ಗಾಂಧಿ ಭವನ ವೀಕ್ಷಿಸಿದ ರಾಜ್ಯ ಹೈಕೋರ್ಟ್ ನ್ಯಾ. ಎಚ್. ಪಿ. ಸಂದೇಶ

ವಿಜಯಪುರ:  ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಎಚ್. ಪಿ. ಸಂದೇಶ್ ಅವರು ಕುಟುಂಬದೊಂದಿಗೆ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಗಾಂಧಿ ಪ್ರತಿಮೆ,ಗಾಂಧೀ ವಿಚಾರ ಧಾರೆಗಳ ಕುರಿತ ಮಾಹಿತಿ ವಿವರ, ಗಾಂಧಿಜಿ ಕುರಿತ ಜಗತ್ತಿನ ನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳ ಕುರಿತಾದ ಮಾಹಿತಿ ವಿವರ ಓದಿ ಪ್ರಶಂಸೆ ವ್ಯಕ್ತ ಪಡಿಸಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ವೀಕ್ಷಿಸಿದ ಅವರು ಇಲ್ಲಿನ ಬಹುಮೂಲ್ಯ ಸಂಗ್ರಹದ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ […]

ಮಾದರಿ ಅಂಗನವಾಡಿಯಲ್ಲಿದೆ ಚಿಣ್ಣ ಕಲಿಯಲು ಬೇಕಾದ ಜ್ಞಾನದ ಭಂಡಾರ- ಆಟದೊಂದಿಗೆ ಶಿಕ್ಷಕರು ಮಾಡುವ ಪಾಠ ಬಲು ಸುಂದರ

ವಿಜಯಪುರ: ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಭಾವ ಹೆಚ್ಚಾಗಿರುವ ಇಂದಿನ ದಿನಗಳಲ್ಲಿ ಇಲಾಖೆ, ಗ್ರಾ. ಪಂ. ಆಡಳಿತ ಮಂಡಳಿ ಮತ್ತು ಶಿಕ್ಷಕರು ಮನಸ್ಸು ಮಾಡಿದರೆ ಹೇಗೆ ಮಾದರಿ ಕೆಲಸ ಮಾಡಬಲ್ಲರು ಎಂಬುದಕ್ಕೆ ಸಾಕ್ಷಿಯಾಗಿದೆ ಬಸವ ನಾಡಿನ ಈ ಅಂಗನವಾಡಿ ಕೇಂದ್ರ.  ಇಲ್ಲಿ ಮಕ್ಕಳ ಆಟದ ಜೊತೆಗೆ ಪಾಠವನ್ನು ಕಲಿಸಲಾಗುತ್ತಿದ್ದು, ಎಲ್ಲವೂ ಹೊಸ ಶಿಕ್ಷಣ ನೀತಿಯಂತೆ ನಡೆಯುತ್ತಿರುವುದು ಗಮನಾರ್ಹವಾಗಿದೆ.  ಯಾವುದೇ ಕಾನ್ವೆಂಟ್ ಗಳಿಗೂ ಕಮ್ಮಿ ಇಲ್ಲ ನಮ್ಮ ಅಂಗನವಾಡಿ ಎಂದು ಅಲ್ಲಿ ಪೋಷಕರೇ ಹೇಳುವುದು ಕುತೂಹಲಕ್ಕ ಕೆರಳಿಸುತ್ತಿದೆ. ಇದು ಬಸವನಾಡು […]

ಗುಮ್ಮಟ ನಗರಿಯಲ್ಲಿ ಮುಸ್ಲಿಂ ಬಾಂಧವರಿಂದ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಪವಿತ್ರ ಬಕ್ರೀದ್ ಹಬ್ಬವನ್ನು ಆಚರಿಸಿದರು.  ನಗರದ ನಾನಾ ಮಸೀದಿ ಮತ್ತು ಈದ್ಗಾಗಳಿಗೆ ತೆರಳಿದ ಸಾವಿರಾರು ಜನರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ದಖನಿ ಈ ಮೈದಾನದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಸೇರಿದಂತೆ ನಾನಾ ಮುಖಂಡರು ವಿಶ್ವಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ನಂತರ ಪರಸ್ಪರ ಆಲಂಗಿಸಿಕೊಂಡು ಶುಭಾಷಯ ವಿನಿಮಯ ಮಾಡಿಕೊಂಡರು.

ಬಸವ ನಾಡಿಗೆ ಬಂದು ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ದರ್ಶನ ಪಡೆದ ಖಾನಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ

ವಿಜಯಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಅವರು ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.  ಈ ಸಂದರ್ಭದಲ್ಲಿ ಉಪಸ್ಥಿತಿತರಿದ್ದ ಮಠದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಕಾಶ ಅಕ್ಕಲಕೋಟ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಠದ ನಿರ್ದೇಶಕರಾದ ವಿಜಯ ಜೋಶಿ, ರಾಕೇಶ ಕುಲಕರ್ಣಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಗೋವಿಂದರಾಜ ದೇಶಪಾಂಡೆ, ಶ್ರೀಹರಿ ಕುಲಕರ್ಣಿ, ವೆಂಕಟೇಶ ಖಾಸನೀಸ, ವಿನಾಯಕ […]

ಬಸ್ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರಿಡಿ- ಸಚಿವ ಎಂ. ಬಿ. ಪಾಟೀಲರಿಂದ ಸಿಎಂ ಗೆ ಪತ್ರ

ವಿಜಯಪುರ: ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೆಸರನ್ಬು ನಾಮಕರಣ ಮಾಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಮಹಿಳೆಯರನ್ನು ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ್ದ ಶಕ್ತಿ ಯೋಜನೆಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಜೂ. 11 ರಂದು ಚಾಲನೆ ನೀಡುವ ಕಾರ್ಯಕ್ರಮಕ್ಕೆ ಮಹಿಳೆಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯರಿಗೆ ಸ್ಪೂರ್ತಿಯಾಗಿರುವ […]

ಉತ್ನಾಳದ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಮತ್ತೀತರ ಸಂಘಗಳಿಂದ ಹಿರಿಯ ಪತ್ರಕರ್ತ ಸುಶೀಲೇಂದ್ರ ನಾಯಕ ಸೇರಿ ಐವರಿಗೆ ವೀರ ಸಾವರ್ಕರ ಪ್ರಶಸ್ತಿ ಪ್ರಧಾನ

ವಿಜಯಪುರ: ಹಿರಿಯ ಪತ್ರಕರ್ತ ಸುಶಿಲೇಂದ್ರ ನಾಯಕ ಅವರು ಪತ್ರಿಕಾ ರಂಗಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಕಲಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಉತ್ನಾಳ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ, ಮಲ್ಲಸರ್ಜ ದೇಸಾಯಿ ಅಂತಾರಾಷ್ಟ್ರೀಯ ಕ್ರೀಡಾ ತರಬೇತಿ ಕೇಂದ್ರ, ಅಖಿಲ ಕರ್ನಾಟಕ ಪಂಚಮಸಾಲಿ ಪರಿಷತ್ತು, ಅಖಿಲ ಭಾರತ ಪಂಚಮಸಾಲಿ ಪರಿಷತ್ತು, ಶ್ರೀ ಬೆಳವಡಿ ಮಲ್ಲಮ್ಮ ದೈಹಿಕ ಮತ್ತು ಸೈನಿಕರ ತರಬೇತಿ ಕೇಂದ್ರದ ಸಂಯುಕ್ತಾಶ್ರ್ಯದಲ್ಲಿ ಈ […]

ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ ಅವರಿಗೆ ಹಾಲುಮತ ಪಟ್ಟದ ಪೂಜಾರಿಗಳ, ಜಡೆತಲೆ ಪೂಜಾರಿಗಳಿಂದ ಸನ್ಮಾನ

ವಿಜಯಪುರ: ಹಾಲುಮತ ಧರ್ಮದ ವಿಜಯಪುರ ಜಿಲ್ಲೆಯ ಪಟ್ಟದ ಪೂಜಾರಿಗಳ ಹಾಗೂ ಜಡೆತಲೆ ಪೂಜಾರಿಗಳ ಸಂಘದ ವತಿಯಿಂದ ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಪಾಟೀಲ ಹಾಗೂ ಶಾಸಕ ವಿಠ್ಠಲ ಕಟಕದೊಂಡ ಅವರನ್ನು ಸನ್ಮಾನಿಸಲಾಯಿತು. ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ತೆರಳಿದ ಸಂಘದ ಪೂಜಾರಿಗಳು ಸಚಿವರನ್ನು ಕಂಬಳಿ ಮತ್ತು ಹೂಮಾಲೆ ಹಾಕಿ ಸನ್ಮಾನಿಸಿ ಗೌರವಿಸಿದರು. ನಂತರ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಪೂಜಾರಿಗಳು ಅವರನ್ನೂ ಸನ್ಮಾನಿಸಿ ಗೌರವಿಸಿದರು. ಅಷ್ಟೇ ಅಲ್ಲ, ನಾಗಠಾಣ(ಮೀ) ಕಾಂಗ್ರೆಸ್ ಶಾಸಕ […]

ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಪೂರ್ವಭಾವಿ ಸಭೆ

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಜುಲೈ 2ರಂದು ವಚನಫಿತಾಮಹ ಡಾ. ಫ. ಗು. ಹಳಕಟ್ಟಿ ಅವರ ರಾಜ್ಯ ಮಟ್ಟದ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣೆ ದಿನ ಅಂಗವಾಗಿ ಅತ್ಯಂತ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ […]

ಮಕ್ಕಳಿಗಾಗಿ ಹಗಲಿರುಳು ದುಡಿಯುವ ತಂದೆಗೆ ಎಷ್ಟೇ ಕೃತಜ್ಞತೆ ಸಲ್ಲಿಸಿದರೂ ಕಡಿಮೆ- ಶಿವಾಜಿ ಗಾಯಕವಾಡ

ವಿಜಯಪುರ: ಮಕ್ಕಳಿಗಾಗಿ ಹಗಲಿರುಳು ದುಡಿದು ಮಕ್ಕಳ ಭವಿಷ್ಯ ಉಜ್ವಲಗೊಳಿಸುವ ತಂದೆ. ತನ್ನ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಕುಟುಂಬದ ಅಭ್ಯುದಯಕ್ಕೆ ಶ್ರಮಿಸುತ್ತಾನೆ ಎಂದು ನಗರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿ ಅಧ್ಯಕ್ಷ ಶಿವಾಜಿ ಗಾಯಕವಾಡ ಹೇಳಿದ್ದಾರೆ. ರವೀಂದ್ರನಾಥ ಠಾಗೋರ ಶಾಲೆಯಲ್ಲಿ ನಡೆದ ಫಾದರ್ಸ್ ಡೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂದೆ ಮತ್ತು ಮಕ್ಕಳ ಪ್ರೀತಿ ವರ್ಣಿಸಲಸದಳ.  ತಂದೆಯ ಬಗ್ಗೆ ಎಷ್ಟೇ ಹೇಳಿದರೂ ಕಡಿಮೆ ಎಂದು ಅವರು ಹೇಳಿದರು.     ಶಾಲೆಯ ಪ್ರಿನ್ಸಿಪಾಲ್ […]

ಬಸವನಾಡಿನಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ- ಮಣ್ಣಿನ ಜೋಡೆತ್ತು ವ್ಯಾಪಾರಕ್ಕೆ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಕಳೆದ ಎರಡ್ಮೂರು ವರ್ಷಗಳಿಂದ ಕೊರೊನಾದಿಂದಾಗಿ ಕಳೆಗುಂದಿದ್ದ ಕಾರಹುಣ್ಣಿಮೆ ಈ ಬಾರಿ ಗತವೈಭವಕ್ಕೆ ಮರಳಿತ್ತು.  ಅದೇ ರೀತಿ ಈಗ ಮಣ್ಣೆತ್ತಿನ ಅಮವಾಸ್ಯೆಗೂ ಮತ್ತೆ ಹಳೆಯ ಕಳೆ ಬಂದಿದೆ.  ಉತ್ತರ ಕರ್ನಾಟಕ ಅದರಲ್ಲೂ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ಎತ್ತುಗಳೆಂದರೆ ಕುಟುಂಬ ಸದಸ್ಯರಿದ್ದಂತೆ.  ಅವುಗಳ ಬಗ್ಗೆ ರೈತರಿಗೆ ಇರುವ ಪ್ರೀತಿ, ವಿಶ್ವಾಸ ವರ್ಣಿಸಲು ಸಾಧ್ಯವಿಲ್ಲ.  ಮುಂಗಾರು ಹಂಗಾಮು ಆರಂಭವಾಗುತ್ತಿದ್ದಂತೆ ಬರುವ ಮಣ್ಣೆತ್ತಿನ ಅಮವಾಸ್ಯೆ ದಿನ ರೈತರು ಎತ್ತುಗಳ ಪೂಜೆ ಮಾಡುತ್ತಾರೆ.  ಮಣ್ಣೆತ್ತಿನ ಅಮವಾಸ್ಯೆ ದಿನ ಎತ್ತುಗಳು ಇಲ್ಲದವರು ಮಣ್ಣಿನಿಂದ […]