ಅಂಬೇಡ್ಕರ ಎಲ್ಲ ಸಮುದಾಯಗಳ ಅಮೂಲ್ಯ ಆಸ್ತಿ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರು ಎಲ್ಲ ಸಮುದಾಯಗಳ ಅಮೂಲ್ಯ ಆಸ್ತಿ.  ಶೋಷಿತ ಸಮುದಾಯಗಳ ಉದ್ಧಾರಕ್ಕಾಗಿ ಅವತರಿಸಿದ ಮಹಾನ್ ಸಂತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ. ಬಿ. ಆರ್. ಅಂಬೇಡ್ಕರ ಅವರ ಚಿಂತನೆಯ ಫಲವಾಗಿ ರೂಪುಗೊಂಡ ಸಂವಿಧಾನದ ಫಲವಾಗಿ ಇಂದು ದಲಿತರ ಬದುಕಿನಲ್ಲಿ ಬೆಳಕು ಮೂಡುವಂತಾಗಿದೆ.  ಭಾರತಕ್ಕೆ ಶ್ರೇಷ್ಠ ಸಂವಿಧಾನ […]

ವಿಜಯಪುರ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ 132ನೇ ಜನ್ಮ ದಿನ ಆಚರಿಸಲಾಯಿತು.  ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ ಅಂಬೇಡಕ್ರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಜಗತ್ತಿನಲ್ಲೇ ಸರ್ವಶ್ರೇಷ್ಠವಾದ ಭಾರತ ಸಂವಿಧಾನವನ್ನು ನೀಡಿದ ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ಆರ್ಥಿಕ ತಜ್ಞ, ಯೋಜನಾ ನಿಪುಣ, ಕಾನೂನು ತಜ್ಞರಾಗಿದ್ದರು.  ಮಾತ್ರವಲ್ಲ, ಸಾಮಾಜಿಕ ಪರಿಕಲ್ಪನೆಯ ತಜ್ಞರಾಗಿದ್ದರು.  […]

ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ವಿಶ್ವದ ಗಮನ ಸೆಳೆಯುತ್ತಿದೆ. ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು. ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, […]

ರಾಜ್ಯ ಮಟ್ಟದ ಪಟ್ಟದ ಪೂಜಾರಿಗಳ, ಜಡೆ ತಲೆ ಪೂಜಾರಿಗಳ 4ನೇ ಹಾಲುಮತ ಧರ್ಮ ಸಭೆ- ಶ್ರೀ ಮರಡಿ ಸಿದ್ದೇಶ್ವರ ಕರ್ತೃ ಗದ್ದುಗೆಗೆ ವಿಶೇಷ ಪೂಜೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕಣಮುಚನಾಳ ಗ್ರಾಮದಲ್ಲಿ ರಾಜ್ಯ ಮಟ್ಟದ ಪಟ್ಟದ ಪೂಜಾರಿಗಳ ಹಾಗೂ ಜಡೆ ತಲೆ ಪೂಜಾರಿಗಳ 4ನೇ ಹಾಲುಮತ ಧರ್ಮ ಸಭೆಯನ್ನು ನಡೆಯಿತು.  ಗ್ರಾಮದ ಭಕ್ತರು ಹನುಮಾನ ದೇವಸ್ಥಾನದಿಂದ ದೇವರ ಸತ್ತಿಗೆ ಹಾಗೂ ಎಲ್ಲ ಪೂಜಾರಿಗಳನ್ನು ಡೊಳ್ಳು ಕುಣಿತದೊಂದಿಗೆ ಪ್ರಮುಖ ರಸ್ತೆಗಳ ಮೂಲಕ ಶ್ರೀ ಮರಡಿ ಸಿದ್ದೇಶ್ವರ ದೇವಸ್ಥಾನಕ್ಕೆ ಬರಮಾಡಿಕೊಂಡರು.  ಬಳಿಕ ಶ್ರೀ ಮರಡಿ ಸಿದ್ದೇಶ್ವರ ಕರ್ತೃ ಗದ್ದುಗೆಗೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಗ್ರಾಮದ ಹೆಣ್ಣು ಮಕ್ಕಳು ಎಲ್ಲ ಪೂಜಾರಿಗಳಿಗೆ ದಾರಿಯುದ್ದಕ್ಕೂ ಪಾದ ಪೂಜೆ ಮಾಡಿದರು.  […]

ಬಸವನಾಡಿನಲ್ಲಿ ಹನುಮ ಜಯಂತಿ ಆಚರಣೆ- ನಸುಕಿನಿಂದಲೇ ಆಂಜನೇಯ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದ ಭಕ್ತರು- ಪ್ರಸಾದ ವ್ಯವಸ್ಥೆಯೂ ಜೋರು

ವಿಜಯಪುರ: ಇಂದು ರಾಮಭಕ್ತ ಹನುಮ ಜಯಂತಿ.  ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಹನುಮ ಜಯಂತಿ ಸಂಭ್ರಮ ಜೋರಾಗಿದೆ.  ಜಿಲ್ಲೆಯ ನಾನಾ ಬಡಾವಣೆಗಳಲ್ಲಿರುವ ಎಲ್ಲ ಹನುಮಾನ ಮಂದಿರಗಳಲ್ಲಿ ಹನುಮ ಜಯಂತಿ ಅಂಗವಾಗಿ ನಾನಾ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ರಾಮಭಕ್ತ, ಸರ್ವಶಕ್ತ, ಚಿರಂಜೀವಿ, ವಾಯುಪುತ್ರ, ಆಂಜನಿಸುತ, ಮಾರುತಿ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುವ ಆಂಜನೆಯ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ.  ಹೀಗಾಗಿ ಹನುಮಂತನ ಪ್ರತಿಯೊಂದು ದೇವಸ್ಧಾನಗಳಲ್ಲಿ ನಸುಕಿನ ಜಾವದಿಂದಲೇ ಜನಜಂಗುಳಿ ಕಂಡು ಬಂತು.  ಹನುಮ ದೇಗುಲಗಳಲ್ಲಿ ಸಂಭ್ರಮದಿಂದ ಪೂಜಾ ಕೈಂಕರ್ಯ […]

ಕಿರಿಯ ವಯಸ್ಸಿನಲ್ಲಿ ಬಸವಣ್ಣನವರ ಭಕ್ತಿಯ ತತ್ವಗಳನ್ನು ಬಸನಗೌಡ ಎಂ. ಪಾಟೀಲ ಅಳವಡಿಸಿಕೊಂಡು ಮುನ್ನಡೆಯುತ್ತಿ್ದ್ದಾರೆ- ರಂಭಾಪುರಿ ಜಗದ್ಗುರುಗಳು

ವಿಜಯಪುರ, ಮಾ. 30: ವಯಸ್ಸಿನಿಂದ ಕಿರಿಯರಾದರೂ ಪ್ರತಿಭೆ ಮತ್ತು ತಮ್ಮ ಕೆಲಸ ಕಾರ್ಯಗಳಿಂದ ಎಲ್ಲರ ಮನದಲ್ಲಿ ಸದಾ ಕಂಗೊಳಿಸುತ್ತಿರುವ ಬಸನಗೌಡ ಎಂ. ಪಾಟೀಲ, ಸದ್ವಿನಯ ಸಂಪನ್ನರಾಗಿ ಬಾಗಿದ ತಲೆ, ಮುಗಿದ ಕೈ ಎಂಬ ಬಸವಣ್ಣನವರ ಭಕ್ತಿಯ ತತ್ವಗಳನ್ವನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ವೀರಸೋಮೇಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ. ನಗರದ ಜೋರಾಪುರ ಪೇಟೆಯ ಪೇಟೆ ಓಣಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಅವರ ಮನೆಯಲ್ಲಿ ಆಯೋಜಿಸಿದ್ದ ಇಷ್ಟಲಿಂಗ ಪೂಜೆ […]

ಮಕ್ಕಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಣ ಸಂಸ್ಥೆಗಳು ಗುರಿಯಾಗಬೇಕು- ಶೈಲಜಾ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಮಕ್ಕಳು ಪಾಠದ ಜೊತೆಗೆ, ಪಠ್ಯಗಳ ಹೊರತಾದ ಚಟುವಟಿಕೆಗಳಲ್ಲಿಯೂ ಪಾಲ್ಗೋಳ್ಳಬೇಕು ಎಂದು ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಿಡಗುಂದಿ ತಾಲೂಕಿನ ಮುಕಾರ್ತಿಹಾಳ ಗ್ರಾಮದ ಗ್ರಾಮದ ಮಾತೋಶ್ರೀ ಶಕುಂತಲಾ ಬಾಯಿ ಬೆಳ್ಳಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಿಗೆ ಬಾಲ್ಯದಲ್ಲಿಯೇ ಗುಣಮಟ್ಟದ ಶಿಕ್ಷಣ ಕೊಡುವ ನೀಡುವ ನೆಪದಲ್ಲಿ ಅವರ ಹೆಗಲಿಗೆ ಭಾರವಾದ ಪುಸ್ತಕಗಳ ಬ್ಯಾಗನ್ನು ಹಾಕಿಸಿ ಕೇವಲ ಓದು, ಓದು ಎಂದು ಒತ್ತಡ ಹಾಕಲಾಗುತ್ತದೆ.  ಇದರಿಂದ ಅನೇಕ ಮಕ್ಕಳು ಒತ್ತಡದಿಂದ […]

ಮತ್ದೊಂದು ಹೊಸ ರೋಗ ಬರ್ತೈತಾದ್ರ ಕೊರೊನಾದಂಗಲ್ಲ- ಭಾರತ ಪ್ರೀತಿಯಿಂದ ಬೇರೆ ದೇಶ ಆಳ್ತೈತಿ- ರಾಜಕೀಯ ಗೊಂದಲ ಐತಿ- ಕತ್ನಳ್ಳಿ ಕಾರ್ಣಿಕ ಭವಿಷ್ಯ

ವಿಜಯಪುರ: ಕೊರೊನಾ ಬಳಿಕ ವೈದ್ಯರಿಗೆ ತಲೆನೋವು ತರುವ ಮತ್ತೊಂದು ರೋಗಬಾಧೆ ಜನರನ್ನು ಕಾಡಲಿದೆ.  ಆದರೆ, ಇದು ಕೊರೊನಾದಷ್ಟು ಮಾರಕವಾಗಿರಲ್ಲ ಎಂದು ಬಸವನಾಡು ವಿಜಯಪುರ ಜಿಲ್ಲೆಯ ಕತ್ನಳ್ಳಿ ಶ್ರೀ ಸದಾಶಿವ ಮುತ್ಯಾ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.  ಸುಕ್ಷೇತ್ರ ಕತ್ನಳ್ಳಿಯಲ್ಲಿ ಯುಗಾದಿ ಅಂಗವಾಗಿ ಶ್ರೀ ಸದಾಶಿವ ಮುತ್ಯಾನ ಜಾತ್ರೆಯ ಅಂಗವಾಗಿ ನಡೆದ ಸಾಮೂಹಿಕ ವಿವಾಹದ ಬಳಿಕ ಪ್ರತಿವರ್ಷದಂತೆ ಈ ವರ್ಷವೂ ವರ್ಷದ ಭವಿಷ್ಯ ನುಡಿದ ಅವರು, ಹೊಸ ರೋಗದ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಪ್ರಾಣಿ […]

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ- ಕನ್ನಡ ಭಾಷೆ, ಸಂಸ್ಕೃತಿ ಉಳಿಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿ- ಸಿದ್ದಣ್ಣ ಉತ್ನಾಳ

ವಿಜಯಪುರ: ಕನ್ನಡ ಭಾಷೆ, ಸಂಸ್ಕೃತಿಯನ್ನು ನಾವು ಸದಾ ಉಳಿಸಿಕೊಂಡು ಹೋಗಬೇಕು.  ಅದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನಾಧ್ಯಕ್ಷ ಸಿದ್ದಣ್ಣ ಉತ್ನಾಳ ಹೇಳಿದ್ದಾರೆ. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನಧ್ಯಕ್ಷರಾಗಿ ಅವರು ಮಾತನಾಡಿದರು. ವಿಜಯಪುರ ಜಿಲ್ಲೆಯಲ್ಲಿ ಅತೀ ಪ್ರಾಚೀನ ಕಾಲದಿಂದಲೂ ವಿದ್ಯಾ ಕೇಂದ್ರಗಳಾದ ಅಗ್ರಹಾರ, ಘಟಿಕಾಸ್ಥಾನ, ಬ್ರಹ್ಮಪುತ್ರಿ ಶಾಲೆಗಳಿದ್ದವು. ರಾಷ್ಟ್ರಕೂಟರ ಕಾಲದಲ್ಲಿಯೇ ಸಾಲೋಟಗಿ ಶಿಕ್ಷಣ ಕೇಂದ್ರವಾಗಿತ್ತು. ಜಗತ್ತಿಗೆ ಗಣಿತ ಶಾಸ್ತ್ರಕ್ಕೆ ಸೊನ್ನೆಯ ಪರಿಕಲ್ಪನೆ ಮಾಡಿಕೊಟ್ಟ ಕ್ರಿ.ಶ 1114ರಲ್ಲಿ ಜನಿಸಿದ ಭಾಸ್ಕರಾಚಾರ್ಯರು ವಿಜಯಪುರ […]

ಹಿಂದೂಗಳ ವೈಭವದ ನಗರ ವಿಜಯಪುರ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಹಿಂದೂಗಳ ಅತ್ಯಂತ ವೈಭವದ ನಗರ ವಿಜಯಪುರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ಹನುಮಗಿರಿ ರಸ್ತೆಯ ಖಣಿ ಹತ್ತಿರದ ಮೋಹನ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದ ಗೀತಾ ಭವನ ಮತ್ತು ವಾನಪ್ರಸ್ಥಧಾಮ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಗರದಲ್ಲಿ ಅನೇಕ ದೇವಸ್ಥಾನಗಳನ್ನು ದಾಳಿ ಮಾಡಿದ ಕಾಲದಲ್ಲಿ ನಾಶಪಡಿಸಲಾಗಿದೆ.  ನಗರದಲ್ಲಿ ಎಲ್ಲಿಯೇ ಉತ್ಖನನ ಮಾಡಿದರೂ ಹಿಂದು ಕುರುಹು ಸಿಗುವ ನಗರ ವಿಜಯಪುರ ಎಂದು ಅವರು ಹೇಳಿದರು. ಆದಿಲ್ ಶಾಹಿ ಹೋಟೆಲ್ ಬಳಿಯ ಯಾದವರ […]