ಎಲ್ಲ ರಂಗಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಒತ್ತು ನೀಡಬೇಕು. ಜಿ. ಪಂ. ಸಿಇಓ ರಾಹುಲ್ ಶಿಂಧೆ

ವಿಜಯಪುರ: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕಳೆದ ವರ್ಷ ಮಹಿಳೆಯರಿಗೆ ಶೇ. 40ರಷ್ಟಿದ್ದ ಮೀಸಲಾತಿಯನ್ನು ಈ ವರ್ಷದಲ್ಲಿ ಶೇ. 52 ರಷ್ಟು ಒದಗಿಸುವ ಮೂಲಕ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿ, ಸಮಾನತೆಗೆ ಒತ್ತು ನೀಡಲಾಗಿದೆ ಎಂದು ಜಿ. ಪಂ. ಸಿಇಓ ರಾಹುಲ್ ಶಿಂಧೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿ. ಪಂ. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ನಗರ ಹಾಗೂ ಗ್ರಾಮೀಣ ಯೋಜನೆ, […]

ಪೂಜಾರಿಗಳು ಜೀವನದಲ್ಲಿ ಸಚ್ಚಾರಿತ್ರ್ಯವನ್ನು ಅಳವಡಿಸಿಕೊಳ್ಳಬೇಕು- ತಳೇವಾಡ ಬೀರೇಶ್ವರ ದೇವಸ್ಥಾನದ ಬರ್ಮಣ್ಣ ಪೂಜಾರಿ

ವಿಜಯಪುರ: ಹಾಲುಮತ ಪೂಜಾರಿಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಬೇಕಾದರೆ ಶುದ್ಧ, ಹಸ್ತ, ಸಚ್ಚಾರಿತ್ರ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಲ್ಹಾರ ತಾಲೂಕಿನ ತಳೆವಾಡ ಗ್ರಾಮದ ಬಿರೇಶ್ವರ ದೇವಸ್ಥಾನದ ಪೂಜಾರಿಗಳಾದ ಶ್ರೀ ಬರ್ಮಣ್ಣ ಪೂಜಾರಿ ಹೇಳಿದರು. ಹಾಲುಮತ ಧಾರ್ಮಿಕ ಪ್ರಸಿದ್ಧ ಕ್ಷೇತ್ರ ಕೊಲ್ಹಾರ ತಾಲೂಕಿನ ತಳೆವಾಡ ಗ್ರಾಮದ ಶ್ರೀ ಬಿರೇಶ್ವರ ದೇವಸ್ಥಾನದಲ್ಲಿ ಪಟ್ಟದ ಪೂಜಾರಿ ಹಾಗೂ ಜಡೆ ಪೂಜಾರಿಗಳ ಶ್ರೇಯೋಭಿವೃದ್ಧಿಗಾಗಿ ಏರ್ಪಡಿಸಲಾದ ಹಾಲುಮತ ಧರ್ಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಾಲುಮತದ ಪೂಜಾರಿಗಳು ಸತ್ಯಕ್ಕಾಗಿ ತ್ಯಾಗ ಮಾಡುವುದು, ನುಡಿದಂತೆ […]

ಮಹಿಳೆಯರಿಗೆ ಸೂಕ್ತ, ಉನ್ನತ ಶಿಕ್ಷಣ ದೊರೆತರೆ ಮುಖ್ಯ ವಾಹಿನಿಗೆ ಬರಲು ಸಾಧ್ಯ- ಪ್ರೊ. ಬಿ. ಕೆ. ತುಳಸಿಮಾಲ

ವಿಜಯಪುರ: ಮಹಿಳೆಯರಿಗೆ ಸರಿಯಾದ ಮತ್ತು ಉನ್ನತ ಶಿಕ್ಷಣ ಸಿಕ್ಕಾಗ ಮಾತ್ರ ಮಹಿಳೆ ಮುಖ್ಯ ವಾಹಿನಿಗೆ ಬರಲು ಸಾಧ್ಯ ಎಂದು ವಿವಿಯ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಮಹಿಳಾ ಸಾಂಸ್ಕೃತಿಕ ಹಬ್ಬದ ಎರಡನೆ ದಿನದಂದು ಮಹಿಳಾ ಸಮುದಾಯ ಸಬಲೀಕರಣಕ್ಕೆ ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆ ಕುರಿತ […]

ಇತಿಹಾಸದಲ್ಲಿ ಹೆಣ್ಣಿನ ನಿಜವಾದ ರೂಪವನ್ನು ಸರಿಯಾಗಿ ಬಿಂಬಿಸಿಲ್ಲ- ಡಾ. ಗೀತಾ ವಸಂತ ವಿಷಾಧ

ವಿಜಯಪುರ: ಇತಿಹಾಸ ಚರಿತ್ರೆಯನ್ನು ನೋಡಿದರೆ ಎಲ್ಲಿಯೂ ಸಹ ಹೆಣ್ಣಿನ ನಿಜವಾದ ರೂಪವನ್ನು ಬಿಂಬಿಸಿಲ್ಲ. ಅವಳನ್ನು ಬರೀ ಒಂದು ಭೋಗದ ವಸ್ತುವಾಗಿ ಬಿಂಬಿಸುತ್ತಾ ಬಂದಿದ್ದು ವಿಷಾದದ ಸಂಗತಿ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಗೀತಾ ವಸಂತ ವಿಶ್ಲೇಷಿಸಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ “ಮಹಿಳಾ ಸಾಂಸ್ಕøತಿಕ ಹಬ್ಬದಲ್ಲಿ” […]

ಮಹಿಳೆಯರೂ ಇಂದಿಗೂ ತಮ್ಮ ಹಕ್ಕುಗಳನ್ನು ಪಡೆಯಲಾಗದೆ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ- ಪ್ರೊ. ಹರೀಶ ರಾಮಸ್ವಾಮಿ

ವಿಜಯಪುರ: ಮಹಿಳೆಯರು ಇಂದಿಗೂ ಸಹ ತಮ್ಮ ಹಕ್ಕುಗಳನ್ನು ಪಡೆಯಲಾಗದೆ ಹಲವಾರು ಕಾರಣಗಳಿಗೆ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದು ನಮ್ಮಲ್ಲಿರುವ ಸಾಮಾಜಿಕ ಕ್ರೂರತೆಯನ್ನು ಬಿಂಬಿಸುತ್ತದೆ. ಈಗಲಾದರೂ ಸಮಾಜ ಬದಲಾಗಬೇಕಿದೆ ಎಂದು ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಹರೀಶ್ ರಾಮಸ್ವಾಮಿ ತಿಳಿಸಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ಸಾಂಸ್ಕತಿಕ ಹಬ್ಬ ಉದ್ಘಾಟಸಿ ಅವರು ಮಾತನಾಡಿದರು. ನಮ್ಮ ಸಮಾಜದಲ್ಲಿ […]

ನಶಿಸಿ ಹೋಗುತ್ತಿರುವ ಹಲಿಗೆ ಬಾರಿಸುವ ಕಲೆ ಉಳಿಸುವುದು ಅಗತ್ಯವಾಗಿದೆ- ಉಮೇಶ ವಂದಾಲ

ವಿಜಯಪುರ: ನಶಿಸಿ ಹೋಗುತ್ತಿರುವ ಹಲಿಗೆ ಬಾರಿಸುವ ಕಲೆಯನ್ನು ಉಳಿಸುವುದು ಅಗತ್ಯವಾಗಿದೆ ಎಂದು ಶ್ರೀ ರಾಮನವಮಿ ಉತ್ಸವ ಸಮಿತಿ ಅಧ್ಯಕ್ಷ ಉಮೇಶ ವಂದಾಲ ಹೇಳಿದ್ದಾರೆ. ನಗರದದಲ್ಲಿ ಶಿವಾಜಿ ಚೌಕಿನಲ್ಲಿ ಆಯೋಜಿಸಲಾಗಿದ್ದ ಹಲಿಗೆ ಬಾರಿಸುವ ಸ್ಪರ್ಧೆಯಾದ ಹಲಗೆ ಹಬ್ಬದ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಹಲಿಗೆ ಬಾರಿಸುವ ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸುವ ಸಲುವಾಗಿ ಮತ್ತು ಹಲಿಗ ಬಾರಿಸುವ ಕಲಾವಿದರಿಗೆ ಪ್ರೋತ್ಸಾಹ ನೀಡಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಉತ್ಸವ ಸಮಿತಿ ಸದಸ್ಯ ಶಿವಾನಂದ ಭುಯ್ಯಾರ […]

ಹೊನ್ನಳ್ಳಿಯ ಎಸ್. ಡಿ. ಕುಮಾನಿ ಅಭಿನಂದನಾ ಸಮಾರಂಭ: ಹಿರಿಯ ನಾಯಕನ ಗುಣಗಾನ ಮಾಡಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ: ಅಭಿಮಾನಿಗಳನ್ನು ಹೊಂದುವುದು ಸುಲಭದ ಮಾತಲ್ಲ.  ಎಸ್. ಡಿ. ಕುಮಾನಿ ಅವರ 80 ವರ್ಷದ ಅಭಿನಂದನಾ ಸಮಾರಂಭವನ್ನು ಶಿಕ್ಷಕರು ತಮ್ಮ ಸ್ವಂತ ಖರ್ಚಿನಲ್ಲಿ ಮಾಡಿರುವುದು ಅವರ ಜನಪ್ರೀಯತೆಗೆ ಸಾಕ್ಷಿಯಾಗಿದೆ ಎಂದು ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಹೇಳಿದರು. ವಿಜಯಪುರ ತಾಲೂಕಿನ ಹೊನ್ನಳ್ಳಿಯಲ್ಲಿ ಶಿವಶರಣೆ ನಿಂಬೆಕ್ಕ ಪ್ರೌಢ ಶಾಲೆ ಮತ್ತು ದುಂಡಪ್ಪ ಮಲಕಪ್ಪ ಕುಮಾನಿ ಪಿ.ಯು.ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಂಸ್ಥೆಯ ಅಧ್ಯಕ್ಷ ಸಿದ್ರಾಮಪ್ಪ ದುಂಡಪ್ಪ ಕುಮಾನಿ ಅವರ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು. […]

ನಶಿಸಿ ಹೋಗುತ್ತಿರುವ ವಿಶಿಷ್ಟ ಪಾರಂಪರಿಕ ಕಲೆಗಳ ಉಳಿಸಿ ಬೆಳೆಸುವುದು ಅತ್ಯವಶ್ಯಕ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಇಂದಿನ ದಿನಮಾನಗಳಲ್ಲಿ ನಶಿಸಿ ಹೋಗುತ್ತಿರುವ ವಿಶಿಷ್ಟ ಕಲಾ ಪರಂಪರೆಯನ್ನು  ಉಳಿಸಿ ಬೆಳೆಸಿಕೊಂಡು ಮುಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಅತ್ಯವಶ್ಯಕವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ನಗರದ ಐತಿಹಾಸಿಕ ಆನಂದ ಮಹಲ್ ಸ್ಮಾರಕ ಆವರಣದಲ್ಲಿ ಆಯೋಜಿಸಲಾಗಿದ್ದ ಮೂಲ ಸಂಸ್ಕೃತಿ-ಕನ್ನಡ ಸಂಸ್ಕೃತಿ ಎಂಬ ಶೀರ್ಷಿಕೆಯಡಿ ತಳಸಮುದಾಯದ ನಶಿಸುತ್ತಿರುವ ವಿಶಿಷ್ಟ ಕಲಾ ಪರಂಪರೆಗೆ ಕಾಯಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಪದ ಸಾಹಿತ್ಯ, ಚೌಡಕಿ ಹಾಡು, ಸೋಬಾನ […]

ಮಾ. 7 ರಂದು ವಿಜಯಪುರ ಜೋರಾಪುರ ಪೇಠೆಯ ಮಲ್ಲಯ್ಯನ ಓಣಿ ಪಾದಯಾತ್ರೆ ಕಮಿಟಿ ವತಿಯಿಂದ ಶ್ರೀಶೈಲಕ್ಕೆ ಪಾದಯಾತ್ರೆ

ವಿಜಯಪುರ: ನಗರದ ಜೋರಾಪುರ ಪೇಠೆಯ ಮಲ್ಲಯ್ಯನ ಗುಡಿ( ಮಲ್ಲಯ್ಯನ ಓಣಿ)ಯ ಶ್ರೀ ಮಲ್ಲಿಕಾರ್ಜುನ ಪಾದಾಯಾತ್ರಾ ಕಮೀಟಿ ವತಿಯಿಂದ ಮಾರ್ಚ್ 7 ರಿಂದ ಶ್ರೀಶೈಲ ಪಾದಯಾತ್ರೆ ಆರಂಭವಾಗಲಿದೆ. ಸತತ 29 ನೇ ವರ್ಷಗಳಿಂದ ಈ ಸಮಿತಿ ನೇತೃತ್ವದಲ್ಲಿ ಶ್ರೀಶೈಲ ಮಲ್ಲಯ್ಯನ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ.  15 ದಿನಗಳ ಈ ಪಾದಯಾತ್ರೆ ಹಿಟ್ನಳ್ಳಿ, ಮನಗೂಳಿ, ಬಸವನ ಬಾಗೇವಾಡಿ, ಹೂವಿನ ಹಿಪ್ಪರಗಿ, ಕೊಣ್ಣೂರ ಕ್ರಾಸ್, ತಾಳಿಕೋಟಿ, ಬಂಡೆಪ್ಪನ ಸಾಲವಾಡಗಿ, ಹುಣಸಗಿ, ದೇವತಕಲ್ಲ, ಶೆಳ್ಳಗಿ, ಸೂಗೂರ, ಅಂಜುಳ ಹೊಳಿ, ಮಸರಕಲ್ಲ, ಗಬ್ಬೂರ, ಕಲಮಲಾ, […]

ಶಿಕ್ಷಣ ಕ್ಷೇತ್ರಕ್ಕೆ ಎಂ. ಎಸ್. ಖೇಡ ಅವರ ಕೊಡುಗೆ ಅಪಾರ- ಶಾಸಕ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಶಿಕ್ಷಣ ಕ್ಶೇತ್ರಕ್ಕೆ ದಿ. ಮಲ್ಲಿಕಾರ್ಜುನ ಖೇಡ ಅವರ ಕೊಡುಗೆ ಅಪಾರ ಎಂದು ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಹೇಳಿದ್ದಾರೆ. ಇಂಡಿ ತಾಲೂಕಿನ ತಡವಲಗಾದಲ್ಲಿ ವಿನಾಯಕ ಪೂರ್ವ ಪ್ರಾಥಮಿಕ ಹಾಗೂ ಮಾತೋಶ್ರಿ ಶಾಂತಾಬಾಯಿ ಖೇಡ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು. ಅಂಗವಿಕಲರಾಗಿದ್ದರೂ ಎಂ. ಎಸ್. ಖೇಡ ಅವರು ಈ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವ ಅದನ್ನು ಹೆಮ್ಮರವಾಗಿ ಬೆಳೆಸುವಲ್ಲಿ ಯಶಸ್ವಿಯಾಗಿದ್ದಾರೆ.  ಅವರ ಶಿಕ್ಷಣ ಪ್ರೇಮ ಇತರರಿಗೂ […]