕರು

ವಿಜಯಪುರ: ಹಿಂದೂ ಸಂಪ್ರದಾಯದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲು ಶುಭ ದಿನಗಳಿಗಾಗಿ ಕಾಯುವ ಸಂಪ್ರದಾಯ ಹಿಂದಿನಂದಲೂ ಆಚರಣೆಯಿಂದ ಬಂದಿದೆ.  ತಮ್ಮ ಮಕ್ಕಳು ವಿದ್ಯಾವಂತರಾಗಬೇಕು.  ಬುದ್ದಿವಂತರಾಗಬೇಕು.  ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರಬೇಕು ಎಂದು ಆಶಿಸುವ ಪೋಷಕರು ಬಾಲ್ಯದಲ್ಲಿ ಅವರು ಅಕ್ಷರ ಕಲಿಯುವ ಅಥವಾ ಶಾಲೆಗೆ ಸೇರುವ ದಿನ ಶುಭವಾಗಿದ್ದರೆ ಅವರ ಭವಿಷ್ಯ ಉಜ್ವಲವಾಗಿರುತ್ತದೆ ಎಂಬ ನಂಬಿಕೆಯಿಂದ ಸ್ವಾಮೀಜಿಗಳು ಅಥವಾ ಅರ್ಚಕರು ಇಲ್ಲವೇ ಜ್ಯೋತಿಷಿಗಳು ಬಳಿ ಪಂಚಾಂಗ ಕೇಳುತ್ತಾರೆ.  ಅದೇ ರೀತಿ, ಇಂಥ ಶುಭ ದಿನಗಳಿಗಾಗಿಯೂ ಭಾರತೀಯ ಸಂಪ್ರದಾಯದಲ್ಲಿ ಕೇವಲ […]

ಕಿತ್ತೂರು ರಾಣಿ ಚೆನ್ನಮ್ಮ ಅವರ ತತ್ವಾದರ್ಶಗಳು ದಾರಿದೀಪವಾಗಿವೆ- ಮಹಾದೇವ ಮುರಗಿ

ವಿಜಯಪುರ: ನಾಡು- ನುಡಿಗಾಗಿ, ಈ ದೇಶಕ್ಕಾಗಿ ಸಮಾಜದ ಸುಧಾರಣೆಗಾಗಿ, ಸ್ವಾಭಿಮಾನಕ್ಕಾಗಿ ಧೀರೋದಾತ್ತೆತೆಯಿಂದ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮರಂತಹ ಮಹನೀಯರ ಆದರ್ಶ ವಿಚಾರಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ  ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಈ […]

ವಿಜಯಪುರ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ನಾಮಕರಣ: ಅಭಿಪ್ರಾಯಗಳ ಆಹ್ವಾನ

ವಿಜಯಪುರ: ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ನಾಮಕರಣ ಮಾಡಲು ಸಂಘ- ಸxಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿವೆ.  ಈ  ಹಿನ್ನಲೆಯಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರನ್ನು ನಾಮಕರಣ ಮಾಡುವ ಕುರಿತು ಸ್ಪಷ್ಟ […]