ಕರ್ನಾಟಕದ ಏಳು ಅದ್ಭುತಗಳಲ್ಲಿ ವಿಜಯಪುರದ ಗೋಳಗುಮ್ಮಟವೂ ಒಂದು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಏಳು ಅದ್ಭುತಗಳಲ್ಲಿ ಐತಿಹಾಸಿಕ ವಿಜಯಪುರದ ಐತಿಹಾಸಿಕ ಗಗೋಳಗುಮ್ಮಟವೂ ಒಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಬೆಂಗಳೂರಿನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಉದ್ಘೋಷಿಸಲಾಯಿತು. ಇದೇ ವೇಳೆ, ವಿಜೇತ ತಾಣಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಪ್ರಮಾಣಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟ ತಾಣಗಳನ್ನು ಕರ್ನಾಟಕದ ಏಳು ಅದ್ಭುತಗಳು ಎಂದು ಘೋಷಿಸಿದರು. ಈ […]

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಯತ್ನಾಳ

ವಿಜಯಪುರ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಆರ್.ಅಂಬೇಡ್ಕರ್ ಅವರು 1939ರಲ್ಲಿ ವಿಜಯಪುರ ನಗರಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಸುಮಾರು ರೂ. 1.90 ಕೋ. ಅನುದಾನದಲ್ಲಿ ಡಾ. ಬಿ. ಆರ್. ಅಂಬೇಡ್ಕರ ಸ್ಮಾರಕ ನಿರ್ಮಾಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಸಮಾಜದ ಮುಖಂಡ ರಮೇಶ ಆಸಂಗಿ, ಆನಂದ ಔದಿ, ಅಭಿಷೇಕ ಚಕ್ರವರ್ತಿ, ನಾಗರಾಜ ಲಂಬು, ಸಿದ್ದು […]

ಭಗೀರಥ ಮಹರ್ಷಿ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಯತ್ನಾಳ- ವೈಯಕ್ತಿಕವಾಗಿ ರೂ. 5 ಲಕ್ಷ ನೆರವು ಘೋಷಣೆ

ವಿಜಯಪುರ: ಭಗೀರಥ ವೃತ್ತ ನಿರ್ಮಾಣಕ್ಕೆ ವೈಯುಕ್ತಿಕವಾಗಿ ರೂ. 5 ಲಕ್ಷ ಅನುದಾನ ನೀಡುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಘೋಷಿಸಿದ್ದಾರೆ. ನಗರದಲ್ಲಿ ಡಾ. ಬಿ. ಆರ್.ಅಂಬೇಡ್ಕರ್ ರಸ್ತೆಯ(ಸ್ಟೇಶನ್ ರೋಡ) ನವರತ್ನ ಹೋಟೆಲ್ ಬಳಿ ಭಗೀರತ ಮಹರ್ಷಿ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದ ಅವರು, ನಾಳೆಯೇ ಮುಖಂಡರು ಬಂದು ಹಣ ಪಡೆದುಕೊಳ್ಳಿ ಎಂದು ಹೇಳಿದರು. ಭಗೀರಥರು ಪೌರಾಣಿಕ ರಾಜನಾಗಿದ್ದರು.  ಹಿಂದೂ ನದಿ ದೇವತೆ ಗಂಗಾ ಎಂದು ನಿರೂಪಿಸಲ್ಪಟ್ಟ ಪವಿತ್ರ ನದಿ.  ಪವಿತ್ರ […]

ವಿಜಯಪುರದಲ್ಲಿ ಬ್ರಾಹ್ಮಣ ಶಕ್ತಿ ಸಂಗಮ- 2023 ಕಾರ್ಯಕ್ರಮ- ನಾನಾ ಸ್ವಾಮೀಜಿ ಗಣ್ಯರು ಭಾಗಿ

ವಿಜಯಪುರ: ನಾವು ಬ್ರಾಹ್ಮಣರು ನಮ್ಮನ್ನು ಹುಟ್ಟಿಸಿದ ಭಗವಂತನೇ ನಮ್ಮನ್ನು ಕಾಪಾಡುತ್ತಾನೆ. ನಾವು ನಮ್ಮ ಸಾಮರ್ಥ್ಯವನ್ನು ಕಾಪಾಡಿಕೊಂಡು ಇನ್ನೊಬ್ಬರಿಗೆ ಉಪದೇಶ ಮಾಡಬೇಕು ಎಂದು ಹುಣಸಿಹೊಳೆ ಕಣ್ವ ಮಠದ ಪೀಠಾಧಿಪತಿ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಸ್ವಾಮೀಜಿಗಳು ಹೇಳಿದರು. ನಗರದ ಶ್ರೀ ಕಂದಗಲ್ ಹಣಮಂತರಾಯ ರಂಗಮಂದಿರದ ಶ್ರೀ ಭಾಸ್ಕರಾಚಾರ್ಯ ವೇದಿಕೆಯಲ್ಲಿ ನಡೆದ ಬ್ರಾಹ್ಮಣ ಶಕ್ತಿಸಂಗಮ- 2023 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಾಹ್ಮಣರು ಇನ್ನೊಬ್ಬರನ್ನು ರಕ್ಷಣೆ ಮಾಡಬೇಕು.  ನಮ್ಮ ರಕ್ಷಣೆಯನ್ನು ಪರಮಾತ್ಮ ಮಾಡುತ್ತಾನೆ.  ಬ್ರಾಹ್ಮಣರಿಗೆ ಆ ಪರಶುರಾಮನ ಆಶಿರ್ವಾದ ಇದೆ.  ನಾವು […]

ಈ ವರ್ಷ ಉತ್ತಮ ಮಳೆಯಿದೆ, ಕೊರೊನಾ, ವೃದ್ಧಾಶ್ರಮಗಳು ಕಡಿಮೆಯಾಗಲಿವೆ, ಭೂಕಂಪ, ಪ್ರಳಯದ ಆತಂಕವಿದೆ, ಸೈನಿಕರಿಗೆ ಗೆಲುವಿದೆ- ಬಬಲಾದಿ ಕಾರ್ಣಿಕ ಭವಿಷ್ಯ

ವಿಜಯಪುರ: ಕಾಲಜ್ಞಾನದ ಭವಿಷ್ಯಕ್ಕೆ ಹೆಸರಾಗಿರುವ ಬಸವನಾಡು ವಿಜಯಪುರ ಜಿಲ್ಲೆಯ ಕೃಷ್ಣಾ ನದಿ ತೀರದ ಹೊಳೆ ಬಬಲಾದಿ ಶ್ರೀ ಸದಾಶಿವ ಮಠಾಧೀಶ ಶ್ರೀ ಸಿದ್ಧರಾಮಯ್ಯ 2023-24ರ ಭವಿಷ್ಯ ನುಡಿದಿದ್ದು, ಅದರಲ್ಲಿನ ಬಹುತೇಕ ಅಂಶಗಳು ಜನಸಾಮಾನ್ಯರಿಗೆ ನೆಮ್ಮದಿ ತರುವಂತಿವೆ. ಬಬಲೇಶ್ವರ ತಾಲೂಕಿನ ಹೊಳೆಬಬಲಾದಿ ಶ್ರೀ ಸದಾಶಿವ ಮುತ್ಯಾನ ಜಾತ್ರೆ ಪ್ರತಿ ವರ್ಷ ಮಹಾಶಿವರಾತ್ರಿಯಂದು ನಡೆಯುತ್ತಿದ್ದ, ಇಲ್ಲಿ ಮದ್ಯಾರಾಧನೆ ತಲೆತಲಾಂತರಗಳಿಂದಲೂ ಮುಂದುವರೆದುಕೊಂಡು ಬಂದಿದೆ.  ಈ ಹಿಂದೆ ಕೊರೊನಾ, ನಾನಾ ಬೆಂಕಿ, ಭೂಕಂಪ, ಜಲಪ್ರಳಯಗಳು, ರಾಜಕೀಯ ಪಲ್ಲಟಗಳ ಕುರಿತು ಇಲ್ಲಿನ ಕಾರ್ಣಿಕರು ನುಡಿದಿದ್ದ […]

ಓದಿನತ್ತ ಲಕ್ಷ್ಯ ವಹಿಸಿ ಉತ್ತಮ ಅಂಕ ಗಳಿಸಿ- ವಿದ್ಯಾರ್ಥಿಗಳಿಗೆ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ಕರೆ

ವಿಜಯಪುರ: ಎಸ್. ಎಸ್. ಎಲ್. ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಬಿಟ್ಟು ಪಠ್ಯಕ್ರಮದತ್ತ ಲಕ್ಷ್ಯ ವಹಿಸಿದರೆ, ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬಹುದು ಎಂದು ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ಹೇಳಿದರು. ನಗರದ ಶ್ರೀ ಅಭಿನವ ವಿದ್ಯಾ ಸಂಸ್ಥೆಯ ಶ್ರೀ ಅಭಿನವ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಈಗ ಬಹುತೇಕ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಿದ್ದಿದ್ದಾರೆ.  ಶೈಕ್ಷಣಿಕ ದೃಷ್ಟಿಯಿಂದ ಇದು ಸರಿಯಲ್ಲ. […]

ದಾರ್ಶನಿಕ ಸರ್ವಜ್ಞರ ತ್ರಿಪದಿ-ಸರಳತೆ ಜನಮಾನಸದಲ್ಲಿ ಜನಪ್ರಿಯ- ಡಾ. ಶಂಕರಣ್ಣ ವಣಕ್ಯಾಳ

ವಿಜಯಪುರ: ಸರ್ವಜ್ಞರ ತ್ರಿಪದಿಗಳು ಸರಳತೆ ಹಾಗೂ ಪ್ರಾಸಬದ್ಧತೆಯಿಂದ ಜನಮಾನಸದಲ್ಲಿ ಇಂದಿಗೂ-ಎಂದೆಂದಿಗೂ ಜನಪ್ರಿಯವಾಗಿವೆ. ಸಮಾಜದಲ್ಲಿನ ಮೌಡ್ಯತೆ, ಅಂಕು-ಡೊಂಕುಗಳನ್ನು ತಮ್ಮ ತ್ರಿಪದಿಗಳ ಮೂಲಕ ತಿದ್ದುವ ಕಾರ್ಯ ಮಾಡಿದರು ಎಂದು ಅಪರ ಜಿಲಾಧಿಕಾರಿ ಡಾ. ಶಂಕರಣ್ಣ ವಣಕ್ಯಾಳ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿರ್ಭೀತ, […]

ಯಶಸ್ವಿ ಮಹಿಳೆಯರು ಯುವತಿಯರಿಗೆ ಆದರ್ಶವಾಗಬೇಕು- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ದೇಶದ ನಾನಾ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರಷ್ಟೇ ಸರಿಸಮನಾಗಿ ಕಾರ್ಯ ನಿರ್ವಹಿಸುತ್ತಿದ್ದು ಎಲ್ಲಾ ರಂಗಗಳ ಯಶಸ್ವಿ ಮಹಿಳೆಯರು ಯುವತಿಯರಿಗೆ ಆದರ್ಶವಾಗಬೇಕು ಎಂದು ಲೋಕಸಭಾ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವರಾದ ರಮೇಶ ಜಿಗಜಿಣಗಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕೇಂದ್ರ ಸರಕಾರದ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‍ಎಸ್‍ಎಸ್ ಪ್ರಾದೇಶಿಕ ನಿರ್ದೇಶನಾಲಯಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ವತಿಯಿಂದ ವಿವಿಯ ಆವರಣದಲ್ಲಿ […]

ವಿಶಿಷ್ಟ ಕಲೆಗಳ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳನ್ನು ಮುನ್ನಲೆಗೆ ತಂದು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಂದಗಲ ಶ್ರೀ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ ನೀಡಿ, ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಈ ಯೋಜನೆಯಡಿ ಚೌಡಕಿ ಪದ’ಗಳ ತರಬೇತಿ ಶಿಬಿರ ನಡೆಯುತ್ತಿದ್ದು, ಈ ತರಬೇತಿಯಲ್ಲಿ ಕಲಿಸುವ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಕಲಾವಿದರಾಗಿ, ಈ ನಿಟ್ಟಿನಲ್ಲಿ ಶಿಬಿರದಲ್ಲಿ ಕಲಿಸುವ ವಿಷಯ ಹಾಡು ತಿಳಿದುಕೊಳ್ಳಬೇಕು ಎಂದು […]

ರಾಷ್ಟ್ರಾಭಿಮಾನಕ್ಕೆ ಶಿವಾಜಿ ಪ್ರೇರಣೆ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಛತ್ರಪತಿ ಶಿವಾಜಿ ಮಹಾರಾಜರು ಅಪ್ರತಿಮ ದೇಶ ಭಕ್ತರಾಗಿದ್ದರು. ರಾಷ್ಟ್ರಾಭಿಮಾನಕ್ಕೆ ಶಿವಾಜಿ ಹೆಸರು ಪ್ರೇರಣಾದಾಯಕವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛತ್ರಪತಿ ಶಿವಾಜಿ ಅವರು ಚಿಕ್ಕ ವಯಸ್ಸಿನಲ್ಲಿಯೇ ದೇಶಾಭಿಮಾನ ಬೆಳೆಸಿಕೊಂಡಿದ್ದರು. ಬಾಲ್ಯದಲ್ಲಿಯೇ ಸೈನ್ಯ ಕಟ್ಟಿದ […]