ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ, ಬಸವೇಶ್ವರ ಜಿಲ್ಲೆ ನಾಮಕರಣ: ಅಭಿಪ್ರಾಯಗಳ ಆಹ್ವಾನ

ವಿಜಯಪುರ: ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಂಘ- ಸಂಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿರುವೆ.  ಈ ಹಿನ್ನಲೆಯಲ್ಲಿ  ವಿಶ್ವ ಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳ ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ. ಈ ಪ್ರಕಟಣೆಯ 15 ದಿನಗಳೊಳಗಾಗಿ ವಿಶ್ವಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡುವ ಕುರಿತು […]

ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ- ಸಂತೋಷ ಕುಂದರ್

ವಿಜಯಪುರ: ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು.  ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು  ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್. ಕುಂದರ ಹೇಳಿದ್ದಾರೆ.   ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು  ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ […]

ಬಸವ ನಾಡಿಗೆ ಬಂದ ಕಿತ್ತೂರು ಚನ್ನಮ್ಮ ವಿಜಯ ವೀರಜ್ಯೋತಿ ಯಾತ್ರೆ- ಅಧಿಕಾರಿಗಳು, ಗಣ್ಯರಿಂದ ಸ್ವಾಗತ

ವಿಜಯಪುರ: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೋರಾಟ  ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ರ ವಿರುದ್ಧ ಹೋರಾಟ ನಡೆಸಿದರು.  ಅವರ ಹೋರಾಟ, ತ್ಯಾಗ, ಬಲಿದಾನ ಹಾಗೂ ಅವರ ದೇಶ ಭಕ್ತಿ ಸ್ಮರಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸೋಣ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕಿತ್ತೂರು ಚನ್ನಮ್ಮ ಅವರ ವಿಜಯ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು. ಕಿತ್ತೂರ ಚನ್ನಮ್ಮ ಅವರ ಸ್ವಾತಂತ್ರ‍್ಯ […]

ಲಿಂಬೆಹಣ್ಣು, ಸಮುದ್ರದ ಮರಳಿನಿಂದ ತಯಾರಾಯ್ತು ನಾಡದೇವಿ- ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಗೆಲ್ಲಲಿ ಎಂದು ಶುಭ ಸಂದೇಶ- ಎಲ್ಲಿದೆ ಗೊತ್ತಾ?

ವಿಜಯಪುರ: ವಿಶ್ವಾದ್ಯಂತ ಈಗ ವಿಶ್ವಕಪ್ ಕ್ರಿಕೆಟ್ ಹವಾ ಜೋರಾಗಿದೆ.  ಭಾರತದಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿ ಈಗ ಕ್ರಿಕೆಟ್ ಕ್ರೇಜ್ ಹೆಚ್ಚಿಸಿದೆ.  ಈ ಮಧ್ಯೆ ನಾಡಹಬ್ಬ ದಸರಾ ಸಂಭ್ರಮವೂ ಜೋರಾಗಿದೆ.  ಇದೆಲ್ಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಸವ ನಾಡು ವಿಜಯಪುರದಲ್ಲಿ ಓಡಿಶ್ಯಾದ ಖ್ಯಾತ ಕಲಾವಿದ ಮತ್ತು ಸಮುದ್ರದ ಮರಳಿನಿಂದ ಕಲಾಕೃತಿ ರಚಿಸುವ ಸುದರ್ಶನ ಪಟ್ನಾಯಕ್ ನಿರ್ಮಿಸಿರುವ ಮಾದರಿಯೊಂದು ಗಮನ ಸೆಳೆಯುತ್ತಿದೆ. ವಿಜಯಪುರ ನಗರದ ಶಹಾಪೇಟಿ ಗಲ್ಲಿಯ ಮುಖ್ಯ ರಸ್ತೆಯಲ್ಲಿ ಪ್ರತಿವರ್ಷ ನಾಡಹಬ್ಬ ದಸರಾ ಅಂಗವಾಗಿ ಪ್ರತಿಷ್ಠಾಪಿಸಲಾಗುವ ನಾಡದೇವಿ ಆಕರ್ಷಣೆಯ ಕೇಂದ್ರವಾಗುತ್ತಿದೆ.  […]

ಶ್ರೀ ಸಿದ್ಧೇಶ್ವರ ಆದಿಶಕ್ತಿ ತರುಣ ಮಂಡಳಿಯಿಂದ ಈ ಬಾರಿ ನಾಡಹಬ್ಬದ ಅಂಗವಾಗಿ ದೇಹುಗಾಂವ ಗಾಥಾ ಮಂದಿರ ನಿರ್ಮಾಣ

ವಿಜಯಪುರ: ನಾಡಹಬ್ಬದ ಅಂಗವಾಗಿ ನಗರದ ರಾಮ ಮಂದಿರ ರಸ್ತೆಯಲ್ಲಿರುವ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಮಂಡಳಿ ಪ್ರತಿವರ್ಷ ನಾನಾ ಮಾದರಿಗಳನ್ನು ನಿರ್ಮಿಸುವ ಮೂಲಕ ಗಮನ ಸೆಳೆಯುತ್ತಿದ್ದು, ಈ ಬಾರಿಯೂ ವಿಶೇಷ ಮಾದರಿ ನಿರ್ಮಿಸಿದೆ. 44ನೇ ದಸರಾ ಹಬ್ಬದ ಆಚರಣೆ ಅಂಗವಾಗಿ ಈ ಬಾರಿ ಪುಣೆಯ ದೇಹುಗಾಂವ ಗಾಥಾ ಮಂದಿರ ನಿರ್ಮಿಸಲಾಗಿದೆ.  ದಸರಾ ಅಂಗವಾಗಿ ಅ. 17 ರಂದು ಮಂಗಳವಾರ ರಾಮ ಮಂದಿರದಿಂದ ನಾಡದೇವಿಯ 101 ಕೆಜಿ ಬೆಳ್ಳಿಯ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ.  ನಗರದ ಪ್ರಮುಖ ರಸ್ತೆಗಳಲ್ಲಿ […]

ಭೂತನಾಳ ತಾಂಡಾ ಶ್ರೀ ದುರ್ಗಾದೇವಿ ದೇವಾಲಯ ಅಭಿವೃದ್ಧಿಗೆ ಕೇಂದ್ರದಿಂದ ರೂ. 1 ಕೋ. ವಿಶೇಷ ಅನುದಾನ ಮಂಜೂರು ಮಾಡಿಸಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ನಗರದ ಹೊರವಲಯದ ಭೂತನಾಳ ತಾಂಡಾದಲ್ಲಿರುವ ಪುರಾತನ ಶ್ರೀ ದುರ್ಗಾದೇವಿ ದೇವಾಲಯದ ಸರ್ವತೋಮುಖ ಪ್ರಗತಿಗಾಗಿ ಸಂಸದ ರಮೇಶ ಜಿಗಜಿಣಗಿ ಪುರಾತತ್ವ ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯಿಂದ ರೂ. 1 ಕೋ. ಅನುದಾನ ಮಂಜೂರು ಮಾಡಿಸಿದ್ದಾರೆ ಎಂದು ನಗರಸಭೆ ಮಾಜಿ ಸದಸ್ಯ ಬಾಬು ಚವ್ಹಾಣ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಂಸದರು ಇಲಾಖೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ರೂ. 1 ಕೋ. ವಿಶೇಷ ಅನುದಾನ ಮಂಜೂರು ಮಾಡಿಸಿದ್ದಾರೆ.  ಸಂಸದರು ಅಭಿವೃದ್ಧಿ ಪರ ರಾಜಕಾರಣಿಯಾಗಿದ್ದು, ಆಧ್ಯಾತ್ಮಿಕತೆಗೂ […]

ರಾಜ್ಯ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ರವಿ ಕಿತ್ತೂರ ಅವಿರೋಧ ಆಯ್ಕೆ

ವಿಜಯಪುರ: ಜಿಲ್ಲಾಸ್ಪತ್ರೆಯ ಎ ಆರ್ ಟಿ ವಿಭಾಗದ ಹಿರಿಯ ಆಪ್ತ ಸಮಾಲೋಚಕಮುಖ್ಯಸ್ಥ ರವಿ ಕಿತ್ತೂರ ಅವರು ರಾಜ್ಯ ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 35 ಜನ ಪದಾಧಿಕಾರಿಗಳು ಚುನಾವಣೆಯಲ್ಲಿ 34 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರಲ್ಲಿ ರವಿ ಕಿತ್ತೂರ ಅವರು ಸಂಘಟನಾ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.  ಕಳೆದ ಬಾರಿ ಅವರು ಸಹ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸಚಿವರಾದ ಬೈರತಿ ಸುರೇಶ, ಮಾಜಿ ಸಚಿವರಾದ ಎಚ್. […]

ಗಾಂಧಿ, ಶಾಸ್ತ್ರಿ ಜನ್ಮದಿನ ಅ. 2ರಂದೇ ಲಿಂ. ಜಯದೇವ ಜಗದ್ಗುರುಗಳ ಜಯಂತಿ ಆಚರಿಸಿ- ಗಾಣಿಗ ಗುರುಪೀಠದ ಜಗದ್ಗುರು ಕರೆ

ವಿಜಯಪುರ: ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತ್ರಿ ಅವರ ಜಯಂತಿ ದಿನ ಅ. 2ರಂದೇ ರಾಜ್ಯಾದ್ಯಂತ ಗಾಣಿಗ ಗುರುಪೀಠದ ಪ್ರಥಮ ಜಗದ್ಗುರು ಲಿಂ. ಜಯದೇವ ಜಗದ್ಗುರುಗಳ ಜಯಂತೋತ್ಸವ ಆಚರಿಸೋಣ ಎಂದು ಗಾಣಿಗ ಗುರುಪೀಠದ ಡಾ. ಜಯಬಸವ ಕುಮಾರ ಜಗದ್ಗುರು ಸಮಾಜಕ್ಕೆ ಕರೆ ಕೊಟ್ಟಿದ್ದಾರೆ. ನಗರದ ವನಶ್ರೀ ಸಂಸ್ಥಾನ ಮಠದಲ್ಲಿ ನಡೆದ ಲಿಂ. ಜಯದೇವ ಜಗದ್ಗುರುಗಳ 85ನೇ ಜಯಂತೋತ್ಸವ ಮತ್ತು 14ನೇ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರಿಯವರ ತತ್ವಾದರ್ಶಗಳಂತೆ […]

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ವಿಜಯಪುರ: ರಾಷ್ಟೃಪಿತ ಮಹಾತ್ಮ ಗಾಂಧಿಜೀಯವರ 154ನೇ ಮತ್ತು ಮಾಜಿ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರೀಜಿಯವರ 119ನೇ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಭಾರತ ಬಹುಬಾಷೆ, ಬಹುಸಂಸ್ಕೃತಿ, ಬಹುಜನಾಂಗ ಹಾಗೂ ಬಹುಜಾತಿ ವ್ಯವಸ್ಥೆ ಹೊಂದಿರುವ ದೇಶವಾಗಿದೆ.  ಹೀಗಾಗಿ ಇಲ್ಲಿ ಎಲ್ಲರೂ ಒಂದಾಗಿ ಬಾಳುವುದು ಮತ್ತು ಎಲ್ಲ ಜನಾಂಗವನ್ನು ಬೆಸೆಯಲು ಅಹಿಂಸೆ ಮಾರ್ಗವೊಂದೆ ಎಂದು ಅಹಿಂಸಾ ಮಾರ್ಗದಿಂದಲೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ರಾಷ್ಟ್ರಪಿತ ಮಹಾತ್ಮ ಗಾಂಧಿ.  ಅವರ ಮಾರ್ಗದಲ್ಲಿ […]

ಗಾಂಧಿ, ಶಾಸ್ತ್ರಿ ದೇಶಕಂಡ ಅಪ್ರತೀಮ ನಾಯಕರು- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಅವರು ಈ ದೇಶಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿದ್ದು, ಇಂಥ ಮಹಾನ್ ವ್ಯಕ್ತಿಗಳ ಪ್ರಾಮಾಣಿಕತೆ, ತ್ಯಾಗ, ನಿಷ್ಠೆಯಂತಹ ಉತ್ತಮ ಸಂದೇಶಗಳು, ತತ್ವಾದರ್ಶಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಇವರ ಸಹಯೋಗದಲ್ಲಿ ಅ. 2ರಂದು ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ […]