ಶ್ರೀ ಹರಳೇಶ್ವರ ಕ್ಷೇತ್ರದಲ್ಲಿ ಗಣದಾಳ ಶ್ರೀಗಳ 11 ದಿನಗಳ ಮೌನಾನುಷ್ಠಾನ ಮುಕ್ತಾಯ

ವಿಜಯಪುರ: ಬಬಲೇಶ್ವರ ತಾಲೂಕಿನ ಶ್ರೀಹರಳೇಶ್ವರ ಸುಕ್ಷೇತ್ರದಲ್ಲಿ ಗುಣದಾಳ ಹಿರೇಮಠದ ಡಾ. ವಿವೇಕಾನಂದ ದೇವರು ಅವರು ಅಧಿಕ ಮಾಸ ಅಂಗವಾಗಿ ಕೈಗೊಂಡಿದ್ದ 11 ದಿನಗಳ ಮೌನ ಅನುಷ್ಠಾನ ಮುಕ್ತಾಯವಾಗಿದೆ. ಈ ಸಮಾರೋಪ ಸಮಾರಂಭದಲ್ಲಿ ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ಪಾಲ್ಗೋಂಡು ಮಾತನಾಡಿದರು.  ಇಂದಿನ ದಿನಗಳಲ್ಲಿ ಅನುಷ್ಟಾನ ಜಪ- ತಪಗಳು ಕಡಿಮೆಯಾಗಿ ಟಿವಿ, ಮೊಬೈಲ್ ಬಳಕೆ ಹೆಚ್ಚಾಗಿವೆ.  ಮಹಾಭಾರತದಲ್ಲಿ ಗಾಂಧಾರಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಜೀವನ ಮಾಡಿದ ಶಕ್ತಿಯನ್ನು ಮಗ ದುರ್ಯೋಧನನಿಗೆ ಧಾರೆ ಎರೆದ ಪ್ರಸಂಗವನ್ನು ಅವರು ಈ […]

ಸದಾಶಿವ ಮೂಲ ಮಹಾಸಂಸ್ಥಾನಮಠದ ಹೆಸರಿನಲ್ಲಿ ಯಾರೂ ದೇಣಿಗೆ ಕೇಳುತ್ತಿಲ್ಲ- ಯಾರಿಗೂ ಹಣ ನೀಡಬೇಡಿ- ಬಬಲಾದಿ ಶ್ರೀ ಸಿದ್ಧರಾಮಯ್ಯ ಮುತ್ಯಾ ಖಡಕ್ ಎಚ್ಚರಿಕೆ

ವಿಜಯಪುರ: ಕಾಲಜ್ಞಾನಕ್ಕೆ ಹೆಸರಾಗಿರುವ ಬಸವ ನಾಡಿನ ಬಬಲಾದಿ ಶ್ರೀ ಗುರು ಚಕ್ರವರ್ತಿ ಸದಾಶಿವ ಮೂಲ ಮಹಾಸಂಸ್ಥಾನ ಮಠದ ಹೆಸರಿನಲ್ಲಿ ಕೆಲವು ಜನರು ದೇಣಿಗೆ ಸಂಗ್ರಹಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಶ್ರೀಗಳ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿ ಪ್ರತಿವರ್ಷ ನಡೆಯುವ ಜಾತ್ರೆಯ ಸಂದರ್ಭದಲ್ಲಿ ಮಠದ ಕಾರ್ಣಿಕ ಶ್ರೀ ಸಿದ್ಧರಾಮಯ್ಯ ಮುತ್ಯಾ ನೀಡುವ ಹೇಳಿಕೆ ಜಗತ್ಪ್ರಸಿದ್ಧವಾಗಿದೆ.  ಇವರು ನುಡಿಯುವ ಭವಿಷ್ಯ ಎಲ್ಲವೂ ನಿಜವಾಗುತ್ತಿದೆ.  ಹೀಗಾಗಿ ಈ ಮಠದ ಮೇಲೆ ಕರ್ನಾಟಕವಷ್ಟೇ ಅಲ್ಲ, ದೇಶದ ನಾನಾ ಭಾಗಗಳಿಂದಲೂ ಭಕ್ತರು ಆಗಮಿಸಿ ದೇವರ ಪ್ರೀತಿಗೆ […]

ವಿಜಯಪುರ ಬಾಲಕರ ಸರಕಾರಿ ಪಿಯು ಕಾಲೇಜಿನಲ್ಲಿ ಮೇರಾ ದೇಶ ಮೇರಾ ಮಿಟ್ಟಿ ಕಾರ್ಯಕ್ರಮ- ಯುವಜನತೆ ದೇಶ ಸೇವೆ ಮಾಡಲು ಪಣತೋಡಿ- ಸಿ. ಕೆ. ಹೊಸಮನಿ

ವಿಜಯಪುರ: ಯುವಕರು ದೇಶ ಸೇವೆ ಮಾಡಲು ಪಣತೊಡಬೇಕು ಎಂದು ಪಿಯು ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಕೆ. ಹೊಸಮನಿ ಹೇಳಿದ್ದಾರೆ. ನಗರದ ಬಾಲಕರ ಸರಕಾರಿ ಪಿಯು ಕಾಲೇಜಿನಲ್ಲಿ ಎನ್.ಎಸ್.ಎಸ್. ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ನಡೆದ ಮೇರಾ ಮಿಟ್ಟಿ ಮೇರಾ ದೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ದೇಶದ ಭವಿಷ್ಯದ ಭವ್ಯ ನಾಗರಿಕರು.  ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ವೀರ ಯಶೋಗಾಥೆಯ ಬಗ್ಗೆ ತಿಳಿದುಕೊಳ್ಳಬೇಕು.  ಅವರ ಹೋರಾಟದ ವಿಚಾರಗಳು ಪ್ರೇರಣೆಯಾಗಬೇಕು ಎಂದು ಅವರು ಹೇಳಿದರು. […]

ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಕ್ವಿಟ್ ಇಂಡಿಯಾ ಚಳವಳಿ ಪ್ರಮುಖ ಕಾರಣ- ಅಶೋಕ ದಳವಾಯಿ

ವಿಜಯಪುರ: ದೇಶದಲ್ಲಿ ನಡೆದ 1942ರ ಕ್ವಿಟ್ ಇಂಡಿಯಾ ಚಳವಳಿಯು ಸ್ವಾತಂತ್ರ್ಯ ಹೋರಾಟದ ಅಂತಿಮ ಘಟ್ಟವಾಗಿತ್ತು.  ಬ್ರಿಟಿಷರಿಗೆ ಅಂತಿಮ ಎಚ್ಚರಿಕೆ ಆಗಿತ್ತು. ಅದುವೇ ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಕಾರಣವಾಯಿತು ಎಂದು ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಹೇಳಿದರು. ತಿಕೋಟಾ ತಾಲೂಕಿನ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಮತ್ತು ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ ಸಹಯೋಗದಲ್ಲಿ ಬುಧವಾರ ಆಯೋಜಿಸಿಡಿದ್ದ ಆಗಸ್ಟ್ ಕಾಂತ್ರಿ ನೆನಪು ಮತ್ತು ಶಾಂತವೇರಿ ಗೋಪಾಲಗೌಡ ಅವರ ಜೀವನ ಮತ್ತು ಸಮಕಾಲೀನತೆಯ […]

ಮಹಾತ್ಮಾ ಗಾಂಧಿಜಿಯವರ ವಿಚಾರ ಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು- ಡಾ. ಅಶೋಕ ದಳವಾಯಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಸತ್ಯ, ಅಹಿಂಸೆ ಎಂಬ ತತ್ವಗಳು ಅನುಸರಿಸಿ ಅವುಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.  ಸರ್ವಕಾಲಕ್ಕೂ ಸತ್ಯದೆಡೆಗೆ ಅವರು ನಂಬಿ ಆಚರಿಸಿದ ತತ್ವಾದರ್ಶಗಳನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನವದೆಹಲಿಯ ರಾಷ್ಟ್ರೀಯ ಮಳೆಯಾಶ್ರಿತ ಕೃಷಿ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಅಶೋಕ ದಳವಾಯಿ ಹೇಳಿದರು. ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದೊಂದಿಗೆ ಗಾಂಧಿ ಭವನದಲ್ಲಿ ಆಯೋಜಿಸಿದ್ದ 1942ರ ಕ್ವಿಟ್ ಇಂಡಿಯಾ ಮೂವ್‌ಮೆಂಟ್ ಚಳುವಳಿಯ ನೆನಪಿಗಾಗಿ ನಡೆದ […]

ವಿಜಯಪುರ ಶ್ರೀ ಚಿದಂಬರ ದೇವಸ್ಥಾನಕ್ಕೆ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ

ವಿಜಯಪುರ: ವಿಧಾನ ಪರಿಷತ ಸದಸ್ಯ ಮತ್ತು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಗರದ ಶ್ರೀ ಚಿದಂಬರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ವಿಜಯ ಜೋಶಿ, ಪಿ. ಬಿ. ಹಂಗರಗಿ, ಲಕ್ಷ್ಮೀಕಾಂತ ಕುಲಕರ್ಣಿ, ಕೇಶವ ಕುಲಕರ್ಣಿ, ಮಾಧವ ಜೋಶಿ, ವೆಂಕಟೇಶ ಜೋಶಿ, ದೀಪಕ‌ ಜೋಶಿ, ಶಂಕರ ಭಟ ಅಗ್ನಿಹೋತ್ರಿ, ರಾಘವೇಂದ್ರ ಜೋಶಿ‌ ಸಂಕನಾಳ, ವಿ.ಸಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಸಿ ಕೆ ಪಾಟೀಲ್ […]

ಸಿಕ್ಯಾಬ್ ಎ.ಆರ್.ಎಸ್. ಇನಾಮದಾರ ಮಹಿಳಾ ಕಾಲೇಜಿನಲ್ಲಿ ಪ್ರೇಮಚಂದ ಜಯಂತಿ ಆಚರಣೆ

ವಿಜಯಪುರ: ನಗರದ ಸಿಕ್ಯಾಬ್ ಎ. ಆರ್. ಎಸ್. ಇನಾಮದಾರ ಮಹಿಳಾ ಮಹಾವಿದ್ಯಾಲಯದ ಉರ್ದು ಮತ್ತು ಹಿಂದಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಪ್ರೇಮಚಂದ ಜಯಂತಿ ಆಚರಿಸಲಾಯಿತು. ಈ ಸಮಾರಂಭದಲ್ಲಿ ಪಾಲ್ಗೋಂಡ ಮಹಾರಾಷ್ಟ್ರದ ಉದಯಗಿರಿ ಮಹಾವಿದ್ಯಾಲಯದ ಪ್ರೊ. ಹಾಮೀದ್ ಅಶ್ರಫ್ ಮಾತನಾಡಿ, ಪ್ರೇಮಚಂದ ಒಬ್ಬ ಮಹಾನ್ ಕಾದಂಬರಿಕಾರ ಮತ್ತು ಬರಹಗಾರರಾಗಿದ್ದರು.  ಲೌಕಿಕ ಸಂಪತ್ತಿನ ಹಿಂದೆ ಹೋಗದೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.  ಅವರು ಮಾನವೀತೆಯ ಪ್ರತಿಪಾದಕರಾಗಿದ್ದು, ಮಾನವೀಯ ಗುಣಗಳು ಮತ್ತು ಮೌಲ್ಯಗಳನ್ನು ಪ್ರತಿಪಾದಿಸಿದ್ದರು.  ಪರಸ್ಪರ ಪ್ರೀತಿ, ಪ್ರೇಮಗಳು, ಸೌಹಾರ್ದತೆ ಅವರ ಕೃತಿಗಳ ಸಂದೇಶವಾಗಿದೆ.  […]

ಬಸವನಾಡಿನ ಪಿಡಿಜೆ ಬ ಶಾಲೆಯ ನೂತನ ಸಂಸತ್ತು ರಚನೆ- ಪ್ರಮಾಣ ವಚನ ಸ್ವೀಕರಿಸಿದ ಶಾಲೆಯ ಮಂತ್ರಿಮಂಡಳದ ಹೊಸ ಪದಾಧಿಕಾರಿಗಳು

ವಿಜಯಪುರ: ಬಸವನಾಡಿನ ಪ್ರತಿಷ್ಠಿತ ಪಿ.ಡಿ.ಜೆ ಬ ಶಾಲೆಯ ನೂತನ ಸಂಸತ್ತಿನ ಹೊಸ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆ ಹೊಸ ಮಂತ್ರಿಮಂಡಳದ ಪ್ರವೀಣ ಹಡಪದ, ಪ್ರಧಾನ ಮಂತ್ರಿಯಾಗಿ ಕುಬೇರ ಹೊನ್ನಕಸ್ತೂರಿ, ಉಪಪ್ರಧಾನ ಮಂತ್ರಿ ಆದರ್ಶ ಅಂಗಡಿ, ವಿರೋಧ ಪಕ್ಷದ ನಾಯಕ ಇಮ್ರಾನ್ ನದಾಫ ಮತ್ತು ಸದಸ್ಯರಾಗಿ 44 ಜನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ವರ್ಷ ಶಾಲೆಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿ ಮತ್ತು […]

ಅನುಭಾವ ಸಾಹಿತ್ಯಕ್ಕೆ ಹೊಸ ಆಯಾಮ ಒದಗಿಸಿದವರು ಮಧುರಚೆನ್ನರು- ಡಾ. ವಿ. ಡಿ. ಐಹೊಳ್ಳಿ

ವಿಜಯಪುರ: ಮಧುರಚೆನ್ನರು ಜಾನಪದ ಸಾಹಿತ್ಯ ಸಂಶೋಧನೆ ಸಂಗ್ರಹದ ಮೂಲಕ ಈ ನೆಲದ ಮೂಲ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸಿದರು.  ಅಲ್ಲದೇ, ಅನುಭಾವ ಸಾಹಿತ್ಯಕ್ಕೆ ಹೊಸ ಆಯಾಮವನ್ನು ಒದಗಿಸಿ ಶ್ರೀ  ಮಾತಾ ಅರವಿಂದರ ತತ್ವ ಸಿದ್ದಾಂತಗಳನ್ನು ಅನುಸರಿಸಿ ಅರವಿಂದ ಮಂಡಲವನ್ನು ಸ್ಥಾಪಿಸಿ ಹಲಸಂಗಿ ಎನ್ನುವ ಕುಗ್ರಾಮವನ್ನು ಸಾಹಿತ್ಯ ಮತ್ತು ಸಂಸ್ಕೃತಿಯ ಕೇಂದ್ರವಾಗಿಸಿದ ಮಹಾನ್ ಚೇತನ ಎಂದು ಡಾ. ವಿ. ಡಿ. ಐಹೊಳ್ಳಿ ಹೇಳಿದ್ದಾರೆ.   ನಗರದ ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲಸಂಗಿ ಗೆಳೆಯರ ಪ್ರತಿಷ್ಠಾನ ವತಿಯಿಂದ ಮಧುರಚೆನ್ನರು 120ನೇ […]

ಸ್ವಸ್ಥ ಬದುಕಿಗಾಗಿ ದುಶ್ಚಟಗಳಿಂದ ದೂರವಿರಲು ಯುಜನಾಂಗಕ್ಕೆ ಕರೆ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ

ವಿಜಯಪುರ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣವು ನಮ್ಮ ಗುರಿಯಾಗಿದೆ. ಮಾದಕ ವಸ್ತು ಸೇವನೆ ಆರೋಗ್ಯಕ್ಕೆ ಹಾನಿದಾಯಕವಾಗಿದೆ. ಮಾದಕವೆಂಬ ವಿಷ ಮನುಕುಲದಲ್ಲಿ ಯುವ ಸಮುದಾಯ ನಲುಗುತ್ತಿದೆ. ವ್ಯಸನಕ್ಕೆ ಒಳಗಾಗಿ ಸುಂದರ ಬದುಕನ್ನು ವ್ಯರ್ಥಮಾಡಿಕೊಳ್ಳದೇ ಸ್ವಾಸ್ಥ ಸುಂದರ ಬದುಕು ರೂಪಿಸುವತ್ತ ಯುವಜನಾಂಗ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ.   ನಗರದ ಜಿ. ಪಂ. ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ […]